Homeಕರ್ನಾಟಕಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ'ಯಲ್ಲಿ

ಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ’ಯಲ್ಲಿ

- Advertisement -
- Advertisement -

| ಶುದ್ಧೋದನ |
ಉತ್ತರ ಕನ್ನಡದಲ್ಲಿ ವಿಪರೀತ ಬಿಸಿಲಿನ ಉರಿ ಮತ್ತು ಅಷ್ಟೇ ಪ್ರಮಾಣದ ಲೋಕಸಭಾ ಚುನಾವಣೆ ಕಾವು. ಜನರ ತಾತ್ಸಾರಕ್ಕೆ ತುತ್ತಾಗಿರುವ ಬಿಜೆಪಿಯ ಅನಂತಮಾಣಿ ಮೇಲೆ ಆಸ್ನೋಟಿಕರ್ ಏಕಾಂಗಿ ವೀರನಂತೆ ಮುಗಿಬೀಳುತ್ತಿದ್ದಾನೆ.
ಬರೋಬ್ಬರಿ 22 ವರ್ಷದ ಸಂಸದಗಿರಿಯಲ್ಲಿ ಅನಂತ್ಮಾಣಿ ಯೋಜನಾಬದ್ಧವಾಗಿ ಜಿಲ್ಲೆಗೆ ದ್ರೋಹ ಬಗೆದಿದ್ದಾನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಎಂದು ತಲೆ ಕೆಡಿಸಿಕೊಳ್ಳದ ಮಾಣಿ ಹೇಳೋದೊಂದು ಮಾಡೋದೊಂದು ಎಂಬುದು ಅರ್ಥವಾಗಿರುವ ಜನರಿಗೆ ಆತನ ಸಹವಾಸ ಸಾಕಾಗಿದೆ. ಇದರ ಅರ್ಥ ಇಷ್ಟೇ, ಮೈತ್ರಿಕೂಟದ ಕಿಂಗ್‍ಪಿನ್ ಆರ್.ವಿ.ದೇಶಪಾಂಡೆ ಮನಸಿಟ್ಟು ಕೆಲಸ ಮಾಡಿದರೆ ಜಿಲ್ಲೆಯ ರಾಜಕಾರಣದ ದಿಕ್ಕು ಬದಲಿಸುವುದು ಕಷ್ಟವಿಲ್ಲ.

ತನಗೆ ರಾಜಕೀಯ ದೀಕ್ಷೆ ಕೊಟ್ಟಿದ್ದ ಗುರು ಚಿತ್ತರಂಜನ್‍ರ ನಿಗೂಢ ಹತ್ಯೆಯ ಸೂತಕದ ಅಡಿಯಲ್ಲಿ ಮೊದಲ ಬಾರಿ ಸಂಸದನಾದ ಅನಂತ್ಮಾಣಿಯ ಆನಂತರದ 3 ಗೆಲುವುಗಳು ದೇಶಪಾಂಡೆ ಕೊಟ್ಟ ಉಡುಗೊರೆಗಳಂತಿದ್ದವು. ಆರನೇ ಬಾರಿ ಅನಂತ ಮಾಣಿ ಸ್ಪರ್ಧಿಸಿದಾಗ ದೇಶಪಾಂಡೆ ಕಾಂಗ್ರೆಸನ್ನು ತನಗರಿವಿಲ್ಲದಂತೆ ನಿರ್ನಾಮ ಮಾಡಿ ಆಗಿತ್ತು. ಹಾಗಾಗಿ ತನ್ನ ಮಗ ಪ್ರಶಾಂತ್ ಕಾಂಗ್ರೆಸ್ ಕ್ಯಾಂಡಿಡೇಟ್ ಆದರೂ ದೇಶಪಾಂಡೆಗೆ ಗೆಲ್ಲಿಸಿಕೊಳ್ಳಲಾಗಲಿಲ್ಲ. ದಿಲ್ಲಿ ಡಿಟೇಲ್ ರಾಜಕಾರಣಿ ಮಾರ್ಗರೇಟ್ ಆಳ್ವಾ ಜಿಲ್ಲಾ ಕಾಂಗ್ರೆಸ್‍ನ ಅಧಿನಾಯಕಿಯಾಗಿದ್ದ ಕಾಲದಲ್ಲಿ ಆಕೆಯ ಸೀರೆಯ ಚುಂಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ ಪಾಂಡೇಜಿ ಆಮೇಲೆ ಆಕೆಯ ವಿರುದ್ಧವೇ ತಿರುಗಿನಿಂತು ಕಾಂಗ್ರೆಸ್‍ನ ನಿರ್ನಾಮ ಮಾಡಿದ್ದು ಈಗ ಇತಿಹಾಸ.

