Homeಕರ್ನಾಟಕಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ'ಯಲ್ಲಿ

ಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ’ಯಲ್ಲಿ

- Advertisement -
- Advertisement -

| ಶುದ್ಧೋದನ |
ಉತ್ತರ ಕನ್ನಡದಲ್ಲಿ ವಿಪರೀತ ಬಿಸಿಲಿನ ಉರಿ ಮತ್ತು ಅಷ್ಟೇ ಪ್ರಮಾಣದ ಲೋಕಸಭಾ ಚುನಾವಣೆ ಕಾವು. ಜನರ ತಾತ್ಸಾರಕ್ಕೆ ತುತ್ತಾಗಿರುವ ಬಿಜೆಪಿಯ ಅನಂತಮಾಣಿ ಮೇಲೆ ಆಸ್ನೋಟಿಕರ್ ಏಕಾಂಗಿ ವೀರನಂತೆ ಮುಗಿಬೀಳುತ್ತಿದ್ದಾನೆ.
ಬರೋಬ್ಬರಿ 22 ವರ್ಷದ ಸಂಸದಗಿರಿಯಲ್ಲಿ ಅನಂತ್ಮಾಣಿ ಯೋಜನಾಬದ್ಧವಾಗಿ ಜಿಲ್ಲೆಗೆ ದ್ರೋಹ ಬಗೆದಿದ್ದಾನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಎಂದು ತಲೆ ಕೆಡಿಸಿಕೊಳ್ಳದ ಮಾಣಿ ಹೇಳೋದೊಂದು ಮಾಡೋದೊಂದು ಎಂಬುದು ಅರ್ಥವಾಗಿರುವ ಜನರಿಗೆ ಆತನ ಸಹವಾಸ ಸಾಕಾಗಿದೆ. ಇದರ ಅರ್ಥ ಇಷ್ಟೇ, ಮೈತ್ರಿಕೂಟದ ಕಿಂಗ್‍ಪಿನ್ ಆರ್.ವಿ.ದೇಶಪಾಂಡೆ ಮನಸಿಟ್ಟು ಕೆಲಸ ಮಾಡಿದರೆ ಜಿಲ್ಲೆಯ ರಾಜಕಾರಣದ ದಿಕ್ಕು ಬದಲಿಸುವುದು ಕಷ್ಟವಿಲ್ಲ.

ತನಗೆ ರಾಜಕೀಯ ದೀಕ್ಷೆ ಕೊಟ್ಟಿದ್ದ ಗುರು ಚಿತ್ತರಂಜನ್‍ರ ನಿಗೂಢ ಹತ್ಯೆಯ ಸೂತಕದ ಅಡಿಯಲ್ಲಿ ಮೊದಲ ಬಾರಿ ಸಂಸದನಾದ ಅನಂತ್ಮಾಣಿಯ ಆನಂತರದ 3 ಗೆಲುವುಗಳು ದೇಶಪಾಂಡೆ ಕೊಟ್ಟ ಉಡುಗೊರೆಗಳಂತಿದ್ದವು. ಆರನೇ ಬಾರಿ ಅನಂತ ಮಾಣಿ ಸ್ಪರ್ಧಿಸಿದಾಗ ದೇಶಪಾಂಡೆ ಕಾಂಗ್ರೆಸನ್ನು ತನಗರಿವಿಲ್ಲದಂತೆ ನಿರ್ನಾಮ ಮಾಡಿ ಆಗಿತ್ತು. ಹಾಗಾಗಿ ತನ್ನ ಮಗ ಪ್ರಶಾಂತ್ ಕಾಂಗ್ರೆಸ್ ಕ್ಯಾಂಡಿಡೇಟ್ ಆದರೂ ದೇಶಪಾಂಡೆಗೆ ಗೆಲ್ಲಿಸಿಕೊಳ್ಳಲಾಗಲಿಲ್ಲ. ದಿಲ್ಲಿ ಡಿಟೇಲ್ ರಾಜಕಾರಣಿ ಮಾರ್ಗರೇಟ್ ಆಳ್ವಾ ಜಿಲ್ಲಾ ಕಾಂಗ್ರೆಸ್‍ನ ಅಧಿನಾಯಕಿಯಾಗಿದ್ದ ಕಾಲದಲ್ಲಿ ಆಕೆಯ ಸೀರೆಯ ಚುಂಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ ಪಾಂಡೇಜಿ ಆಮೇಲೆ ಆಕೆಯ ವಿರುದ್ಧವೇ ತಿರುಗಿನಿಂತು ಕಾಂಗ್ರೆಸ್‍ನ ನಿರ್ನಾಮ ಮಾಡಿದ್ದು ಈಗ ಇತಿಹಾಸ.

