Homeಚಳವಳಿವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದಕ್ಕೆ ಕನ್ನಡಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ಕನ್ನಡದ ಹಾಡು ಹಾಕೋದಿಲ್ಲ, ಯಾರೂ ಏನೂ ಮಾಡಿಕೊಳ್ಳೋದಿಕ್ಕೆ ಆಗೋದಿಲ್ಲ ಎಂಬ ಹೇಳಿಕೆ ನೀಡಿ ಗ್ರಾಹಕರೊಂದಿಗೆ ಉದ್ಧಟತನದಿಂದ ನಡೆದುಕೊಂಡಿದ್ದ ಕೆಎಫ್‌ಸಿ ಸಿಬ್ಬಂದಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕರವೇ ದಾವಣಗೆರೆ ಜಿಲ್ಲಾಧ್ಯಕ್ಷರಾದ ಎಂ.ಎಸ್. ರಾಮೇಗೌಡರವರು ಮಾತನಾಡಿ, “ಒಂದು ವಾರದೊಳಗೆ ಎಲ್ಲ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡದ ಹಾಡುಗಳನ್ನೇ ಹಾಕಬೇಕು. ಒಂದು‌ ವೇಳೆ ಕೆಎಫ್ ಸಿ ತನ್ನ ದುರಹಂಕಾರ ಮುಂದುವರೆಸಿದರೆ ರಾಜ್ಯದ ಎಲ್ಲ ಕೆಎಫ್‌ಸಿ‌ ಮಳಿಗೆಗಳ ಮುಂದೆ ಕರ್ನಾಟಕ ರಕ್ಷಣಾ‌ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ. ಆಗ ಆಗಬಹುದಾದ ಅನಾಹುತಗಳಿಗೆ ನೀವೇ ಹೊಣೆಗಾರರು” ಎಂದು ಕೆಎಫ್‌ಸಿ ಮುಖ್ಯಸ್ಥರಿಗೆ ಎಚ್ಚರಿಕೆ‌‌ ನೀಡಿದರು.

ಏನಿದು ವಿವಾದ?

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದರು. “ನಾವು ಕನ್ನಡ ಹಾಡುಗಳನ್ನು ಹಾಕುವುದಿಲ್ಲ, ಹಿಂದಿ ನಮ್ಮ ರಾಷ್ಟ್ರಭಾಷೆ, ನಾವು ಹಿಂದಿ ಹಾಡುಗಳನ್ನೇ ಪ್ರಸಾರ ಮಾಡುತ್ತೇವೆ. ಹಿಂದೆಯೂ ಇದೇ ರೀತಿ ಹಲವರು ಹೇಳಿದ್ದರು, ಯಾರಿಂದ ಏನೂ ಮಾಡಿಕೊಳ್ಳಲು ಆಗೋದಿಲ್ಲ” ಎಂದು ಹೇಳಿದ್ದ ವಿಡಿಯೋವೊಂದು ವೈರಲ್ ಆಗಿತ್ತು.

ಕರ್ನಾಟಕಕ್ಕೆ ಬರಲು ಪಾಸ್‌ಪೋರ್ಟ್ ಬೇಕಾ? ನಮ್ಮ ಕಂಪನಿ ರೂಲ್ಸ್ ಫಾಲೋ ಮಾಡುತ್ತೇವೆ. ನೀವು ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸಿಬ್ಬಂದಿ ಮಹಿಳೆಗೆ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಇದಕ್ಕೆ ಸಾವಿರಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಕೆಎಫ್‌ಸಿ ಈ ಉದ್ಧಟತನವನ್ನು ತಿದ್ದಿಕೊಳ್ಳಬೇಕು ಮತ್ತು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಟ್ವಿಟರ್ ನಲ್ಲಿ #RejectKFC #KFCಕನ್ನಡಬೇಕು ಎಂಬ‌ ಹ್ಯಾಶ್ ಟ್ಯಾಗ್ ಮೂಲಕ ಕನ್ನಡಿಗರು‌‌ ಕಿಡಿಕಾರಿದ್ದರು. ಭಾನುವಾರ ಸಂಜೆ ನಡೆದ ಅಭಿಯಾನದಲ್ಲಿ ಸುಮಾರು 45,000ಕ್ಕೂ‌ ಹೆಚ್ಚು ಟ್ವೀಟ್‌ಗಳು ದಾಖಲಾಗಿದ್ದವು. #RejectKFC ಹ್ಯಾಶ್‌ಟ್ಯಾಗ್ ಭಾರತದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ಆಗಿತ್ತು.

ಈ KFC ಯವರು ಶ್ರೀಲಂಕಾದಲ್ಲಿ ಸಿಂಹಳಿ, ಚೀನಾದಲ್ಲಿ ಮ್ಯಾಂಡರಿನ್‌, ಜೋರ್ಡಾನ್ ನಲ್ಲಿ ಅರೇಬಿಕ್‌, ರಷ್ಯಾದಲ್ಲಿ ರಷ್ಯನ್ ಹೀಗೆ ಆಯಾ ನಾಡುಗಳಲ್ಲಿ ಅವರವರ ನುಡಿಗಳನ್ನೇ ಬಳಸಿದ್ದಾರೆ. ನಮ್ಮ ಕನ್ನಡದಲ್ಲಿ ಸೇವೆ ಕೊಡೊಕೆ ಆಗಿಲ್ಲ ಅಂದ್ರೆ ಕರ್ನಾಟಕದಿಂದ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಕನ್ನಡ ಹೋರಾಟಗಾರ ಮಂಜು ಗಣಪತಿಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ಬಳಕೆ ಮಾಡದ ಕೆಎಫ್‌ಸಿ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು. ಕನ್ನಡದಲ್ಲೇ ವ್ಯವಹರಿಸಬೇಕು, ಮಳಿಗೆಗಳಲ್ಲಿ ಕನ್ನಡದ ಹಾಡುಗಳನ್ನು ಪ್ರಸಾರ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ. ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಯಾವುದೇ ಸಂಸ್ಥೆ, ಅದು ಎಷ್ಟು ದೊಡ್ಡದೇ ಆದರೂ ನಮಗೆ ಬೇಡ. ಹಣ ಮಾಡಲು ಕರ್ನಾಟಕಕ್ಕೆ ಬರುವ ಸಂಸ್ಥೆಗಳು ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು, ಕನ್ನಡಿಗರ ಅಸ್ಮಿತೆಯನ್ನು ಗುರುತಿಸಬೇಕು. ಇತರ ಭಾಷೆಗಳನ್ನು, ಭಾಷಿಕರನ್ನು ಕನ್ನಡಿಗರ ಮೇಲೆ ಹೇರುವ ಹುಚ್ಚಾಟ ಸಹಿಸುವುದಿಲ್ಲ” ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...