Homeಚಳವಳಿಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

ಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ಆವಾಂತರ ಮತ್ತೆ ಮುಂದುವರೆದಿದೆ. ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯಗಳನ್ನು ಬೋದಿಸಬಾರದೆಂದು ಅನುಮತಿ ನಿರಾಕರಿಸಿದ್ದ ಲೇಖಕರ ಪಠ್ಯಗಳನ್ನು ಬೋದಿಸುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಮತ್ತೆ ಅದೇ ಪಠ್ಯಗಳನ್ನು ಮುಂದುವರೆಸುತ್ತಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅನುಮತಿ ನಿರಾಕರಿಸಿದರೂ ತಮ್ಮ ಪಠ್ಯ ಬಳಕೆ ಮುಂದುವರೆಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಒಪ್ಪಿಗೆ ಇಲ್ಲದಿದ್ದರೂ, ನನ್ನ ಪದ್ಯವನ್ನು ಪಠ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ಏಕಪಕ್ಷೀಯ ತೀರ್ಮಾನದ, ಈ ಆಗ್ರಹಪೂರ್ವಕ ನಡೆ ತೀವ್ರ ಜುಗುಪ್ಸೆ ಹುಟ್ಟಿಸಿದೆ. ಇದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರೂಪ ಹಾಸನರವರು ತಮ್ಮ “ಅಮ್ಮನಾಗುವುದೆಂದರೆ” ಎಂಬ ಕವಿತೆಯನ್ನು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ಕೈಬಿಡಿ ಎಂದು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದರು. ಆದರೆ ಅದನ್ನು ಮುಂದುವರೆಸಿರುವುದರ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಪುನರ್ ರಚನಾ ಸಮಿತಿ 2017-18”ರ ಅಪೇಕ್ಷೆಯಂತೆ, ಪಠ್ಯಪುಸ್ತಕಕ್ಕೆ ನನ್ನ ಪದ್ಯವನ್ನು ಅಳವಡಿಸಿಕೊಳ್ಳಲು ಈ ಹಿಂದೆ ಅನುಮತಿಯನ್ನು ನೀಡಿದ್ದೆ. ಆದರೆ ಇದೇ 2022-23ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳ “ಪುನರ್ ಪರಿಶೀಲನೆ”ಗೆ ಸರ್ಕಾರದಿಂದ ಅನುಮತಿ ಪಡೆದ ಸಮಿತಿಯು, ನಮ್ಮ “ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ರ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಹಲವು ತಿದ್ದುಪಡಿ, ಗೊಂದಲ ಪೂರಿತ/ಅನವಶ್ಯಕ ಮಾರ್ಪಾಡುಗಳನ್ನು ಮಾಡಿರುವುದಕ್ಕೆ ನನ್ನ ವಿರೋಧವಿದೆ. ಪ್ರತಿರೋಧದ ಉದ್ದೇಶದಿಂದ ನನ್ನ ಪದ್ಯ ಬೋಧನೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು, ಈ ಕುರಿತು ವಿವರವಾದ ಪತ್ರವನ್ನು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿದ್ದೆ. ಈ ಸಂಬಂಧ ಸಾರ್ವಜನಿಕರಿಂದ ನಡೆದ ಅನೇಕ ಬಗೆಯ ತೀವ್ರ ಪ್ರತಿರೋಧಗಳನ್ನು ನಿರ್ಲಕ್ಷಿಸಿದ ಸರ್ಕಾರ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದಲಾದರೂ ದೋಷಪೂರಿತ ಪಠ್ಯಪುಸ್ತಕಗಳನ್ನು ಹಿಂಪಡೆಯದೇ ಮುಂದುವರಿಸಿರುವುದು ಅಕ್ಷಮ್ಯ” ಎಂದಿದ್ದಾರೆ.

“ಹೀಗಾಗಿ ನನ್ನ ಪದ್ಯ ಬಳಕೆಗೆ ಅನುಮತಿಯನ್ನು ಬಯಸಿ 16.8.2022ರಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಂದ ಪತ್ರ ಬಂದಾಗಲೂ ಅನುಮತಿಯನ್ನು ಖಡಾಖಂಡಿತವಾಗಿ ನಿರಾಕರಿಸಿ 26.8.2022ರಂದು ಮರುಪತ್ರ ಬರೆದಿದ್ದೆ. ನನ್ನಂತೆಯೇ ಹಲವು ಲೇಖಕರು “ಪುನರ್ ಪರಿಶೀಲನಾ ಸಮಿತಿ”ಯ ನಡೆಯನ್ನು ಪ್ರತಿರೋಧಿಸಿ ಪಠ್ಯವನ್ನು ಹಿಂಪಡೆದಿದ್ದನ್ನು, ಮತ್ತೊಮ್ಮೆ ಖಚಿತ ಪಡಿಸಿಕೊಂಡ ಸರ್ಕಾರವು ಅದನ್ನು ಮನ್ನಿಸಿ ಪಠ್ಯಪುಸ್ತಕದಿಂದ ನಮ್ಮ ಪಠ್ಯವನ್ನು ಕೈಬಿಟ್ಟು 23.9.2022ರಂದು ಆದೇಶ ಹೊರಡಿಸಿದ್ದು ಮಾಧ್ಯಮಗಳಿಂದ ತಿಳಿದು ಕೊಂಚ ಸಮಾಧಾನವಾಗಿತ್ತು. ಆದರೆ ಲೇಖಕರ ಆಗ್ರಹದಂತೆ ಕೈ ಬಿಟ್ಟಿದ್ದ ಪಠ್ಯಗಳನ್ನು, ನಮ್ಮ ಅನುಮತಿ ಇಲ್ಲದೇ ಮರು ಸೇರ್ಪಡೆ ಮಾಡಿಕೊಂಡಿರುವುದಾಗಿ ಸರ್ಕಾರವು 28.10.2022ರಂದು ಮತ್ತೆ ಆದೇಶ ಹೊರಡಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದು ಆಘಾತವಾಯ್ತು” ಎಂದು ರೂಪ ಹಾಸನರವರು ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...