Homeಕರ್ನಾಟಕಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

- Advertisement -
- Advertisement -

“ವಿದ್ಯಾಭ್ಯಾಸಕ್ಕಾಗಿ ತಬ್ಬಲಿ ಹಾಗೂ ಅನಾಥಮಕ್ಕಳು ಮಠಕ್ಕೆ ಸೇರಿದ್ದರು. ಮಕ್ಕಳನ್ನು ಲೈಂಗಿಕ ತೃಷೆಗಾಗಿ ಬಳಸಿರುವುದು ಅತ್ಯಂತ ಹೇಯಕೃತ್ಯ. ಈ ಕೆಲಸವನ್ನು ಮನುಷ್ಯರಾದವರು ಮಾಡುವುದಿಲ್ಲ” ಎಂದು ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಹೇಳಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

ಮಠಾಧೀಶರ ನೈತಿಕತೆ ಬಹಳ ಹೀನಾಯ ಸ್ಥಿತಿಗೆ ತಲುಪಿದೆ. ಮಠಗಳು ಎಂದರೆ ಜಾತೀವಾದಿ ರಾಜಕೀಯ ಕೇಂದ್ರಗಳಾಗಿವೆ. ಒಳ್ಳೆಯ ಸ್ವಾಮೀಜಿಗಳಿರಬಹುದು. ಆದರೆ ಬಹುತೇಕ ಮಠಗಳು ರಾಜಕೀಯದ ಆಡಂಬೊಲ ಆಗಿವೆ. ತಳ ಸಮುದಾಯಗಳನ್ನು ತುಳಿಯುವ ಕೆಲಸಕ್ಕೆ ಈ ಮಠಗಳನ್ನು ಬಳಸುತ್ತಿದ್ದಾರೆ ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುರಂತವೇನೆಂದರೆ ಇಡೀ ಬಿಜೆಪಿಯ ರಾಜಕೀಯ ಧುರೀಣರು, ಸರ್ಕಾರ, ಪೊಲೀಸರು ನಡೆಸಿಕೊಂಡಿರುವ ರೀತಿ ಸಂವಿಧಾನವನ್ನು ಅಪಮಾನ ಮಾಡುವಂತಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುತ್ತಾರೆ. ಆದರೆ ಒಬ್ಬ ಮಠಾಧೀಶನನ್ನು ಬಂಧಿಸಲು ಇಷ್ಟು ದಿನ ಕಾಯಬೇಕಾಯಿತು. ಸಾಮಾನ್ಯ ಜನರಾಗಿದ್ದಾರೆ ಒದ್ದು ಒಳಗಡೆ ಹಾಕುತ್ತಾರೆ. ಆದರೆ ಒಬ್ಬ ಹೈ ಪ್ರೊಫೈಲ್‌  ಸ್ವಾಮೀಜಿಯನ್ನು ಬಂಧಿಸಬೇಕು ಅಂದರೆ ದಿನಗಟ್ಟಲೆ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಳ್ಳಿ ಶಂಕರ್‌

ಬಡವರನ್ನು ನೋಡಿದರೆ ಕಾನೂನು ಹೂಂಕರಿಸುತ್ತದೆ. ಶ್ರೀಮಂತರನ್ನು ನೋಡಿದರೆ ಮಂಡಿಯೂರುತ್ತೆ. ಇದಾಗಬಾರದು. ಈಗ ಸ್ವಾಮೀಜಿಯ ಬಂಧನವಾಗಿದೆ. ಕಾನೂನಿನ ಪ್ರಕ್ರಿಯೆ ನಡೆಯಲಿ. ಅದರಿಂದ ಎಸ್‌.ಐ.ಟಿ. ರಚನೆಯಾಗಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ನಡೆಯಬೇಕು. ತಮಿಳುನಾಡು ಅಥವಾ ಕೇರಳಕ್ಕೆ ವರ್ಗಾವಣೆ ಆಗಬೇಕು. ರಾಜ್ಯದಲ್ಲಿ ತನಿಖೆಯಾದರೆ ಅದರ ಮೇಲೆ ಪ್ರಭಾವ ಬೀರುವ ಎಲ್ಲ ಹುನ್ನಾರಗಳನ್ನು ಇವರು ಮಾಡುತ್ತಾರೆ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಬಿಲ್ಕಿಸ್ ಬಾನೋ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ಆದ ಕಾರಣ ಅಪರಾಧಿಗಳಿಗೆ ಶಿಕ್ಷೆಯಾಯಿತು. ಒಂದು ವೇಳೆ ಗುಜರಾತ್‌ನಲ್ಲಿಯೇ ಪ್ರಕರಣ ತನಿಖೆಯಾಗಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಹೊರಗೆ ಬಿಡಲಾಗಿದೆ. ನ್ಯಾಯಾಂಗವೂ ಇದಕ್ಕೆ ಇಂಬು ಕೊಡುತ್ತಿದೆ ಅನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಭಾಷಣ ಮಾಡಿದ ದಿನವೇ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಯಿತು ಎಂದರು.

