Homeಮುಖಪುಟಅಮೆರಿಕಾದ ಶೇ. 50ರಷ್ಟು ಸುಂಕದಿಂದ ಉಭಯ ದೇಶಗಳ ವ್ಯಾಪಾರಕ್ಕೆ ಹೊಡೆತ: ಬ್ರೆಜಿಲ್‌ನ ಭಾರತ ರಾಯಭಾರಿ

ಅಮೆರಿಕಾದ ಶೇ. 50ರಷ್ಟು ಸುಂಕದಿಂದ ಉಭಯ ದೇಶಗಳ ವ್ಯಾಪಾರಕ್ಕೆ ಹೊಡೆತ: ಬ್ರೆಜಿಲ್‌ನ ಭಾರತ ರಾಯಭಾರಿ

- Advertisement -
- Advertisement -

ನವದೆಹಲಿ: ಅಮೆರಿಕವು ಬ್ರೆಜಿಲ್ ಮತ್ತು ಭಾರತದಂತಹ ಪ್ರಮುಖ ವ್ಯಾಪಾರ ಪಾಲುದಾರರ ಮೇಲೆ ಶೇ. 50ರಷ್ಟು ಸುಂಕವನ್ನು ಹೇರಿದ ಬೆನ್ನಲ್ಲೇ, ಈ ಕ್ರಮಗಳು ಜಾಗತಿಕ ವ್ಯಾಪಾರಕ್ಕೆ ಗಂಭೀರ ಸವಾಲುಗಳನ್ನು ಒಡ್ಡಲಿವೆ ಎಂದು ಭಾರತದಲ್ಲಿನ ಬ್ರೆಜಿಲ್ ರಾಯಭಾರಿ ಕೆನೆತ್ ಫೆಲಿಕ್ಸ್ ಹಾಕ್ಝಿನ್ಸ್ಕಿ ಡಾ.ನೋಬ್ರೆಗಾ ಶನಿವಾರ ಎಚ್ಚರಿಸಿದ್ದಾರೆ. ಈ ಸುಂಕಗಳು ಬ್ರೆಜಿಲ್‌ನ ವ್ಯಾಪಾರದ ಮೇಲೆ “ಖಂಡಿತವಾಗಿ ಪರಿಣಾಮ ಬೀರುತ್ತವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರವು ಜಾಗತಿಕ ವ್ಯಾಪಾರ ಪರಿಸರದಲ್ಲಿ ಅನಿಶ್ಚಿತತೆಯನ್ನು ಹೆಚ್ಚಿಸಿದೆ. ಬ್ರೆಜಿಲ್‌ನೊಂದಿಗಿನ ಸುದೀರ್ಘ ಸಂಬಂಧದ ಬಗ್ಗೆ ಮಾತನಾಡಿದ ರಾಯಭಾರಿ, “ಅಮೆರಿಕದೊಂದಿಗಿನ ನಮ್ಮ 200 ವರ್ಷಗಳ ಹಳೆಯ ವ್ಯಾಪಾರ ಸಂಬಂಧಕ್ಕೆ ಈ ಸುಂಕಗಳು ಧಕ್ಕೆ ತರಲಿವೆ. ಆದರೆ, ನಮ್ಮ ಎರಡೂ ದೇಶಗಳ ಸಮಾಜಗಳ ನಡುವಿನ ಬಾಂಧವ್ಯವು ವ್ಯವಹಾರ, ಜನ ಮತ್ತು ಸಂಸ್ಕೃತಿಯ ಮೂಲಕ ಆಳವಾಗಿ ಬೇರೂರಿದೆ, ಮತ್ತು ಅದು ಮುಂದುವರಿಯುತ್ತದೆ,” ಎಂದು IANS ಜೊತೆಗಿನ ಸಂದರ್ಶನದಲ್ಲಿ ತಿಳಿಸಿದರು.

