Homeಚಳವಳಿವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದಕ್ಕೆ ಕನ್ನಡಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ಕನ್ನಡದ ಹಾಡು ಹಾಕೋದಿಲ್ಲ, ಯಾರೂ ಏನೂ ಮಾಡಿಕೊಳ್ಳೋದಿಕ್ಕೆ ಆಗೋದಿಲ್ಲ ಎಂಬ ಹೇಳಿಕೆ ನೀಡಿ ಗ್ರಾಹಕರೊಂದಿಗೆ ಉದ್ಧಟತನದಿಂದ ನಡೆದುಕೊಂಡಿದ್ದ ಕೆಎಫ್‌ಸಿ ಸಿಬ್ಬಂದಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕರವೇ ದಾವಣಗೆರೆ ಜಿಲ್ಲಾಧ್ಯಕ್ಷರಾದ ಎಂ.ಎಸ್. ರಾಮೇಗೌಡರವರು ಮಾತನಾಡಿ, “ಒಂದು ವಾರದೊಳಗೆ ಎಲ್ಲ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡದ ಹಾಡುಗಳನ್ನೇ ಹಾಕಬೇಕು. ಒಂದು‌ ವೇಳೆ ಕೆಎಫ್ ಸಿ ತನ್ನ ದುರಹಂಕಾರ ಮುಂದುವರೆಸಿದರೆ ರಾಜ್ಯದ ಎಲ್ಲ ಕೆಎಫ್‌ಸಿ‌ ಮಳಿಗೆಗಳ ಮುಂದೆ ಕರ್ನಾಟಕ ರಕ್ಷಣಾ‌ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ. ಆಗ ಆಗಬಹುದಾದ ಅನಾಹುತಗಳಿಗೆ ನೀವೇ ಹೊಣೆಗಾರರು” ಎಂದು ಕೆಎಫ್‌ಸಿ ಮುಖ್ಯಸ್ಥರಿಗೆ ಎಚ್ಚರಿಕೆ‌‌ ನೀಡಿದರು.

ಏನಿದು ವಿವಾದ?

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದರು. “ನಾವು ಕನ್ನಡ ಹಾಡುಗಳನ್ನು ಹಾಕುವುದಿಲ್ಲ, ಹಿಂದಿ ನಮ್ಮ ರಾಷ್ಟ್ರಭಾಷೆ, ನಾವು ಹಿಂದಿ ಹಾಡುಗಳನ್ನೇ ಪ್ರಸಾರ ಮಾಡುತ್ತೇವೆ. ಹಿಂದೆಯೂ ಇದೇ ರೀತಿ ಹಲವರು ಹೇಳಿದ್ದರು, ಯಾರಿಂದ ಏನೂ ಮಾಡಿಕೊಳ್ಳಲು ಆಗೋದಿಲ್ಲ” ಎಂದು ಹೇಳಿದ್ದ ವಿಡಿಯೋವೊಂದು ವೈರಲ್ ಆಗಿತ್ತು.

ಕರ್ನಾಟಕಕ್ಕೆ ಬರಲು ಪಾಸ್‌ಪೋರ್ಟ್ ಬೇಕಾ? ನಮ್ಮ ಕಂಪನಿ ರೂಲ್ಸ್ ಫಾಲೋ ಮಾಡುತ್ತೇವೆ. ನೀವು ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸಿಬ್ಬಂದಿ ಮಹಿಳೆಗೆ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಇದಕ್ಕೆ ಸಾವಿರಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಕೆಎಫ್‌ಸಿ ಈ ಉದ್ಧಟತನವನ್ನು ತಿದ್ದಿಕೊಳ್ಳಬೇಕು ಮತ್ತು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಟ್ವಿಟರ್ ನಲ್ಲಿ #RejectKFC #KFCಕನ್ನಡಬೇಕು ಎಂಬ‌ ಹ್ಯಾಶ್ ಟ್ಯಾಗ್ ಮೂಲಕ ಕನ್ನಡಿಗರು‌‌ ಕಿಡಿಕಾರಿದ್ದರು. ಭಾನುವಾರ ಸಂಜೆ ನಡೆದ ಅಭಿಯಾನದಲ್ಲಿ ಸುಮಾರು 45,000ಕ್ಕೂ‌ ಹೆಚ್ಚು ಟ್ವೀಟ್‌ಗಳು ದಾಖಲಾಗಿದ್ದವು. #RejectKFC ಹ್ಯಾಶ್‌ಟ್ಯಾಗ್ ಭಾರತದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ಆಗಿತ್ತು.

ಈ KFC ಯವರು ಶ್ರೀಲಂಕಾದಲ್ಲಿ ಸಿಂಹಳಿ, ಚೀನಾದಲ್ಲಿ ಮ್ಯಾಂಡರಿನ್‌, ಜೋರ್ಡಾನ್ ನಲ್ಲಿ ಅರೇಬಿಕ್‌, ರಷ್ಯಾದಲ್ಲಿ ರಷ್ಯನ್ ಹೀಗೆ ಆಯಾ ನಾಡುಗಳಲ್ಲಿ ಅವರವರ ನುಡಿಗಳನ್ನೇ ಬಳಸಿದ್ದಾರೆ. ನಮ್ಮ ಕನ್ನಡದಲ್ಲಿ ಸೇವೆ ಕೊಡೊಕೆ ಆಗಿಲ್ಲ ಅಂದ್ರೆ ಕರ್ನಾಟಕದಿಂದ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಕನ್ನಡ ಹೋರಾಟಗಾರ ಮಂಜು ಗಣಪತಿಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ಬಳಕೆ ಮಾಡದ ಕೆಎಫ್‌ಸಿ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು. ಕನ್ನಡದಲ್ಲೇ ವ್ಯವಹರಿಸಬೇಕು, ಮಳಿಗೆಗಳಲ್ಲಿ ಕನ್ನಡದ ಹಾಡುಗಳನ್ನು ಪ್ರಸಾರ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ. ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಯಾವುದೇ ಸಂಸ್ಥೆ, ಅದು ಎಷ್ಟು ದೊಡ್ಡದೇ ಆದರೂ ನಮಗೆ ಬೇಡ. ಹಣ ಮಾಡಲು ಕರ್ನಾಟಕಕ್ಕೆ ಬರುವ ಸಂಸ್ಥೆಗಳು ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು, ಕನ್ನಡಿಗರ ಅಸ್ಮಿತೆಯನ್ನು ಗುರುತಿಸಬೇಕು. ಇತರ ಭಾಷೆಗಳನ್ನು, ಭಾಷಿಕರನ್ನು ಕನ್ನಡಿಗರ ಮೇಲೆ ಹೇರುವ ಹುಚ್ಚಾಟ ಸಹಿಸುವುದಿಲ್ಲ” ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...