Homeಚಳವಳಿವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದಕ್ಕೆ ಕನ್ನಡಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ಕನ್ನಡದ ಹಾಡು ಹಾಕೋದಿಲ್ಲ, ಯಾರೂ ಏನೂ ಮಾಡಿಕೊಳ್ಳೋದಿಕ್ಕೆ ಆಗೋದಿಲ್ಲ ಎಂಬ ಹೇಳಿಕೆ ನೀಡಿ ಗ್ರಾಹಕರೊಂದಿಗೆ ಉದ್ಧಟತನದಿಂದ ನಡೆದುಕೊಂಡಿದ್ದ ಕೆಎಫ್‌ಸಿ ಸಿಬ್ಬಂದಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕರವೇ ದಾವಣಗೆರೆ ಜಿಲ್ಲಾಧ್ಯಕ್ಷರಾದ ಎಂ.ಎಸ್. ರಾಮೇಗೌಡರವರು ಮಾತನಾಡಿ, “ಒಂದು ವಾರದೊಳಗೆ ಎಲ್ಲ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡದ ಹಾಡುಗಳನ್ನೇ ಹಾಕಬೇಕು. ಒಂದು‌ ವೇಳೆ ಕೆಎಫ್ ಸಿ ತನ್ನ ದುರಹಂಕಾರ ಮುಂದುವರೆಸಿದರೆ ರಾಜ್ಯದ ಎಲ್ಲ ಕೆಎಫ್‌ಸಿ‌ ಮಳಿಗೆಗಳ ಮುಂದೆ ಕರ್ನಾಟಕ ರಕ್ಷಣಾ‌ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ. ಆಗ ಆಗಬಹುದಾದ ಅನಾಹುತಗಳಿಗೆ ನೀವೇ ಹೊಣೆಗಾರರು” ಎಂದು ಕೆಎಫ್‌ಸಿ ಮುಖ್ಯಸ್ಥರಿಗೆ ಎಚ್ಚರಿಕೆ‌‌ ನೀಡಿದರು.

ಏನಿದು ವಿವಾದ?

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದರು. “ನಾವು ಕನ್ನಡ ಹಾಡುಗಳನ್ನು ಹಾಕುವುದಿಲ್ಲ, ಹಿಂದಿ ನಮ್ಮ ರಾಷ್ಟ್ರಭಾಷೆ, ನಾವು ಹಿಂದಿ ಹಾಡುಗಳನ್ನೇ ಪ್ರಸಾರ ಮಾಡುತ್ತೇವೆ. ಹಿಂದೆಯೂ ಇದೇ ರೀತಿ ಹಲವರು ಹೇಳಿದ್ದರು, ಯಾರಿಂದ ಏನೂ ಮಾಡಿಕೊಳ್ಳಲು ಆಗೋದಿಲ್ಲ” ಎಂದು ಹೇಳಿದ್ದ ವಿಡಿಯೋವೊಂದು ವೈರಲ್ ಆಗಿತ್ತು.

ಕರ್ನಾಟಕಕ್ಕೆ ಬರಲು ಪಾಸ್‌ಪೋರ್ಟ್ ಬೇಕಾ? ನಮ್ಮ ಕಂಪನಿ ರೂಲ್ಸ್ ಫಾಲೋ ಮಾಡುತ್ತೇವೆ. ನೀವು ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸಿಬ್ಬಂದಿ ಮಹಿಳೆಗೆ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಇದಕ್ಕೆ ಸಾವಿರಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಕೆಎಫ್‌ಸಿ ಈ ಉದ್ಧಟತನವನ್ನು ತಿದ್ದಿಕೊಳ್ಳಬೇಕು ಮತ್ತು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಟ್ವಿಟರ್ ನಲ್ಲಿ #RejectKFC #KFCಕನ್ನಡಬೇಕು ಎಂಬ‌ ಹ್ಯಾಶ್ ಟ್ಯಾಗ್ ಮೂಲಕ ಕನ್ನಡಿಗರು‌‌ ಕಿಡಿಕಾರಿದ್ದರು. ಭಾನುವಾರ ಸಂಜೆ ನಡೆದ ಅಭಿಯಾನದಲ್ಲಿ ಸುಮಾರು 45,000ಕ್ಕೂ‌ ಹೆಚ್ಚು ಟ್ವೀಟ್‌ಗಳು ದಾಖಲಾಗಿದ್ದವು. #RejectKFC ಹ್ಯಾಶ್‌ಟ್ಯಾಗ್ ಭಾರತದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ಆಗಿತ್ತು.

ಈ KFC ಯವರು ಶ್ರೀಲಂಕಾದಲ್ಲಿ ಸಿಂಹಳಿ, ಚೀನಾದಲ್ಲಿ ಮ್ಯಾಂಡರಿನ್‌, ಜೋರ್ಡಾನ್ ನಲ್ಲಿ ಅರೇಬಿಕ್‌, ರಷ್ಯಾದಲ್ಲಿ ರಷ್ಯನ್ ಹೀಗೆ ಆಯಾ ನಾಡುಗಳಲ್ಲಿ ಅವರವರ ನುಡಿಗಳನ್ನೇ ಬಳಸಿದ್ದಾರೆ. ನಮ್ಮ ಕನ್ನಡದಲ್ಲಿ ಸೇವೆ ಕೊಡೊಕೆ ಆಗಿಲ್ಲ ಅಂದ್ರೆ ಕರ್ನಾಟಕದಿಂದ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಕನ್ನಡ ಹೋರಾಟಗಾರ ಮಂಜು ಗಣಪತಿಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ಬಳಕೆ ಮಾಡದ ಕೆಎಫ್‌ಸಿ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು. ಕನ್ನಡದಲ್ಲೇ ವ್ಯವಹರಿಸಬೇಕು, ಮಳಿಗೆಗಳಲ್ಲಿ ಕನ್ನಡದ ಹಾಡುಗಳನ್ನು ಪ್ರಸಾರ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ. ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಯಾವುದೇ ಸಂಸ್ಥೆ, ಅದು ಎಷ್ಟು ದೊಡ್ಡದೇ ಆದರೂ ನಮಗೆ ಬೇಡ. ಹಣ ಮಾಡಲು ಕರ್ನಾಟಕಕ್ಕೆ ಬರುವ ಸಂಸ್ಥೆಗಳು ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು, ಕನ್ನಡಿಗರ ಅಸ್ಮಿತೆಯನ್ನು ಗುರುತಿಸಬೇಕು. ಇತರ ಭಾಷೆಗಳನ್ನು, ಭಾಷಿಕರನ್ನು ಕನ್ನಡಿಗರ ಮೇಲೆ ಹೇರುವ ಹುಚ್ಚಾಟ ಸಹಿಸುವುದಿಲ್ಲ” ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...