Homeಮುಖಪುಟಅಮೆರಿಕಾದ ಶೇ. 50ರಷ್ಟು ಸುಂಕದಿಂದ ಉಭಯ ದೇಶಗಳ ವ್ಯಾಪಾರಕ್ಕೆ ಹೊಡೆತ: ಬ್ರೆಜಿಲ್‌ನ ಭಾರತ ರಾಯಭಾರಿ

ಅಮೆರಿಕಾದ ಶೇ. 50ರಷ್ಟು ಸುಂಕದಿಂದ ಉಭಯ ದೇಶಗಳ ವ್ಯಾಪಾರಕ್ಕೆ ಹೊಡೆತ: ಬ್ರೆಜಿಲ್‌ನ ಭಾರತ ರಾಯಭಾರಿ

- Advertisement -
- Advertisement -

ನವದೆಹಲಿ: ಅಮೆರಿಕವು ಬ್ರೆಜಿಲ್ ಮತ್ತು ಭಾರತದಂತಹ ಪ್ರಮುಖ ವ್ಯಾಪಾರ ಪಾಲುದಾರರ ಮೇಲೆ ಶೇ. 50ರಷ್ಟು ಸುಂಕವನ್ನು ಹೇರಿದ ಬೆನ್ನಲ್ಲೇ, ಈ ಕ್ರಮಗಳು ಜಾಗತಿಕ ವ್ಯಾಪಾರಕ್ಕೆ ಗಂಭೀರ ಸವಾಲುಗಳನ್ನು ಒಡ್ಡಲಿವೆ ಎಂದು ಭಾರತದಲ್ಲಿನ ಬ್ರೆಜಿಲ್ ರಾಯಭಾರಿ ಕೆನೆತ್ ಫೆಲಿಕ್ಸ್ ಹಾಕ್ಝಿನ್ಸ್ಕಿ ಡಾ.ನೋಬ್ರೆಗಾ ಶನಿವಾರ ಎಚ್ಚರಿಸಿದ್ದಾರೆ. ಈ ಸುಂಕಗಳು ಬ್ರೆಜಿಲ್‌ನ ವ್ಯಾಪಾರದ ಮೇಲೆ “ಖಂಡಿತವಾಗಿ ಪರಿಣಾಮ ಬೀರುತ್ತವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರವು ಜಾಗತಿಕ ವ್ಯಾಪಾರ ಪರಿಸರದಲ್ಲಿ ಅನಿಶ್ಚಿತತೆಯನ್ನು ಹೆಚ್ಚಿಸಿದೆ. ಬ್ರೆಜಿಲ್‌ನೊಂದಿಗಿನ ಸುದೀರ್ಘ ಸಂಬಂಧದ ಬಗ್ಗೆ ಮಾತನಾಡಿದ ರಾಯಭಾರಿ, “ಅಮೆರಿಕದೊಂದಿಗಿನ ನಮ್ಮ 200 ವರ್ಷಗಳ ಹಳೆಯ ವ್ಯಾಪಾರ ಸಂಬಂಧಕ್ಕೆ ಈ ಸುಂಕಗಳು ಧಕ್ಕೆ ತರಲಿವೆ. ಆದರೆ, ನಮ್ಮ ಎರಡೂ ದೇಶಗಳ ಸಮಾಜಗಳ ನಡುವಿನ ಬಾಂಧವ್ಯವು ವ್ಯವಹಾರ, ಜನ ಮತ್ತು ಸಂಸ್ಕೃತಿಯ ಮೂಲಕ ಆಳವಾಗಿ ಬೇರೂರಿದೆ, ಮತ್ತು ಅದು ಮುಂದುವರಿಯುತ್ತದೆ,” ಎಂದು IANS ಜೊತೆಗಿನ ಸಂದರ್ಶನದಲ್ಲಿ ತಿಳಿಸಿದರು.

