Homeಮುಖಪುಟದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

ದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

- Advertisement -
- Advertisement -

ರೈತರ ದೆಹಲಿ ಚಲೋ ಪ್ರತಿಭಟನೆ ಮತ್ತು ಪೊಲೀಸ್‌ ಬಲಪ್ರಯೋದ ಬಗೆಗಿನ ಅರ್ಜಿ ವಿಚಾರಣೆ ನಡೆಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ರೈತರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಮತ್ತು ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು ಎಂದು ಹೇಳಿದೆ.

ದೆಹಲಿ, ಪಂಜಾಬ್ ಮತ್ತು ಹರ್ಯಾಣದ ಗಡಿಯಲ್ಲಿ ರೈತರ ಪ್ರತಿಭಟನೆಗೆ ಸಂಬಂಧಿಸಿದ ಎರಡು ಅರ್ಜಿಗಳನ್ನು    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಲಪಿತಾ ಬ್ಯಾನರ್ಜಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಪ್ರತಿಭಟನಾಕಾರರು ದೆಹಲಿಗೆ ಪ್ರವೇಶಿಸುವುದನ್ನು ತಡೆಯಲು ರಸ್ತೆಗಳನ್ನು ಬಂದ್‌ ಮಾಡುವ ಹರ್ಯಾಣ ಸರ್ಕಾರದ ಕ್ರಮವನ್ನು ಒಂದು ಅರ್ಜಿ ಖಂಡಿಸಿದರೆ, ರೈತರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುವುದು ಜನರ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಇನ್ನೊಂದು ಅರ್ಜಿ ಹೇಳಿದೆ.

ಅರ್ಜಿ ವಿಚಾರಣೆಯ ವೇಳೆ ಪ್ರತಿಭಟನಾಕಾರರಿಗೆ ಅಭಿವ್ಯಕ್ತಿಗೆ ಮೂಲಭೂತ ಹಕ್ಕಗಳಿದ್ದರೂ, ರಾಜ್ಯ ಸರ್ಕಾರವು ತನ್ನ ನಾಗರಿಕರನ್ನು ರಕ್ಷಿಸಲು ಮತ್ತು ಅವರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಬದ್ಧವಾಗಿದೆ ಎಂದು ನ್ಯಾಯಾಲಯ ಗಮನಿಸಿದೆ. ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳ ನಡುವೆ ಸಮತೋಲನವಿರಬೇಕು. ಎರಡನ್ನು ಪ್ರತ್ಯೇಕವಾಗಿ ನೋಡಲಾಗದು. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಬೇಕು. ಇದಕ್ಕೆ ಸಂಬಂಧಪಟ್ಟವರೆಲ್ಲ ಜೊತೆಗೆ ಕುಳಿತು ಸೌಹಾರ್ಧಯುತವಾಗಿ ಸಮಸ್ಯೆ ಪರಿಹರಿಸಬೇಕು ಮತ್ತು ಪ್ರತಿಭಟನೆಗೆ ಸರಿಯಾದ ಪ್ರದೇಶವನ್ನು ಗುರುತಿಸಬೇಕು ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯವು ಈ ಕುರಿತು ಕೇಂದ್ರ ಸರಕಾರ ಪಂಜಾಬ್, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಭಟನೆಗಳಿಗೆ ಸ್ಥಳವನ್ನು ನಿರ್ಧರಿಸುವಂತೆ ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 15ರಂದು ನಡೆಯಲಿದೆ.

ಉತ್ತರಪ್ರದೇಶ, ಹರ್ಯಾಣ ಮತ್ತು ಪಂಜಾಬ್‌ನ ಹಲವಾರು ರೈತ ಸಂಘಗಳು ಕನಿಷ್ಠ ಬೆಂಬಲ ಬೆಲೆ (MSP) ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿತ್ತು. ಮಂಗಳವಾರ ಬೆಳಗ್ಗೆ ಪಂಜಾಬ್ ಮತ್ತು ಹರಿಯಾಣದ ವಿವಿಧ ಗ್ರಾಮಗಳಿಂದ ರೈತರು ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ಒಣ ಪಡಿತರ, ವಾಟರ್ ಪ್ರೂಫ್ ಶೀಟ್‌ಗಳು ಮತ್ತು ಹಾಸಿಗೆಗಳನ್ನು ತುಂಬಿಕೊಂಡು ರಾಷ್ಟ್ರ ರಾಜಧಾನಿಯತ್ತ ತೆರಳಲು ಪ್ರಾರಂಭಿಸಿದ್ದರು.  ಶಂಭು ಗಡಿಯಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿ ರೈತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಹರ್ಯಾಣ ಪೊಲೀಸರು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದು, ಗಡಿಯಲ್ಲಿ ರೈತರ ಟ್ರಕ್‌ಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನು ಓದಿ: ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...