ಈ ಸುಂಕದ ಕುರಿತು ಭಾರತದ ಪರಿಸ್ಥಿತಿಯನ್ನೂ ಉಲ್ಲೇಖಿಸಿದ ಅವರು, ಅಮೆರಿಕವು ಭಾರತದ ಆಮದುಗಳ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕ ವಿಧಿಸಿದ್ದು, ಒಟ್ಟು ಸುಂಕದ ಪ್ರಮಾಣ ಶೇ. 50ಕ್ಕೆ ಏರಿದೆ. ಇದು ಅಮೆರಿಕದ ಪ್ರಮುಖ ವ್ಯಾಪಾರ ಪಾಲುದಾರರ ಪೈಕಿ ಅತ್ಯಂತ ಹೆಚ್ಚಿನ ಸುಂಕವಾಗಿದೆ. ಭಾರತದ ವಿರುದ್ಧದ ಈ ಕ್ರಮಕ್ಕೆ ರಷ್ಯಾದಿಂದ ತೈಲ ಆಮದು ಮುಂದುವರೆಸಿರುವುದನ್ನು ಕಾರಣ ಎಂದು ಹೇಳಲಾಗಿದ್ದು, ಬ್ರೆಜಿಲ್ ಮೇಲಿನ ಸುಂಕಕ್ಕೆ ಅಲ್ಲಿನ ರಾಜಕೀಯ ಬೆಳವಣಿಗೆಗಳು ಕಾರಣ ಎಂದು ವರದಿಯಾಗಿದೆ. ಈ ಪರಿಸ್ಥಿತಿಯು ಜಾಗತಿಕ ವ್ಯಾಪಾರ ವ್ಯವಸ್ಥೆಗೆ ಒಡ್ಡುತ್ತಿರುವ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಬ್ರೆಜಿಲ್ ನಾಯಕರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ರಾಯಭಾರಿ ಹೇಳಿದರು.

ಬ್ರೆಜಿಲ್ ಅಧ್ಯಕ್ಷ ಲೂಲಾ ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಡುವಿನ ಇತ್ತೀಚಿನ ಮಾತುಕತೆಯನ್ನು ಡಾ ನೋಬ್ರೆಗಾ ಈ ಸಂದರ್ಭದಲ್ಲಿ ನೆನಪಿಸಿಕೊಂಡರು. “ಅಧ್ಯಕ್ಷ ಲೂಲಾ ಅವರು ಪ್ರಧಾನಮಂತ್ರಿ ಮೋದಿಗೆ ಕರೆ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ದ್ವಿಪಕ್ಷೀಯ ಸಂಬಂಧಗಳ ಭವಿಷ್ಯದ ಬಗ್ಗೆ ಚರ್ಚಿಸಿದರು. ಇಂತಹ ಏಕಪಕ್ಷೀಯ ನಿರ್ಧಾರಗಳಿಂದಾಗಿ ಜಾಗತಿಕ ವ್ಯಾಪಾರ ಅನಿರೀಕ್ಷಿತವಾಗಿದೆ. ಈ ಸವಾಲುಗಳನ್ನು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ಹೊಸ ಅವಕಾಶಗಳಾಗಿ ಪರಿವರ್ತಿಸುವುದು ಅವರ ಸಂಭಾಷಣೆಯ ಮುಖ್ಯ ಉದ್ದೇಶವಾಗಿತ್ತು,” ಎಂದು ಅವರು ವಿವರಿಸಿದರು. ಪ್ರಧಾನಿಯವರ ಇತ್ತೀಚಿನ ಬ್ರೆಜಿಲ್ ಭೇಟಿಯಲ್ಲಿ ಉಭಯ ನಾಯಕರು ಮುಂದಿನ ದಶಕದ ಆರ್ಥಿಕ ಸಂಬಂಧಗಳಿಗೆ ನಿರ್ದಿಷ್ಟ ಮಾರ್ಗಸೂಚಿ ರೂಪಿಸಿದ್ದಾರೆ ಎಂದು ಅವರು ತಿಳಿಸಿದರು.

ಅಮೆರಿಕದ ಸುಂಕಗಳಿಗೆ ಪ್ರತಿಕ್ರಿಯೆ ನೀಡುವ ವಿಷಯದಲ್ಲಿ, ಪ್ರತೀಕಾರದ ಕ್ರಮಗಳಿಗಿಂತ ಸಹಕಾರವೇ ಸೂಕ್ತ ಮಾರ್ಗ ಎಂದು ಡಾ ನೋಬ್ರೆಗಾ ಒತ್ತಿ ಹೇಳಿದರು. “ನಾವು ಯಾವುದೇ ದೇಶಕ್ಕೆ ಪ್ರತಿಕ್ರಿಯೆ ನೀಡುವ ಬಗ್ಗೆ ಮಾತನಾಡುತ್ತಿಲ್ಲ. ಬದಲಾಗಿ, ಈ ಅನಿಶ್ಚಿತ ಭೌಗೋಳಿಕ-ರಾಜಕೀಯ ಸನ್ನಿವೇಶದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಮತ್ತು ಬ್ರೆಜಿಲ್ ಹೇಗೆ ಒಟ್ಟಾಗಿ ಕೆಲಸ ಮಾಡಬಹುದು ಎಂಬುದರ ಬಗ್ಗೆ ನಾವು ಚರ್ಚಿಸಿದ್ದೇವೆ. ಇದು ನಮ್ಮ ಪಾಲುದಾರಿಕೆಯನ್ನು ಬಲಪಡಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುವ ವಿಷಯವಾಗಿದೆ,” ಎಂದು ಅವರು ಹೇಳಿದರು.

