Homeಮುಖಪುಟಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ...

ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ಈ ತರಬೇತಿಯು ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರವಾದುದು - ಪ್ರಜ್ವಲ್ ಶಾಸ್ತ್ರಿ

- Advertisement -
- Advertisement -

ರಾಜ್ಯದಲ್ಲಿ ದಲಿತರಿಗಾಗಿ ಮೀಸಲಿಟ್ಟ SCSP, TSP ಹಣವನ್ನು ಬಳಸಿ, ಪ್ರತಿ ಗ್ರಾಮ ಪಂಚಾಯ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ 25 ಮಕ್ಕಳಿಗೆ ವೇದ ಗಣಿತ ತರಬೇತಿ ನೀಡುವ ಯೋಜನೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಏನಿದು ಯೋಜನೆ, ಇದಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದು ನಿಜಕ್ಕೂ ಮಕ್ಕಳಿಗೆ ಅಗತ್ಯವಿದೆಯೇ ಎಂದು ಹುಡುಕುತ್ತಾ ಹೋದರೆ ಇದರ ಹಿಂದೆ ಕೋಟ್ಯಾಂತರ ರೂಗಳ ಬಹುದೊಡ್ಡ ಹಗರಣವಿರುವುದು ಬೆಳಕಿಗೆ ಬಂದಿದೆ.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜನವರಿ 06, 2022ರಂದು ಪತ್ರ ಬರೆದಿದ್ದರು. ಅದರಲ್ಲಿ “ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಬಳಸಿಕೊಳ್ಳಬಹುದು” ಎಂದು ಸೂಚಿಸಲಾಗಿತ್ತು. ಅದರಂತೆ ಈ ತರಬೇತಿ ನೀಡುವ ಟೆಂಡರ್‌ ಅನ್ನು ಹಿರಿಯೂರಿನ ಎವಿಎಂ ಎಂಬ ಸಂಸ್ಥೆಗೆ ನೀಡಲಾಗಿದೆ. ಅದಕ್ಕಾಗಿ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳು ಒಂದು ಲಕ್ಷ ರೂಗಳನ್ನು ಈ ಸಂಸ್ಥೆಗೆ ಚೆಕ್ ಮೂಲಕ ನೀಡಬೇಕು ಸೂಚಿಸಲಾಗಿದೆ.

ಈ ಎವಿಎಂ ಸಂಸ್ಥೆಯು ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಈ ತರಬೇತಿಯನ್ನು ಜಾರಿಗೊಳಿಸಲು ಮಧ್ಯವರ್ತಿಗಳಿಗೆ ಸಬ್‌ ಟೆಂಡರ್ ನೀಡುತ್ತಿದೆ. ಈ ಮಧ್ಯವರ್ತಿಗಳು ಪ್ರತಿ ತಾಲ್ಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿಗಳ ಜೊತೆ ಸಮನ್ವಯ ಸಾಧಿಸಿ ಈ ತರಬೇತಿ ಯೋಜನೆ ಜಾರಿಯಾಗುವಂತೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಅಂದರೆ ಪ್ರತಿ ಗ್ರಾಮ ಪಂಚಾಯ್ತಿಗಳು ಎವಿಎಂ ಹೆಸರಿಗೆ ಒಂದು ಲಕ್ಷ ರೂಗಳ ಚೆಕ್ ಹಾಕುವಂತೆ ಆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳ ಪಿಡಿಓಗಳನ್ನು ಮನವೊಲಿಸುವುದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು, ತರಬೇತಿಯ ವರದಿಗಳನ್ನು ಸಲ್ಲಿಸುವ ಕೆಲಸ ಅವರದಾಗಿದೆ. ಅದಕ್ಕೆ ಪ್ರತಿಯಾಗಿ ಮಧ್ಯವರ್ತಿಗಳು ಎವಿಎಂ ಅಕಾಡೆಮಿಯಿಂದ ಇಂತಿಷ್ಟು ಹಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ತರಬೇತಿಗೆ ಸರ್ಕಾರಿ ಶಿಕ್ಷಕರ ಬಳಕೆ

