Homeಕರ್ನಾಟಕಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

- Advertisement -
- Advertisement -

“ವಿದ್ಯಾಭ್ಯಾಸಕ್ಕಾಗಿ ತಬ್ಬಲಿ ಹಾಗೂ ಅನಾಥಮಕ್ಕಳು ಮಠಕ್ಕೆ ಸೇರಿದ್ದರು. ಮಕ್ಕಳನ್ನು ಲೈಂಗಿಕ ತೃಷೆಗಾಗಿ ಬಳಸಿರುವುದು ಅತ್ಯಂತ ಹೇಯಕೃತ್ಯ. ಈ ಕೆಲಸವನ್ನು ಮನುಷ್ಯರಾದವರು ಮಾಡುವುದಿಲ್ಲ” ಎಂದು ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಹೇಳಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

ಮಠಾಧೀಶರ ನೈತಿಕತೆ ಬಹಳ ಹೀನಾಯ ಸ್ಥಿತಿಗೆ ತಲುಪಿದೆ. ಮಠಗಳು ಎಂದರೆ ಜಾತೀವಾದಿ ರಾಜಕೀಯ ಕೇಂದ್ರಗಳಾಗಿವೆ. ಒಳ್ಳೆಯ ಸ್ವಾಮೀಜಿಗಳಿರಬಹುದು. ಆದರೆ ಬಹುತೇಕ ಮಠಗಳು ರಾಜಕೀಯದ ಆಡಂಬೊಲ ಆಗಿವೆ. ತಳ ಸಮುದಾಯಗಳನ್ನು ತುಳಿಯುವ ಕೆಲಸಕ್ಕೆ ಈ ಮಠಗಳನ್ನು ಬಳಸುತ್ತಿದ್ದಾರೆ ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುರಂತವೇನೆಂದರೆ ಇಡೀ ಬಿಜೆಪಿಯ ರಾಜಕೀಯ ಧುರೀಣರು, ಸರ್ಕಾರ, ಪೊಲೀಸರು ನಡೆಸಿಕೊಂಡಿರುವ ರೀತಿ ಸಂವಿಧಾನವನ್ನು ಅಪಮಾನ ಮಾಡುವಂತಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುತ್ತಾರೆ. ಆದರೆ ಒಬ್ಬ ಮಠಾಧೀಶನನ್ನು ಬಂಧಿಸಲು ಇಷ್ಟು ದಿನ ಕಾಯಬೇಕಾಯಿತು. ಸಾಮಾನ್ಯ ಜನರಾಗಿದ್ದಾರೆ ಒದ್ದು ಒಳಗಡೆ ಹಾಕುತ್ತಾರೆ. ಆದರೆ ಒಬ್ಬ ಹೈ ಪ್ರೊಫೈಲ್‌  ಸ್ವಾಮೀಜಿಯನ್ನು ಬಂಧಿಸಬೇಕು ಅಂದರೆ ದಿನಗಟ್ಟಲೆ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಳ್ಳಿ ಶಂಕರ್‌

ಬಡವರನ್ನು ನೋಡಿದರೆ ಕಾನೂನು ಹೂಂಕರಿಸುತ್ತದೆ. ಶ್ರೀಮಂತರನ್ನು ನೋಡಿದರೆ ಮಂಡಿಯೂರುತ್ತೆ. ಇದಾಗಬಾರದು. ಈಗ ಸ್ವಾಮೀಜಿಯ ಬಂಧನವಾಗಿದೆ. ಕಾನೂನಿನ ಪ್ರಕ್ರಿಯೆ ನಡೆಯಲಿ. ಅದರಿಂದ ಎಸ್‌.ಐ.ಟಿ. ರಚನೆಯಾಗಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ನಡೆಯಬೇಕು. ತಮಿಳುನಾಡು ಅಥವಾ ಕೇರಳಕ್ಕೆ ವರ್ಗಾವಣೆ ಆಗಬೇಕು. ರಾಜ್ಯದಲ್ಲಿ ತನಿಖೆಯಾದರೆ ಅದರ ಮೇಲೆ ಪ್ರಭಾವ ಬೀರುವ ಎಲ್ಲ ಹುನ್ನಾರಗಳನ್ನು ಇವರು ಮಾಡುತ್ತಾರೆ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಬಿಲ್ಕಿಸ್ ಬಾನೋ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ಆದ ಕಾರಣ ಅಪರಾಧಿಗಳಿಗೆ ಶಿಕ್ಷೆಯಾಯಿತು. ಒಂದು ವೇಳೆ ಗುಜರಾತ್‌ನಲ್ಲಿಯೇ ಪ್ರಕರಣ ತನಿಖೆಯಾಗಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಹೊರಗೆ ಬಿಡಲಾಗಿದೆ. ನ್ಯಾಯಾಂಗವೂ ಇದಕ್ಕೆ ಇಂಬು ಕೊಡುತ್ತಿದೆ ಅನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಭಾಷಣ ಮಾಡಿದ ದಿನವೇ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಯಿತು ಎಂದರು.

