Homeಮುಖಪುಟಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

ಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

- Advertisement -
- Advertisement -

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಸ್ಪೃಶ್ಯತೆಯನ್ನು ಸಮರ್ಥಿಸುವ ರೀತಿಯಲ್ಲಿ ‘ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ’ ಎಂದಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ದೂರು ದಾಖಲಾಗಿದೆ.

ಲಕ್ಷ್ಮೀಪತಿ, ರಾಜು ಸಣ್ಣಕ್ಕಿ, ಗೊಳ್ಯ ಹನುಮಣ್ಣ ಸೇರಿದಂತೆ ಹಲವು ಛಲವಾದಿ ಮಹಾಸಭಾ ಮತ್ತು ದಲಿತ ಸಂಘಟನೆಗಳ ಮುಖಂಡರು ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀಪತಿಯವರು, “ನವೆಂಬರ್ 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಸಿ.ಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಪದ ಬಳಕೆ ಮಾಡಿದ್ದಾರೆ. ಇದು ಅವಹೇಳನಕಾರಿ ಮತ್ತು ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ. ಹಾಗಾಗಿ ಅವರು ದಲಿತ ಸಮುದಾಯದ ಎದುರು ಬೇಷರತ್ ಕ್ಷಮೆ ಕೇಳಬೇಕೆಂದು” ಆಗ್ರಹಿಸಿದರು.

ಜೆಡಿಎಸ್ ಪಕ್ಷವು ಜಾತ್ಯಾತೀತ ಎಂದು ಹೇಳಿಕೊಳ್ಳುತ್ತದೆ. ಆದರೆ ಜಾತೀಯತೆಯನ್ನು ಸಮರ್ಥಿಸುತ್ತದೆ. ಅದು ಜಾತಿವಾದಿ ಎಂದು ಹೆಸರು ಬದಲಿಸಿಕೊಂಡರೆ ಉತ್ತಮ ಎಂದು ಅವರು ಕಿಡಿಕಾರಿದರು.

ಕಳೆದ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳೀಕೆ ನೀಡಿದ್ದರು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿಯವರು “ನಾವು ಮುಸ್ಲಿಂ ಮತಗಳನ್ನು ಪಡೆಯುವುದಕ್ಕಾಗಿ ಮಾತನಾಡುತ್ತಿಲ್ಲ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂರವರು ಒಂದೆರೆಡು ವರ್ಷಗಳಲ್ಲಿ ಕುಮಾರಸ್ವಾಮಿಯವರು ಕೇಂದ್ರಕ್ಕೆ ತೆರಳಿದರೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಆದರೆ ಪ್ರಸ್ತುತ 5 ವರ್ಷ ನಾನು ನಮ್ಮ ಐದು ಅಂಶಗಳ ಕುರಿತು ಗಮನ ವಹಿಸುತ್ತೇವೆ. ಆದರೆ ಎರಡೂ ಮೂರು ವರ್ಷದಲ್ಲಿ ದೆಹಲಿಯ ನಮ್ಮ ಸ್ನೇಹಿತರು ಉನ್ನತ ಸ್ಥಾನಮಾನ ಕೊಡುವುದಾಗಿ ಕೇಂದ್ರಕ್ಕೆ ಕರೆದರೆ, ಅಂತ ಸಂದರ್ಭ ಬಂದರೆ ಹೋಗುತ್ತೇನೆ. ಅಂತ ಸಂದರ್ಭದಲ್ಲಿ ಇಬ್ರಾಹಿಂರವರು ಏಕೆ ಸಿಎಂ ಆಗಬಾರದು? ಅವರೇನು ಅಸ್ಪೃಶ್ಯರಲ್ಲ (He is not an Untouchable Man)” ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಸ್ಪ್ರಶ್ಯ ಅಥವಾ ಅಸ್ಪ್ರಶ್ಯರಲ್ಲ ಎಂಬ ಶಬ್ದ ಯಾರಾದರೊಬ್ಬರು ಬಳಸಿದರೆ ಅದು ಹೇಗೆ ಯಾರಿಗಾದರೂ ಅಪಮಾನದ ವಿಷಯವಾಗಲು ಸಾಧ್ಯ. ಅಸ್ಪ್ರಶ್ಯತೆ ಯ ಆಚರಣೆ ಕಾನೂನು ಬಾಹಿರ ಹೊರತು, ಅಸ್ಪ್ರಶ್ಯ ಎಂಬ ಪದ ಅಲ್ಲ.

  2. ಹಾಗಿದ್ದರೆ ದಲಿತರನ್ನು ಏಕೆ ಅಸ್ಪೃಶ್ಯರು ಅಂತ ಅನ್ನುತ್ತಾರೆ ಇಲ್ಲಿ ಇಬ್ರಾಹಿಮಿಗೆ ಅವರೇನು ಅಸ್ಪೃಶ್ಯ ಅಂತ ಹೇಳುವಾಗ ಅಲ್ಲಿ ಅಸ್ಪೃಶ್ಯ ಅಂದ್ರೆ ದಲಿತರು ಎಂಬ ಪದವನ್ನು ಅತಿರೇಕವಾಗಿ ಬಳಸಿದೆ ಎಂದರ್ಥ ಇದು ಅರ್ಥ ಮಾಡಿದವರಿಗೆ ಮಾತ್ರ ಗೊತ್ತಾಗುತ್ತೆ, ಸುಮ್ಸುಮ್ನೆ ಪ್ರಶ್ನೆ ಮಾಡುವವರಿಗೆ ಗೊತ್ತಾಗಲ್ಲ ದಲಿತರನ್ನು ಕೀಳಾಗಿ ಕಾಣುವಂತ ಇನ್ನೊಂದು ರೀತಿ ಪದೇ ಪದೇ ಅಸ್ಪೃಶ್ಯತೆ ಯನ್ನು ಬಳಸುವುದು

  3. ದಲಿತ ವಿರೋಧಿಗಳಿಗೆ ಮತ ಹಾಕಬೇಡಿ ಮುಂದೆ ಇವರಿಂದ ತೊಂದರೆ ಇದೆ ಉತ್ತಮ ವ್ಯಕ್ತಿತ್ವ ಇರುವವರಿಗೆ ಮಾತ್ರ ಮತದಾನ ಮಾಡಿ.ಯೋಚಿಸಿ ನಾಯಕರನ್ನು ಆಯ್ಕೆ ಮಾಡಿ 🙏🙏🙏🙏

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...