Homeಕರ್ನಾಟಕಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

- Advertisement -
- Advertisement -

“ವಿದ್ಯಾಭ್ಯಾಸಕ್ಕಾಗಿ ತಬ್ಬಲಿ ಹಾಗೂ ಅನಾಥಮಕ್ಕಳು ಮಠಕ್ಕೆ ಸೇರಿದ್ದರು. ಮಕ್ಕಳನ್ನು ಲೈಂಗಿಕ ತೃಷೆಗಾಗಿ ಬಳಸಿರುವುದು ಅತ್ಯಂತ ಹೇಯಕೃತ್ಯ. ಈ ಕೆಲಸವನ್ನು ಮನುಷ್ಯರಾದವರು ಮಾಡುವುದಿಲ್ಲ” ಎಂದು ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಹೇಳಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

ಮಠಾಧೀಶರ ನೈತಿಕತೆ ಬಹಳ ಹೀನಾಯ ಸ್ಥಿತಿಗೆ ತಲುಪಿದೆ. ಮಠಗಳು ಎಂದರೆ ಜಾತೀವಾದಿ ರಾಜಕೀಯ ಕೇಂದ್ರಗಳಾಗಿವೆ. ಒಳ್ಳೆಯ ಸ್ವಾಮೀಜಿಗಳಿರಬಹುದು. ಆದರೆ ಬಹುತೇಕ ಮಠಗಳು ರಾಜಕೀಯದ ಆಡಂಬೊಲ ಆಗಿವೆ. ತಳ ಸಮುದಾಯಗಳನ್ನು ತುಳಿಯುವ ಕೆಲಸಕ್ಕೆ ಈ ಮಠಗಳನ್ನು ಬಳಸುತ್ತಿದ್ದಾರೆ ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುರಂತವೇನೆಂದರೆ ಇಡೀ ಬಿಜೆಪಿಯ ರಾಜಕೀಯ ಧುರೀಣರು, ಸರ್ಕಾರ, ಪೊಲೀಸರು ನಡೆಸಿಕೊಂಡಿರುವ ರೀತಿ ಸಂವಿಧಾನವನ್ನು ಅಪಮಾನ ಮಾಡುವಂತಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುತ್ತಾರೆ. ಆದರೆ ಒಬ್ಬ ಮಠಾಧೀಶನನ್ನು ಬಂಧಿಸಲು ಇಷ್ಟು ದಿನ ಕಾಯಬೇಕಾಯಿತು. ಸಾಮಾನ್ಯ ಜನರಾಗಿದ್ದಾರೆ ಒದ್ದು ಒಳಗಡೆ ಹಾಕುತ್ತಾರೆ. ಆದರೆ ಒಬ್ಬ ಹೈ ಪ್ರೊಫೈಲ್‌  ಸ್ವಾಮೀಜಿಯನ್ನು ಬಂಧಿಸಬೇಕು ಅಂದರೆ ದಿನಗಟ್ಟಲೆ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಳ್ಳಿ ಶಂಕರ್‌

ಬಡವರನ್ನು ನೋಡಿದರೆ ಕಾನೂನು ಹೂಂಕರಿಸುತ್ತದೆ. ಶ್ರೀಮಂತರನ್ನು ನೋಡಿದರೆ ಮಂಡಿಯೂರುತ್ತೆ. ಇದಾಗಬಾರದು. ಈಗ ಸ್ವಾಮೀಜಿಯ ಬಂಧನವಾಗಿದೆ. ಕಾನೂನಿನ ಪ್ರಕ್ರಿಯೆ ನಡೆಯಲಿ. ಅದರಿಂದ ಎಸ್‌.ಐ.ಟಿ. ರಚನೆಯಾಗಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ನಡೆಯಬೇಕು. ತಮಿಳುನಾಡು ಅಥವಾ ಕೇರಳಕ್ಕೆ ವರ್ಗಾವಣೆ ಆಗಬೇಕು. ರಾಜ್ಯದಲ್ಲಿ ತನಿಖೆಯಾದರೆ ಅದರ ಮೇಲೆ ಪ್ರಭಾವ ಬೀರುವ ಎಲ್ಲ ಹುನ್ನಾರಗಳನ್ನು ಇವರು ಮಾಡುತ್ತಾರೆ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಬಿಲ್ಕಿಸ್ ಬಾನೋ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ಆದ ಕಾರಣ ಅಪರಾಧಿಗಳಿಗೆ ಶಿಕ್ಷೆಯಾಯಿತು. ಒಂದು ವೇಳೆ ಗುಜರಾತ್‌ನಲ್ಲಿಯೇ ಪ್ರಕರಣ ತನಿಖೆಯಾಗಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಹೊರಗೆ ಬಿಡಲಾಗಿದೆ. ನ್ಯಾಯಾಂಗವೂ ಇದಕ್ಕೆ ಇಂಬು ಕೊಡುತ್ತಿದೆ ಅನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಭಾಷಣ ಮಾಡಿದ ದಿನವೇ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಯಿತು ಎಂದರು.

