Homeಚಳವಳಿಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

ಅನುಮತಿ ನಿರಾಕರಿಸಿದರೂ ಪಠ್ಯ ಬಳಕೆ: ಸರ್ಕಾರದ ನಡೆಗೆ ಲೇಖಕಿ ರೂಪ ಹಾಸನ ಖಂಡನೆ

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ಆವಾಂತರ ಮತ್ತೆ ಮುಂದುವರೆದಿದೆ. ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಪಠ್ಯಗಳನ್ನು ಬೋದಿಸಬಾರದೆಂದು ಅನುಮತಿ ನಿರಾಕರಿಸಿದ್ದ ಲೇಖಕರ ಪಠ್ಯಗಳನ್ನು ಬೋದಿಸುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಮತ್ತೆ ಅದೇ ಪಠ್ಯಗಳನ್ನು ಮುಂದುವರೆಸುತ್ತಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಅನುಮತಿ ನಿರಾಕರಿಸಿದರೂ ತಮ್ಮ ಪಠ್ಯ ಬಳಕೆ ಮುಂದುವರೆಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕನ್ನಡದ ಕವಯತ್ರಿ, ಲೇಖಕಿ ರೂಪ ಹಾಸನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಒಪ್ಪಿಗೆ ಇಲ್ಲದಿದ್ದರೂ, ನನ್ನ ಪದ್ಯವನ್ನು ಪಠ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ಏಕಪಕ್ಷೀಯ ತೀರ್ಮಾನದ, ಈ ಆಗ್ರಹಪೂರ್ವಕ ನಡೆ ತೀವ್ರ ಜುಗುಪ್ಸೆ ಹುಟ್ಟಿಸಿದೆ. ಇದು ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ರೂಪ ಹಾಸನರವರು ತಮ್ಮ “ಅಮ್ಮನಾಗುವುದೆಂದರೆ” ಎಂಬ ಕವಿತೆಯನ್ನು ಪರಿಷ್ಕೃತ 9 ನೆಯ ತರಗತಿಯ ಪಠ್ಯದಿಂದ ಕೈಬಿಡಿ ಎಂದು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ಗೆ ಪತ್ರ ಬರೆದಿದ್ದರು. ಆದರೆ ಅದನ್ನು ಮುಂದುವರೆಸಿರುವುದರ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಪುನರ್ ರಚನಾ ಸಮಿತಿ 2017-18”ರ ಅಪೇಕ್ಷೆಯಂತೆ, ಪಠ್ಯಪುಸ್ತಕಕ್ಕೆ ನನ್ನ ಪದ್ಯವನ್ನು ಅಳವಡಿಸಿಕೊಳ್ಳಲು ಈ ಹಿಂದೆ ಅನುಮತಿಯನ್ನು ನೀಡಿದ್ದೆ. ಆದರೆ ಇದೇ 2022-23ನೇ ಸಾಲಿನಲ್ಲಿ ಪಠ್ಯ ಪುಸ್ತಕಗಳ “ಪುನರ್ ಪರಿಶೀಲನೆ”ಗೆ ಸರ್ಕಾರದಿಂದ ಅನುಮತಿ ಪಡೆದ ಸಮಿತಿಯು, ನಮ್ಮ “ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005″ರ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಮನಬಂದಂತೆ ಹಲವು ತಿದ್ದುಪಡಿ, ಗೊಂದಲ ಪೂರಿತ/ಅನವಶ್ಯಕ ಮಾರ್ಪಾಡುಗಳನ್ನು ಮಾಡಿರುವುದಕ್ಕೆ ನನ್ನ ವಿರೋಧವಿದೆ. ಪ್ರತಿರೋಧದ ಉದ್ದೇಶದಿಂದ ನನ್ನ ಪದ್ಯ ಬೋಧನೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆದು, ಈ ಕುರಿತು ವಿವರವಾದ ಪತ್ರವನ್ನು 31.5.2022ರಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಬರೆದಿದ್ದೆ. ಈ ಸಂಬಂಧ ಸಾರ್ವಜನಿಕರಿಂದ ನಡೆದ ಅನೇಕ ಬಗೆಯ ತೀವ್ರ ಪ್ರತಿರೋಧಗಳನ್ನು ನಿರ್ಲಕ್ಷಿಸಿದ ಸರ್ಕಾರ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದಲಾದರೂ ದೋಷಪೂರಿತ ಪಠ್ಯಪುಸ್ತಕಗಳನ್ನು ಹಿಂಪಡೆಯದೇ ಮುಂದುವರಿಸಿರುವುದು ಅಕ್ಷಮ್ಯ” ಎಂದಿದ್ದಾರೆ.

“ಹೀಗಾಗಿ ನನ್ನ ಪದ್ಯ ಬಳಕೆಗೆ ಅನುಮತಿಯನ್ನು ಬಯಸಿ 16.8.2022ರಂದು ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಂದ ಪತ್ರ ಬಂದಾಗಲೂ ಅನುಮತಿಯನ್ನು ಖಡಾಖಂಡಿತವಾಗಿ ನಿರಾಕರಿಸಿ 26.8.2022ರಂದು ಮರುಪತ್ರ ಬರೆದಿದ್ದೆ. ನನ್ನಂತೆಯೇ ಹಲವು ಲೇಖಕರು “ಪುನರ್ ಪರಿಶೀಲನಾ ಸಮಿತಿ”ಯ ನಡೆಯನ್ನು ಪ್ರತಿರೋಧಿಸಿ ಪಠ್ಯವನ್ನು ಹಿಂಪಡೆದಿದ್ದನ್ನು, ಮತ್ತೊಮ್ಮೆ ಖಚಿತ ಪಡಿಸಿಕೊಂಡ ಸರ್ಕಾರವು ಅದನ್ನು ಮನ್ನಿಸಿ ಪಠ್ಯಪುಸ್ತಕದಿಂದ ನಮ್ಮ ಪಠ್ಯವನ್ನು ಕೈಬಿಟ್ಟು 23.9.2022ರಂದು ಆದೇಶ ಹೊರಡಿಸಿದ್ದು ಮಾಧ್ಯಮಗಳಿಂದ ತಿಳಿದು ಕೊಂಚ ಸಮಾಧಾನವಾಗಿತ್ತು. ಆದರೆ ಲೇಖಕರ ಆಗ್ರಹದಂತೆ ಕೈ ಬಿಟ್ಟಿದ್ದ ಪಠ್ಯಗಳನ್ನು, ನಮ್ಮ ಅನುಮತಿ ಇಲ್ಲದೇ ಮರು ಸೇರ್ಪಡೆ ಮಾಡಿಕೊಂಡಿರುವುದಾಗಿ ಸರ್ಕಾರವು 28.10.2022ರಂದು ಮತ್ತೆ ಆದೇಶ ಹೊರಡಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದು ಆಘಾತವಾಯ್ತು” ಎಂದು ರೂಪ ಹಾಸನರವರು ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಮಹಿಳಾ ಸಂಕುಲಕ್ಕೆ ಅವಮಾನ: ಪಠ್ಯದಿಂದ ತಮ್ಮ ಕವಿತೆ ಕೈಬಿಡುವಂತೆ ಲೇಖಕಿ ರೂಪ ಹಾಸನ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...