Homeಕರ್ನಾಟಕಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

- Advertisement -
- Advertisement -

“ವಿದ್ಯಾಭ್ಯಾಸಕ್ಕಾಗಿ ತಬ್ಬಲಿ ಹಾಗೂ ಅನಾಥಮಕ್ಕಳು ಮಠಕ್ಕೆ ಸೇರಿದ್ದರು. ಮಕ್ಕಳನ್ನು ಲೈಂಗಿಕ ತೃಷೆಗಾಗಿ ಬಳಸಿರುವುದು ಅತ್ಯಂತ ಹೇಯಕೃತ್ಯ. ಈ ಕೆಲಸವನ್ನು ಮನುಷ್ಯರಾದವರು ಮಾಡುವುದಿಲ್ಲ” ಎಂದು ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಹೇಳಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

ಮಠಾಧೀಶರ ನೈತಿಕತೆ ಬಹಳ ಹೀನಾಯ ಸ್ಥಿತಿಗೆ ತಲುಪಿದೆ. ಮಠಗಳು ಎಂದರೆ ಜಾತೀವಾದಿ ರಾಜಕೀಯ ಕೇಂದ್ರಗಳಾಗಿವೆ. ಒಳ್ಳೆಯ ಸ್ವಾಮೀಜಿಗಳಿರಬಹುದು. ಆದರೆ ಬಹುತೇಕ ಮಠಗಳು ರಾಜಕೀಯದ ಆಡಂಬೊಲ ಆಗಿವೆ. ತಳ ಸಮುದಾಯಗಳನ್ನು ತುಳಿಯುವ ಕೆಲಸಕ್ಕೆ ಈ ಮಠಗಳನ್ನು ಬಳಸುತ್ತಿದ್ದಾರೆ ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುರಂತವೇನೆಂದರೆ ಇಡೀ ಬಿಜೆಪಿಯ ರಾಜಕೀಯ ಧುರೀಣರು, ಸರ್ಕಾರ, ಪೊಲೀಸರು ನಡೆಸಿಕೊಂಡಿರುವ ರೀತಿ ಸಂವಿಧಾನವನ್ನು ಅಪಮಾನ ಮಾಡುವಂತಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುತ್ತಾರೆ. ಆದರೆ ಒಬ್ಬ ಮಠಾಧೀಶನನ್ನು ಬಂಧಿಸಲು ಇಷ್ಟು ದಿನ ಕಾಯಬೇಕಾಯಿತು. ಸಾಮಾನ್ಯ ಜನರಾಗಿದ್ದಾರೆ ಒದ್ದು ಒಳಗಡೆ ಹಾಕುತ್ತಾರೆ. ಆದರೆ ಒಬ್ಬ ಹೈ ಪ್ರೊಫೈಲ್‌  ಸ್ವಾಮೀಜಿಯನ್ನು ಬಂಧಿಸಬೇಕು ಅಂದರೆ ದಿನಗಟ್ಟಲೆ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಳ್ಳಿ ಶಂಕರ್‌

ಬಡವರನ್ನು ನೋಡಿದರೆ ಕಾನೂನು ಹೂಂಕರಿಸುತ್ತದೆ. ಶ್ರೀಮಂತರನ್ನು ನೋಡಿದರೆ ಮಂಡಿಯೂರುತ್ತೆ. ಇದಾಗಬಾರದು. ಈಗ ಸ್ವಾಮೀಜಿಯ ಬಂಧನವಾಗಿದೆ. ಕಾನೂನಿನ ಪ್ರಕ್ರಿಯೆ ನಡೆಯಲಿ. ಅದರಿಂದ ಎಸ್‌.ಐ.ಟಿ. ರಚನೆಯಾಗಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ನಡೆಯಬೇಕು. ತಮಿಳುನಾಡು ಅಥವಾ ಕೇರಳಕ್ಕೆ ವರ್ಗಾವಣೆ ಆಗಬೇಕು. ರಾಜ್ಯದಲ್ಲಿ ತನಿಖೆಯಾದರೆ ಅದರ ಮೇಲೆ ಪ್ರಭಾವ ಬೀರುವ ಎಲ್ಲ ಹುನ್ನಾರಗಳನ್ನು ಇವರು ಮಾಡುತ್ತಾರೆ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಬಿಲ್ಕಿಸ್ ಬಾನೋ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ಆದ ಕಾರಣ ಅಪರಾಧಿಗಳಿಗೆ ಶಿಕ್ಷೆಯಾಯಿತು. ಒಂದು ವೇಳೆ ಗುಜರಾತ್‌ನಲ್ಲಿಯೇ ಪ್ರಕರಣ ತನಿಖೆಯಾಗಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಹೊರಗೆ ಬಿಡಲಾಗಿದೆ. ನ್ಯಾಯಾಂಗವೂ ಇದಕ್ಕೆ ಇಂಬು ಕೊಡುತ್ತಿದೆ ಅನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಭಾಷಣ ಮಾಡಿದ ದಿನವೇ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಯಿತು ಎಂದರು.