ಮಕ್ಕಳಿಗೆ ವೇದ ಗಣಿತ ಹೇಳಿಕೊಡಲು ಸರ್ಕಾರಿ ಶಾಲೆಗಳ ಗಣಿತ ಶಿಕ್ಷಕರನ್ನೇ ಬಳಸಿಕೊಳ್ಳಲಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ ಗಣಿತ ಶಿಕ್ಷಕರನ್ನು ಸೇರಿಸಿ ಅವರಿಗೆ ವೇದ ಗಣಿತದ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ. ಆ ಶಿಕ್ಷಕರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ದಲಿತ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ತರಬೇತಿಗೆ ಒಳಪಡುವ ಪ್ರತಿ ವಿದ್ಯಾರ್ಥಿಗೂ ಒಂದು ಟೀಶರ್ಟ್, ಕಲಿಕಾ ನೋಟ್ಸ್‌ಗಳನ್ನು ಒದಗಿಸಲಾಗುತ್ತದೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಗ್ರಾಮೀಣಾಭಿವೃದ್ದಿ ಇಲಾಖೆಯು ಶಿಕ್ಷಣ ಇಲಾಖೆಯಲ್ಲಿ ತಲೆ ಹಾಕುತ್ತಿರುವುದೇಕೆ ಎಂಬ ಪ್ರಶ್ನೆ ಎದ್ದಿದೆ. ಒಂದಷ್ಟು ಪುಸ್ತಕ, ಒಂದು ಟೀ ಶರ್ಟ್ ನೀಡುವುದಕ್ಕೆ 60 ಕೋಟಿ ರೂ ಹಣ ಖರ್ಚಾಗುವುದಿಲ್ಲ. ಹಣ ಲೂಟಿ ಹೊಡೆಯಲೆಂದೇ ಈ ಯೋಜನೆ ಸೃಷ್ಟಿಸಲಾಗಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಇನ್ನೊಂದೆಡೆ ಈಗಾಗಲೇ ಶಾಲೆಗಳಲ್ಲಿ ಗಣಿತ ಕಲಿಸುತ್ತಿರುವಾಗ ವೈಜ್ಞಾನಿಕವಲ್ಲದ, ಗೊಂದಲ ಮೂಡಿಸುವ ಈ ವೇದ ಗಣಿತ ತರಬೇತಿ ಬೇಡ ಎಂದು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ ಯೋಜನೆ: ಪ್ರಜ್ವಲ್ ಶಾಸ್ತ್ರಿ

ಬೆಂಗಳೂರಿನ ಖಗೋಳ ಭೌತಶಾಸ್ತಜ್ಞರಾದ ಪ್ರಜ್ವಲ್ ಶಾಸ್ತ್ರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, ಈ ವೇದ ಗಣಿತ ತರಬೇತಿಯು “ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ವೈದಿಕ ಗಣಿತ ಎಂಬ ಪುಸ್ತಕವು ಪ್ರಕಟವಾದಾಗ, ಗಣಿತ, ಸಂಸ್ಕೃತ, ಮತ್ತು ಇತಿಹಾಸ, ಇವೆಲ್ಲವನ್ನು ಬಲ್ಲ ತಜ್ಙರಾದ ಕೃಪಾಶಂಕರ್‌ ಶುಕ್ಲಾ, ಶ್ರೀಕೃಷ್ಣ ದಾನಿ, ಬಾಲಚಂದ್ರ ರಾವ್ ಮತ್ತಿತರರು, ಆ ಪುಸ್ತಕದಲ್ಲಿರುವ ಹೇಳಿಕೆಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ, ಪ್ರಾಥಮಿಕ ಶಾಲೆಗಳಲ್ಲಿ ಹಲವೊಂದು ವಾಡಿಕೆಯಲ್ಲಿರುವಂತಹ ಲೆಕ್ಕದ ಸರಳ ಸೂತ್ರಗಳು ಇವೆ ವಿನಃ, ಅದು ವೈದಿಕ ಕಾಲಘಟ್ಟದ್ದೇ ಅಲ್ಲ, ಹಾಗೂ ವಿಶೇಷ ಗಣಿತವು ಯಾವುದೂ ಅದರಲ್ಲಿ ಇಲ್ಲವೆಂದು ತಮ್ಮ ವಿಶ್ಲೇಷಣೆಗಳನ್ನು ಸ್ಪಷ್ಟವಾಗಿ ಬರೆದು ಪ್ರಕಟಿಸಿದ್ದಾರೆ. ಹಾಗಿರುವಾಗ, ಸದ್ಯದ ಆದೇಶಗಳು ಗ್ರಾಮಪಂಚಾಯತಿನ ಹಣದ ದುರುಪಯೋಗ ಮಾತ್ರವಲ್ಲ, ಶಿಕ್ಷಣದ ದೃಷ್ಟಿಯಿಂದ ಅತ್ಯಂತ ಅವೈಜ್ಞಾನಿಕ, ಮಕ್ಕಳ ತಿಳುವಳಿಕೆಯ ಬೆಳವಣಿಗೆಗೆ ಅತ್ಯಂತ ಹಾನಿಕರ, ಹಾಗೂ ದಮನಿತರ ಒಳಿತಿಗೆ ಮೀಸಲಾಗಿರುವ ಧನದಿಂದ ದಲಿತ ಮಕ್ಕಳನ್ನು ವಂಚಿತಗೊಳಿಸುವಂತಹ ಪ್ರಕ್ರಿಯೆಗಳಾಗಿವೆ. ಇಂದಿನ ಶಿಕ್ಷಣದಲ್ಲಿ ನಿಜವಾದ ಅಗತ್ಯವೇನೆಂದರೆ, ಶತಮಾನಗಳ ಕಾಲ ಪ್ರಚಲಿತವಾಗಿದ್ದ ದಲಿತರ ತುಳಿತದ ಬಗ್ಗೆ, ಎಲ್ಲರ, ಹಾಗೂ ವಿಶೇಷವಾಗಿ ದಲಿತರಲ್ಲದವರ ತಿಳುವಳಿಕೆಯನ್ನು ಹೆಚ್ಚಿಸಬೇಕೇ ಹೊರತು ದಲಿತ ಮಕ್ಕಳನ್ನು ವಂಚಿತಗೊಳಿಸುವುದಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಯೋಜನೆ ಹಿಂಪಡೆಯದಿದ್ದರೆ ಹೋರಾಟ- ಎನ್ ವೆಂಕಟೇಶ್

