Homeಚಳವಳಿವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದಕ್ಕೆ ಕನ್ನಡಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ಕನ್ನಡದ ಹಾಡು ಹಾಕೋದಿಲ್ಲ, ಯಾರೂ ಏನೂ ಮಾಡಿಕೊಳ್ಳೋದಿಕ್ಕೆ ಆಗೋದಿಲ್ಲ ಎಂಬ ಹೇಳಿಕೆ ನೀಡಿ ಗ್ರಾಹಕರೊಂದಿಗೆ ಉದ್ಧಟತನದಿಂದ ನಡೆದುಕೊಂಡಿದ್ದ ಕೆಎಫ್‌ಸಿ ಸಿಬ್ಬಂದಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕರವೇ ದಾವಣಗೆರೆ ಜಿಲ್ಲಾಧ್ಯಕ್ಷರಾದ ಎಂ.ಎಸ್. ರಾಮೇಗೌಡರವರು ಮಾತನಾಡಿ, “ಒಂದು ವಾರದೊಳಗೆ ಎಲ್ಲ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡದ ಹಾಡುಗಳನ್ನೇ ಹಾಕಬೇಕು. ಒಂದು‌ ವೇಳೆ ಕೆಎಫ್ ಸಿ ತನ್ನ ದುರಹಂಕಾರ ಮುಂದುವರೆಸಿದರೆ ರಾಜ್ಯದ ಎಲ್ಲ ಕೆಎಫ್‌ಸಿ‌ ಮಳಿಗೆಗಳ ಮುಂದೆ ಕರ್ನಾಟಕ ರಕ್ಷಣಾ‌ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ. ಆಗ ಆಗಬಹುದಾದ ಅನಾಹುತಗಳಿಗೆ ನೀವೇ ಹೊಣೆಗಾರರು” ಎಂದು ಕೆಎಫ್‌ಸಿ ಮುಖ್ಯಸ್ಥರಿಗೆ ಎಚ್ಚರಿಕೆ‌‌ ನೀಡಿದರು.

ಏನಿದು ವಿವಾದ?

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದರು. “ನಾವು ಕನ್ನಡ ಹಾಡುಗಳನ್ನು ಹಾಕುವುದಿಲ್ಲ, ಹಿಂದಿ ನಮ್ಮ ರಾಷ್ಟ್ರಭಾಷೆ, ನಾವು ಹಿಂದಿ ಹಾಡುಗಳನ್ನೇ ಪ್ರಸಾರ ಮಾಡುತ್ತೇವೆ. ಹಿಂದೆಯೂ ಇದೇ ರೀತಿ ಹಲವರು ಹೇಳಿದ್ದರು, ಯಾರಿಂದ ಏನೂ ಮಾಡಿಕೊಳ್ಳಲು ಆಗೋದಿಲ್ಲ” ಎಂದು ಹೇಳಿದ್ದ ವಿಡಿಯೋವೊಂದು ವೈರಲ್ ಆಗಿತ್ತು.

ಕರ್ನಾಟಕಕ್ಕೆ ಬರಲು ಪಾಸ್‌ಪೋರ್ಟ್ ಬೇಕಾ? ನಮ್ಮ ಕಂಪನಿ ರೂಲ್ಸ್ ಫಾಲೋ ಮಾಡುತ್ತೇವೆ. ನೀವು ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸಿಬ್ಬಂದಿ ಮಹಿಳೆಗೆ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಇದಕ್ಕೆ ಸಾವಿರಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಕೆಎಫ್‌ಸಿ ಈ ಉದ್ಧಟತನವನ್ನು ತಿದ್ದಿಕೊಳ್ಳಬೇಕು ಮತ್ತು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಟ್ವಿಟರ್ ನಲ್ಲಿ #RejectKFC #KFCಕನ್ನಡಬೇಕು ಎಂಬ‌ ಹ್ಯಾಶ್ ಟ್ಯಾಗ್ ಮೂಲಕ ಕನ್ನಡಿಗರು‌‌ ಕಿಡಿಕಾರಿದ್ದರು. ಭಾನುವಾರ ಸಂಜೆ ನಡೆದ ಅಭಿಯಾನದಲ್ಲಿ ಸುಮಾರು 45,000ಕ್ಕೂ‌ ಹೆಚ್ಚು ಟ್ವೀಟ್‌ಗಳು ದಾಖಲಾಗಿದ್ದವು. #RejectKFC ಹ್ಯಾಶ್‌ಟ್ಯಾಗ್ ಭಾರತದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ಆಗಿತ್ತು.

ಈ KFC ಯವರು ಶ್ರೀಲಂಕಾದಲ್ಲಿ ಸಿಂಹಳಿ, ಚೀನಾದಲ್ಲಿ ಮ್ಯಾಂಡರಿನ್‌, ಜೋರ್ಡಾನ್ ನಲ್ಲಿ ಅರೇಬಿಕ್‌, ರಷ್ಯಾದಲ್ಲಿ ರಷ್ಯನ್ ಹೀಗೆ ಆಯಾ ನಾಡುಗಳಲ್ಲಿ ಅವರವರ ನುಡಿಗಳನ್ನೇ ಬಳಸಿದ್ದಾರೆ. ನಮ್ಮ ಕನ್ನಡದಲ್ಲಿ ಸೇವೆ ಕೊಡೊಕೆ ಆಗಿಲ್ಲ ಅಂದ್ರೆ ಕರ್ನಾಟಕದಿಂದ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಕನ್ನಡ ಹೋರಾಟಗಾರ ಮಂಜು ಗಣಪತಿಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ಬಳಕೆ ಮಾಡದ ಕೆಎಫ್‌ಸಿ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು. ಕನ್ನಡದಲ್ಲೇ ವ್ಯವಹರಿಸಬೇಕು, ಮಳಿಗೆಗಳಲ್ಲಿ ಕನ್ನಡದ ಹಾಡುಗಳನ್ನು ಪ್ರಸಾರ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ. ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಯಾವುದೇ ಸಂಸ್ಥೆ, ಅದು ಎಷ್ಟು ದೊಡ್ಡದೇ ಆದರೂ ನಮಗೆ ಬೇಡ. ಹಣ ಮಾಡಲು ಕರ್ನಾಟಕಕ್ಕೆ ಬರುವ ಸಂಸ್ಥೆಗಳು ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು, ಕನ್ನಡಿಗರ ಅಸ್ಮಿತೆಯನ್ನು ಗುರುತಿಸಬೇಕು. ಇತರ ಭಾಷೆಗಳನ್ನು, ಭಾಷಿಕರನ್ನು ಕನ್ನಡಿಗರ ಮೇಲೆ ಹೇರುವ ಹುಚ್ಚಾಟ ಸಹಿಸುವುದಿಲ್ಲ” ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...