ಕೃತಿಯಲ್ಲಿ ಹೆಸರು ತೆಗೆದುಹಾಕಿ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಪಶ್ಚಾತ್ತಾಪದಲ್ಲಿ ನರಳುವಂತಹ ಸ್ಥಿತಿ ನನಗೆ ಬಂದಿದೆ. ಆ ಮಠ ಹೊರತಂದ ‘ವಚನ ಮಾರ್ಗ’ ಎಂಬ ಪುಸ್ತಕಕ್ಕೆ ನಾನು ಸಂಪಾದಕನಾಗಿದ್ದೆ. ಇದಕ್ಕೆ ನನಗೆ ಸಂಕೋಚ ಹಾಗೂ ಪಶ್ಚಾತ್ತಾಪವಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

“ಈ ಕೃತಿಯ ಸಂಪಾದಕರಾಗಿದ್ದವರು ನಮ್ಮೆಲ್ಲರ ಪೂಜ್ಯರಾಗಿದ್ದ ಎಂ.ಎಂ.ಕಲ್ಬುರ್ಗಿಯವರು. ಅಂತಹ ಪೂಜ್ಯರು ನಿರ್ವಹಿಸುತ್ತಿದ್ದ ಕಾರ್ಯ ನಿಂತುಹೋಗಿತ್ತು. ಆ ಜಾಗಕ್ಕೆ ಬರಬೇಕೆಂದು ಮರುಘಾ ಶರಣರು ನನ್ನನ್ನು ಕರೆದರು. ಕಲ್ಬುರ್ಗಿಯವರ ಮೇಲಿನ ಗೌರವದ ಕಾರಣಕ್ಕೆ ನಾನು ಕೆಲಸ ಮಾಡಿದೆ. ತುಂಬಾ ಸೊಗಸಾಗಿ ಕೃತಿ ಬಂದಿದ್ದರ ಬಗ್ಗೆ ಗೌರವವಿದೆ. ಆದರೆ ಇಂತಹ ಒಬ್ಬ ವ್ಯಕ್ತಿಯ ಆಶ್ರಯದಲ್ಲಿ ಕೃತಿ ಬರಬೇಕಾಯಿತಲ್ಲ ಎಂಬ ಪಶ್ಚಾತ್ತಾಪ ನನ್ನನ್ನು ಇವತ್ತು ಕಾಡುತ್ತಿದೆ. ಇನ್ನು ಮುಂದೆ ಆ ಪುಸ್ತಕವನ್ನು ಮರಳಿ ಪ್ರಕಟಿಸುವಾಗ ನನ್ನ ಹೆಸರನ್ನು ತೆಗೆದುಹಾಕಿ ಎಂದು ಮಠಕ್ಕೆ ಹೇಳುತ್ತಿದ್ದೇನೆ” ಎಂದರು.

ಇಂದು ನಡೆಯುತ್ತಿರುವ ಅನಿಷ್ಠವನ್ನು ನೋಡುತ್ತಾ ಅನೇಕರು ಮನೆಯಲ್ಲಿ ಕೂತಿದ್ದಾರೆ. ಪಾಪಕೃತ್ಯವನ್ನು ನೋಡಿ ಸುಮ್ಮನಿದ್ದರೆ ಅದರಲ್ಲಿ ನಾವು ಕೂಡ ಭಾಗಿಯಾದಂತೆ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನಾವು ಧ್ವನಿ ಎತ್ತಬೇಕಿದೆ. ಬಿಲ್ಕಿಸ್ ಬಾನೋ ಪ್ರಕರಣದಿಂದ ಹಿಡಿದು, ಚಿತ್ರದುರ್ಗದ ಪ್ರಕರಣದವರೆಗೆ ನೋಡಿದರೆ ದೇಶ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...