Homeಚಳವಳಿವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದಕ್ಕೆ ಕನ್ನಡಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ಕನ್ನಡದ ಹಾಡು ಹಾಕೋದಿಲ್ಲ, ಯಾರೂ ಏನೂ ಮಾಡಿಕೊಳ್ಳೋದಿಕ್ಕೆ ಆಗೋದಿಲ್ಲ ಎಂಬ ಹೇಳಿಕೆ ನೀಡಿ ಗ್ರಾಹಕರೊಂದಿಗೆ ಉದ್ಧಟತನದಿಂದ ನಡೆದುಕೊಂಡಿದ್ದ ಕೆಎಫ್‌ಸಿ ಸಿಬ್ಬಂದಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕರವೇ ದಾವಣಗೆರೆ ಜಿಲ್ಲಾಧ್ಯಕ್ಷರಾದ ಎಂ.ಎಸ್. ರಾಮೇಗೌಡರವರು ಮಾತನಾಡಿ, “ಒಂದು ವಾರದೊಳಗೆ ಎಲ್ಲ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡದ ಹಾಡುಗಳನ್ನೇ ಹಾಕಬೇಕು. ಒಂದು‌ ವೇಳೆ ಕೆಎಫ್ ಸಿ ತನ್ನ ದುರಹಂಕಾರ ಮುಂದುವರೆಸಿದರೆ ರಾಜ್ಯದ ಎಲ್ಲ ಕೆಎಫ್‌ಸಿ‌ ಮಳಿಗೆಗಳ ಮುಂದೆ ಕರ್ನಾಟಕ ರಕ್ಷಣಾ‌ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ. ಆಗ ಆಗಬಹುದಾದ ಅನಾಹುತಗಳಿಗೆ ನೀವೇ ಹೊಣೆಗಾರರು” ಎಂದು ಕೆಎಫ್‌ಸಿ ಮುಖ್ಯಸ್ಥರಿಗೆ ಎಚ್ಚರಿಕೆ‌‌ ನೀಡಿದರು.

ಏನಿದು ವಿವಾದ?

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದರು. “ನಾವು ಕನ್ನಡ ಹಾಡುಗಳನ್ನು ಹಾಕುವುದಿಲ್ಲ, ಹಿಂದಿ ನಮ್ಮ ರಾಷ್ಟ್ರಭಾಷೆ, ನಾವು ಹಿಂದಿ ಹಾಡುಗಳನ್ನೇ ಪ್ರಸಾರ ಮಾಡುತ್ತೇವೆ. ಹಿಂದೆಯೂ ಇದೇ ರೀತಿ ಹಲವರು ಹೇಳಿದ್ದರು, ಯಾರಿಂದ ಏನೂ ಮಾಡಿಕೊಳ್ಳಲು ಆಗೋದಿಲ್ಲ” ಎಂದು ಹೇಳಿದ್ದ ವಿಡಿಯೋವೊಂದು ವೈರಲ್ ಆಗಿತ್ತು.

ಕರ್ನಾಟಕಕ್ಕೆ ಬರಲು ಪಾಸ್‌ಪೋರ್ಟ್ ಬೇಕಾ? ನಮ್ಮ ಕಂಪನಿ ರೂಲ್ಸ್ ಫಾಲೋ ಮಾಡುತ್ತೇವೆ. ನೀವು ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸಿಬ್ಬಂದಿ ಮಹಿಳೆಗೆ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಇದಕ್ಕೆ ಸಾವಿರಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಕೆಎಫ್‌ಸಿ ಈ ಉದ್ಧಟತನವನ್ನು ತಿದ್ದಿಕೊಳ್ಳಬೇಕು ಮತ್ತು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಟ್ವಿಟರ್ ನಲ್ಲಿ #RejectKFC #KFCಕನ್ನಡಬೇಕು ಎಂಬ‌ ಹ್ಯಾಶ್ ಟ್ಯಾಗ್ ಮೂಲಕ ಕನ್ನಡಿಗರು‌‌ ಕಿಡಿಕಾರಿದ್ದರು. ಭಾನುವಾರ ಸಂಜೆ ನಡೆದ ಅಭಿಯಾನದಲ್ಲಿ ಸುಮಾರು 45,000ಕ್ಕೂ‌ ಹೆಚ್ಚು ಟ್ವೀಟ್‌ಗಳು ದಾಖಲಾಗಿದ್ದವು. #RejectKFC ಹ್ಯಾಶ್‌ಟ್ಯಾಗ್ ಭಾರತದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ಆಗಿತ್ತು.

ಈ KFC ಯವರು ಶ್ರೀಲಂಕಾದಲ್ಲಿ ಸಿಂಹಳಿ, ಚೀನಾದಲ್ಲಿ ಮ್ಯಾಂಡರಿನ್‌, ಜೋರ್ಡಾನ್ ನಲ್ಲಿ ಅರೇಬಿಕ್‌, ರಷ್ಯಾದಲ್ಲಿ ರಷ್ಯನ್ ಹೀಗೆ ಆಯಾ ನಾಡುಗಳಲ್ಲಿ ಅವರವರ ನುಡಿಗಳನ್ನೇ ಬಳಸಿದ್ದಾರೆ. ನಮ್ಮ ಕನ್ನಡದಲ್ಲಿ ಸೇವೆ ಕೊಡೊಕೆ ಆಗಿಲ್ಲ ಅಂದ್ರೆ ಕರ್ನಾಟಕದಿಂದ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಕನ್ನಡ ಹೋರಾಟಗಾರ ಮಂಜು ಗಣಪತಿಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ಬಳಕೆ ಮಾಡದ ಕೆಎಫ್‌ಸಿ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು. ಕನ್ನಡದಲ್ಲೇ ವ್ಯವಹರಿಸಬೇಕು, ಮಳಿಗೆಗಳಲ್ಲಿ ಕನ್ನಡದ ಹಾಡುಗಳನ್ನು ಪ್ರಸಾರ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ. ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಯಾವುದೇ ಸಂಸ್ಥೆ, ಅದು ಎಷ್ಟು ದೊಡ್ಡದೇ ಆದರೂ ನಮಗೆ ಬೇಡ. ಹಣ ಮಾಡಲು ಕರ್ನಾಟಕಕ್ಕೆ ಬರುವ ಸಂಸ್ಥೆಗಳು ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು, ಕನ್ನಡಿಗರ ಅಸ್ಮಿತೆಯನ್ನು ಗುರುತಿಸಬೇಕು. ಇತರ ಭಾಷೆಗಳನ್ನು, ಭಾಷಿಕರನ್ನು ಕನ್ನಡಿಗರ ಮೇಲೆ ಹೇರುವ ಹುಚ್ಚಾಟ ಸಹಿಸುವುದಿಲ್ಲ” ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...