Homeಮುಖಪುಟಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ...

ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ಈ ತರಬೇತಿಯು ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರವಾದುದು - ಪ್ರಜ್ವಲ್ ಶಾಸ್ತ್ರಿ

- Advertisement -
- Advertisement -

ರಾಜ್ಯದಲ್ಲಿ ದಲಿತರಿಗಾಗಿ ಮೀಸಲಿಟ್ಟ SCSP, TSP ಹಣವನ್ನು ಬಳಸಿ, ಪ್ರತಿ ಗ್ರಾಮ ಪಂಚಾಯ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ 25 ಮಕ್ಕಳಿಗೆ ವೇದ ಗಣಿತ ತರಬೇತಿ ನೀಡುವ ಯೋಜನೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಏನಿದು ಯೋಜನೆ, ಇದಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದು ನಿಜಕ್ಕೂ ಮಕ್ಕಳಿಗೆ ಅಗತ್ಯವಿದೆಯೇ ಎಂದು ಹುಡುಕುತ್ತಾ ಹೋದರೆ ಇದರ ಹಿಂದೆ ಕೋಟ್ಯಾಂತರ ರೂಗಳ ಬಹುದೊಡ್ಡ ಹಗರಣವಿರುವುದು ಬೆಳಕಿಗೆ ಬಂದಿದೆ.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜನವರಿ 06, 2022ರಂದು ಪತ್ರ ಬರೆದಿದ್ದರು. ಅದರಲ್ಲಿ “ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಬಳಸಿಕೊಳ್ಳಬಹುದು” ಎಂದು ಸೂಚಿಸಲಾಗಿತ್ತು. ಅದರಂತೆ ಈ ತರಬೇತಿ ನೀಡುವ ಟೆಂಡರ್‌ ಅನ್ನು ಹಿರಿಯೂರಿನ ಎವಿಎಂ ಎಂಬ ಸಂಸ್ಥೆಗೆ ನೀಡಲಾಗಿದೆ. ಅದಕ್ಕಾಗಿ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳು ಒಂದು ಲಕ್ಷ ರೂಗಳನ್ನು ಈ ಸಂಸ್ಥೆಗೆ ಚೆಕ್ ಮೂಲಕ ನೀಡಬೇಕು ಸೂಚಿಸಲಾಗಿದೆ.

ಈ ಎವಿಎಂ ಸಂಸ್ಥೆಯು ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಈ ತರಬೇತಿಯನ್ನು ಜಾರಿಗೊಳಿಸಲು ಮಧ್ಯವರ್ತಿಗಳಿಗೆ ಸಬ್‌ ಟೆಂಡರ್ ನೀಡುತ್ತಿದೆ. ಈ ಮಧ್ಯವರ್ತಿಗಳು ಪ್ರತಿ ತಾಲ್ಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿಗಳ ಜೊತೆ ಸಮನ್ವಯ ಸಾಧಿಸಿ ಈ ತರಬೇತಿ ಯೋಜನೆ ಜಾರಿಯಾಗುವಂತೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಅಂದರೆ ಪ್ರತಿ ಗ್ರಾಮ ಪಂಚಾಯ್ತಿಗಳು ಎವಿಎಂ ಹೆಸರಿಗೆ ಒಂದು ಲಕ್ಷ ರೂಗಳ ಚೆಕ್ ಹಾಕುವಂತೆ ಆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳ ಪಿಡಿಓಗಳನ್ನು ಮನವೊಲಿಸುವುದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು, ತರಬೇತಿಯ ವರದಿಗಳನ್ನು ಸಲ್ಲಿಸುವ ಕೆಲಸ ಅವರದಾಗಿದೆ. ಅದಕ್ಕೆ ಪ್ರತಿಯಾಗಿ ಮಧ್ಯವರ್ತಿಗಳು ಎವಿಎಂ ಅಕಾಡೆಮಿಯಿಂದ ಇಂತಿಷ್ಟು ಹಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ತರಬೇತಿಗೆ ಸರ್ಕಾರಿ ಶಿಕ್ಷಕರ ಬಳಕೆ

