Homeಮುಖಪುಟಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗ ಮಾಡಿಕೊಳ್ಳುವ ಅಪಾಯ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಆತಂಕ ವ್ಯಕ್ತಪಡಿಸಿದ್ದು, “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯದಲ್ಲಿ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಆಗುತ್ತಿರುವ ಬಲಾಢ್ಯರ ವ್ಯವಸ್ಥಿತ ಹಸ್ತಕ್ಷೇಪವನ್ನು ಕೊನೆಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸೋನಿಯಾ ಅವರು, “ರಾಜಕೀಯ ಪಕ್ಷಗಳ ನಾಯಕರು ರಾಜಕೀಯ ನಿರೂಪಣೆಗಳಿಗಾಗಿ ಜಾಗತಿಕ ಕಂಪನಿಗಳಾದ ಫೇಸ್‌ಬುಕ್ ಮತ್ತು ಟ್ವಿಟರ್ ಅನ್ನು ಬಳಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಜಾಗತಿಕ ಸಾಮಾಜಿಕ ಮಾಧ್ಯಮ ಕಂಪನಿಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮನಾದ ಅವಕಾಶವನ್ನು ಒದಗಿಸುತ್ತಿಲ್ಲ ಎಂಬುದು ಪದೇ ಪದೇ ಸಾರ್ವಜನಿಕ ಗಮನಕ್ಕೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

‘ಅಲ್ ಜಜೀರಾ’ ಮತ್ತು ‘ದಿ ರಿಪೋಟರ್ಸ್ ಕಲೆಕ್ಟಿವ್‌’ನಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿದ ಅವರು, ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಚುನಾವಣಾ ಜಾಹೀರಾತುಗಳಿಗಾಗಿ ಆಡಳಿತಾರೂಢ ಬಿಜೆಪಿಗೆ ಫೇಸ್‌ಬುಕ್ ಹೆಚ್ಚಿನ ಅವಕಾಶ ನೀಡಿದೆ. ಸರ್ಕಾರದ ವಿರುದ್ಧ ಮಾತನಾಡುತ್ತಿದ್ದ ಎಲ್ಲರ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯ ಬಹಳ ಗಂಭೀರವಾದದ್ದು ಎಂದಿರುವ ಅವರು, “ಅಧಿಕಾರ ಸ್ಥಾಪನೆಗೆ ಸಹಿಕರಿಸುವುದರ ಜೊತೆಗೆ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿರುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಭಾವನಾತ್ಮಕ ಸಂಗತಿಗಳ ತಪ್ಪು ಮಾಹಿತಿ, ನಕಲಿ ಜಾಹೀರಾತಿನ ಮೂಲಕ ಯುವ ಮತ್ತು ಹಿರಿಯರ ಮನಸ್ಸಿನಲ್ಲಿ ದ್ವೇಷ ತುಂಬಲಾಗುತ್ತಿದೆ. ಫೇಸ್ ಬುಕ್ ನಂತಹ ಕಂಪನಿಗಳು ಇದನ್ನು ಅರಿತು ಲಾಭ ಮಾಡಿಕೊಳ್ಳುತ್ತಿವೆ” ಎಂದು ಎಚ್ಚರಿಸಿದ್ದಾರೆ.

“ಅಧಿಕಾರ ಸ್ಥಾಪನೆ, ಫೇಸ್‌ಬುಕ್‌ನಂತಹ ಜಾಗತಿಕ ಸಾಮಾಜಿಕ ಮಾಧ್ಯಮ ಹಾಗೂ ದೈತ್ಯ ಕಂಪನಿಗಳ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಈಗ ಬಹಿರಂಗವಾಗಿರುವ ವರದಿಗಳು ತೋರಿಸುತ್ತವೆ. ಇದು ಪಕ್ಷಪಾತದ ರಾಜಕೀಯವನ್ನು ಮೀರಿದೆ. ಯಾರು ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ” ಎಂದು ಅವರು ಮನವಿ ಮಾಡಿದ್ದಾರೆ.

ಆಲ್‌ಜಜೀರಾ ವರದಿಯಲ್ಲಿ ಏನಿತ್ತು?

ನ್ಯೂ ಎಮರ್ಜಿಂಗ್ ವರ್ಲ್ಡ್ ಆಫ್ ಜರ್ನಲಿಸಂ ಲಿಮಿಟೆಡ್‌ನ ಸಂಕ್ಷಿಪ್ತ ರೂಪವಾಗಿರುವ NEWJ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಗ್ರೂಪ್ ಒಡೆತನದ ಭಾರತದ ಅತಿದೊಡ್ಡ ಟೆಲಿಕಾಂ ಮತ್ತು ಇಂಟರ್ನೆಟ್ ಕಂಪನಿ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ! ಈ ಫೇಸ್‌ಬುಕ್‌ ಪುಟವು ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿದೆ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಾ ಬಿಜೆಪಿಗೆ ರಾಜಕೀಯ ಅನುಕೂಲ ಮಾಡಿಕೊಡುತ್ತಿದೆ ಎಂದು ವಿಸ್ತೃತವಾಗಿ ಆಲ್‌ಜಜೀರಾ ವರದಿ ಮಾಡಿದೆ. (ವರದಿಯ ಅನುವಾದ ‘ಇಲ್ಲಿ’ ಓದಿರಿ)

ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿಯಲ್ಲಿ ಏನಿದೆ?

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಪಿಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ. 2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ ಎಂದು ತಿಳಿದುಬಂದಿದೆ. (ಪೂರ್ಣ ವರದಿ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...