Homeಮುಖಪುಟಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ...

ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ಈ ತರಬೇತಿಯು ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರವಾದುದು - ಪ್ರಜ್ವಲ್ ಶಾಸ್ತ್ರಿ

- Advertisement -
- Advertisement -

ರಾಜ್ಯದಲ್ಲಿ ದಲಿತರಿಗಾಗಿ ಮೀಸಲಿಟ್ಟ SCSP, TSP ಹಣವನ್ನು ಬಳಸಿ, ಪ್ರತಿ ಗ್ರಾಮ ಪಂಚಾಯ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ 25 ಮಕ್ಕಳಿಗೆ ವೇದ ಗಣಿತ ತರಬೇತಿ ನೀಡುವ ಯೋಜನೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಏನಿದು ಯೋಜನೆ, ಇದಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದು ನಿಜಕ್ಕೂ ಮಕ್ಕಳಿಗೆ ಅಗತ್ಯವಿದೆಯೇ ಎಂದು ಹುಡುಕುತ್ತಾ ಹೋದರೆ ಇದರ ಹಿಂದೆ ಕೋಟ್ಯಾಂತರ ರೂಗಳ ಬಹುದೊಡ್ಡ ಹಗರಣವಿರುವುದು ಬೆಳಕಿಗೆ ಬಂದಿದೆ.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜನವರಿ 06, 2022ರಂದು ಪತ್ರ ಬರೆದಿದ್ದರು. ಅದರಲ್ಲಿ “ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಬಳಸಿಕೊಳ್ಳಬಹುದು” ಎಂದು ಸೂಚಿಸಲಾಗಿತ್ತು. ಅದರಂತೆ ಈ ತರಬೇತಿ ನೀಡುವ ಟೆಂಡರ್‌ ಅನ್ನು ಹಿರಿಯೂರಿನ ಎವಿಎಂ ಎಂಬ ಸಂಸ್ಥೆಗೆ ನೀಡಲಾಗಿದೆ. ಅದಕ್ಕಾಗಿ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳು ಒಂದು ಲಕ್ಷ ರೂಗಳನ್ನು ಈ ಸಂಸ್ಥೆಗೆ ಚೆಕ್ ಮೂಲಕ ನೀಡಬೇಕು ಸೂಚಿಸಲಾಗಿದೆ.

ಈ ಎವಿಎಂ ಸಂಸ್ಥೆಯು ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಈ ತರಬೇತಿಯನ್ನು ಜಾರಿಗೊಳಿಸಲು ಮಧ್ಯವರ್ತಿಗಳಿಗೆ ಸಬ್‌ ಟೆಂಡರ್ ನೀಡುತ್ತಿದೆ. ಈ ಮಧ್ಯವರ್ತಿಗಳು ಪ್ರತಿ ತಾಲ್ಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿಗಳ ಜೊತೆ ಸಮನ್ವಯ ಸಾಧಿಸಿ ಈ ತರಬೇತಿ ಯೋಜನೆ ಜಾರಿಯಾಗುವಂತೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಅಂದರೆ ಪ್ರತಿ ಗ್ರಾಮ ಪಂಚಾಯ್ತಿಗಳು ಎವಿಎಂ ಹೆಸರಿಗೆ ಒಂದು ಲಕ್ಷ ರೂಗಳ ಚೆಕ್ ಹಾಕುವಂತೆ ಆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳ ಪಿಡಿಓಗಳನ್ನು ಮನವೊಲಿಸುವುದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು, ತರಬೇತಿಯ ವರದಿಗಳನ್ನು ಸಲ್ಲಿಸುವ ಕೆಲಸ ಅವರದಾಗಿದೆ. ಅದಕ್ಕೆ ಪ್ರತಿಯಾಗಿ ಮಧ್ಯವರ್ತಿಗಳು ಎವಿಎಂ ಅಕಾಡೆಮಿಯಿಂದ ಇಂತಿಷ್ಟು ಹಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ತರಬೇತಿಗೆ ಸರ್ಕಾರಿ ಶಿಕ್ಷಕರ ಬಳಕೆ