ಕೃತಿಯಲ್ಲಿ ಹೆಸರು ತೆಗೆದುಹಾಕಿ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಪಶ್ಚಾತ್ತಾಪದಲ್ಲಿ ನರಳುವಂತಹ ಸ್ಥಿತಿ ನನಗೆ ಬಂದಿದೆ. ಆ ಮಠ ಹೊರತಂದ ‘ವಚನ ಮಾರ್ಗ’ ಎಂಬ ಪುಸ್ತಕಕ್ಕೆ ನಾನು ಸಂಪಾದಕನಾಗಿದ್ದೆ. ಇದಕ್ಕೆ ನನಗೆ ಸಂಕೋಚ ಹಾಗೂ ಪಶ್ಚಾತ್ತಾಪವಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

“ಈ ಕೃತಿಯ ಸಂಪಾದಕರಾಗಿದ್ದವರು ನಮ್ಮೆಲ್ಲರ ಪೂಜ್ಯರಾಗಿದ್ದ ಎಂ.ಎಂ.ಕಲ್ಬುರ್ಗಿಯವರು. ಅಂತಹ ಪೂಜ್ಯರು ನಿರ್ವಹಿಸುತ್ತಿದ್ದ ಕಾರ್ಯ ನಿಂತುಹೋಗಿತ್ತು. ಆ ಜಾಗಕ್ಕೆ ಬರಬೇಕೆಂದು ಮರುಘಾ ಶರಣರು ನನ್ನನ್ನು ಕರೆದರು. ಕಲ್ಬುರ್ಗಿಯವರ ಮೇಲಿನ ಗೌರವದ ಕಾರಣಕ್ಕೆ ನಾನು ಕೆಲಸ ಮಾಡಿದೆ. ತುಂಬಾ ಸೊಗಸಾಗಿ ಕೃತಿ ಬಂದಿದ್ದರ ಬಗ್ಗೆ ಗೌರವವಿದೆ. ಆದರೆ ಇಂತಹ ಒಬ್ಬ ವ್ಯಕ್ತಿಯ ಆಶ್ರಯದಲ್ಲಿ ಕೃತಿ ಬರಬೇಕಾಯಿತಲ್ಲ ಎಂಬ ಪಶ್ಚಾತ್ತಾಪ ನನ್ನನ್ನು ಇವತ್ತು ಕಾಡುತ್ತಿದೆ. ಇನ್ನು ಮುಂದೆ ಆ ಪುಸ್ತಕವನ್ನು ಮರಳಿ ಪ್ರಕಟಿಸುವಾಗ ನನ್ನ ಹೆಸರನ್ನು ತೆಗೆದುಹಾಕಿ ಎಂದು ಮಠಕ್ಕೆ ಹೇಳುತ್ತಿದ್ದೇನೆ” ಎಂದರು.

ಇಂದು ನಡೆಯುತ್ತಿರುವ ಅನಿಷ್ಠವನ್ನು ನೋಡುತ್ತಾ ಅನೇಕರು ಮನೆಯಲ್ಲಿ ಕೂತಿದ್ದಾರೆ. ಪಾಪಕೃತ್ಯವನ್ನು ನೋಡಿ ಸುಮ್ಮನಿದ್ದರೆ ಅದರಲ್ಲಿ ನಾವು ಕೂಡ ಭಾಗಿಯಾದಂತೆ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನಾವು ಧ್ವನಿ ಎತ್ತಬೇಕಿದೆ. ಬಿಲ್ಕಿಸ್ ಬಾನೋ ಪ್ರಕರಣದಿಂದ ಹಿಡಿದು, ಚಿತ್ರದುರ್ಗದ ಪ್ರಕರಣದವರೆಗೆ ನೋಡಿದರೆ ದೇಶ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...