Homeಕರ್ನಾಟಕಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ'ಯಲ್ಲಿ

ಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ’ಯಲ್ಲಿ

- Advertisement -
- Advertisement -

| ಶುದ್ಧೋದನ |
ಉತ್ತರ ಕನ್ನಡದಲ್ಲಿ ವಿಪರೀತ ಬಿಸಿಲಿನ ಉರಿ ಮತ್ತು ಅಷ್ಟೇ ಪ್ರಮಾಣದ ಲೋಕಸಭಾ ಚುನಾವಣೆ ಕಾವು. ಜನರ ತಾತ್ಸಾರಕ್ಕೆ ತುತ್ತಾಗಿರುವ ಬಿಜೆಪಿಯ ಅನಂತಮಾಣಿ ಮೇಲೆ ಆಸ್ನೋಟಿಕರ್ ಏಕಾಂಗಿ ವೀರನಂತೆ ಮುಗಿಬೀಳುತ್ತಿದ್ದಾನೆ.
ಬರೋಬ್ಬರಿ 22 ವರ್ಷದ ಸಂಸದಗಿರಿಯಲ್ಲಿ ಅನಂತ್ಮಾಣಿ ಯೋಜನಾಬದ್ಧವಾಗಿ ಜಿಲ್ಲೆಗೆ ದ್ರೋಹ ಬಗೆದಿದ್ದಾನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಎಂದು ತಲೆ ಕೆಡಿಸಿಕೊಳ್ಳದ ಮಾಣಿ ಹೇಳೋದೊಂದು ಮಾಡೋದೊಂದು ಎಂಬುದು ಅರ್ಥವಾಗಿರುವ ಜನರಿಗೆ ಆತನ ಸಹವಾಸ ಸಾಕಾಗಿದೆ. ಇದರ ಅರ್ಥ ಇಷ್ಟೇ, ಮೈತ್ರಿಕೂಟದ ಕಿಂಗ್‍ಪಿನ್ ಆರ್.ವಿ.ದೇಶಪಾಂಡೆ ಮನಸಿಟ್ಟು ಕೆಲಸ ಮಾಡಿದರೆ ಜಿಲ್ಲೆಯ ರಾಜಕಾರಣದ ದಿಕ್ಕು ಬದಲಿಸುವುದು ಕಷ್ಟವಿಲ್ಲ.

ತನಗೆ ರಾಜಕೀಯ ದೀಕ್ಷೆ ಕೊಟ್ಟಿದ್ದ ಗುರು ಚಿತ್ತರಂಜನ್‍ರ ನಿಗೂಢ ಹತ್ಯೆಯ ಸೂತಕದ ಅಡಿಯಲ್ಲಿ ಮೊದಲ ಬಾರಿ ಸಂಸದನಾದ ಅನಂತ್ಮಾಣಿಯ ಆನಂತರದ 3 ಗೆಲುವುಗಳು ದೇಶಪಾಂಡೆ ಕೊಟ್ಟ ಉಡುಗೊರೆಗಳಂತಿದ್ದವು. ಆರನೇ ಬಾರಿ ಅನಂತ ಮಾಣಿ ಸ್ಪರ್ಧಿಸಿದಾಗ ದೇಶಪಾಂಡೆ ಕಾಂಗ್ರೆಸನ್ನು ತನಗರಿವಿಲ್ಲದಂತೆ ನಿರ್ನಾಮ ಮಾಡಿ ಆಗಿತ್ತು. ಹಾಗಾಗಿ ತನ್ನ ಮಗ ಪ್ರಶಾಂತ್ ಕಾಂಗ್ರೆಸ್ ಕ್ಯಾಂಡಿಡೇಟ್ ಆದರೂ ದೇಶಪಾಂಡೆಗೆ ಗೆಲ್ಲಿಸಿಕೊಳ್ಳಲಾಗಲಿಲ್ಲ. ದಿಲ್ಲಿ ಡಿಟೇಲ್ ರಾಜಕಾರಣಿ ಮಾರ್ಗರೇಟ್ ಆಳ್ವಾ ಜಿಲ್ಲಾ ಕಾಂಗ್ರೆಸ್‍ನ ಅಧಿನಾಯಕಿಯಾಗಿದ್ದ ಕಾಲದಲ್ಲಿ ಆಕೆಯ ಸೀರೆಯ ಚುಂಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ ಪಾಂಡೇಜಿ ಆಮೇಲೆ ಆಕೆಯ ವಿರುದ್ಧವೇ ತಿರುಗಿನಿಂತು ಕಾಂಗ್ರೆಸ್‍ನ ನಿರ್ನಾಮ ಮಾಡಿದ್ದು ಈಗ ಇತಿಹಾಸ.

