Homeಕರ್ನಾಟಕಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

- Advertisement -
- Advertisement -

“ವಿದ್ಯಾಭ್ಯಾಸಕ್ಕಾಗಿ ತಬ್ಬಲಿ ಹಾಗೂ ಅನಾಥಮಕ್ಕಳು ಮಠಕ್ಕೆ ಸೇರಿದ್ದರು. ಮಕ್ಕಳನ್ನು ಲೈಂಗಿಕ ತೃಷೆಗಾಗಿ ಬಳಸಿರುವುದು ಅತ್ಯಂತ ಹೇಯಕೃತ್ಯ. ಈ ಕೆಲಸವನ್ನು ಮನುಷ್ಯರಾದವರು ಮಾಡುವುದಿಲ್ಲ” ಎಂದು ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಹೇಳಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

ಮಠಾಧೀಶರ ನೈತಿಕತೆ ಬಹಳ ಹೀನಾಯ ಸ್ಥಿತಿಗೆ ತಲುಪಿದೆ. ಮಠಗಳು ಎಂದರೆ ಜಾತೀವಾದಿ ರಾಜಕೀಯ ಕೇಂದ್ರಗಳಾಗಿವೆ. ಒಳ್ಳೆಯ ಸ್ವಾಮೀಜಿಗಳಿರಬಹುದು. ಆದರೆ ಬಹುತೇಕ ಮಠಗಳು ರಾಜಕೀಯದ ಆಡಂಬೊಲ ಆಗಿವೆ. ತಳ ಸಮುದಾಯಗಳನ್ನು ತುಳಿಯುವ ಕೆಲಸಕ್ಕೆ ಈ ಮಠಗಳನ್ನು ಬಳಸುತ್ತಿದ್ದಾರೆ ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುರಂತವೇನೆಂದರೆ ಇಡೀ ಬಿಜೆಪಿಯ ರಾಜಕೀಯ ಧುರೀಣರು, ಸರ್ಕಾರ, ಪೊಲೀಸರು ನಡೆಸಿಕೊಂಡಿರುವ ರೀತಿ ಸಂವಿಧಾನವನ್ನು ಅಪಮಾನ ಮಾಡುವಂತಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುತ್ತಾರೆ. ಆದರೆ ಒಬ್ಬ ಮಠಾಧೀಶನನ್ನು ಬಂಧಿಸಲು ಇಷ್ಟು ದಿನ ಕಾಯಬೇಕಾಯಿತು. ಸಾಮಾನ್ಯ ಜನರಾಗಿದ್ದಾರೆ ಒದ್ದು ಒಳಗಡೆ ಹಾಕುತ್ತಾರೆ. ಆದರೆ ಒಬ್ಬ ಹೈ ಪ್ರೊಫೈಲ್‌  ಸ್ವಾಮೀಜಿಯನ್ನು ಬಂಧಿಸಬೇಕು ಅಂದರೆ ದಿನಗಟ್ಟಲೆ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಳ್ಳಿ ಶಂಕರ್‌

ಬಡವರನ್ನು ನೋಡಿದರೆ ಕಾನೂನು ಹೂಂಕರಿಸುತ್ತದೆ. ಶ್ರೀಮಂತರನ್ನು ನೋಡಿದರೆ ಮಂಡಿಯೂರುತ್ತೆ. ಇದಾಗಬಾರದು. ಈಗ ಸ್ವಾಮೀಜಿಯ ಬಂಧನವಾಗಿದೆ. ಕಾನೂನಿನ ಪ್ರಕ್ರಿಯೆ ನಡೆಯಲಿ. ಅದರಿಂದ ಎಸ್‌.ಐ.ಟಿ. ರಚನೆಯಾಗಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ನಡೆಯಬೇಕು. ತಮಿಳುನಾಡು ಅಥವಾ ಕೇರಳಕ್ಕೆ ವರ್ಗಾವಣೆ ಆಗಬೇಕು. ರಾಜ್ಯದಲ್ಲಿ ತನಿಖೆಯಾದರೆ ಅದರ ಮೇಲೆ ಪ್ರಭಾವ ಬೀರುವ ಎಲ್ಲ ಹುನ್ನಾರಗಳನ್ನು ಇವರು ಮಾಡುತ್ತಾರೆ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಬಿಲ್ಕಿಸ್ ಬಾನೋ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ಆದ ಕಾರಣ ಅಪರಾಧಿಗಳಿಗೆ ಶಿಕ್ಷೆಯಾಯಿತು. ಒಂದು ವೇಳೆ ಗುಜರಾತ್‌ನಲ್ಲಿಯೇ ಪ್ರಕರಣ ತನಿಖೆಯಾಗಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಹೊರಗೆ ಬಿಡಲಾಗಿದೆ. ನ್ಯಾಯಾಂಗವೂ ಇದಕ್ಕೆ ಇಂಬು ಕೊಡುತ್ತಿದೆ ಅನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಭಾಷಣ ಮಾಡಿದ ದಿನವೇ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಯಿತು ಎಂದರು.