ಈ ಸುಂಕದ ಕುರಿತು ಭಾರತದ ಪರಿಸ್ಥಿತಿಯನ್ನೂ ಉಲ್ಲೇಖಿಸಿದ ಅವರು, ಅಮೆರಿಕವು ಭಾರತದ ಆಮದುಗಳ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕ ವಿಧಿಸಿದ್ದು, ಒಟ್ಟು ಸುಂಕದ ಪ್ರಮಾಣ ಶೇ. 50ಕ್ಕೆ ಏರಿದೆ. ಇದು ಅಮೆರಿಕದ ಪ್ರಮುಖ ವ್ಯಾಪಾರ ಪಾಲುದಾರರ ಪೈಕಿ ಅತ್ಯಂತ ಹೆಚ್ಚಿನ ಸುಂಕವಾಗಿದೆ. ಭಾರತದ ವಿರುದ್ಧದ ಈ ಕ್ರಮಕ್ಕೆ ರಷ್ಯಾದಿಂದ ತೈಲ ಆಮದು ಮುಂದುವರೆಸಿರುವುದನ್ನು ಕಾರಣ ಎಂದು ಹೇಳಲಾಗಿದ್ದು, ಬ್ರೆಜಿಲ್ ಮೇಲಿನ ಸುಂಕಕ್ಕೆ ಅಲ್ಲಿನ ರಾಜಕೀಯ ಬೆಳವಣಿಗೆಗಳು ಕಾರಣ ಎಂದು ವರದಿಯಾಗಿದೆ. ಈ ಪರಿಸ್ಥಿತಿಯು ಜಾಗತಿಕ ವ್ಯಾಪಾರ ವ್ಯವಸ್ಥೆಗೆ ಒಡ್ಡುತ್ತಿರುವ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಬ್ರೆಜಿಲ್ ನಾಯಕರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ರಾಯಭಾರಿ ಹೇಳಿದರು.

ಬ್ರೆಜಿಲ್ ಅಧ್ಯಕ್ಷ ಲೂಲಾ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಡುವಿನ ಇತ್ತೀಚಿನ ಮಾತುಕತೆಯನ್ನು ಡಾ ನೋಬ್ರೆಗಾ ಈ ಸಂದರ್ಭದಲ್ಲಿ ನೆನಪಿಸಿಕೊಂಡರು. “ಅಧ್ಯಕ್ಷ ಲೂಲಾ ಅವರು ಪ್ರಧಾನಮಂತ್ರಿ ಮೋದಿಗೆ ಕರೆ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ದ್ವಿಪಕ್ಷೀಯ ಸಂಬಂಧಗಳ ಭವಿಷ್ಯದ ಬಗ್ಗೆ ಚರ್ಚಿಸಿದರು. ಇಂತಹ ಏಕಪಕ್ಷೀಯ ನಿರ್ಧಾರಗಳಿಂದಾಗಿ ಜಾಗತಿಕ ವ್ಯಾಪಾರ ಅನಿರೀಕ್ಷಿತವಾಗಿದೆ. ಈ ಸವಾಲುಗಳನ್ನು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಹೊಸ ಅವಕಾಶಗಳಾಗಿ ಪರಿವರ್ತಿಸುವುದು ಅವರ ಸಂಭಾಷಣೆಯ ಮುಖ್ಯ ಉದ್ದೇಶವಾಗಿತ್ತು,” ಎಂದು ಅವರು ವಿವರಿಸಿದರು. ಪ್ರಧಾನಿಯವರ ಇತ್ತೀಚಿನ ಬ್ರೆಜಿಲ್ ಭೇಟಿಯಲ್ಲಿ ಉಭಯ ನಾಯಕರು ಮುಂದಿನ ದಶಕದ ಆರ್ಥಿಕ ಸಂಬಂಧಗಳಿಗೆ ನಿರ್ದಿಷ್ಟ ಮಾರ್ಗಸೂಚಿ ರೂಪಿಸಿದ್ದಾರೆ ಎಂದು ಅವರು ತಿಳಿಸಿದರು.

ಅಮೆರಿಕದ ಸುಂಕಗಳಿಗೆ ಪ್ರತಿಕ್ರಿಯೆ ನೀಡುವ ವಿಷಯದಲ್ಲಿ, ಪ್ರತೀಕಾರದ ಕ್ರಮಗಳಿಗಿಂತ ಸಹಕಾರವೇ ಸೂಕ್ತ ಮಾರ್ಗ ಎಂದು ಡಾ ನೋಬ್ರೆಗಾ ಒತ್ತಿ ಹೇಳಿದರು. “ನಾವು ಯಾವುದೇ ದೇಶಕ್ಕೆ ಪ್ರತಿಕ್ರಿಯೆ ನೀಡುವ ಬಗ್ಗೆ ಮಾತನಾಡುತ್ತಿಲ್ಲ. ಬದಲಾಗಿ, ಈ ಅನಿಶ್ಚಿತ ಭೌಗೋಳಿಕ-ರಾಜಕೀಯ ಸನ್ನಿವೇಶದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಮತ್ತು ಬ್ರೆಜಿಲ್ ಹೇಗೆ ಒಟ್ಟಾಗಿ ಕೆಲಸ ಮಾಡಬಹುದು ಎಂಬುದರ ಬಗ್ಗೆ ನಾವು ಚರ್ಚಿಸಿದ್ದೇವೆ. ಇದು ನಮ್ಮ ಪಾಲುದಾರಿಕೆಯನ್ನು ಬಲಪಡಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುವ ವಿಷಯವಾಗಿದೆ,” ಎಂದು ಅವರು ಹೇಳಿದರು.

