Homeಕರ್ನಾಟಕಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

- Advertisement -
- Advertisement -

“ವಿದ್ಯಾಭ್ಯಾಸಕ್ಕಾಗಿ ತಬ್ಬಲಿ ಹಾಗೂ ಅನಾಥಮಕ್ಕಳು ಮಠಕ್ಕೆ ಸೇರಿದ್ದರು. ಮಕ್ಕಳನ್ನು ಲೈಂಗಿಕ ತೃಷೆಗಾಗಿ ಬಳಸಿರುವುದು ಅತ್ಯಂತ ಹೇಯಕೃತ್ಯ. ಈ ಕೆಲಸವನ್ನು ಮನುಷ್ಯರಾದವರು ಮಾಡುವುದಿಲ್ಲ” ಎಂದು ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಹೇಳಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

ಮಠಾಧೀಶರ ನೈತಿಕತೆ ಬಹಳ ಹೀನಾಯ ಸ್ಥಿತಿಗೆ ತಲುಪಿದೆ. ಮಠಗಳು ಎಂದರೆ ಜಾತೀವಾದಿ ರಾಜಕೀಯ ಕೇಂದ್ರಗಳಾಗಿವೆ. ಒಳ್ಳೆಯ ಸ್ವಾಮೀಜಿಗಳಿರಬಹುದು. ಆದರೆ ಬಹುತೇಕ ಮಠಗಳು ರಾಜಕೀಯದ ಆಡಂಬೊಲ ಆಗಿವೆ. ತಳ ಸಮುದಾಯಗಳನ್ನು ತುಳಿಯುವ ಕೆಲಸಕ್ಕೆ ಈ ಮಠಗಳನ್ನು ಬಳಸುತ್ತಿದ್ದಾರೆ ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುರಂತವೇನೆಂದರೆ ಇಡೀ ಬಿಜೆಪಿಯ ರಾಜಕೀಯ ಧುರೀಣರು, ಸರ್ಕಾರ, ಪೊಲೀಸರು ನಡೆಸಿಕೊಂಡಿರುವ ರೀತಿ ಸಂವಿಧಾನವನ್ನು ಅಪಮಾನ ಮಾಡುವಂತಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುತ್ತಾರೆ. ಆದರೆ ಒಬ್ಬ ಮಠಾಧೀಶನನ್ನು ಬಂಧಿಸಲು ಇಷ್ಟು ದಿನ ಕಾಯಬೇಕಾಯಿತು. ಸಾಮಾನ್ಯ ಜನರಾಗಿದ್ದಾರೆ ಒದ್ದು ಒಳಗಡೆ ಹಾಕುತ್ತಾರೆ. ಆದರೆ ಒಬ್ಬ ಹೈ ಪ್ರೊಫೈಲ್‌  ಸ್ವಾಮೀಜಿಯನ್ನು ಬಂಧಿಸಬೇಕು ಅಂದರೆ ದಿನಗಟ್ಟಲೆ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಳ್ಳಿ ಶಂಕರ್‌

ಬಡವರನ್ನು ನೋಡಿದರೆ ಕಾನೂನು ಹೂಂಕರಿಸುತ್ತದೆ. ಶ್ರೀಮಂತರನ್ನು ನೋಡಿದರೆ ಮಂಡಿಯೂರುತ್ತೆ. ಇದಾಗಬಾರದು. ಈಗ ಸ್ವಾಮೀಜಿಯ ಬಂಧನವಾಗಿದೆ. ಕಾನೂನಿನ ಪ್ರಕ್ರಿಯೆ ನಡೆಯಲಿ. ಅದರಿಂದ ಎಸ್‌.ಐ.ಟಿ. ರಚನೆಯಾಗಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ನಡೆಯಬೇಕು. ತಮಿಳುನಾಡು ಅಥವಾ ಕೇರಳಕ್ಕೆ ವರ್ಗಾವಣೆ ಆಗಬೇಕು. ರಾಜ್ಯದಲ್ಲಿ ತನಿಖೆಯಾದರೆ ಅದರ ಮೇಲೆ ಪ್ರಭಾವ ಬೀರುವ ಎಲ್ಲ ಹುನ್ನಾರಗಳನ್ನು ಇವರು ಮಾಡುತ್ತಾರೆ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಬಿಲ್ಕಿಸ್ ಬಾನೋ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ಆದ ಕಾರಣ ಅಪರಾಧಿಗಳಿಗೆ ಶಿಕ್ಷೆಯಾಯಿತು. ಒಂದು ವೇಳೆ ಗುಜರಾತ್‌ನಲ್ಲಿಯೇ ಪ್ರಕರಣ ತನಿಖೆಯಾಗಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಹೊರಗೆ ಬಿಡಲಾಗಿದೆ. ನ್ಯಾಯಾಂಗವೂ ಇದಕ್ಕೆ ಇಂಬು ಕೊಡುತ್ತಿದೆ ಅನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಭಾಷಣ ಮಾಡಿದ ದಿನವೇ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಯಿತು ಎಂದರು.

