Homeಚಳವಳಿಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

ಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ಆವಾಂತರ ಮತ್ತೆ ಮುಂದುವರೆದಿದೆ. ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯಗಳನ್ನು ಬೋದಿಸಬಾರದೆಂದು ಅನುಮತಿ ನಿರಾಕರಿಸಿದ್ದ ಲೇಖಕರ ಪಠ್ಯಗಳನ್ನು ಬೋದಿಸುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಮತ್ತೆ ಅದೇ ಪಠ್ಯಗಳನ್ನು ಮುಂದುವರೆಸುತ್ತಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅನುಮತಿ ನಿರಾಕರಿಸಿದರೂ ತಮ್ಮ ಪಠ್ಯ ಬಳಕೆ ಮುಂದುವರೆಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಒಪ್ಪಿಗೆ ಇಲ್ಲದಿದ್ದರೂ, ನನ್ನ ಪದ್ಯವನ್ನು ಪಠ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ಏಕಪಕ್ಷೀಯ ತೀರ್ಮಾನದ, ಈ ಆಗ್ರಹಪೂರ್ವಕ ನಡೆ ತೀವ್ರ ಜುಗುಪ್ಸೆ ಹುಟ್ಟಿಸಿದೆ. ಇದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರೂಪ ಹಾಸನರವರು ತಮ್ಮ “ಅಮ್ಮನಾಗುವುದೆಂದರೆ” ಎಂಬ ಕವಿತೆಯನ್ನು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ಕೈಬಿಡಿ ಎಂದು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದರು. ಆದರೆ ಅದನ್ನು ಮುಂದುವರೆಸಿರುವುದರ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಪುನರ್ ರಚನಾ ಸಮಿತಿ 2017-18”ರ ಅಪೇಕ್ಷೆಯಂತೆ, ಪಠ್ಯಪುಸ್ತಕಕ್ಕೆ ನನ್ನ ಪದ್ಯವನ್ನು ಅಳವಡಿಸಿಕೊಳ್ಳಲು ಈ ಹಿಂದೆ ಅನುಮತಿಯನ್ನು ನೀಡಿದ್ದೆ. ಆದರೆ ಇದೇ 2022-23ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳ “ಪುನರ್ ಪರಿಶೀಲನೆ”ಗೆ ಸರ್ಕಾರದಿಂದ ಅನುಮತಿ ಪಡೆದ ಸಮಿತಿಯು, ನಮ್ಮ “ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ರ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಹಲವು ತಿದ್ದುಪಡಿ, ಗೊಂದಲ ಪೂರಿತ/ಅನವಶ್ಯಕ ಮಾರ್ಪಾಡುಗಳನ್ನು ಮಾಡಿರುವುದಕ್ಕೆ ನನ್ನ ವಿರೋಧವಿದೆ. ಪ್ರತಿರೋಧದ ಉದ್ದೇಶದಿಂದ ನನ್ನ ಪದ್ಯ ಬೋಧನೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು, ಈ ಕುರಿತು ವಿವರವಾದ ಪತ್ರವನ್ನು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿದ್ದೆ. ಈ ಸಂಬಂಧ ಸಾರ್ವಜನಿಕರಿಂದ ನಡೆದ ಅನೇಕ ಬಗೆಯ ತೀವ್ರ ಪ್ರತಿರೋಧಗಳನ್ನು ನಿರ್ಲಕ್ಷಿಸಿದ ಸರ್ಕಾರ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದಲಾದರೂ ದೋಷಪೂರಿತ ಪಠ್ಯಪುಸ್ತಕಗಳನ್ನು ಹಿಂಪಡೆಯದೇ ಮುಂದುವರಿಸಿರುವುದು ಅಕ್ಷಮ್ಯ” ಎಂದಿದ್ದಾರೆ.

“ಹೀಗಾಗಿ ನನ್ನ ಪದ್ಯ ಬಳಕೆಗೆ ಅನುಮತಿಯನ್ನು ಬಯಸಿ 16.8.2022ರಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಂದ ಪತ್ರ ಬಂದಾಗಲೂ ಅನುಮತಿಯನ್ನು ಖಡಾಖಂಡಿತವಾಗಿ ನಿರಾಕರಿಸಿ 26.8.2022ರಂದು ಮರುಪತ್ರ ಬರೆದಿದ್ದೆ. ನನ್ನಂತೆಯೇ ಹಲವು ಲೇಖಕರು “ಪುನರ್ ಪರಿಶೀಲನಾ ಸಮಿತಿ”ಯ ನಡೆಯನ್ನು ಪ್ರತಿರೋಧಿಸಿ ಪಠ್ಯವನ್ನು ಹಿಂಪಡೆದಿದ್ದನ್ನು, ಮತ್ತೊಮ್ಮೆ ಖಚಿತ ಪಡಿಸಿಕೊಂಡ ಸರ್ಕಾರವು ಅದನ್ನು ಮನ್ನಿಸಿ ಪಠ್ಯಪುಸ್ತಕದಿಂದ ನಮ್ಮ ಪಠ್ಯವನ್ನು ಕೈಬಿಟ್ಟು 23.9.2022ರಂದು ಆದೇಶ ಹೊರಡಿಸಿದ್ದು ಮಾಧ್ಯಮಗಳಿಂದ ತಿಳಿದು ಕೊಂಚ ಸಮಾಧಾನವಾಗಿತ್ತು. ಆದರೆ ಲೇಖಕರ ಆಗ್ರಹದಂತೆ ಕೈ ಬಿಟ್ಟಿದ್ದ ಪಠ್ಯಗಳನ್ನು, ನಮ್ಮ ಅನುಮತಿ ಇಲ್ಲದೇ ಮರು ಸೇರ್ಪಡೆ ಮಾಡಿಕೊಂಡಿರುವುದಾಗಿ ಸರ್ಕಾರವು 28.10.2022ರಂದು ಮತ್ತೆ ಆದೇಶ ಹೊರಡಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದು ಆಘಾತವಾಯ್ತು” ಎಂದು ರೂಪ ಹಾಸನರವರು ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...