ಒನ್ಸ್ ಎಗೇನ್, ಈಗ ಮೈತ್ರಿಕೂಟದ ಸೋಲು ಗೆಲುವು ದೇಶಪಾಂಡೆ ಕೈಲಿರುವುದಂತೂ ಖರೆ!!.
ಮೈತ್ರಿಕೂಟದ ಕ್ಯಾಂಡಿಡೇಟ್ ಆನಂದ ಅಸ್ನೋಟಿಕರ್ ಕಂಡರೆ ದೇಶಪಾಂಡೆಗೆ ಲಾಗಾಯ್ತಿನಿಂದಲೂ ಅಷ್ಟಕಷ್ಟೇ. ಆಸ್ನೋಟಿಕರ್ ತಂದೆ ವಸಂತ ಅಸ್ನೋಟಿಕರ್ ಎಂಬ ದಿವಂಗತ ರಾಬಿನ್‍ಹುಡ್, ಮ್ಯಾಗಿ ಕ್ಯಾಂಪಿನಲ್ಲಿದ್ದ ಕಾರವಾರದ ಅಂದಿನ ಶಾಸಕ. ಈತ ಭೂಗತ ಲೋಕದ ಜಿದ್ದಿಗೆ ಬಲಿಯಾದ. ಆತನ ಹೆಂಡತಿಯನ್ನು ಎಮ್ಮೆಲ್ಸಿ ಮಾಡಲು ಮ್ಯಾಗಿ ಪ್ರಯತ್ನಿಸಿದಾಗ ಇದೇ ದೇಶಪಾಂಡೆ ಅಡ್ಡಗಾಲು ಹಾಕಿದ್ದ. ಆದರೂ ಮ್ಯಾಗಿ ಶುಭಲತಾ ಅಸ್ನೋಟಿಕರ್‍ರನ್ನು ವಿಧಾನ ಪರಿಷತ್‍ಗೆ ಕಳಿಸಿದ್ದರು.

ಆನಂದ್ ಪ್ರಾಯಕ್ಕೆ ಬಂದ ನಂತರ ಮ್ಯಾಗಿ ಅಜ್ಜಿಯ ವಿರುದ್ಧವೇ ತಿರುಗಿಬಿದ್ದ. 2004ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಮ್ಯಾಗಿ ತನ್ನ ಚೇಲಾ ಅಶೋಕ್ ನಾಯ್ಕನನ್ನು ಕಾಂಗ್ರೆಸ್‍ನಿಂದ ಕಣಕ್ಕೆ ಇಳಿಸಿದ್ದು ಇದಕ್ಕೆ ಕಾರಣ. ಯಾಕೆಂದರೆ ಈ ಅಶೋಕ ಕಾರವಾರ ರಾಜಕಾರಣದಲ್ಲಿ ಆನಂದ್‍ಗೆ ವಿರೋಧಿಯಾಗಿದ್ದ. ಹೀಗಾಗಿ ಆನಂದ ಹಠಕ್ಕೆ ಬಿದ್ದು ಅಂದು ಬಿಜೆಪಿಯ ಅನಾಮಧೇಯ ಗಂಗಾಧರ ಭಟ್ಟ ಎಂಬುವನ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದಲ್ಲದೆ ಪರೋಕ್ಷವಾಗಿ ತಾನೇ ಶಾಸಕಗಿರಿ ನಡೆಸಿದ್ದ.

ಯಾವಾಗ ಆನಂದ್, ಮ್ಯಾಗಿ ವಿರುದ್ಧ ತಿರುಗಿಬಿದ್ದರೋ ಆಗ ಆತನಿಗೆ ಗಾಡ್‍ಫಾದರ್ ಆಗಿ ನಿಂತದ್ದು ದೇಶಪಾಂಡೆ! ಮ್ಯಾಗಿಯ ಪ್ರಬಲ ವಿರೋಧದ ನಡುವೆಯೂ ಆತನನ್ನು 2005ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾರವಾರದ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದರು. ಗೆದ್ದ ಆನಂದ ಮೂರೇ ತಿಂಗಳಿಗೆ ಆಪರೇಷನ್ ಕಮಲಕ್ಕೆ ಬಲಿಯಾಗಿ ರಾಜಕೀಯ ಬದುಕನ್ನೇ ಹಾಳು ಮಾಡಿಕೊಂಡಿದ್ದ. ಆ ಕಾರಣಕ್ಕೆ ದೇಶಪಾಂಡೆಗೆ ಈಗಲೂ ಆನಂದನ ಮೇಲಿನ ಸಿಟ್ಟು ಕಡಿಮೆಯಾಗಿಲ್ಲ. ಆನಂದ್ ಮೈತ್ರಿಕೂಟದ ಕ್ಯಾಂಡಿಡೇಟ್ ಎಂದು ಘೋಷಣೆ ಆದಾಗ ಎದುರಾಳಿ ಅನಂತ್ಮಾಣಿಗಿಂತಲೂ ಹೆಚ್ಚು ಡಿಸ್ಟರ್ಬ್ ಆದದ್ದು ಇದೇ ದೇಶಪಾಂಡೆ!


