Homeಕರ್ನಾಟಕಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

- Advertisement -
- Advertisement -

“ವಿದ್ಯಾಭ್ಯಾಸಕ್ಕಾಗಿ ತಬ್ಬಲಿ ಹಾಗೂ ಅನಾಥಮಕ್ಕಳು ಮಠಕ್ಕೆ ಸೇರಿದ್ದರು. ಮಕ್ಕಳನ್ನು ಲೈಂಗಿಕ ತೃಷೆಗಾಗಿ ಬಳಸಿರುವುದು ಅತ್ಯಂತ ಹೇಯಕೃತ್ಯ. ಈ ಕೆಲಸವನ್ನು ಮನುಷ್ಯರಾದವರು ಮಾಡುವುದಿಲ್ಲ” ಎಂದು ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್‌ ಹೇಳಿದರು.

ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು ಜೈಲಿಗೆ ಕಳುಹಿಸುವಂತೆ ಆಗ್ರಹಿಸಿ, ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ವೇಳೆ ಅವರು ಮಾತನಾಡಿದರು.

ಮಠಾಧೀಶರ ನೈತಿಕತೆ ಬಹಳ ಹೀನಾಯ ಸ್ಥಿತಿಗೆ ತಲುಪಿದೆ. ಮಠಗಳು ಎಂದರೆ ಜಾತೀವಾದಿ ರಾಜಕೀಯ ಕೇಂದ್ರಗಳಾಗಿವೆ. ಒಳ್ಳೆಯ ಸ್ವಾಮೀಜಿಗಳಿರಬಹುದು. ಆದರೆ ಬಹುತೇಕ ಮಠಗಳು ರಾಜಕೀಯದ ಆಡಂಬೊಲ ಆಗಿವೆ. ತಳ ಸಮುದಾಯಗಳನ್ನು ತುಳಿಯುವ ಕೆಲಸಕ್ಕೆ ಈ ಮಠಗಳನ್ನು ಬಳಸುತ್ತಿದ್ದಾರೆ ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದುರಂತವೇನೆಂದರೆ ಇಡೀ ಬಿಜೆಪಿಯ ರಾಜಕೀಯ ಧುರೀಣರು, ಸರ್ಕಾರ, ಪೊಲೀಸರು ನಡೆಸಿಕೊಂಡಿರುವ ರೀತಿ ಸಂವಿಧಾನವನ್ನು ಅಪಮಾನ ಮಾಡುವಂತಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುತ್ತಾರೆ. ಆದರೆ ಒಬ್ಬ ಮಠಾಧೀಶನನ್ನು ಬಂಧಿಸಲು ಇಷ್ಟು ದಿನ ಕಾಯಬೇಕಾಯಿತು. ಸಾಮಾನ್ಯ ಜನರಾಗಿದ್ದಾರೆ ಒದ್ದು ಒಳಗಡೆ ಹಾಕುತ್ತಾರೆ. ಆದರೆ ಒಬ್ಬ ಹೈ ಪ್ರೊಫೈಲ್‌  ಸ್ವಾಮೀಜಿಯನ್ನು ಬಂಧಿಸಬೇಕು ಅಂದರೆ ದಿನಗಟ್ಟಲೆ ತೆಗೆದುಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಳ್ಳಿ ಶಂಕರ್‌

ಬಡವರನ್ನು ನೋಡಿದರೆ ಕಾನೂನು ಹೂಂಕರಿಸುತ್ತದೆ. ಶ್ರೀಮಂತರನ್ನು ನೋಡಿದರೆ ಮಂಡಿಯೂರುತ್ತೆ. ಇದಾಗಬಾರದು. ಈಗ ಸ್ವಾಮೀಜಿಯ ಬಂಧನವಾಗಿದೆ. ಕಾನೂನಿನ ಪ್ರಕ್ರಿಯೆ ನಡೆಯಲಿ. ಅದರಿಂದ ಎಸ್‌.ಐ.ಟಿ. ರಚನೆಯಾಗಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ನಡೆಯಬೇಕು. ತಮಿಳುನಾಡು ಅಥವಾ ಕೇರಳಕ್ಕೆ ವರ್ಗಾವಣೆ ಆಗಬೇಕು. ರಾಜ್ಯದಲ್ಲಿ ತನಿಖೆಯಾದರೆ ಅದರ ಮೇಲೆ ಪ್ರಭಾವ ಬೀರುವ ಎಲ್ಲ ಹುನ್ನಾರಗಳನ್ನು ಇವರು ಮಾಡುತ್ತಾರೆ. ಆದ್ದರಿಂದ ಇಡೀ ಪ್ರಕರಣದ ತನಿಖೆಯನ್ನು ಹೊರರಾಜ್ಯಕ್ಕೆ ವರ್ಗಾವಣೆ ಮಾಡಬೇಕು. ಬಿಲ್ಕಿಸ್ ಬಾನೋ ಪ್ರಕರಣದ ತನಿಖೆ ಹೊರರಾಜ್ಯದಲ್ಲಿ ಆದ ಕಾರಣ ಅಪರಾಧಿಗಳಿಗೆ ಶಿಕ್ಷೆಯಾಯಿತು. ಒಂದು ವೇಳೆ ಗುಜರಾತ್‌ನಲ್ಲಿಯೇ ಪ್ರಕರಣ ತನಿಖೆಯಾಗಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಮುರುಘಾ ಮಠದ ಬಾಲಕಿಯರ ಅತ್ಯಾಚಾರ ಪ್ರಕರಣ: 2ನೇ ಆರೋಪಿ ವಾರ್ಡನ್‌ ರಶ್ಮಿ ಬಂಧನ

ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳನ್ನು ಹೊರಗೆ ಬಿಡಲಾಗಿದೆ. ನ್ಯಾಯಾಂಗವೂ ಇದಕ್ಕೆ ಇಂಬು ಕೊಡುತ್ತಿದೆ ಅನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿ ಬಗ್ಗೆ ಮಾತನಾಡುತ್ತಾರೆ. ಆದರೆ ಭಾಷಣ ಮಾಡಿದ ದಿನವೇ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಯಿತು ಎಂದರು.

ಕೃತಿಯಲ್ಲಿ ಹೆಸರು ತೆಗೆದುಹಾಕಿ: ಪ್ರೊ.ಎಸ್.ಜಿ. ಸಿದ್ದರಾಮಯ್ಯ

ಚಿಂತಕ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, “ಪಶ್ಚಾತ್ತಾಪದಲ್ಲಿ ನರಳುವಂತಹ ಸ್ಥಿತಿ ನನಗೆ ಬಂದಿದೆ. ಆ ಮಠ ಹೊರತಂದ ‘ವಚನ ಮಾರ್ಗ’ ಎಂಬ ಪುಸ್ತಕಕ್ಕೆ ನಾನು ಸಂಪಾದಕನಾಗಿದ್ದೆ. ಇದಕ್ಕೆ ನನಗೆ ಸಂಕೋಚ ಹಾಗೂ ಪಶ್ಚಾತ್ತಾಪವಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿದರು.

“ಈ ಕೃತಿಯ ಸಂಪಾದಕರಾಗಿದ್ದವರು ನಮ್ಮೆಲ್ಲರ ಪೂಜ್ಯರಾಗಿದ್ದ ಎಂ.ಎಂ.ಕಲ್ಬುರ್ಗಿಯವರು. ಅಂತಹ ಪೂಜ್ಯರು ನಿರ್ವಹಿಸುತ್ತಿದ್ದ ಕಾರ್ಯ ನಿಂತುಹೋಗಿತ್ತು. ಆ ಜಾಗಕ್ಕೆ ಬರಬೇಕೆಂದು ಮರುಘಾ ಶರಣರು ನನ್ನನ್ನು ಕರೆದರು. ಕಲ್ಬುರ್ಗಿಯವರ ಮೇಲಿನ ಗೌರವದ ಕಾರಣಕ್ಕೆ ನಾನು ಕೆಲಸ ಮಾಡಿದೆ. ತುಂಬಾ ಸೊಗಸಾಗಿ ಕೃತಿ ಬಂದಿದ್ದರ ಬಗ್ಗೆ ಗೌರವವಿದೆ. ಆದರೆ ಇಂತಹ ಒಬ್ಬ ವ್ಯಕ್ತಿಯ ಆಶ್ರಯದಲ್ಲಿ ಕೃತಿ ಬರಬೇಕಾಯಿತಲ್ಲ ಎಂಬ ಪಶ್ಚಾತ್ತಾಪ ನನ್ನನ್ನು ಇವತ್ತು ಕಾಡುತ್ತಿದೆ. ಇನ್ನು ಮುಂದೆ ಆ ಪುಸ್ತಕವನ್ನು ಮರಳಿ ಪ್ರಕಟಿಸುವಾಗ ನನ್ನ ಹೆಸರನ್ನು ತೆಗೆದುಹಾಕಿ ಎಂದು ಮಠಕ್ಕೆ ಹೇಳುತ್ತಿದ್ದೇನೆ” ಎಂದರು.

ಇಂದು ನಡೆಯುತ್ತಿರುವ ಅನಿಷ್ಠವನ್ನು ನೋಡುತ್ತಾ ಅನೇಕರು ಮನೆಯಲ್ಲಿ ಕೂತಿದ್ದಾರೆ. ಪಾಪಕೃತ್ಯವನ್ನು ನೋಡಿ ಸುಮ್ಮನಿದ್ದರೆ ಅದರಲ್ಲಿ ನಾವು ಕೂಡ ಭಾಗಿಯಾದಂತೆ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನಾವು ಧ್ವನಿ ಎತ್ತಬೇಕಿದೆ. ಬಿಲ್ಕಿಸ್ ಬಾನೋ ಪ್ರಕರಣದಿಂದ ಹಿಡಿದು, ಚಿತ್ರದುರ್ಗದ ಪ್ರಕರಣದವರೆಗೆ ನೋಡಿದರೆ ದೇಶ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....