Homeಮುಖಪುಟಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

ಅಸ್ಪೃಶ್ಯತೆ ಪದ ಬಳಕೆ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೂರು

- Advertisement -
- Advertisement -

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಸ್ಪೃಶ್ಯತೆಯನ್ನು ಸಮರ್ಥಿಸುವ ರೀತಿಯಲ್ಲಿ ‘ಇಬ್ರಾಹಿಂ ಏಕೆ ಸಿಎಂ ಆಗಬಾರದು, ಅವರೇನು ಅಸ್ಪೃಶ್ಯರಲ್ಲ’ ಎಂದಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ದೂರು ದಾಖಲಾಗಿದೆ.

ಲಕ್ಷ್ಮೀಪತಿ, ರಾಜು ಸಣ್ಣಕ್ಕಿ, ಗೊಳ್ಯ ಹನುಮಣ್ಣ ಸೇರಿದಂತೆ ಹಲವು ಛಲವಾದಿ ಮಹಾಸಭಾ ಮತ್ತು ದಲಿತ ಸಂಘಟನೆಗಳ ಮುಖಂಡರು ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀಪತಿಯವರು, “ನವೆಂಬರ್ 27 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಸಿ.ಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಪದ ಬಳಕೆ ಮಾಡಿದ್ದಾರೆ. ಇದು ಅವಹೇಳನಕಾರಿ ಮತ್ತು ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ. ಹಾಗಾಗಿ ಅವರು ದಲಿತ ಸಮುದಾಯದ ಎದುರು ಬೇಷರತ್ ಕ್ಷಮೆ ಕೇಳಬೇಕೆಂದು” ಆಗ್ರಹಿಸಿದರು.

ಜೆಡಿಎಸ್ ಪಕ್ಷವು ಜಾತ್ಯಾತೀತ ಎಂದು ಹೇಳಿಕೊಳ್ಳುತ್ತದೆ. ಆದರೆ ಜಾತೀಯತೆಯನ್ನು ಸಮರ್ಥಿಸುತ್ತದೆ. ಅದು ಜಾತಿವಾದಿ ಎಂದು ಹೆಸರು ಬದಲಿಸಿಕೊಂಡರೆ ಉತ್ತಮ ಎಂದು ಅವರು ಕಿಡಿಕಾರಿದರು.

ಕಳೆದ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ವ್ಯಕ್ತಿಯನ್ನು ಸಿಎಂ ಮಾಡುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳೀಕೆ ನೀಡಿದ್ದರು. ಈ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ ಕುಮಾರಸ್ವಾಮಿಯವರು “ನಾವು ಮುಸ್ಲಿಂ ಮತಗಳನ್ನು ಪಡೆಯುವುದಕ್ಕಾಗಿ ಮಾತನಾಡುತ್ತಿಲ್ಲ. ಇತ್ತೀಚೆಗೆ ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ ಇಬ್ರಾಹಿಂರವರು ಒಂದೆರೆಡು ವರ್ಷಗಳಲ್ಲಿ ಕುಮಾರಸ್ವಾಮಿಯವರು ಕೇಂದ್ರಕ್ಕೆ ತೆರಳಿದರೆ ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಆದರೆ ಪ್ರಸ್ತುತ 5 ವರ್ಷ ನಾನು ನಮ್ಮ ಐದು ಅಂಶಗಳ ಕುರಿತು ಗಮನ ವಹಿಸುತ್ತೇವೆ. ಆದರೆ ಎರಡೂ ಮೂರು ವರ್ಷದಲ್ಲಿ ದೆಹಲಿಯ ನಮ್ಮ ಸ್ನೇಹಿತರು ಉನ್ನತ ಸ್ಥಾನಮಾನ ಕೊಡುವುದಾಗಿ ಕೇಂದ್ರಕ್ಕೆ ಕರೆದರೆ, ಅಂತ ಸಂದರ್ಭ ಬಂದರೆ ಹೋಗುತ್ತೇನೆ. ಅಂತ ಸಂದರ್ಭದಲ್ಲಿ ಇಬ್ರಾಹಿಂರವರು ಏಕೆ ಸಿಎಂ ಆಗಬಾರದು? ಅವರೇನು ಅಸ್ಪೃಶ್ಯರಲ್ಲ (He is not an Untouchable Man)” ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅಸ್ಪ್ರಶ್ಯ ಅಥವಾ ಅಸ್ಪ್ರಶ್ಯರಲ್ಲ ಎಂಬ ಶಬ್ದ ಯಾರಾದರೊಬ್ಬರು ಬಳಸಿದರೆ ಅದು ಹೇಗೆ ಯಾರಿಗಾದರೂ ಅಪಮಾನದ ವಿಷಯವಾಗಲು ಸಾಧ್ಯ. ಅಸ್ಪ್ರಶ್ಯತೆ ಯ ಆಚರಣೆ ಕಾನೂನು ಬಾಹಿರ ಹೊರತು, ಅಸ್ಪ್ರಶ್ಯ ಎಂಬ ಪದ ಅಲ್ಲ.

  2. ಹಾಗಿದ್ದರೆ ದಲಿತರನ್ನು ಏಕೆ ಅಸ್ಪೃಶ್ಯರು ಅಂತ ಅನ್ನುತ್ತಾರೆ ಇಲ್ಲಿ ಇಬ್ರಾಹಿಮಿಗೆ ಅವರೇನು ಅಸ್ಪೃಶ್ಯ ಅಂತ ಹೇಳುವಾಗ ಅಲ್ಲಿ ಅಸ್ಪೃಶ್ಯ ಅಂದ್ರೆ ದಲಿತರು ಎಂಬ ಪದವನ್ನು ಅತಿರೇಕವಾಗಿ ಬಳಸಿದೆ ಎಂದರ್ಥ ಇದು ಅರ್ಥ ಮಾಡಿದವರಿಗೆ ಮಾತ್ರ ಗೊತ್ತಾಗುತ್ತೆ, ಸುಮ್ಸುಮ್ನೆ ಪ್ರಶ್ನೆ ಮಾಡುವವರಿಗೆ ಗೊತ್ತಾಗಲ್ಲ ದಲಿತರನ್ನು ಕೀಳಾಗಿ ಕಾಣುವಂತ ಇನ್ನೊಂದು ರೀತಿ ಪದೇ ಪದೇ ಅಸ್ಪೃಶ್ಯತೆ ಯನ್ನು ಬಳಸುವುದು

  3. ದಲಿತ ವಿರೋಧಿಗಳಿಗೆ ಮತ ಹಾಕಬೇಡಿ ಮುಂದೆ ಇವರಿಂದ ತೊಂದರೆ ಇದೆ ಉತ್ತಮ ವ್ಯಕ್ತಿತ್ವ ಇರುವವರಿಗೆ ಮಾತ್ರ ಮತದಾನ ಮಾಡಿ.ಯೋಚಿಸಿ ನಾಯಕರನ್ನು ಆಯ್ಕೆ ಮಾಡಿ 🙏🙏🙏🙏

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...