ಪಕ್ಕದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್‍ರನ್ನು ಜೆಡಿಎಸ್‍ಗೆ ಕಾಂಗ್ರೆಸ್ ಎರವಲು ಕೊಟ್ಟಂತೆ ಉತ್ತರಕನ್ನಡದಲ್ಲೂ ಡಿಸಿಸಿ ಅಧ್ಯಕ್ಷನೂ ತನ್ನ ಆಜ್ಞಾನುಧಾರಿಯೂ ಆದ ಭೀಮಣ್ಣ ನಾಯಕನಿಗೆ ಜೆಡಿಎಸ್ ಬಣ್ಣ ಬಳಿಯುವುದು ದೇಶಪಾಂಡೆ ಇರಾದೆಯಾಗಿತ್ತು. ಆದರೆ ಗೌಡರು, ಆಸ್ನೋಟಿಕರ್ ಬೇಡವೆಂದಾದರೆ ರಾಮಕೃಷ್ಣ ಹೆಗಡೆಯ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆಯನ್ನು ಒಪ್ಪಿಕೊಳ್ಳುವಿರಾ ಎಂದು ಕೇಳಿದಾಗ ದೇಶಪಾಂಡೆ ದಂಗಾಗಿಹೋದರು. ಗುರು ಹೆಗಡೆ ಫ್ಯಾಮಿಲಿಗೂ ದೇಶಪಾಂಡೆಗೂ ಪುರಾತನ ಹಗೆ ಹೊಗೆಯಾಡುತ್ತಲೇ ಇದೆ. ಹಾಗಾಗಿ ದೇಶಪಾಂಡೆ ಆಸ್ನೋಟಿಕರ್ ಕ್ಯಾಂಡಿಡೇಚರ್ ಒಪ್ಪಿಕೊಳ್ಳಬೇಕಾಯ್ತು.


ಮೈತ್ರಿಕೂಟದ ಹುರಿಯಾಳಿನ ಹೆಸರು ಬಹಿರಂಗವಾಗಿ ವಾರವೇ ಕಳೆದರೂ ದೇಶಪಾಂಡೆ ಮೊಗಮ್ಮಾಗೆ ಹೆಜ್ಜೆ ಹಾಕುತ್ತಿದ್ದಾರೆ. ಆನಂದ ಆಸ್ನೋಟಿಕರ್, ದೇಶಪಾಂಡೆ ಮನೆಗೆ ಹೋಗಿ ಅಡ್ಡಬಿದ್ದು ಬಂದರೂ ದೇಶಪಾಂಡೆ ಮಾತ್ರ ಜಿಲ್ಲೆಯತ್ತ ತಲೆಹಾಕಿಲ್ಲ. ಎಲ್ಲಿಯೂ ಆನಂದ್‍ಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಜಿಲ್ಲಾ ಲೀಡರ್‍ಗಳ ಜಂಟಿ ಪತ್ರಿಕಾಗೋಷ್ಠಿ ಹೊತ್ತಲ್ಲೂ ದೇಶಪಾಂಡೆಯ ಶಿಷ್ಯ ಭೀಮಣ್ಣ ನಾಯ್ಕ, ಆನಂದ ಅಂತರ ಕಾಯ್ದುಕೊಂಡಿದ್ದರು. ಈ ಭೀಮಣ್ಣ ಬಿಜೆಪಿಯ ಅನಂತ್ಮಾಣಿಯ ಅಂತರಂಗದ ಗೆಣೆಕಾರ. ಅನಂತ್ಮಾಣಿ ಶಿರಸಿಯ ವೈದ್ಯರಿಗೆ ಒಡೆದು ರಕ್ತ ಹರಿಸಿದಾಗ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸಾಂಕೇತಿಕವಾಗಿ ಕುಳಿತೆದ್ದು “ನಂಗೆ ಥಂಡಿ, ಕೆಮ್ಮು” ಎಂದು ಹೇಳಿ ಮಾತನಾಡದೆ ಮನೆಗೆ ಹೋಗಿದ್ದು ಅವರಿಬ್ಬರ ಗೆಳೆತನಕ್ಕೆ ಸಾಕ್ಷಿ.

ಸದ್ಯಕ್ಕೆ ಆಂಟಿಇನ್‍ಕಂಬೆನ್ಸಿಯಲ್ಲಿ ತೊಳಲಾಡುತ್ತಿರುವ ಬಿಜೆಪಿಯ ಅನಂತ್ಮಾಣಿ ವಿರುದ್ಧ ಮೈತ್ರಿಕೂಟ ಒಟ್ಟಾಗಿ ಅಖಾಡಕ್ಕಿಳಿದರೆ ಜಿಲ್ಲೆಯಲ್ಲಿ ಮತ್ತೆ ಸೆಕ್ಯುಲರ್ ರಾಜಕಾರಣ ಪ್ರತಿಷ್ಠಾಪಿಸುವುದು ಕಷ್ಟವೇನಲ್ಲ. ಇದು ಭವಿಷ್ಯದಲ್ಲಿ ದೇಶಪಾಂಡೆ ಮಗನ ರಾಜಕಾರಣಕ್ಕೂ ನೆರವಾಗುತ್ತದೆ. ಆದರೆ ದೇಶಪಾಂಡೆ ಇಷ್ಟು ವಿಶಾಲವಾಗಿ ಯೋಚಿಸಬಲ್ಲರೇ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...