Homeಚಳವಳಿಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

ಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ಆವಾಂತರ ಮತ್ತೆ ಮುಂದುವರೆದಿದೆ. ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯಗಳನ್ನು ಬೋದಿಸಬಾರದೆಂದು ಅನುಮತಿ ನಿರಾಕರಿಸಿದ್ದ ಲೇಖಕರ ಪಠ್ಯಗಳನ್ನು ಬೋದಿಸುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಮತ್ತೆ ಅದೇ ಪಠ್ಯಗಳನ್ನು ಮುಂದುವರೆಸುತ್ತಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅನುಮತಿ ನಿರಾಕರಿಸಿದರೂ ತಮ್ಮ ಪಠ್ಯ ಬಳಕೆ ಮುಂದುವರೆಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಒಪ್ಪಿಗೆ ಇಲ್ಲದಿದ್ದರೂ, ನನ್ನ ಪದ್ಯವನ್ನು ಪಠ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ಏಕಪಕ್ಷೀಯ ತೀರ್ಮಾನದ, ಈ ಆಗ್ರಹಪೂರ್ವಕ ನಡೆ ತೀವ್ರ ಜುಗುಪ್ಸೆ ಹುಟ್ಟಿಸಿದೆ. ಇದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರೂಪ ಹಾಸನರವರು ತಮ್ಮ “ಅಮ್ಮನಾಗುವುದೆಂದರೆ” ಎಂಬ ಕವಿತೆಯನ್ನು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ಕೈಬಿಡಿ ಎಂದು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದರು. ಆದರೆ ಅದನ್ನು ಮುಂದುವರೆಸಿರುವುದರ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಪುನರ್ ರಚನಾ ಸಮಿತಿ 2017-18”ರ ಅಪೇಕ್ಷೆಯಂತೆ, ಪಠ್ಯಪುಸ್ತಕಕ್ಕೆ ನನ್ನ ಪದ್ಯವನ್ನು ಅಳವಡಿಸಿಕೊಳ್ಳಲು ಈ ಹಿಂದೆ ಅನುಮತಿಯನ್ನು ನೀಡಿದ್ದೆ. ಆದರೆ ಇದೇ 2022-23ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳ “ಪುನರ್ ಪರಿಶೀಲನೆ”ಗೆ ಸರ್ಕಾರದಿಂದ ಅನುಮತಿ ಪಡೆದ ಸಮಿತಿಯು, ನಮ್ಮ “ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ರ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಹಲವು ತಿದ್ದುಪಡಿ, ಗೊಂದಲ ಪೂರಿತ/ಅನವಶ್ಯಕ ಮಾರ್ಪಾಡುಗಳನ್ನು ಮಾಡಿರುವುದಕ್ಕೆ ನನ್ನ ವಿರೋಧವಿದೆ. ಪ್ರತಿರೋಧದ ಉದ್ದೇಶದಿಂದ ನನ್ನ ಪದ್ಯ ಬೋಧನೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು, ಈ ಕುರಿತು ವಿವರವಾದ ಪತ್ರವನ್ನು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿದ್ದೆ. ಈ ಸಂಬಂಧ ಸಾರ್ವಜನಿಕರಿಂದ ನಡೆದ ಅನೇಕ ಬಗೆಯ ತೀವ್ರ ಪ್ರತಿರೋಧಗಳನ್ನು ನಿರ್ಲಕ್ಷಿಸಿದ ಸರ್ಕಾರ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದಲಾದರೂ ದೋಷಪೂರಿತ ಪಠ್ಯಪುಸ್ತಕಗಳನ್ನು ಹಿಂಪಡೆಯದೇ ಮುಂದುವರಿಸಿರುವುದು ಅಕ್ಷಮ್ಯ” ಎಂದಿದ್ದಾರೆ.

“ಹೀಗಾಗಿ ನನ್ನ ಪದ್ಯ ಬಳಕೆಗೆ ಅನುಮತಿಯನ್ನು ಬಯಸಿ 16.8.2022ರಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಂದ ಪತ್ರ ಬಂದಾಗಲೂ ಅನುಮತಿಯನ್ನು ಖಡಾಖಂಡಿತವಾಗಿ ನಿರಾಕರಿಸಿ 26.8.2022ರಂದು ಮರುಪತ್ರ ಬರೆದಿದ್ದೆ. ನನ್ನಂತೆಯೇ ಹಲವು ಲೇಖಕರು “ಪುನರ್ ಪರಿಶೀಲನಾ ಸಮಿತಿ”ಯ ನಡೆಯನ್ನು ಪ್ರತಿರೋಧಿಸಿ ಪಠ್ಯವನ್ನು ಹಿಂಪಡೆದಿದ್ದನ್ನು, ಮತ್ತೊಮ್ಮೆ ಖಚಿತ ಪಡಿಸಿಕೊಂಡ ಸರ್ಕಾರವು ಅದನ್ನು ಮನ್ನಿಸಿ ಪಠ್ಯಪುಸ್ತಕದಿಂದ ನಮ್ಮ ಪಠ್ಯವನ್ನು ಕೈಬಿಟ್ಟು 23.9.2022ರಂದು ಆದೇಶ ಹೊರಡಿಸಿದ್ದು ಮಾಧ್ಯಮಗಳಿಂದ ತಿಳಿದು ಕೊಂಚ ಸಮಾಧಾನವಾಗಿತ್ತು. ಆದರೆ ಲೇಖಕರ ಆಗ್ರಹದಂತೆ ಕೈ ಬಿಟ್ಟಿದ್ದ ಪಠ್ಯಗಳನ್ನು, ನಮ್ಮ ಅನುಮತಿ ಇಲ್ಲದೇ ಮರು ಸೇರ್ಪಡೆ ಮಾಡಿಕೊಂಡಿರುವುದಾಗಿ ಸರ್ಕಾರವು 28.10.2022ರಂದು ಮತ್ತೆ ಆದೇಶ ಹೊರಡಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದು ಆಘಾತವಾಯ್ತು” ಎಂದು ರೂಪ ಹಾಸನರವರು ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...