ಮಕ್ಕಳಿಗೆ ವೇದ ಗಣಿತ ಹೇಳಿಕೊಡಲು ಸರ್ಕಾರಿ ಶಾಲೆಗಳ ಗಣಿತ ಶಿಕ್ಷಕರನ್ನೇ ಬಳಸಿಕೊಳ್ಳಲಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ ಗಣಿತ ಶಿಕ್ಷಕರನ್ನು ಸೇರಿಸಿ ಅವರಿಗೆ ವೇದ ಗಣಿತದ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ. ಆ ಶಿಕ್ಷಕರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ದಲಿತ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ತರಬೇತಿಗೆ ಒಳಪಡುವ ಪ್ರತಿ ವಿದ್ಯಾರ್ಥಿಗೂ ಒಂದು ಟೀಶರ್ಟ್, ಕಲಿಕಾ ನೋಟ್ಸ್‌ಗಳನ್ನು ಒದಗಿಸಲಾಗುತ್ತದೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಗ್ರಾಮೀಣಾಭಿವೃದ್ದಿ ಇಲಾಖೆಯು ಶಿಕ್ಷಣ ಇಲಾಖೆಯಲ್ಲಿ ತಲೆ ಹಾಕುತ್ತಿರುವುದೇಕೆ ಎಂಬ ಪ್ರಶ್ನೆ ಎದ್ದಿದೆ. ಒಂದಷ್ಟು ಪುಸ್ತಕ, ಒಂದು ಟೀ ಶರ್ಟ್ ನೀಡುವುದಕ್ಕೆ 60 ಕೋಟಿ ರೂ ಹಣ ಖರ್ಚಾಗುವುದಿಲ್ಲ. ಹಣ ಲೂಟಿ ಹೊಡೆಯಲೆಂದೇ ಈ ಯೋಜನೆ ಸೃಷ್ಟಿಸಲಾಗಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಇನ್ನೊಂದೆಡೆ ಈಗಾಗಲೇ ಶಾಲೆಗಳಲ್ಲಿ ಗಣಿತ ಕಲಿಸುತ್ತಿರುವಾಗ ವೈಜ್ಞಾನಿಕವಲ್ಲದ, ಗೊಂದಲ ಮೂಡಿಸುವ ಈ ವೇದ ಗಣಿತ ತರಬೇತಿ ಬೇಡ ಎಂದು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ ಯೋಜನೆ: ಪ್ರಜ್ವಲ್ ಶಾಸ್ತ್ರಿ

ಬೆಂಗಳೂರಿನ ಖಗೋಳ ಭೌತಶಾಸ್ತಜ್ಞರಾದ ಪ್ರಜ್ವಲ್ ಶಾಸ್ತ್ರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, ಈ ವೇದ ಗಣಿತ ತರಬೇತಿಯು “ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ವೈದಿಕ ಗಣಿತ ಎಂಬ ಪುಸ್ತಕವು ಪ್ರಕಟವಾದಾಗ, ಗಣಿತ, ಸಂಸ್ಕೃತ, ಮತ್ತು ಇತಿಹಾಸ, ಇವೆಲ್ಲವನ್ನು ಬಲ್ಲ ತಜ್ಙರಾದ ಕೃಪಾಶಂಕರ್‌ ಶುಕ್ಲಾ, ಶ್ರೀಕೃಷ್ಣ ದಾನಿ, ಬಾಲಚಂದ್ರ ರಾವ್ ಮತ್ತಿತರರು, ಆ ಪುಸ್ತಕದಲ್ಲಿರುವ ಹೇಳಿಕೆಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ, ಪ್ರಾಥಮಿಕ ಶಾಲೆಗಳಲ್ಲಿ ಹಲವೊಂದು ವಾಡಿಕೆಯಲ್ಲಿರುವಂತಹ ಲೆಕ್ಕದ ಸರಳ ಸೂತ್ರಗಳು ಇವೆ ವಿನಃ, ಅದು ವೈದಿಕ ಕಾಲಘಟ್ಟದ್ದೇ ಅಲ್ಲ, ಹಾಗೂ ವಿಶೇಷ ಗಣಿತವು ಯಾವುದೂ ಅದರಲ್ಲಿ ಇಲ್ಲವೆಂದು ತಮ್ಮ ವಿಶ್ಲೇಷಣೆಗಳನ್ನು ಸ್ಪಷ್ಟವಾಗಿ ಬರೆದು ಪ್ರಕಟಿಸಿದ್ದಾರೆ. ಹಾಗಿರುವಾಗ, ಸದ್ಯದ ಆದೇಶಗಳು ಗ್ರಾಮಪಂಚಾಯತಿನ ಹಣದ ದುರುಪಯೋಗ ಮಾತ್ರವಲ್ಲ, ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರ, ಹಾಗೂ ದಮನಿತರ ಒಳಿತಿಗೆ ಮೀಸಲಾಗಿರುವ ಧನದಿಂದ ದಲಿತ ಮಕ್ಕಳನ್ನು ವಂಚಿತಗೊಳಿಸುವಂತಹ ಪ್ರಕ್ರಿಯೆಗಳಾಗಿವೆ. ಇಂದಿನ ಶಿಕ್ಷಣದಲ್ಲಿ ನಿಜವಾದ ಅಗತ್ಯವೇನೆಂದರೆ, ಶತಮಾನಗಳ ಕಾಲ ಪ್ರಚಲಿತವಾಗಿದ್ದ ದಲಿತರ ತುಳಿತದ ಬಗ್ಗೆ, ಎಲ್ಲರ, ಹಾಗೂ ವಿಶೇಷವಾಗಿ ದಲಿತರಲ್ಲದವರ ತಿಳುವಳಿಕೆಯನ್ನು ಹೆಚ್ಚಿಸಬೇಕೇ ಹೊರತು ದಲಿತ ಮಕ್ಕಳನ್ನು ವಂಚಿತಗೊಳಿಸುವುದಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಯೋಜನೆ ಹಿಂಪಡೆಯದಿದ್ದರೆ ಹೋರಾಟ- ಎನ್ ವೆಂಕಟೇಶ್

