Homeಮುಖಪುಟಸಂಸದರ ನಿಧಿಯನ್ನು ಮಗನ ಮದುವೆಗೆ ಮತ್ತು ಮನೆ ಕಟ್ಟಲು ಬಳಸಿಕೊಂಡೆ: ಒಪ್ಪಿಕೊಂಡ ಬಿಜೆಪಿ ಸಂಸದ

ಸಂಸದರ ನಿಧಿಯನ್ನು ಮಗನ ಮದುವೆಗೆ ಮತ್ತು ಮನೆ ಕಟ್ಟಲು ಬಳಸಿಕೊಂಡೆ: ಒಪ್ಪಿಕೊಂಡ ಬಿಜೆಪಿ ಸಂಸದ

- Advertisement -
- Advertisement -

ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯನ್ನು ಮಗನ ಮದುವೆಗೆ ಮತ್ತು ಮನೆ ಕಟ್ಟಲು ಬಳಸಿಕೊಂಡೆ ಎಂದು ತೆಲಂಗಾಣದ ಆದಿಲ್‌ಬಾದ್‌ನ ಬಿಜೆಪಿ ಸಂಸದ ಸೋಯಂ ಬಾಪುರಾವ್ ಹೇಳುವ ಮೂಲಕ ನಿಧಿಯ ದುರ್ಬಳಕೆಯನ್ನು ಸ್ವಯಂ ಒಪ್ಪಿಕೊಂಡಿದ್ದಾರೆ.

“ನಾನು ಹಿಂದಿನ ಸಂಸದರಂತೆ ನಿಧಿಯ ಒಟ್ಟು ಹಣವನ್ನು ಲಪಟಾಯಿಸಿಲ್ಲ. ಬದಲಿಗೆ ಸ್ವಲ್ಪ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ, ಉಳಿದ ಹಣವನ್ನು ಮಗನ ಮದುವೆ ಮತ್ತು ಮನೆ ಕಟ್ಟಲು ಬಳಸಿಕೊಂಡಿರುವೆ” ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಚಪ್ಪಾಳೆ ತಟ್ಟುವುದನ್ನು ನೋಡಬಹುದಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದಿರುವ ಸಂಸದರು, “ಪಕ್ಷದಲ್ಲಿ ತನ್ನ ಬೆಳವಣಿಗೆಯನ್ನು ಇಷ್ಟಪಡದ ಕೆಲವು ಬಿಜೆಪಿ ನಾಯಕರ ಕೈವಾಡವಿದು” ಎಂದು ಆರೋಪಿಸಿದ್ದಾರೆ.

“ಬಿಜೆಪಿ ಜಿಲ್ಲಾಧ್ಯಕ್ಷ ಪಾಯಲ್ ಶಂಕರ್ ಹಾಗೂ ಆದಿಲಾಬಾದ್ ಮಾಜಿ ಸಂಸದ ರಮೇಶ್ ರಾಥೋಡ್ ತಮ್ಮ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದು, ಇಡೀ ಸಂಚಿಕೆ ಹಿಂದೆ ಅವರ ಕೈವಾಡವಿದೆ. ಬಿಜೆಪಿಯ ಕೆಲ ನಾಯಕರಿಗೆ ನನ್ನ ಮಾತು ಇಷ್ಟವಿಲ್ಲ. ಅವರು ನನ್ನನ್ನು ನಿಂದಿಸಲು ಮತ್ತು ನನ್ನನ್ನು ತೊಡೆದುಹಾಕಲು ಈ ಎಲ್ಲಾ ಸಾಹಸಗಳನ್ನು ಮಾಡುತ್ತಿದ್ದಾರೆ” ಎಂದು ಸೋಯಂ ಬಾಪುರಾವ್ ಹೇಳಿದ್ದಾರೆ.

MPLAD ಹಣ ದುರುಪಯೋಗದ ಆರೋಪವನ್ನು ತಳ್ಳಿಹಾಕಿದ ಬಾಪು ರಾವ್, “ತಮ್ಮ ಮನೆ ಮತ್ತು ಮಗನ ಮದುವೆಯ ನಿರ್ಮಾಣದಲ್ಲಿ ನಿರತರಾಗಿರುವ ಕಾರಣ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹಣವನ್ನು ಬಳಸಲಾಗಿಲ್ಲ. ನಿಧಿಯನ್ನು ಖರ್ಚು ಮಾಡಲು ಅಧಿಕೃತ ಕಾರ್ಯವಿಧಾನ ಇರುವುದರಿಂದ ಯಾವುದೇ ಸಂಸದರು ತಮ್ಮ ವೈಯಕ್ತಿಕ ಬಳಕೆಗಾಗಿ MPLAD ಹಣವನ್ನು ಬಳಸಲು ಯಾವುದೇ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಆದರೆ ಅವರ ಮೊದಲ ಹೇಳಿಕೆ ವೈರಲ್ ಆಗಿದ್ದು, ಬಿಜೆಪಿ ಹೇಗೆ ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂದು ವಿಪಕ್ಷಗಳಾದ ಬಿಆರ್‌ಎಸ್ ಮತ್ತು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿವೆ.

ಇದನ್ನೂ ಓದಿ; ಬಡವರ ಅನ್ನದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಜ್ಯದ ಜನರು ಮತ್ತೊಮ್ಮೆ ಪಾಠ ಕಲಿಸುತ್ತಾರೆ: ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...