ಒನ್ಸ್ ಎಗೇನ್, ಈಗ ಮೈತ್ರಿಕೂಟದ ಸೋಲು ಗೆಲುವು ದೇಶಪಾಂಡೆ ಕೈಲಿರುವುದಂತೂ ಖರೆ!!.
ಮೈತ್ರಿಕೂಟದ ಕ್ಯಾಂಡಿಡೇಟ್ ಆನಂದ ಅಸ್ನೋಟಿಕರ್ ಕಂಡರೆ ದೇಶಪಾಂಡೆಗೆ ಲಾಗಾಯ್ತಿನಿಂದಲೂ ಅಷ್ಟಕಷ್ಟೇ. ಆಸ್ನೋಟಿಕರ್ ತಂದೆ ವಸಂತ ಅಸ್ನೋಟಿಕರ್ ಎಂಬ ದಿವಂಗತ ರಾಬಿನ್‍ಹುಡ್, ಮ್ಯಾಗಿ ಕ್ಯಾಂಪಿನಲ್ಲಿದ್ದ ಕಾರವಾರದ ಅಂದಿನ ಶಾಸಕ. ಈತ ಭೂಗತ ಲೋಕದ ಜಿದ್ದಿಗೆ ಬಲಿಯಾದ. ಆತನ ಹೆಂಡತಿಯನ್ನು ಎಮ್ಮೆಲ್ಸಿ ಮಾಡಲು ಮ್ಯಾಗಿ ಪ್ರಯತ್ನಿಸಿದಾಗ ಇದೇ ದೇಶಪಾಂಡೆ ಅಡ್ಡಗಾಲು ಹಾಕಿದ್ದ. ಆದರೂ ಮ್ಯಾಗಿ ಶುಭಲತಾ ಅಸ್ನೋಟಿಕರ್‍ರನ್ನು ವಿಧಾನ ಪರಿಷತ್‍ಗೆ ಕಳಿಸಿದ್ದರು.

ಆನಂದ್ ಪ್ರಾಯಕ್ಕೆ ಬಂದ ನಂತರ ಮ್ಯಾಗಿ ಅಜ್ಜಿಯ ವಿರುದ್ಧವೇ ತಿರುಗಿಬಿದ್ದ. 2004ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಮ್ಯಾಗಿ ತನ್ನ ಚೇಲಾ ಅಶೋಕ್ ನಾಯ್ಕನನ್ನು ಕಾಂಗ್ರೆಸ್‍ನಿಂದ ಕಣಕ್ಕೆ ಇಳಿಸಿದ್ದು ಇದಕ್ಕೆ ಕಾರಣ. ಯಾಕೆಂದರೆ ಈ ಅಶೋಕ ಕಾರವಾರ ರಾಜಕಾರಣದಲ್ಲಿ ಆನಂದ್‍ಗೆ ವಿರೋಧಿಯಾಗಿದ್ದ. ಹೀಗಾಗಿ ಆನಂದ ಹಠಕ್ಕೆ ಬಿದ್ದು ಅಂದು ಬಿಜೆಪಿಯ ಅನಾಮಧೇಯ ಗಂಗಾಧರ ಭಟ್ಟ ಎಂಬುವನ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದಲ್ಲದೆ ಪರೋಕ್ಷವಾಗಿ ತಾನೇ ಶಾಸಕಗಿರಿ ನಡೆಸಿದ್ದ.

ಯಾವಾಗ ಆನಂದ್, ಮ್ಯಾಗಿ ವಿರುದ್ಧ ತಿರುಗಿಬಿದ್ದರೋ ಆಗ ಆತನಿಗೆ ಗಾಡ್‍ಫಾದರ್ ಆಗಿ ನಿಂತದ್ದು ದೇಶಪಾಂಡೆ! ಮ್ಯಾಗಿಯ ಪ್ರಬಲ ವಿರೋಧದ ನಡುವೆಯೂ ಆತನನ್ನು 2005ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾರವಾರದ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದರು. ಗೆದ್ದ ಆನಂದ ಮೂರೇ ತಿಂಗಳಿಗೆ ಆಪರೇಷನ್ ಕಮಲಕ್ಕೆ ಬಲಿಯಾಗಿ ರಾಜಕೀಯ ಬದುಕನ್ನೇ ಹಾಳು ಮಾಡಿಕೊಂಡಿದ್ದ. ಆ ಕಾರಣಕ್ಕೆ ದೇಶಪಾಂಡೆಗೆ ಈಗಲೂ ಆನಂದನ ಮೇಲಿನ ಸಿಟ್ಟು ಕಡಿಮೆಯಾಗಿಲ್ಲ. ಆನಂದ್ ಮೈತ್ರಿಕೂಟದ ಕ್ಯಾಂಡಿಡೇಟ್ ಎಂದು ಘೋಷಣೆ ಆದಾಗ ಎದುರಾಳಿ ಅನಂತ್ಮಾಣಿಗಿಂತಲೂ ಹೆಚ್ಚು ಡಿಸ್ಟರ್ಬ್ ಆದದ್ದು ಇದೇ ದೇಶಪಾಂಡೆ!