ಕೃತಿಯಲ್ಲಿ ಹೆಸರು ತೆಗೆದುಹಾಕಿ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಪಶ್ಚಾತ್ತಾಪದಲ್ಲಿ ನರಳುವಂತಹ ಸ್ಥಿತಿ ನನಗೆ ಬಂದಿದೆ. ಆ ಮಠ ಹೊರತಂದ ‘ವಚನ ಮಾರ್ಗ’ ಎಂಬ ಪುಸ್ತಕಕ್ಕೆ ನಾನು ಸಂಪಾದಕನಾಗಿದ್ದೆ. ಇದಕ್ಕೆ ನನಗೆ ಸಂಕೋಚ ಹಾಗೂ ಪಶ್ಚಾತ್ತಾಪವಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

“ಈ ಕೃತಿಯ ಸಂಪಾದಕರಾಗಿದ್ದವರು ನಮ್ಮೆಲ್ಲರ ಪೂಜ್ಯರಾಗಿದ್ದ ಎಂ.ಎಂ.ಕಲ್ಬುರ್ಗಿಯವರು. ಅಂತಹ ಪೂಜ್ಯರು ನಿರ್ವಹಿಸುತ್ತಿದ್ದ ಕಾರ್ಯ ನಿಂತುಹೋಗಿತ್ತು. ಆ ಜಾಗಕ್ಕೆ ಬರಬೇಕೆಂದು ಮರುಘಾ ಶರಣರು ನನ್ನನ್ನು ಕರೆದರು. ಕಲ್ಬುರ್ಗಿಯವರ ಮೇಲಿನ ಗೌರವದ ಕಾರಣಕ್ಕೆ ನಾನು ಕೆಲಸ ಮಾಡಿದೆ. ತುಂಬಾ ಸೊಗಸಾಗಿ ಕೃತಿ ಬಂದಿದ್ದರ ಬಗ್ಗೆ ಗೌರವವಿದೆ. ಆದರೆ ಇಂತಹ ಒಬ್ಬ ವ್ಯಕ್ತಿಯ ಆಶ್ರಯದಲ್ಲಿ ಕೃತಿ ಬರಬೇಕಾಯಿತಲ್ಲ ಎಂಬ ಪಶ್ಚಾತ್ತಾಪ ನನ್ನನ್ನು ಇವತ್ತು ಕಾಡುತ್ತಿದೆ. ಇನ್ನು ಮುಂದೆ ಆ ಪುಸ್ತಕವನ್ನು ಮರಳಿ ಪ್ರಕಟಿಸುವಾಗ ನನ್ನ ಹೆಸರನ್ನು ತೆಗೆದುಹಾಕಿ ಎಂದು ಮಠಕ್ಕೆ ಹೇಳುತ್ತಿದ್ದೇನೆ” ಎಂದರು.

ಇಂದು ನಡೆಯುತ್ತಿರುವ ಅನಿಷ್ಠವನ್ನು ನೋಡುತ್ತಾ ಅನೇಕರು ಮನೆಯಲ್ಲಿ ಕೂತಿದ್ದಾರೆ. ಪಾಪಕೃತ್ಯವನ್ನು ನೋಡಿ ಸುಮ್ಮನಿದ್ದರೆ ಅದರಲ್ಲಿ ನಾವು ಕೂಡ ಭಾಗಿಯಾದಂತೆ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನಾವು ಧ್ವನಿ ಎತ್ತಬೇಕಿದೆ. ಬಿಲ್ಕಿಸ್ ಬಾನೋ ಪ್ರಕರಣದಿಂದ ಹಿಡಿದು, ಚಿತ್ರದುರ್ಗದ ಪ್ರಕರಣದವರೆಗೆ ನೋಡಿದರೆ ದೇಶ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...