ದಲಿತ ಸಂಘರ್ಷ ಸಮಿತಿಯ ಹಿರಿಯ ನಾಯಕರಾದ ಎನ್.ವೆಂಕಟೇಶ್‌ರವರು ಮಾತನಾಡಿ, “ಇಂದು ನಮ್ಮ ಮಕ್ಕಳಿಗೆ ಬದುಕು ಕಟ್ಟಿಕೊಳ್ಳುವ ಆಧುನಿಕ ಶಿಕ್ಷಣ ಬೇಕಾಗಿದೆ. ಆದರೆ ಸರ್ಕಾರ ವೇದ ಗಣಿತ ಕಲಿಸಲು ಹೊರಟಿದೆ. ಹಲವಾರು ಶಿಕ್ಷಣ ತಜ್ಞರು ವೇದ ಗಣಿತ ಎಂಬುದು ಗಣತವೇ ಅಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಹ ಹಳೆಯ ಮತ್ತು ಸತ್ತಿರುವ ವಿಷಯದ ತರಬೇತಿ ನಮ್ಮ ಮಕ್ಕಳಿಗೆ ಬೇಕಾಗಿಲ್ಲ. ಅದು ವೈಜ್ಞಾನಿಕವಾದ ಸಮಾಜ ನಿರ್ಮಾಣ ಮಾಡುವ ಆಶಯಕ್ಕೆ ಅಡ್ಡಿಪಡಿಸುತ್ತದೆ. ಹಾಗಾಗಿ ಈ ಯೋಜನೆಯನ್ನು ಕೂಡಲೇ ತಡೆಯಬೇಕು, ಇಲ್ಲವಾದಲ್ಲಿ ಹೋರಾಟಕ್ಕಿಳಿಯಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಉದ್ದಾರ ವಾಗಬಾರದೆಂದು ದಲಿತ ಮಕ್ಕಳ ದಾರಿ ತಪ್ಪಿಸಿ ಭವಿಷ್ಯವನ್ನು ಎಳೆವಯಸಲ್ಲೆ ಹಿಚುಕಿ ಹಾಕುವ ಹುನ್ನಾರವೇ ವೇದಗಣಿತದ ಉದ್ದೇಶ ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಒಳ್ಳೆ ವಿದ್ಯಾಭ್ಯಾಸಕೊಟ್ಟು ಮಕ್ಕಳನ್ನು ಮೇಲೆಕ್ಕೆ ಯಾಕೆ ತರುವುದಿಲ್ಲ ???

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...