ಅಮೆರಿಕವು ಸುಂಕಗಳನ್ನು ಹಿಂಪಡೆಯಲು ಮುಂದಾಗದಿದ್ದರೆ ಬ್ರೆಜಿಲ್‌ನ ಪ್ರತಿಕ್ರಿಯೆ ಏನು ಎಂದು ಕೇಳಿದಾಗ, ರಾಯಭಾರಿ ಮಾತುಕತೆಗೆ ಬ್ರೆಜಿಲ್ ಸಿದ್ಧವಿದೆ ಎಂದು ದೃಢಪಡಿಸಿದರು, ಆದರೆ ಅದಕ್ಕೆ ಕೆಲವು ಮಿತಿಗಳಿವೆ ಎಂದು ಸ್ಪಷ್ಟಪಡಿಸಿದರು. “ನಾವು ಯಾವಾಗಲೂ ಮಾತುಕತೆಗೆ ಮುಕ್ತರಾಗಿದ್ದೇವೆ. ನಮ್ಮ ಸಾರ್ವಭೌಮತ್ವವು ಚರ್ಚೆಗೆ ಒಳಪಡುವುದಿಲ್ಲ. ಇದು ಬಹಳ ಸ್ಪಷ್ಟ. ಆದರೆ, ಅಮೆರಿಕದ ಆರ್ಥಿಕ ಕ್ರಮಗಳ ಬಗ್ಗೆ ನಾವು ಮುಕ್ತವಾಗಿ ಮಾತುಕತೆ ನಡೆಸುತ್ತೇವೆ. ಚರ್ಚಿಸಲಾಗದ ಕೆಲವು ವಿಷಯಗಳಿವೆ” ಎಂದು ಅವರು ಹೇಳಿದರು.

ಅಧ್ಯಕ್ಷ ಲೂಲಾ ಅವರು ವಿಶ್ವ ವ್ಯಾಪಾರ ಸಂಸ್ಥೆ (WTO) ಗೆ ಅಮೆರಿಕದ ಸುಂಕ ಕ್ರಮವನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಡಾ ನೋಬ್ರೆಗಾ, ಬ್ರೆಜಿಲ್ ಅಂತರರಾಷ್ಟ್ರೀಯ ಕಾನೂನುಗಳಿಗೆ ಯಾವಾಗಲೂ ಬದ್ಧವಾಗಿದೆ ಎಂದು ತಿಳಿಸಿದರು. “WTO ಒಪ್ಪಂದಗಳು ಮತ್ತು ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯು ನಮ್ಮ ಮೂಲಭೂತ ಚೌಕಟ್ಟಾಗಿದೆ. ಅಮೆರಿಕವು ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ನಾವು ಅಧಿಕೃತ ಘೋಷಣೆಯನ್ನು ಸಲ್ಲಿಸಿದ್ದೇವೆ,” ಎಂದು ಅವರು ಹೇಳಿದರು.

ಅಂತಿಮವಾಗಿ, ಅಮೆರಿಕದ ನಿಲುವಿನ ಹಿಂದಿನ ಉದ್ದೇಶಗಳನ್ನು ಬ್ರೆಜಿಲ್ ಇನ್ನೂ ಪರಿಶೀಲನೆ ಮಾಡುತ್ತಿದೆ ಎಂದು ರಾಯಭಾರಿ ತಿಳಿಸಿದರು. “ನಾವು ಅಮೆರಿಕ ಸರ್ಕಾರದ ಈ ನಿಲುವಿನ ಹಿಂದಿನ ಕಾರಣಗಳ ಬಗ್ಗೆ ವಿಶ್ಲೇಷಣೆ ನಡೆಸುತ್ತಿದ್ದೇವೆ. ನಮ್ಮ ಆರ್ಥಿಕತೆ ಮತ್ತು ಜಾಗತಿಕ ಸ್ಥಾನಮಾನದ ಮಹತ್ವವನ್ನು ಮಾತುಕತೆಯ ಸ್ವರ ಮತ್ತು ನಿಯಮಗಳು ಪ್ರತಿಬಿಂಬಿಸುವವರೆಗೆ, ನಾವು ಮಾತುಕತೆಗೆ ಮುಕ್ತರಾಗಿದ್ದೇವೆ,” ಎಂದು ಅವರು ತಮ್ಮ ಮಾತು ಮುಗಿಸಿದರು.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...