ಕೃತಿಯಲ್ಲಿ ಹೆಸರು ತೆಗೆದುಹಾಕಿ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಪಶ್ಚಾತ್ತಾಪದಲ್ಲಿ ನರಳುವಂತಹ ಸ್ಥಿತಿ ನನಗೆ ಬಂದಿದೆ. ಆ ಮಠ ಹೊರತಂದ ‘ವಚನ ಮಾರ್ಗ’ ಎಂಬ ಪುಸ್ತಕಕ್ಕೆ ನಾನು ಸಂಪಾದಕನಾಗಿದ್ದೆ. ಇದಕ್ಕೆ ನನಗೆ ಸಂಕೋಚ ಹಾಗೂ ಪಶ್ಚಾತ್ತಾಪವಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

“ಈ ಕೃತಿಯ ಸಂಪಾದಕರಾಗಿದ್ದವರು ನಮ್ಮೆಲ್ಲರ ಪೂಜ್ಯರಾಗಿದ್ದ ಎಂ.ಎಂ.ಕಲ್ಬುರ್ಗಿಯವರು. ಅಂತಹ ಪೂಜ್ಯರು ನಿರ್ವಹಿಸುತ್ತಿದ್ದ ಕಾರ್ಯ ನಿಂತುಹೋಗಿತ್ತು. ಆ ಜಾಗಕ್ಕೆ ಬರಬೇಕೆಂದು ಮರುಘಾ ಶರಣರು ನನ್ನನ್ನು ಕರೆದರು. ಕಲ್ಬುರ್ಗಿಯವರ ಮೇಲಿನ ಗೌರವದ ಕಾರಣಕ್ಕೆ ನಾನು ಕೆಲಸ ಮಾಡಿದೆ. ತುಂಬಾ ಸೊಗಸಾಗಿ ಕೃತಿ ಬಂದಿದ್ದರ ಬಗ್ಗೆ ಗೌರವವಿದೆ. ಆದರೆ ಇಂತಹ ಒಬ್ಬ ವ್ಯಕ್ತಿಯ ಆಶ್ರಯದಲ್ಲಿ ಕೃತಿ ಬರಬೇಕಾಯಿತಲ್ಲ ಎಂಬ ಪಶ್ಚಾತ್ತಾಪ ನನ್ನನ್ನು ಇವತ್ತು ಕಾಡುತ್ತಿದೆ. ಇನ್ನು ಮುಂದೆ ಆ ಪುಸ್ತಕವನ್ನು ಮರಳಿ ಪ್ರಕಟಿಸುವಾಗ ನನ್ನ ಹೆಸರನ್ನು ತೆಗೆದುಹಾಕಿ ಎಂದು ಮಠಕ್ಕೆ ಹೇಳುತ್ತಿದ್ದೇನೆ” ಎಂದರು.

ಇಂದು ನಡೆಯುತ್ತಿರುವ ಅನಿಷ್ಠವನ್ನು ನೋಡುತ್ತಾ ಅನೇಕರು ಮನೆಯಲ್ಲಿ ಕೂತಿದ್ದಾರೆ. ಪಾಪಕೃತ್ಯವನ್ನು ನೋಡಿ ಸುಮ್ಮನಿದ್ದರೆ ಅದರಲ್ಲಿ ನಾವು ಕೂಡ ಭಾಗಿಯಾದಂತೆ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನಾವು ಧ್ವನಿ ಎತ್ತಬೇಕಿದೆ. ಬಿಲ್ಕಿಸ್ ಬಾನೋ ಪ್ರಕರಣದಿಂದ ಹಿಡಿದು, ಚಿತ್ರದುರ್ಗದ ಪ್ರಕರಣದವರೆಗೆ ನೋಡಿದರೆ ದೇಶ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...