ಕೃತಿಯಲ್ಲಿ ಹೆಸರು ತೆಗೆದುಹಾಕಿ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಪಶ್ಚಾತ್ತಾಪದಲ್ಲಿ ನರಳುವಂತಹ ಸ್ಥಿತಿ ನನಗೆ ಬಂದಿದೆ. ಆ ಮಠ ಹೊರತಂದ ‘ವಚನ ಮಾರ್ಗ’ ಎಂಬ ಪುಸ್ತಕಕ್ಕೆ ನಾನು ಸಂಪಾದಕನಾಗಿದ್ದೆ. ಇದಕ್ಕೆ ನನಗೆ ಸಂಕೋಚ ಹಾಗೂ ಪಶ್ಚಾತ್ತಾಪವಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

“ಈ ಕೃತಿಯ ಸಂಪಾದಕರಾಗಿದ್ದವರು ನಮ್ಮೆಲ್ಲರ ಪೂಜ್ಯರಾಗಿದ್ದ ಎಂ.ಎಂ.ಕಲ್ಬುರ್ಗಿಯವರು. ಅಂತಹ ಪೂಜ್ಯರು ನಿರ್ವಹಿಸುತ್ತಿದ್ದ ಕಾರ್ಯ ನಿಂತುಹೋಗಿತ್ತು. ಆ ಜಾಗಕ್ಕೆ ಬರಬೇಕೆಂದು ಮರುಘಾ ಶರಣರು ನನ್ನನ್ನು ಕರೆದರು. ಕಲ್ಬುರ್ಗಿಯವರ ಮೇಲಿನ ಗೌರವದ ಕಾರಣಕ್ಕೆ ನಾನು ಕೆಲಸ ಮಾಡಿದೆ. ತುಂಬಾ ಸೊಗಸಾಗಿ ಕೃತಿ ಬಂದಿದ್ದರ ಬಗ್ಗೆ ಗೌರವವಿದೆ. ಆದರೆ ಇಂತಹ ಒಬ್ಬ ವ್ಯಕ್ತಿಯ ಆಶ್ರಯದಲ್ಲಿ ಕೃತಿ ಬರಬೇಕಾಯಿತಲ್ಲ ಎಂಬ ಪಶ್ಚಾತ್ತಾಪ ನನ್ನನ್ನು ಇವತ್ತು ಕಾಡುತ್ತಿದೆ. ಇನ್ನು ಮುಂದೆ ಆ ಪುಸ್ತಕವನ್ನು ಮರಳಿ ಪ್ರಕಟಿಸುವಾಗ ನನ್ನ ಹೆಸರನ್ನು ತೆಗೆದುಹಾಕಿ ಎಂದು ಮಠಕ್ಕೆ ಹೇಳುತ್ತಿದ್ದೇನೆ” ಎಂದರು.

ಇಂದು ನಡೆಯುತ್ತಿರುವ ಅನಿಷ್ಠವನ್ನು ನೋಡುತ್ತಾ ಅನೇಕರು ಮನೆಯಲ್ಲಿ ಕೂತಿದ್ದಾರೆ. ಪಾಪಕೃತ್ಯವನ್ನು ನೋಡಿ ಸುಮ್ಮನಿದ್ದರೆ ಅದರಲ್ಲಿ ನಾವು ಕೂಡ ಭಾಗಿಯಾದಂತೆ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನಾವು ಧ್ವನಿ ಎತ್ತಬೇಕಿದೆ. ಬಿಲ್ಕಿಸ್ ಬಾನೋ ಪ್ರಕರಣದಿಂದ ಹಿಡಿದು, ಚಿತ್ರದುರ್ಗದ ಪ್ರಕರಣದವರೆಗೆ ನೋಡಿದರೆ ದೇಶ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...