ಮಕ್ಕಳಿಗೆ ವೇದ ಗಣಿತ ಹೇಳಿಕೊಡಲು ಸರ್ಕಾರಿ ಶಾಲೆಗಳ ಗಣಿತ ಶಿಕ್ಷಕರನ್ನೇ ಬಳಸಿಕೊಳ್ಳಲಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ ಗಣಿತ ಶಿಕ್ಷಕರನ್ನು ಸೇರಿಸಿ ಅವರಿಗೆ ವೇದ ಗಣಿತದ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ. ಆ ಶಿಕ್ಷಕರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ದಲಿತ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ತರಬೇತಿಗೆ ಒಳಪಡುವ ಪ್ರತಿ ವಿದ್ಯಾರ್ಥಿಗೂ ಒಂದು ಟೀಶರ್ಟ್, ಕಲಿಕಾ ನೋಟ್ಸ್‌ಗಳನ್ನು ಒದಗಿಸಲಾಗುತ್ತದೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಗ್ರಾಮೀಣಾಭಿವೃದ್ದಿ ಇಲಾಖೆಯು ಶಿಕ್ಷಣ ಇಲಾಖೆಯಲ್ಲಿ ತಲೆ ಹಾಕುತ್ತಿರುವುದೇಕೆ ಎಂಬ ಪ್ರಶ್ನೆ ಎದ್ದಿದೆ. ಒಂದಷ್ಟು ಪುಸ್ತಕ, ಒಂದು ಟೀ ಶರ್ಟ್ ನೀಡುವುದಕ್ಕೆ 60 ಕೋಟಿ ರೂ ಹಣ ಖರ್ಚಾಗುವುದಿಲ್ಲ. ಹಣ ಲೂಟಿ ಹೊಡೆಯಲೆಂದೇ ಈ ಯೋಜನೆ ಸೃಷ್ಟಿಸಲಾಗಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಇನ್ನೊಂದೆಡೆ ಈಗಾಗಲೇ ಶಾಲೆಗಳಲ್ಲಿ ಗಣಿತ ಕಲಿಸುತ್ತಿರುವಾಗ ವೈಜ್ಞಾನಿಕವಲ್ಲದ, ಗೊಂದಲ ಮೂಡಿಸುವ ಈ ವೇದ ಗಣಿತ ತರಬೇತಿ ಬೇಡ ಎಂದು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ ಯೋಜನೆ: ಪ್ರಜ್ವಲ್ ಶಾಸ್ತ್ರಿ

ಬೆಂಗಳೂರಿನ ಖಗೋಳ ಭೌತಶಾಸ್ತಜ್ಞರಾದ ಪ್ರಜ್ವಲ್ ಶಾಸ್ತ್ರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, ಈ ವೇದ ಗಣಿತ ತರಬೇತಿಯು “ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ವೈದಿಕ ಗಣಿತ ಎಂಬ ಪುಸ್ತಕವು ಪ್ರಕಟವಾದಾಗ, ಗಣಿತ, ಸಂಸ್ಕೃತ, ಮತ್ತು ಇತಿಹಾಸ, ಇವೆಲ್ಲವನ್ನು ಬಲ್ಲ ತಜ್ಙರಾದ ಕೃಪಾಶಂಕರ್‌ ಶುಕ್ಲಾ, ಶ್ರೀಕೃಷ್ಣ ದಾನಿ, ಬಾಲಚಂದ್ರ ರಾವ್ ಮತ್ತಿತರರು, ಆ ಪುಸ್ತಕದಲ್ಲಿರುವ ಹೇಳಿಕೆಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ, ಪ್ರಾಥಮಿಕ ಶಾಲೆಗಳಲ್ಲಿ ಹಲವೊಂದು ವಾಡಿಕೆಯಲ್ಲಿರುವಂತಹ ಲೆಕ್ಕದ ಸರಳ ಸೂತ್ರಗಳು ಇವೆ ವಿನಃ, ಅದು ವೈದಿಕ ಕಾಲಘಟ್ಟದ್ದೇ ಅಲ್ಲ, ಹಾಗೂ ವಿಶೇಷ ಗಣಿತವು ಯಾವುದೂ ಅದರಲ್ಲಿ ಇಲ್ಲವೆಂದು ತಮ್ಮ ವಿಶ್ಲೇಷಣೆಗಳನ್ನು ಸ್ಪಷ್ಟವಾಗಿ ಬರೆದು ಪ್ರಕಟಿಸಿದ್ದಾರೆ. ಹಾಗಿರುವಾಗ, ಸದ್ಯದ ಆದೇಶಗಳು ಗ್ರಾಮಪಂಚಾಯತಿನ ಹಣದ ದುರುಪಯೋಗ ಮಾತ್ರವಲ್ಲ, ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರ, ಹಾಗೂ ದಮನಿತರ ಒಳಿತಿಗೆ ಮೀಸಲಾಗಿರುವ ಧನದಿಂದ ದಲಿತ ಮಕ್ಕಳನ್ನು ವಂಚಿತಗೊಳಿಸುವಂತಹ ಪ್ರಕ್ರಿಯೆಗಳಾಗಿವೆ. ಇಂದಿನ ಶಿಕ್ಷಣದಲ್ಲಿ ನಿಜವಾದ ಅಗತ್ಯವೇನೆಂದರೆ, ಶತಮಾನಗಳ ಕಾಲ ಪ್ರಚಲಿತವಾಗಿದ್ದ ದಲಿತರ ತುಳಿತದ ಬಗ್ಗೆ, ಎಲ್ಲರ, ಹಾಗೂ ವಿಶೇಷವಾಗಿ ದಲಿತರಲ್ಲದವರ ತಿಳುವಳಿಕೆಯನ್ನು ಹೆಚ್ಚಿಸಬೇಕೇ ಹೊರತು ದಲಿತ ಮಕ್ಕಳನ್ನು ವಂಚಿತಗೊಳಿಸುವುದಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಯೋಜನೆ ಹಿಂಪಡೆಯದಿದ್ದರೆ ಹೋರಾಟ- ಎನ್ ವೆಂಕಟೇಶ್

