Homeಕರ್ನಾಟಕಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್

ಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಧರ್ಮಸ್ಥಳ ಪ್ರಕರಣದ ಚರ್ಚೆ ನಡೆಸುವಾಗ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಪವರ್ ಟಿವಿ ನ್ಯೂಸ್ ಚಾನೆಲ್‌ ಎಂ.ಡಿ ರಾಕೇಶ್ ಶೆಟ್ಟಿ ವಿರುದ್ಧ ಎರಡು ದೂರು ನೀಡಲಾಗಿದ್ದು, ಒಂದರಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಬಿ.ಆರ್ ಭಾಸ್ಕರ್ ಪ್ರಸಾದ್ ಅವರು ದೂರು ನೀಡಿದ್ದು, ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ಜುಲೈ 24ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನು ಜುಲೈ 25ರಂದು ಕಾಡುಗೋಡಿ ಪೊಲೀಸ್ ಠಾಣೆಗೆ ಪರಮೇಶ್ ವಿ ಬೆಳತ್ತೂರು ಎಂಬವರು ದೂರು ನೀಡಿದ್ದಾರೆ. ರಾಕೇಶ್ ಶೆಟ್ಟಿ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

“ಟಿವಿ ಚರ್ಚೆ ವೇಳೆ ರಾಕೇಶ್ ಶೆಟ್ಟಿ ಸೌಜನ್ಯ ಪರ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಹೋರಾಟಗಾರರ ತಾಯಂದಿರನ್ನು ಅವಮಾನಿಸುವ ರೀತಿಯಲ್ಲಿ, ಅವರ ಶೀಲಕ್ಕೆ ಮತ್ತು ಗುಣ ನಡತೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ದೇವರು ಧರ್ಮದ ಹೆಸರುಗಳನ್ನು ಮುಂದಿಟ್ಟುಕೊಂಡು ಹೆಣ್ಣಿನ ಶೀಲ ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಪದ ಬಳಕೆ ಮಾಡುವ ಮೂಲಕ ದೇವರು ಧರ್ಮವನ್ನು ಅಪಮಾನ ಮಾಡಿದ್ದಾರೆ” ಎಂದು ಭಾಸ್ಕರ್ ಪ್ರಸಾದ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಸೌಜನ್ಯ ಪರ ನ್ಯಾಯಕ್ಕಾಗಿ ಧ್ವನಿ ಎತ್ತಿರುವ ಹೋರಾಟಗಾರರನ್ನು ಕೊಲೆ ಮಾಡಿಸುವ ಮತ್ತು ಅವರ ಮೇಲೆ ಹಲ್ಲೆ ಮಾಡಿಸುವ ಪ್ರಚೋದನಕಾರಿಯಾದಂತಹ ಹೇಳಿಕೆಗಳನ್ನು ತನ್ನ ನ್ಯೂಸ್ ಚಾನೆಲ್‌ ಮೂಲಕ ನೀಡುವುದು ಮುಂತಾದ ಕಾನೂನುಬಾಹಿರ ಮತ್ತು ಸಮಾಜದ ಶಾಂತಿ ಕದಡುವ ದುಷ್ಕೃತ್ಯಗಳನ್ನು ರಾಕೇಶ್ ಶೆಟ್ಟಿ ಮಾಡಿಕೊಂಡು ಬರುತ್ತಿದ್ದಾರೆ. ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರನ್ನು ಹಿಂದೂ ಧರ್ಮದ ವಿರೋಧಿಗಳು ಮತ್ತು ದೈವದ ವಿರೋಧಿಗಳು ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಬಗ್ಗೆ ಮಾತನಾಡುವಾಗ ಇಸ್ಲಾಂ ಧರ್ಮದ ಭಾವನೆಗಳಿಗೆ ಧಕ್ಕೆ ತಂದು, ಹಿಂದೂ-ಮುಸ್ಲಿಂ ನಡುವೆ ಶಾಂತಿ ಕದಡುವ ಮೂಲಕ ಸಮಾಜ ರಕ್ತಪಾತಕ್ಕೆ ಇಳಿಯುವಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ.

ಇನ್ನು ಕಾಡುಗೋಡಿಯ ಪರಮೇಶ್ ಅವರು ನೀಡಿರುವ ದೂರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನನ್ನು “ಹುಚ್ಚ”, “ನೀಚರಲ್ಲೆ ನೀಚ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಕ್ಷಿ ದೂರುದಾರ ಖುದ್ದಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಸಾಧ್ಯವಿಲ್ಲ ಎಂದು ತಿಳಿದು ತಾನು ದೂರು ನೀಡುತ್ತಿರುವುದಾಗಿ ಹೇಳಿದ್ದಾರೆ.

ಪರಮೇಶ್ ಅವರು ನೀಡಿರುವ ದೂರಿನ ಸಂಬಂಧ ಎಫ್‌ಐಆರ್ ದಾಖಲಿಸಲು ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದಾರೆ. ಈ ಸಂಬಂಧ ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಲು ಪರಮೇಶ್ ಅವರಿಗೆ ತಿಳಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಧರ್ಮಸ್ಥಳ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ; ಸಾಕ್ಷಿ ದೂರುದಾರನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...