ಅಮೆರಿಕವು ಸುಂಕಗಳನ್ನು ಹಿಂಪಡೆಯಲು ಮುಂದಾಗದಿದ್ದರೆ ಬ್ರೆಜಿಲ್‌ನ ಪ್ರತಿಕ್ರಿಯೆ ಏನು ಎಂದು ಕೇಳಿದಾಗ, ರಾಯಭಾರಿ ಮಾತುಕತೆಗೆ ಬ್ರೆಜಿಲ್ ಸಿದ್ಧವಿದೆ ಎಂದು ದೃಢಪಡಿಸಿದರು, ಆದರೆ ಅದಕ್ಕೆ ಕೆಲವು ಮಿತಿಗಳಿವೆ ಎಂದು ಸ್ಪಷ್ಟಪಡಿಸಿದರು. “ನಾವು ಯಾವಾಗಲೂ ಮಾತುಕತೆಗೆ ಮುಕ್ತರಾಗಿದ್ದೇವೆ. ನಮ್ಮ ಸಾರ್ವಭೌಮತ್ವವು ಚರ್ಚೆಗೆ ಒಳಪಡುವುದಿಲ್ಲ. ಇದು ಬಹಳ ಸ್ಪಷ್ಟ. ಆದರೆ, ಅಮೆರಿಕದ ಆರ್ಥಿಕ ಕ್ರಮಗಳ ಬಗ್ಗೆ ನಾವು ಮುಕ್ತವಾಗಿ ಮಾತುಕತೆ ನಡೆಸುತ್ತೇವೆ. ಚರ್ಚಿಸಲಾಗದ ಕೆಲವು ವಿಷಯಗಳಿವೆ” ಎಂದು ಅವರು ಹೇಳಿದರು.

ಅಧ್ಯಕ್ಷ ಲೂಲಾ ಅವರು ವಿಶ್ವ ವ್ಯಾಪಾರ ಸಂಸ್ಥೆ (WTO) ಗೆ ಅಮೆರಿಕದ ಸುಂಕ ಕ್ರಮವನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಡಾ ನೋಬ್ರೆಗಾ, ಬ್ರೆಜಿಲ್ ಅಂತರರಾಷ್ಟ್ರೀಯ ಕಾನೂನುಗಳಿಗೆ ಯಾವಾಗಲೂ ಬದ್ಧವಾಗಿದೆ ಎಂದು ತಿಳಿಸಿದರು. “WTO ಒಪ್ಪಂದಗಳು ಮತ್ತು ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯು ನಮ್ಮ ಮೂಲಭೂತ ಚೌಕಟ್ಟಾಗಿದೆ. ಅಮೆರಿಕವು ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ನಾವು ಅಧಿಕೃತ ಘೋಷಣೆಯನ್ನು ಸಲ್ಲಿಸಿದ್ದೇವೆ,” ಎಂದು ಅವರು ಹೇಳಿದರು.

ಅಂತಿಮವಾಗಿ, ಅಮೆರಿಕದ ನಿಲುವಿನ ಹಿಂದಿನ ಉದ್ದೇಶಗಳನ್ನು ಬ್ರೆಜಿಲ್ ಇನ್ನೂ ಪರಿಶೀಲನೆ ಮಾಡುತ್ತಿದೆ ಎಂದು ರಾಯಭಾರಿ ತಿಳಿಸಿದರು. “ನಾವು ಅಮೆರಿಕ ಸರ್ಕಾರದ ಈ ನಿಲುವಿನ ಹಿಂದಿನ ಕಾರಣಗಳ ಬಗ್ಗೆ ವಿಶ್ಲೇಷಣೆ ನಡೆಸುತ್ತಿದ್ದೇವೆ. ನಮ್ಮ ಆರ್ಥಿಕತೆ ಮತ್ತು ಜಾಗತಿಕ ಸ್ಥಾನಮಾನದ ಮಹತ್ವವನ್ನು ಮಾತುಕತೆಯ ಸ್ವರ ಮತ್ತು ನಿಯಮಗಳು ಪ್ರತಿಬಿಂಬಿಸುವವರೆಗೆ, ನಾವು ಮಾತುಕತೆಗೆ ಮುಕ್ತರಾಗಿದ್ದೇವೆ,” ಎಂದು ಅವರು ತಮ್ಮ ಮಾತು ಮುಗಿಸಿದರು.

ಉತ್ತರಾಖಂಡ  ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...