Homeಮುಖಪುಟಕವಾಟವಿರುವ ಎನ್-95 ಮಾಸ್ಕ್‌ಗಳ ಬಳಕೆ ಅಪಾಯಕಾರಿ: ಸರ್ಕಾರದ ಎಚ್ಚರಿಕೆ

ಕವಾಟವಿರುವ ಎನ್-95 ಮಾಸ್ಕ್‌ಗಳ ಬಳಕೆ ಅಪಾಯಕಾರಿ: ಸರ್ಕಾರದ ಎಚ್ಚರಿಕೆ

ಮಾಸ್ಕ್ ಧರಿಸುವ ಮೊದಲು ಕೈಗಳನ್ನು ಚೆನ್ನಾಗಿ ತೊಳೆಯಬೇಕು. ಪ್ರತಿದಿನ ಬಿಸಿನೀರಿನಲ್ಲಿ ಉಪ್ಪಿನೊಂದಿಗೆ ಮಾಸ್ಕ್ ತೊಳೆದು ಒಣಗಿಸಿ ಬಳಸಬೇಕು, ಮಾಸ್ಕ್ ಅನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದೆ.

- Advertisement -
- Advertisement -

ಕವಾಟವಿರುವ ಎನ್-95 ಮಾಸ್ಕ್‌ಗಳನ್ನು ಬಳಸುವುದರ ವಿರುದ್ಧ ಎಚ್ಚರಿಕೆ ನೀಡುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. ಇವುಗಳು ವೈರಸ್ ಹರಡುವುದನ್ನು ತಡೆಯುವುದಿಲ್ಲ ಎಂದು ಕೇಂದ್ರ ಹೇಳಿದೆ.

ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (ಡಿಜಿಎಚ್‌ಎಸ್) ರಾಜ್ಯಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ, ಎನ್ -95 ಮಾಸ್ಕ್‌ಗಳ ಬಳಕೆಯಲ್ಲಿ ಲೋಪವಿರುವುದು ಕಂಡುಬಂದಿದೆ. ವಿಶೇಷವಾಗಿ ಉಸಿರಾಟದ ಕವಾಟವಿರುವ ಮಾಸ್ಕ್‌ಗಳ ಬಳಕೆ ಅಪಾಯಕಾರಿ ಎಂದು ತಿಳಿಸಿದೆ.

“ಉಸಿರಾಟದ ಕವಾಟವಿರುವ N-95 ಮಾಸ್ಕ್‌ಗಳ ಬಳಕೆಯು ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ತೆಗೆದುಕೊಂಡ ಕ್ರಮಗಳಿಗೆ ಹಾನಿಕಾರಕವಾಗಿದೆ ಎಂದು ತಿಳಿಸಲು ಬಯಸುತ್ತೇವೆ. ಏಕೆಂದರೆ ಈ ಮಾಸ್ಕ್‌ಗಳಿಂದ ವೈರಸ್ ತಡೆಯಲು ಸಾಧ್ಯವಿಲ್ಲ. ಹಾಗಾಗಿ ಮುಖ/ಬಾಯಿಯನ್ನು ಮುಚ್ಚುವ ಮಾಸ್ಕ್‌ಗಳನ್ನು ಬಳಸುವಂತೆ ಮತ್ತು ಎನ್-95 ಮಾಸ್ಕ್‌ಗಳ ಅನುಚಿತ ಬಳಕೆಯನ್ನು ತಡೆಯಲು ಸಂಬಂಧಪಟ್ಟ ಎಲ್ಲರಿಗೂ ಸೂಚನೆ ನೀಡುವಂತೆ ನಾನು ವಿನಂತಿಸುತ್ತೇನೆ” ಎಂದು ಡಿಜಿಹೆಚ್ಎಸ್ ರಾಜೀವ್ ಗರ್ಗ್ ಪತ್ರದಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿಯೇ ತಯಾರಿಸಿದ ಮಾಸ್ಕ್‌ಗಳನ್ನು ಬಳಸಿ ಎಂದು ತನ್ನ ವೆಬ್‌ಸೈಟ್‌ನಲ್ಲಿ ಅದು ವಿವರಣೆ ನೀಡಿದೆ. ಮಾಸ್ಕ್ ಧರಿಸುವ ಮೊದಲು ಕೈಗಳನ್ನು ಚೆನ್ನಾಗಿ ತೊಳೆಯಬೇಕು. ಪ್ರತಿದಿನ ಬಿಸಿನೀರಿನಲ್ಲಿ ಉಪ್ಪಿನೊಂದಿಗೆ ಮಾಸ್ಕ್ ತೊಳೆದು ಒಣಗಿಸಿ ಬಳಸಬೇಕು, ಮಾಸ್ಕ್ ಅನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದೆ.

ಭಾರತಕ್ಕೆ ಕೊರೊನಾ ವೈರಸ್ ಪ್ರವೇಶಿಸಿ ಆರು ತಿಂಗಳಿಗೂ ಹೆಚ್ಚು ಸಮಯವಾಗಿದೆ. ಅಲ್ಲದೇ ಜನರು ಮಾಸ್ಕ್ ಬಳಸಲು ಆರಂಭಿಸಿ ನಾಲ್ಕು ತಿಂಗಳಿಗೂ ಹೆಚ್ಚು ಸಮಯವಾಗಿದೆ. ಇಷ್ಟು ದಿನ ಎನ್‌-95 ಮಾಸ್ಕ್ ಸುರಕ್ಷಿತ ಎಂದು ಹೇಳುತ್ತಿದ್ದ ಸರ್ಕಾರ ಈಗ ಅವು ಅಪಾಯಕಾರಿ ಎಂದು ಹೇಳಿದರೆ ಏನರ್ಥ? ಸರ್ಕಾರ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿವೆಯೇ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ.


ಇದನ್ನೂ ಓದಿ: ಕೊರೊನಾದಿಂದ ಒಂದೂ ಸಾವು ಕಾಣದ ಭಾರತದ ಅದೃಷ್ಠಶಾಲಿ ರಾಜ್ಯಗಳಿವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...