ದಲಿತ ಸಂಘರ್ಷ ಸಮಿತಿಯ ಹಿರಿಯ ನಾಯಕರಾದ ಎನ್.ವೆಂಕಟೇಶ್‌ರವರು ಮಾತನಾಡಿ, “ಇಂದು ನಮ್ಮ ಮಕ್ಕಳಿಗೆ ಬದುಕು ಕಟ್ಟಿಕೊಳ್ಳುವ ಆಧುನಿಕ ಶಿಕ್ಷಣ ಬೇಕಾಗಿದೆ. ಆದರೆ ಸರ್ಕಾರ ವೇದ ಗಣಿತ ಕಲಿಸಲು ಹೊರಟಿದೆ. ಹಲವಾರು ಶಿಕ್ಷಣ ತಜ್ಞರು ವೇದ ಗಣಿತ ಎಂಬುದು ಗಣತವೇ ಅಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಹ ಹಳೆಯ ಮತ್ತು ಸತ್ತಿರುವ ವಿಷಯದ ತರಬೇತಿ ನಮ್ಮ ಮಕ್ಕಳಿಗೆ ಬೇಕಾಗಿಲ್ಲ. ಅದು ವೈಜ್ಞಾನಿಕವಾದ ಸಮಾಜ ನಿರ್ಮಾಣ ಮಾಡುವ ಆಶಯಕ್ಕೆ ಅಡ್ಡಿಪಡಿಸುತ್ತದೆ. ಹಾಗಾಗಿ ಈ ಯೋಜನೆಯನ್ನು ಕೂಡಲೇ ತಡೆಯಬೇಕು, ಇಲ್ಲವಾದಲ್ಲಿ ಹೋರಾಟಕ್ಕಿಳಿಯಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಉದ್ದಾರ ವಾಗಬಾರದೆಂದು ದಲಿತ ಮಕ್ಕಳ ದಾರಿ ತಪ್ಪಿಸಿ ಭವಿಷ್ಯವನ್ನು ಎಳೆವಯಸಲ್ಲೆ ಹಿಚುಕಿ ಹಾಕುವ ಹುನ್ನಾರವೇ ವೇದಗಣಿತದ ಉದ್ದೇಶ ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಒಳ್ಳೆ ವಿದ್ಯಾಭ್ಯಾಸಕೊಟ್ಟು ಮಕ್ಕಳನ್ನು ಮೇಲೆಕ್ಕೆ ಯಾಕೆ ತರುವುದಿಲ್ಲ ???

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...