ದಲಿತ ಸಂಘರ್ಷ ಸಮಿತಿಯ ಹಿರಿಯ ನಾಯಕರಾದ ಎನ್.ವೆಂಕಟೇಶ್‌ರವರು ಮಾತನಾಡಿ, “ಇಂದು ನಮ್ಮ ಮಕ್ಕಳಿಗೆ ಬದುಕು ಕಟ್ಟಿಕೊಳ್ಳುವ ಆಧುನಿಕ ಶಿಕ್ಷಣ ಬೇಕಾಗಿದೆ. ಆದರೆ ಸರ್ಕಾರ ವೇದ ಗಣಿತ ಕಲಿಸಲು ಹೊರಟಿದೆ. ಹಲವಾರು ಶಿಕ್ಷಣ ತಜ್ಞರು ವೇದ ಗಣಿತ ಎಂಬುದು ಗಣತವೇ ಅಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಹ ಹಳೆಯ ಮತ್ತು ಸತ್ತಿರುವ ವಿಷಯದ ತರಬೇತಿ ನಮ್ಮ ಮಕ್ಕಳಿಗೆ ಬೇಕಾಗಿಲ್ಲ. ಅದು ವೈಜ್ಞಾನಿಕವಾದ ಸಮಾಜ ನಿರ್ಮಾಣ ಮಾಡುವ ಆಶಯಕ್ಕೆ ಅಡ್ಡಿಪಡಿಸುತ್ತದೆ. ಹಾಗಾಗಿ ಈ ಯೋಜನೆಯನ್ನು ಕೂಡಲೇ ತಡೆಯಬೇಕು, ಇಲ್ಲವಾದಲ್ಲಿ ಹೋರಾಟಕ್ಕಿಳಿಯಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಉದ್ದಾರ ವಾಗಬಾರದೆಂದು ದಲಿತ ಮಕ್ಕಳ ದಾರಿ ತಪ್ಪಿಸಿ ಭವಿಷ್ಯವನ್ನು ಎಳೆವಯಸಲ್ಲೆ ಹಿಚುಕಿ ಹಾಕುವ ಹುನ್ನಾರವೇ ವೇದಗಣಿತದ ಉದ್ದೇಶ ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಒಳ್ಳೆ ವಿದ್ಯಾಭ್ಯಾಸಕೊಟ್ಟು ಮಕ್ಕಳನ್ನು ಮೇಲೆಕ್ಕೆ ಯಾಕೆ ತರುವುದಿಲ್ಲ ???

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...