Homeಚಳವಳಿವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದಕ್ಕೆ ಕನ್ನಡಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ಕನ್ನಡದ ಹಾಡು ಹಾಕೋದಿಲ್ಲ, ಯಾರೂ ಏನೂ ಮಾಡಿಕೊಳ್ಳೋದಿಕ್ಕೆ ಆಗೋದಿಲ್ಲ ಎಂಬ ಹೇಳಿಕೆ ನೀಡಿ ಗ್ರಾಹಕರೊಂದಿಗೆ ಉದ್ಧಟತನದಿಂದ ನಡೆದುಕೊಂಡಿದ್ದ ಕೆಎಫ್‌ಸಿ ಸಿಬ್ಬಂದಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕರವೇ ದಾವಣಗೆರೆ ಜಿಲ್ಲಾಧ್ಯಕ್ಷರಾದ ಎಂ.ಎಸ್. ರಾಮೇಗೌಡರವರು ಮಾತನಾಡಿ, “ಒಂದು ವಾರದೊಳಗೆ ಎಲ್ಲ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡದ ಹಾಡುಗಳನ್ನೇ ಹಾಕಬೇಕು. ಒಂದು‌ ವೇಳೆ ಕೆಎಫ್ ಸಿ ತನ್ನ ದುರಹಂಕಾರ ಮುಂದುವರೆಸಿದರೆ ರಾಜ್ಯದ ಎಲ್ಲ ಕೆಎಫ್‌ಸಿ‌ ಮಳಿಗೆಗಳ ಮುಂದೆ ಕರ್ನಾಟಕ ರಕ್ಷಣಾ‌ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ. ಆಗ ಆಗಬಹುದಾದ ಅನಾಹುತಗಳಿಗೆ ನೀವೇ ಹೊಣೆಗಾರರು” ಎಂದು ಕೆಎಫ್‌ಸಿ ಮುಖ್ಯಸ್ಥರಿಗೆ ಎಚ್ಚರಿಕೆ‌‌ ನೀಡಿದರು.

ಏನಿದು ವಿವಾದ?

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದರು. “ನಾವು ಕನ್ನಡ ಹಾಡುಗಳನ್ನು ಹಾಕುವುದಿಲ್ಲ, ಹಿಂದಿ ನಮ್ಮ ರಾಷ್ಟ್ರಭಾಷೆ, ನಾವು ಹಿಂದಿ ಹಾಡುಗಳನ್ನೇ ಪ್ರಸಾರ ಮಾಡುತ್ತೇವೆ. ಹಿಂದೆಯೂ ಇದೇ ರೀತಿ ಹಲವರು ಹೇಳಿದ್ದರು, ಯಾರಿಂದ ಏನೂ ಮಾಡಿಕೊಳ್ಳಲು ಆಗೋದಿಲ್ಲ” ಎಂದು ಹೇಳಿದ್ದ ವಿಡಿಯೋವೊಂದು ವೈರಲ್ ಆಗಿತ್ತು.

ಕರ್ನಾಟಕಕ್ಕೆ ಬರಲು ಪಾಸ್‌ಪೋರ್ಟ್ ಬೇಕಾ? ನಮ್ಮ ಕಂಪನಿ ರೂಲ್ಸ್ ಫಾಲೋ ಮಾಡುತ್ತೇವೆ. ನೀವು ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸಿಬ್ಬಂದಿ ಮಹಿಳೆಗೆ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಇದಕ್ಕೆ ಸಾವಿರಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಕೆಎಫ್‌ಸಿ ಈ ಉದ್ಧಟತನವನ್ನು ತಿದ್ದಿಕೊಳ್ಳಬೇಕು ಮತ್ತು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಟ್ವಿಟರ್ ನಲ್ಲಿ #RejectKFC #KFCಕನ್ನಡಬೇಕು ಎಂಬ‌ ಹ್ಯಾಶ್ ಟ್ಯಾಗ್ ಮೂಲಕ ಕನ್ನಡಿಗರು‌‌ ಕಿಡಿಕಾರಿದ್ದರು. ಭಾನುವಾರ ಸಂಜೆ ನಡೆದ ಅಭಿಯಾನದಲ್ಲಿ ಸುಮಾರು 45,000ಕ್ಕೂ‌ ಹೆಚ್ಚು ಟ್ವೀಟ್‌ಗಳು ದಾಖಲಾಗಿದ್ದವು. #RejectKFC ಹ್ಯಾಶ್‌ಟ್ಯಾಗ್ ಭಾರತದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ಆಗಿತ್ತು.

ಈ KFC ಯವರು ಶ್ರೀಲಂಕಾದಲ್ಲಿ ಸಿಂಹಳಿ, ಚೀನಾದಲ್ಲಿ ಮ್ಯಾಂಡರಿನ್‌, ಜೋರ್ಡಾನ್ ನಲ್ಲಿ ಅರೇಬಿಕ್‌, ರಷ್ಯಾದಲ್ಲಿ ರಷ್ಯನ್ ಹೀಗೆ ಆಯಾ ನಾಡುಗಳಲ್ಲಿ ಅವರವರ ನುಡಿಗಳನ್ನೇ ಬಳಸಿದ್ದಾರೆ. ನಮ್ಮ ಕನ್ನಡದಲ್ಲಿ ಸೇವೆ ಕೊಡೊಕೆ ಆಗಿಲ್ಲ ಅಂದ್ರೆ ಕರ್ನಾಟಕದಿಂದ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಕನ್ನಡ ಹೋರಾಟಗಾರ ಮಂಜು ಗಣಪತಿಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ಬಳಕೆ ಮಾಡದ ಕೆಎಫ್‌ಸಿ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು. ಕನ್ನಡದಲ್ಲೇ ವ್ಯವಹರಿಸಬೇಕು, ಮಳಿಗೆಗಳಲ್ಲಿ ಕನ್ನಡದ ಹಾಡುಗಳನ್ನು ಪ್ರಸಾರ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ. ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಯಾವುದೇ ಸಂಸ್ಥೆ, ಅದು ಎಷ್ಟು ದೊಡ್ಡದೇ ಆದರೂ ನಮಗೆ ಬೇಡ. ಹಣ ಮಾಡಲು ಕರ್ನಾಟಕಕ್ಕೆ ಬರುವ ಸಂಸ್ಥೆಗಳು ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು, ಕನ್ನಡಿಗರ ಅಸ್ಮಿತೆಯನ್ನು ಗುರುತಿಸಬೇಕು. ಇತರ ಭಾಷೆಗಳನ್ನು, ಭಾಷಿಕರನ್ನು ಕನ್ನಡಿಗರ ಮೇಲೆ ಹೇರುವ ಹುಚ್ಚಾಟ ಸಹಿಸುವುದಿಲ್ಲ” ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...