Homeಮುಖಪುಟಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗ ಮಾಡಿಕೊಳ್ಳುವ ಅಪಾಯ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಆತಂಕ ವ್ಯಕ್ತಪಡಿಸಿದ್ದು, “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಚುನಾವಣಾ ರಾಜಕೀಯದಲ್ಲಿ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಆಗುತ್ತಿರುವ ಬಲಾಢ್ಯರ ವ್ಯವಸ್ಥಿತ ಹಸ್ತಕ್ಷೇಪವನ್ನು ಕೊನೆಗೊಳಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸೋನಿಯಾ ಅವರು, “ರಾಜಕೀಯ ಪಕ್ಷಗಳ ನಾಯಕರು ರಾಜಕೀಯ ನಿರೂಪಣೆಗಳಿಗಾಗಿ ಜಾಗತಿಕ ಕಂಪನಿಗಳಾದ ಫೇಸ್‌ಬುಕ್ ಮತ್ತು ಟ್ವಿಟರ್ ಅನ್ನು ಬಳಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಜಾಗತಿಕ ಸಾಮಾಜಿಕ ಮಾಧ್ಯಮ ಕಂಪನಿಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮನಾದ ಅವಕಾಶವನ್ನು ಒದಗಿಸುತ್ತಿಲ್ಲ ಎಂಬುದು ಪದೇ ಪದೇ ಸಾರ್ವಜನಿಕ ಗಮನಕ್ಕೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

‘ಅಲ್ ಜಜೀರಾ’ ಮತ್ತು ‘ದಿ ರಿಪೋಟರ್ಸ್ ಕಲೆಕ್ಟಿವ್‌’ನಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿದ ಅವರು, ಇತರ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಚುನಾವಣಾ ಜಾಹೀರಾತುಗಳಿಗಾಗಿ ಆಡಳಿತಾರೂಢ ಬಿಜೆಪಿಗೆ ಫೇಸ್‌ಬುಕ್ ಹೆಚ್ಚಿನ ಅವಕಾಶ ನೀಡಿದೆ. ಸರ್ಕಾರದ ವಿರುದ್ಧ ಮಾತನಾಡುತ್ತಿದ್ದ ಎಲ್ಲರ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯ ಬಹಳ ಗಂಭೀರವಾದದ್ದು ಎಂದಿರುವ ಅವರು, “ಅಧಿಕಾರ ಸ್ಥಾಪನೆಗೆ ಸಹಿಕರಿಸುವುದರ ಜೊತೆಗೆ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿರುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಭಾವನಾತ್ಮಕ ಸಂಗತಿಗಳ ತಪ್ಪು ಮಾಹಿತಿ, ನಕಲಿ ಜಾಹೀರಾತಿನ ಮೂಲಕ ಯುವ ಮತ್ತು ಹಿರಿಯರ ಮನಸ್ಸಿನಲ್ಲಿ ದ್ವೇಷ ತುಂಬಲಾಗುತ್ತಿದೆ. ಫೇಸ್ ಬುಕ್ ನಂತಹ ಕಂಪನಿಗಳು ಇದನ್ನು ಅರಿತು ಲಾಭ ಮಾಡಿಕೊಳ್ಳುತ್ತಿವೆ” ಎಂದು ಎಚ್ಚರಿಸಿದ್ದಾರೆ.

“ಅಧಿಕಾರ ಸ್ಥಾಪನೆ, ಫೇಸ್‌ಬುಕ್‌ನಂತಹ ಜಾಗತಿಕ ಸಾಮಾಜಿಕ ಮಾಧ್ಯಮ ಹಾಗೂ ದೈತ್ಯ ಕಂಪನಿಗಳ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಈಗ ಬಹಿರಂಗವಾಗಿರುವ ವರದಿಗಳು ತೋರಿಸುತ್ತವೆ. ಇದು ಪಕ್ಷಪಾತದ ರಾಜಕೀಯವನ್ನು ಮೀರಿದೆ. ಯಾರು ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ” ಎಂದು ಅವರು ಮನವಿ ಮಾಡಿದ್ದಾರೆ.

ಆಲ್‌ಜಜೀರಾ ವರದಿಯಲ್ಲಿ ಏನಿತ್ತು?

ನ್ಯೂ ಎಮರ್ಜಿಂಗ್ ವರ್ಲ್ಡ್ ಆಫ್ ಜರ್ನಲಿಸಂ ಲಿಮಿಟೆಡ್‌ನ ಸಂಕ್ಷಿಪ್ತ ರೂಪವಾಗಿರುವ NEWJ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಗ್ರೂಪ್ ಒಡೆತನದ ಭಾರತದ ಅತಿದೊಡ್ಡ ಟೆಲಿಕಾಂ ಮತ್ತು ಇಂಟರ್ನೆಟ್ ಕಂಪನಿ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ! ಈ ಫೇಸ್‌ಬುಕ್‌ ಪುಟವು ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿದೆ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಾ ಬಿಜೆಪಿಗೆ ರಾಜಕೀಯ ಅನುಕೂಲ ಮಾಡಿಕೊಡುತ್ತಿದೆ ಎಂದು ವಿಸ್ತೃತವಾಗಿ ಆಲ್‌ಜಜೀರಾ ವರದಿ ಮಾಡಿದೆ. (ವರದಿಯ ಅನುವಾದ ‘ಇಲ್ಲಿ’ ಓದಿರಿ)

ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿಯಲ್ಲಿ ಏನಿದೆ?

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಪಿಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ. 2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ ಎಂದು ತಿಳಿದುಬಂದಿದೆ. (ಪೂರ್ಣ ವರದಿ ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....