ಪಕ್ಕದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್‍ರನ್ನು ಜೆಡಿಎಸ್‍ಗೆ ಕಾಂಗ್ರೆಸ್ ಎರವಲು ಕೊಟ್ಟಂತೆ ಉತ್ತರಕನ್ನಡದಲ್ಲೂ ಡಿಸಿಸಿ ಅಧ್ಯಕ್ಷನೂ ತನ್ನ ಆಜ್ಞಾನುಧಾರಿಯೂ ಆದ ಭೀಮಣ್ಣ ನಾಯಕನಿಗೆ ಜೆಡಿಎಸ್ ಬಣ್ಣ ಬಳಿಯುವುದು ದೇಶಪಾಂಡೆ ಇರಾದೆಯಾಗಿತ್ತು. ಆದರೆ ಗೌಡರು, ಆಸ್ನೋಟಿಕರ್ ಬೇಡವೆಂದಾದರೆ ರಾಮಕೃಷ್ಣ ಹೆಗಡೆಯ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆಯನ್ನು ಒಪ್ಪಿಕೊಳ್ಳುವಿರಾ ಎಂದು ಕೇಳಿದಾಗ ದೇಶಪಾಂಡೆ ದಂಗಾಗಿಹೋದರು. ಗುರು ಹೆಗಡೆ ಫ್ಯಾಮಿಲಿಗೂ ದೇಶಪಾಂಡೆಗೂ ಪುರಾತನ ಹಗೆ ಹೊಗೆಯಾಡುತ್ತಲೇ ಇದೆ. ಹಾಗಾಗಿ ದೇಶಪಾಂಡೆ ಆಸ್ನೋಟಿಕರ್ ಕ್ಯಾಂಡಿಡೇಚರ್ ಒಪ್ಪಿಕೊಳ್ಳಬೇಕಾಯ್ತು.


ಮೈತ್ರಿಕೂಟದ ಹುರಿಯಾಳಿನ ಹೆಸರು ಬಹಿರಂಗವಾಗಿ ವಾರವೇ ಕಳೆದರೂ ದೇಶಪಾಂಡೆ ಮೊಗಮ್ಮಾಗೆ ಹೆಜ್ಜೆ ಹಾಕುತ್ತಿದ್ದಾರೆ. ಆನಂದ ಆಸ್ನೋಟಿಕರ್, ದೇಶಪಾಂಡೆ ಮನೆಗೆ ಹೋಗಿ ಅಡ್ಡಬಿದ್ದು ಬಂದರೂ ದೇಶಪಾಂಡೆ ಮಾತ್ರ ಜಿಲ್ಲೆಯತ್ತ ತಲೆಹಾಕಿಲ್ಲ. ಎಲ್ಲಿಯೂ ಆನಂದ್‍ಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಜಿಲ್ಲಾ ಲೀಡರ್‍ಗಳ ಜಂಟಿ ಪತ್ರಿಕಾಗೋಷ್ಠಿ ಹೊತ್ತಲ್ಲೂ ದೇಶಪಾಂಡೆಯ ಶಿಷ್ಯ ಭೀಮಣ್ಣ ನಾಯ್ಕ, ಆನಂದ ಅಂತರ ಕಾಯ್ದುಕೊಂಡಿದ್ದರು. ಈ ಭೀಮಣ್ಣ ಬಿಜೆಪಿಯ ಅನಂತ್ಮಾಣಿಯ ಅಂತರಂಗದ ಗೆಣೆಕಾರ. ಅನಂತ್ಮಾಣಿ ಶಿರಸಿಯ ವೈದ್ಯರಿಗೆ ಒಡೆದು ರಕ್ತ ಹರಿಸಿದಾಗ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸಾಂಕೇತಿಕವಾಗಿ ಕುಳಿತೆದ್ದು “ನಂಗೆ ಥಂಡಿ, ಕೆಮ್ಮು” ಎಂದು ಹೇಳಿ ಮಾತನಾಡದೆ ಮನೆಗೆ ಹೋಗಿದ್ದು ಅವರಿಬ್ಬರ ಗೆಳೆತನಕ್ಕೆ ಸಾಕ್ಷಿ.

ಸದ್ಯಕ್ಕೆ ಆಂಟಿಇನ್‍ಕಂಬೆನ್ಸಿಯಲ್ಲಿ ತೊಳಲಾಡುತ್ತಿರುವ ಬಿಜೆಪಿಯ ಅನಂತ್ಮಾಣಿ ವಿರುದ್ಧ ಮೈತ್ರಿಕೂಟ ಒಟ್ಟಾಗಿ ಅಖಾಡಕ್ಕಿಳಿದರೆ ಜಿಲ್ಲೆಯಲ್ಲಿ ಮತ್ತೆ ಸೆಕ್ಯುಲರ್ ರಾಜಕಾರಣ ಪ್ರತಿಷ್ಠಾಪಿಸುವುದು ಕಷ್ಟವೇನಲ್ಲ. ಇದು ಭವಿಷ್ಯದಲ್ಲಿ ದೇಶಪಾಂಡೆ ಮಗನ ರಾಜಕಾರಣಕ್ಕೂ ನೆರವಾಗುತ್ತದೆ. ಆದರೆ ದೇಶಪಾಂಡೆ ಇಷ್ಟು ವಿಶಾಲವಾಗಿ ಯೋಚಿಸಬಲ್ಲರೇ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...