Homeಚಳವಳಿಉಸ್ಮಾನಿಯಾ ಕ್ರಾಂತಿಕಿಡಿಯ ಬಯೋಪಿಕ್ “ಜಾರ್ಜ್ ರೆಡ್ಡಿ" ಸಿನೆಮಾ...

ಉಸ್ಮಾನಿಯಾ ಕ್ರಾಂತಿಕಿಡಿಯ ಬಯೋಪಿಕ್ “ಜಾರ್ಜ್ ರೆಡ್ಡಿ” ಸಿನೆಮಾ…

- Advertisement -
- Advertisement -

ವಿದ್ಯಾರ್ಥಿ ಹೋರಾಟಗಳ ತವರಿನಂತಿದ್ದ ಉಸ್ಮಾನಿಯಾ ಯುನಿವರ್ಸಿಟಿಯ ಕ್ರಾಂತಿಕಾರಿ ಚಿಂತನೆಯುಳ್ಳ, ವಿದ್ಯಾರ್ಥಿ ಹೋರಾಟಗಾರ ಜಾರ್ಜ್‌ ರೆಡ್ಡಿಯ ಜೀವನಾಧಾರಿತ ಸಿನೆಮಾ ತೆಲುಗಿನಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತೆಲಂಗಾಣದಲ್ಲಿರುವ ಉಸ್ಮಾನಿಯ ವಿವಿಯಲ್ಲಿ ಓದುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಪೂರ್ತಿಯಾಗಬಲ್ಲಂತಹ ವಿದ್ಯಾರ್ಥಿ ಹೋರಾಟಗಾರ ಜಾರ್ಜ್‍ರೆಡ್ಡಿ. 1965ರಿಂದ 1975ರವರೆಗೂ ಉಸ್ಮಾನಿಯಾ ವಿವಿಯಲ್ಲಿ ಓದಿದ ಈತನ ಚರಿತ್ರೆಯೇ ವಿಶಿಷ್ಟವಾದುದು. ಆತ ಮಾಡಿದ ವಿದ್ಯಾರ್ಥಿ ಹಕ್ಕುಗಳಿಗಾಗಿನ ಹೋರಾಟ ಮತ್ತು ಅಲ್ಲಿ ನಡೆದ ಘಟನೆಗಳನ್ನಾಧರಿಸಿ ಈ ಬಯೋಪಿಕ್ ತಯಾರಾಗಿದೆ.

ಓದಿನಲ್ಲಿ ಚಿನ್ನದ ಪದಕವನ್ನು ಕೊರಳಿಗಿಳಿಸಿಕೊಂಡಿದ್ದ ಈತ ಬಾಕ್ಸಿಂಗ್‍ನಲ್ಲಿ ಉತ್ತಮ ಕ್ರೀಡಾಪಟು ಕೂಡ ಆಗಿದ್ದವನು. ಕ್ರಾಂತಿಕಾರಿ ಭಗತ್‍ಸಿಂಗ್ ನಂತಹ ಯುವ ಸ್ವಾತಂತ್ರ್ಯ ಹೋರಾಟಗಾರರ ಚಿಂತನೆಗಳಿಂದ ಜಾರ್ಜ್‍ರೆಡ್ಡಿ ಪ್ರೋಗ್ರೇಸಿವ್ ಡೆಮಾಕ್ರೇಟಿಕ್ ಸ್ಟೂಡೆಂಟ್ ಫೆಡರೇಷನ್(ಪಿಡಿಎಸ್‍ಯು) ಎಂಬ ವಿದ್ಯಾರ್ಥಿ ಸಂಘಟನೆಯನ್ನು ಸ್ಥಾಪಿಸಿದ್ದರು.

ದೌರ್ಜನ್ಯಗಳನ್ನು ಶೋಷಣೆಯನ್ನು ನೇರವಾಗಿ ಖಂಡಿಸುತ್ತಿದ್ದ ಕಿಡಿ ಜಾರ್ಜ್‍ರೆಡ್ಡಿ. ಅಸಮಾನತೆಯ ವಿರುದ್ಧ ಯುವಜನರು ಸಂಕಲ್ಪ ತೊಟ್ಟು ಹೋರಾಟ ಮಾಡುವಂತೆ ಪ್ರೇರೇಪಿಸುತ್ತಿದ್ದ ಈತನನ್ನು ಆಂಧ್ರಪ್ರದೇಶದ ಚೇಗುವೇರಾ ಎಂದೇ ಕರೆಯಲಾಗುತ್ತಿತ್ತು.

ವಿದ್ಯಾರ್ಥಿ ಹಕ್ಕುಗಳು ಮತ್ತು ರಾಜಕಾರಣಿಗಳ ಮೋಸದ ಬಗ್ಗೆ ದನಿಯೆತ್ತಿದಾಗ ಈತನನ್ನು ಹಾಸ್ಟೆಲ್‍ನಲ್ಲಿ ಹತ್ಯೆ ಮಾಡಲಾಯಿತು. ಇಂತಹ ಯೂತ್‍ ಐಕಾನ್ ಬಗೆಗಿನ ಬಯೋಪಿಕ್ ಸಿನಿಮಾ ನಿರ್ಮಾಣವನ್ನು ಮಿಕ್ ಮೂವಿಸ್ ಸಂಸ್ಥೆಯ ಜೊತೆಗೂಡಿ ದಾಮುರೆಡ್ಡಿ ಮತ್ತು ಸುಧಾಕರ್ ಯಾಕ್ಕಂಟಿ ಮಾಡಿದ್ದಾರೆ. ಜಾರ್ಜ್‍ರೆಡ್ಡಿ ಪಾತ್ರವನ್ನು ಸಂದೀಪ್ ಕುಮಾರ್ ಅಭಿನಯಿದ್ದಾರೆ. ಈಗಾಗಲೇ ಟ್ರೈಲರ್ ಗಮನ ಸೆಳೆದಿದ್ದು, ವಿದ್ಯಾರ್ಥಿ ಹೋರಾಟಗಾರನೊಬ್ಬನ ಸಿನಿಮಾವನ್ನು ತೆರೆ ಮೇಲೆ ನೋಡಲು ಕಾತುರದಿಂದ ಕಾಯುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...