ಕೃತಿಯಲ್ಲಿ ಹೆಸರು ತೆಗೆದುಹಾಕಿ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಪಶ್ಚಾತ್ತಾಪದಲ್ಲಿ ನರಳುವಂತಹ ಸ್ಥಿತಿ ನನಗೆ ಬಂದಿದೆ. ಆ ಮಠ ಹೊರತಂದ ‘ವಚನ ಮಾರ್ಗ’ ಎಂಬ ಪುಸ್ತಕಕ್ಕೆ ನಾನು ಸಂಪಾದಕನಾಗಿದ್ದೆ. ಇದಕ್ಕೆ ನನಗೆ ಸಂಕೋಚ ಹಾಗೂ ಪಶ್ಚಾತ್ತಾಪವಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

“ಈ ಕೃತಿಯ ಸಂಪಾದಕರಾಗಿದ್ದವರು ನಮ್ಮೆಲ್ಲರ ಪೂಜ್ಯರಾಗಿದ್ದ ಎಂ.ಎಂ.ಕಲ್ಬುರ್ಗಿಯವರು. ಅಂತಹ ಪೂಜ್ಯರು ನಿರ್ವಹಿಸುತ್ತಿದ್ದ ಕಾರ್ಯ ನಿಂತುಹೋಗಿತ್ತು. ಆ ಜಾಗಕ್ಕೆ ಬರಬೇಕೆಂದು ಮರುಘಾ ಶರಣರು ನನ್ನನ್ನು ಕರೆದರು. ಕಲ್ಬುರ್ಗಿಯವರ ಮೇಲಿನ ಗೌರವದ ಕಾರಣಕ್ಕೆ ನಾನು ಕೆಲಸ ಮಾಡಿದೆ. ತುಂಬಾ ಸೊಗಸಾಗಿ ಕೃತಿ ಬಂದಿದ್ದರ ಬಗ್ಗೆ ಗೌರವವಿದೆ. ಆದರೆ ಇಂತಹ ಒಬ್ಬ ವ್ಯಕ್ತಿಯ ಆಶ್ರಯದಲ್ಲಿ ಕೃತಿ ಬರಬೇಕಾಯಿತಲ್ಲ ಎಂಬ ಪಶ್ಚಾತ್ತಾಪ ನನ್ನನ್ನು ಇವತ್ತು ಕಾಡುತ್ತಿದೆ. ಇನ್ನು ಮುಂದೆ ಆ ಪುಸ್ತಕವನ್ನು ಮರಳಿ ಪ್ರಕಟಿಸುವಾಗ ನನ್ನ ಹೆಸರನ್ನು ತೆಗೆದುಹಾಕಿ ಎಂದು ಮಠಕ್ಕೆ ಹೇಳುತ್ತಿದ್ದೇನೆ” ಎಂದರು.

ಇಂದು ನಡೆಯುತ್ತಿರುವ ಅನಿಷ್ಠವನ್ನು ನೋಡುತ್ತಾ ಅನೇಕರು ಮನೆಯಲ್ಲಿ ಕೂತಿದ್ದಾರೆ. ಪಾಪಕೃತ್ಯವನ್ನು ನೋಡಿ ಸುಮ್ಮನಿದ್ದರೆ ಅದರಲ್ಲಿ ನಾವು ಕೂಡ ಭಾಗಿಯಾದಂತೆ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನಾವು ಧ್ವನಿ ಎತ್ತಬೇಕಿದೆ. ಬಿಲ್ಕಿಸ್ ಬಾನೋ ಪ್ರಕರಣದಿಂದ ಹಿಡಿದು, ಚಿತ್ರದುರ್ಗದ ಪ್ರಕರಣದವರೆಗೆ ನೋಡಿದರೆ ದೇಶ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...