Homeಕರ್ನಾಟಕಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್

ಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಧರ್ಮಸ್ಥಳ ಪ್ರಕರಣದ ಚರ್ಚೆ ನಡೆಸುವಾಗ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಪವರ್ ಟಿವಿ ನ್ಯೂಸ್ ಚಾನೆಲ್‌ ಎಂ.ಡಿ ರಾಕೇಶ್ ಶೆಟ್ಟಿ ವಿರುದ್ಧ ಎರಡು ದೂರು ನೀಡಲಾಗಿದ್ದು, ಒಂದರಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಬಿ.ಆರ್ ಭಾಸ್ಕರ್ ಪ್ರಸಾದ್ ಅವರು ದೂರು ನೀಡಿದ್ದು, ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ಜುಲೈ 24ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನು ಜುಲೈ 25ರಂದು ಕಾಡುಗೋಡಿ ಪೊಲೀಸ್ ಠಾಣೆಗೆ ಪರಮೇಶ್ ವಿ ಬೆಳತ್ತೂರು ಎಂಬವರು ದೂರು ನೀಡಿದ್ದಾರೆ. ರಾಕೇಶ್ ಶೆಟ್ಟಿ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

“ಟಿವಿ ಚರ್ಚೆ ವೇಳೆ ರಾಕೇಶ್ ಶೆಟ್ಟಿ ಸೌಜನ್ಯ ಪರ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಹೋರಾಟಗಾರರ ತಾಯಂದಿರನ್ನು ಅವಮಾನಿಸುವ ರೀತಿಯಲ್ಲಿ, ಅವರ ಶೀಲಕ್ಕೆ ಮತ್ತು ಗುಣ ನಡತೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ದೇವರು ಧರ್ಮದ ಹೆಸರುಗಳನ್ನು ಮುಂದಿಟ್ಟುಕೊಂಡು ಹೆಣ್ಣಿನ ಶೀಲ ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಪದ ಬಳಕೆ ಮಾಡುವ ಮೂಲಕ ದೇವರು ಧರ್ಮವನ್ನು ಅಪಮಾನ ಮಾಡಿದ್ದಾರೆ” ಎಂದು ಭಾಸ್ಕರ್ ಪ್ರಸಾದ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಸೌಜನ್ಯ ಪರ ನ್ಯಾಯಕ್ಕಾಗಿ ಧ್ವನಿ ಎತ್ತಿರುವ ಹೋರಾಟಗಾರರನ್ನು ಕೊಲೆ ಮಾಡಿಸುವ ಮತ್ತು ಅವರ ಮೇಲೆ ಹಲ್ಲೆ ಮಾಡಿಸುವ ಪ್ರಚೋದನಕಾರಿಯಾದಂತಹ ಹೇಳಿಕೆಗಳನ್ನು ತನ್ನ ನ್ಯೂಸ್ ಚಾನೆಲ್‌ ಮೂಲಕ ನೀಡುವುದು ಮುಂತಾದ ಕಾನೂನುಬಾಹಿರ ಮತ್ತು ಸಮಾಜದ ಶಾಂತಿ ಕದಡುವ ದುಷ್ಕೃತ್ಯಗಳನ್ನು ರಾಕೇಶ್ ಶೆಟ್ಟಿ ಮಾಡಿಕೊಂಡು ಬರುತ್ತಿದ್ದಾರೆ. ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರನ್ನು ಹಿಂದೂ ಧರ್ಮದ ವಿರೋಧಿಗಳು ಮತ್ತು ದೈವದ ವಿರೋಧಿಗಳು ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಬಗ್ಗೆ ಮಾತನಾಡುವಾಗ ಇಸ್ಲಾಂ ಧರ್ಮದ ಭಾವನೆಗಳಿಗೆ ಧಕ್ಕೆ ತಂದು, ಹಿಂದೂ-ಮುಸ್ಲಿಂ ನಡುವೆ ಶಾಂತಿ ಕದಡುವ ಮೂಲಕ ಸಮಾಜ ರಕ್ತಪಾತಕ್ಕೆ ಇಳಿಯುವಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ.

ಇನ್ನು ಕಾಡುಗೋಡಿಯ ಪರಮೇಶ್ ಅವರು ನೀಡಿರುವ ದೂರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನನ್ನು “ಹುಚ್ಚ”, “ನೀಚರಲ್ಲೆ ನೀಚ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಕ್ಷಿ ದೂರುದಾರ ಖುದ್ದಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಸಾಧ್ಯವಿಲ್ಲ ಎಂದು ತಿಳಿದು ತಾನು ದೂರು ನೀಡುತ್ತಿರುವುದಾಗಿ ಹೇಳಿದ್ದಾರೆ.

ಪರಮೇಶ್ ಅವರು ನೀಡಿರುವ ದೂರಿನ ಸಂಬಂಧ ಎಫ್‌ಐಆರ್ ದಾಖಲಿಸಲು ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದಾರೆ. ಈ ಸಂಬಂಧ ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಲು ಪರಮೇಶ್ ಅವರಿಗೆ ತಿಳಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಧರ್ಮಸ್ಥಳ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ; ಸಾಕ್ಷಿ ದೂರುದಾರನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...