ಒನ್ಸ್ ಎಗೇನ್, ಈಗ ಮೈತ್ರಿಕೂಟದ ಸೋಲು ಗೆಲುವು ದೇಶಪಾಂಡೆ ಕೈಲಿರುವುದಂತೂ ಖರೆ!!.
ಮೈತ್ರಿಕೂಟದ ಕ್ಯಾಂಡಿಡೇಟ್ ಆನಂದ ಅಸ್ನೋಟಿಕರ್ ಕಂಡರೆ ದೇಶಪಾಂಡೆಗೆ ಲಾಗಾಯ್ತಿನಿಂದಲೂ ಅಷ್ಟಕಷ್ಟೇ. ಆಸ್ನೋಟಿಕರ್ ತಂದೆ ವಸಂತ ಅಸ್ನೋಟಿಕರ್ ಎಂಬ ದಿವಂಗತ ರಾಬಿನ್‍ಹುಡ್, ಮ್ಯಾಗಿ ಕ್ಯಾಂಪಿನಲ್ಲಿದ್ದ ಕಾರವಾರದ ಅಂದಿನ ಶಾಸಕ. ಈತ ಭೂಗತ ಲೋಕದ ಜಿದ್ದಿಗೆ ಬಲಿಯಾದ. ಆತನ ಹೆಂಡತಿಯನ್ನು ಎಮ್ಮೆಲ್ಸಿ ಮಾಡಲು ಮ್ಯಾಗಿ ಪ್ರಯತ್ನಿಸಿದಾಗ ಇದೇ ದೇಶಪಾಂಡೆ ಅಡ್ಡಗಾಲು ಹಾಕಿದ್ದ. ಆದರೂ ಮ್ಯಾಗಿ ಶುಭಲತಾ ಅಸ್ನೋಟಿಕರ್‍ರನ್ನು ವಿಧಾನ ಪರಿಷತ್‍ಗೆ ಕಳಿಸಿದ್ದರು.

ಆನಂದ್ ಪ್ರಾಯಕ್ಕೆ ಬಂದ ನಂತರ ಮ್ಯಾಗಿ ಅಜ್ಜಿಯ ವಿರುದ್ಧವೇ ತಿರುಗಿಬಿದ್ದ. 2004ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಮ್ಯಾಗಿ ತನ್ನ ಚೇಲಾ ಅಶೋಕ್ ನಾಯ್ಕನನ್ನು ಕಾಂಗ್ರೆಸ್‍ನಿಂದ ಕಣಕ್ಕೆ ಇಳಿಸಿದ್ದು ಇದಕ್ಕೆ ಕಾರಣ. ಯಾಕೆಂದರೆ ಈ ಅಶೋಕ ಕಾರವಾರ ರಾಜಕಾರಣದಲ್ಲಿ ಆನಂದ್‍ಗೆ ವಿರೋಧಿಯಾಗಿದ್ದ. ಹೀಗಾಗಿ ಆನಂದ ಹಠಕ್ಕೆ ಬಿದ್ದು ಅಂದು ಬಿಜೆಪಿಯ ಅನಾಮಧೇಯ ಗಂಗಾಧರ ಭಟ್ಟ ಎಂಬುವನ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದಲ್ಲದೆ ಪರೋಕ್ಷವಾಗಿ ತಾನೇ ಶಾಸಕಗಿರಿ ನಡೆಸಿದ್ದ.

ಯಾವಾಗ ಆನಂದ್, ಮ್ಯಾಗಿ ವಿರುದ್ಧ ತಿರುಗಿಬಿದ್ದರೋ ಆಗ ಆತನಿಗೆ ಗಾಡ್‍ಫಾದರ್ ಆಗಿ ನಿಂತದ್ದು ದೇಶಪಾಂಡೆ! ಮ್ಯಾಗಿಯ ಪ್ರಬಲ ವಿರೋಧದ ನಡುವೆಯೂ ಆತನನ್ನು 2005ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾರವಾರದ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದರು. ಗೆದ್ದ ಆನಂದ ಮೂರೇ ತಿಂಗಳಿಗೆ ಆಪರೇಷನ್ ಕಮಲಕ್ಕೆ ಬಲಿಯಾಗಿ ರಾಜಕೀಯ ಬದುಕನ್ನೇ ಹಾಳು ಮಾಡಿಕೊಂಡಿದ್ದ. ಆ ಕಾರಣಕ್ಕೆ ದೇಶಪಾಂಡೆಗೆ ಈಗಲೂ ಆನಂದನ ಮೇಲಿನ ಸಿಟ್ಟು ಕಡಿಮೆಯಾಗಿಲ್ಲ. ಆನಂದ್ ಮೈತ್ರಿಕೂಟದ ಕ್ಯಾಂಡಿಡೇಟ್ ಎಂದು ಘೋಷಣೆ ಆದಾಗ ಎದುರಾಳಿ ಅನಂತ್ಮಾಣಿಗಿಂತಲೂ ಹೆಚ್ಚು ಡಿಸ್ಟರ್ಬ್ ಆದದ್ದು ಇದೇ ದೇಶಪಾಂಡೆ!


