Homeಕರ್ನಾಟಕಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್

ಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಧರ್ಮಸ್ಥಳ ಪ್ರಕರಣದ ಚರ್ಚೆ ನಡೆಸುವಾಗ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಪವರ್ ಟಿವಿ ನ್ಯೂಸ್ ಚಾನೆಲ್‌ ಎಂ.ಡಿ ರಾಕೇಶ್ ಶೆಟ್ಟಿ ವಿರುದ್ಧ ಎರಡು ದೂರು ನೀಡಲಾಗಿದ್ದು, ಒಂದರಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಬಿ.ಆರ್ ಭಾಸ್ಕರ್ ಪ್ರಸಾದ್ ಅವರು ದೂರು ನೀಡಿದ್ದು, ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ಜುಲೈ 24ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನು ಜುಲೈ 25ರಂದು ಕಾಡುಗೋಡಿ ಪೊಲೀಸ್ ಠಾಣೆಗೆ ಪರಮೇಶ್ ವಿ ಬೆಳತ್ತೂರು ಎಂಬವರು ದೂರು ನೀಡಿದ್ದಾರೆ. ರಾಕೇಶ್ ಶೆಟ್ಟಿ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

“ಟಿವಿ ಚರ್ಚೆ ವೇಳೆ ರಾಕೇಶ್ ಶೆಟ್ಟಿ ಸೌಜನ್ಯ ಪರ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಹೋರಾಟಗಾರರ ತಾಯಂದಿರನ್ನು ಅವಮಾನಿಸುವ ರೀತಿಯಲ್ಲಿ, ಅವರ ಶೀಲಕ್ಕೆ ಮತ್ತು ಗುಣ ನಡತೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ದೇವರು ಧರ್ಮದ ಹೆಸರುಗಳನ್ನು ಮುಂದಿಟ್ಟುಕೊಂಡು ಹೆಣ್ಣಿನ ಶೀಲ ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಪದ ಬಳಕೆ ಮಾಡುವ ಮೂಲಕ ದೇವರು ಧರ್ಮವನ್ನು ಅಪಮಾನ ಮಾಡಿದ್ದಾರೆ” ಎಂದು ಭಾಸ್ಕರ್ ಪ್ರಸಾದ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಸೌಜನ್ಯ ಪರ ನ್ಯಾಯಕ್ಕಾಗಿ ಧ್ವನಿ ಎತ್ತಿರುವ ಹೋರಾಟಗಾರರನ್ನು ಕೊಲೆ ಮಾಡಿಸುವ ಮತ್ತು ಅವರ ಮೇಲೆ ಹಲ್ಲೆ ಮಾಡಿಸುವ ಪ್ರಚೋದನಕಾರಿಯಾದಂತಹ ಹೇಳಿಕೆಗಳನ್ನು ತನ್ನ ನ್ಯೂಸ್ ಚಾನೆಲ್‌ ಮೂಲಕ ನೀಡುವುದು ಮುಂತಾದ ಕಾನೂನುಬಾಹಿರ ಮತ್ತು ಸಮಾಜದ ಶಾಂತಿ ಕದಡುವ ದುಷ್ಕೃತ್ಯಗಳನ್ನು ರಾಕೇಶ್ ಶೆಟ್ಟಿ ಮಾಡಿಕೊಂಡು ಬರುತ್ತಿದ್ದಾರೆ. ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರನ್ನು ಹಿಂದೂ ಧರ್ಮದ ವಿರೋಧಿಗಳು ಮತ್ತು ದೈವದ ವಿರೋಧಿಗಳು ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಬಗ್ಗೆ ಮಾತನಾಡುವಾಗ ಇಸ್ಲಾಂ ಧರ್ಮದ ಭಾವನೆಗಳಿಗೆ ಧಕ್ಕೆ ತಂದು, ಹಿಂದೂ-ಮುಸ್ಲಿಂ ನಡುವೆ ಶಾಂತಿ ಕದಡುವ ಮೂಲಕ ಸಮಾಜ ರಕ್ತಪಾತಕ್ಕೆ ಇಳಿಯುವಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ.

ಇನ್ನು ಕಾಡುಗೋಡಿಯ ಪರಮೇಶ್ ಅವರು ನೀಡಿರುವ ದೂರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನನ್ನು “ಹುಚ್ಚ”, “ನೀಚರಲ್ಲೆ ನೀಚ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಕ್ಷಿ ದೂರುದಾರ ಖುದ್ದಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಸಾಧ್ಯವಿಲ್ಲ ಎಂದು ತಿಳಿದು ತಾನು ದೂರು ನೀಡುತ್ತಿರುವುದಾಗಿ ಹೇಳಿದ್ದಾರೆ.

ಪರಮೇಶ್ ಅವರು ನೀಡಿರುವ ದೂರಿನ ಸಂಬಂಧ ಎಫ್‌ಐಆರ್ ದಾಖಲಿಸಲು ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದಾರೆ. ಈ ಸಂಬಂಧ ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಲು ಪರಮೇಶ್ ಅವರಿಗೆ ತಿಳಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಧರ್ಮಸ್ಥಳ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ; ಸಾಕ್ಷಿ ದೂರುದಾರನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...