ಪಕ್ಕದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್‍ರನ್ನು ಜೆಡಿಎಸ್‍ಗೆ ಕಾಂಗ್ರೆಸ್ ಎರವಲು ಕೊಟ್ಟಂತೆ ಉತ್ತರಕನ್ನಡದಲ್ಲೂ ಡಿಸಿಸಿ ಅಧ್ಯಕ್ಷನೂ ತನ್ನ ಆಜ್ಞಾನುಧಾರಿಯೂ ಆದ ಭೀಮಣ್ಣ ನಾಯಕನಿಗೆ ಜೆಡಿಎಸ್ ಬಣ್ಣ ಬಳಿಯುವುದು ದೇಶಪಾಂಡೆ ಇರಾದೆಯಾಗಿತ್ತು. ಆದರೆ ಗೌಡರು, ಆಸ್ನೋಟಿಕರ್ ಬೇಡವೆಂದಾದರೆ ರಾಮಕೃಷ್ಣ ಹೆಗಡೆಯ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆಯನ್ನು ಒಪ್ಪಿಕೊಳ್ಳುವಿರಾ ಎಂದು ಕೇಳಿದಾಗ ದೇಶಪಾಂಡೆ ದಂಗಾಗಿಹೋದರು. ಗುರು ಹೆಗಡೆ ಫ್ಯಾಮಿಲಿಗೂ ದೇಶಪಾಂಡೆಗೂ ಪುರಾತನ ಹಗೆ ಹೊಗೆಯಾಡುತ್ತಲೇ ಇದೆ. ಹಾಗಾಗಿ ದೇಶಪಾಂಡೆ ಆಸ್ನೋಟಿಕರ್ ಕ್ಯಾಂಡಿಡೇಚರ್ ಒಪ್ಪಿಕೊಳ್ಳಬೇಕಾಯ್ತು.


ಮೈತ್ರಿಕೂಟದ ಹುರಿಯಾಳಿನ ಹೆಸರು ಬಹಿರಂಗವಾಗಿ ವಾರವೇ ಕಳೆದರೂ ದೇಶಪಾಂಡೆ ಮೊಗಮ್ಮಾಗೆ ಹೆಜ್ಜೆ ಹಾಕುತ್ತಿದ್ದಾರೆ. ಆನಂದ ಆಸ್ನೋಟಿಕರ್, ದೇಶಪಾಂಡೆ ಮನೆಗೆ ಹೋಗಿ ಅಡ್ಡಬಿದ್ದು ಬಂದರೂ ದೇಶಪಾಂಡೆ ಮಾತ್ರ ಜಿಲ್ಲೆಯತ್ತ ತಲೆಹಾಕಿಲ್ಲ. ಎಲ್ಲಿಯೂ ಆನಂದ್‍ಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಜಿಲ್ಲಾ ಲೀಡರ್‍ಗಳ ಜಂಟಿ ಪತ್ರಿಕಾಗೋಷ್ಠಿ ಹೊತ್ತಲ್ಲೂ ದೇಶಪಾಂಡೆಯ ಶಿಷ್ಯ ಭೀಮಣ್ಣ ನಾಯ್ಕ, ಆನಂದ ಅಂತರ ಕಾಯ್ದುಕೊಂಡಿದ್ದರು. ಈ ಭೀಮಣ್ಣ ಬಿಜೆಪಿಯ ಅನಂತ್ಮಾಣಿಯ ಅಂತರಂಗದ ಗೆಣೆಕಾರ. ಅನಂತ್ಮಾಣಿ ಶಿರಸಿಯ ವೈದ್ಯರಿಗೆ ಒಡೆದು ರಕ್ತ ಹರಿಸಿದಾಗ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸಾಂಕೇತಿಕವಾಗಿ ಕುಳಿತೆದ್ದು “ನಂಗೆ ಥಂಡಿ, ಕೆಮ್ಮು” ಎಂದು ಹೇಳಿ ಮಾತನಾಡದೆ ಮನೆಗೆ ಹೋಗಿದ್ದು ಅವರಿಬ್ಬರ ಗೆಳೆತನಕ್ಕೆ ಸಾಕ್ಷಿ.

ಸದ್ಯಕ್ಕೆ ಆಂಟಿಇನ್‍ಕಂಬೆನ್ಸಿಯಲ್ಲಿ ತೊಳಲಾಡುತ್ತಿರುವ ಬಿಜೆಪಿಯ ಅನಂತ್ಮಾಣಿ ವಿರುದ್ಧ ಮೈತ್ರಿಕೂಟ ಒಟ್ಟಾಗಿ ಅಖಾಡಕ್ಕಿಳಿದರೆ ಜಿಲ್ಲೆಯಲ್ಲಿ ಮತ್ತೆ ಸೆಕ್ಯುಲರ್ ರಾಜಕಾರಣ ಪ್ರತಿಷ್ಠಾಪಿಸುವುದು ಕಷ್ಟವೇನಲ್ಲ. ಇದು ಭವಿಷ್ಯದಲ್ಲಿ ದೇಶಪಾಂಡೆ ಮಗನ ರಾಜಕಾರಣಕ್ಕೂ ನೆರವಾಗುತ್ತದೆ. ಆದರೆ ದೇಶಪಾಂಡೆ ಇಷ್ಟು ವಿಶಾಲವಾಗಿ ಯೋಚಿಸಬಲ್ಲರೇ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...