Homeಕರ್ನಾಟಕಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ'ಯಲ್ಲಿ

ಉತ್ತರ ಕನ್ನಡ : ಬಿಜೆಪಿ ಹಣೆಬರಹ ದೇಶಪಾಂಡೆ `ಕೈ’ಯಲ್ಲಿ

- Advertisement -
- Advertisement -

| ಶುದ್ಧೋದನ |
ಉತ್ತರ ಕನ್ನಡದಲ್ಲಿ ವಿಪರೀತ ಬಿಸಿಲಿನ ಉರಿ ಮತ್ತು ಅಷ್ಟೇ ಪ್ರಮಾಣದ ಲೋಕಸಭಾ ಚುನಾವಣೆ ಕಾವು. ಜನರ ತಾತ್ಸಾರಕ್ಕೆ ತುತ್ತಾಗಿರುವ ಬಿಜೆಪಿಯ ಅನಂತಮಾಣಿ ಮೇಲೆ ಆಸ್ನೋಟಿಕರ್ ಏಕಾಂಗಿ ವೀರನಂತೆ ಮುಗಿಬೀಳುತ್ತಿದ್ದಾನೆ.
ಬರೋಬ್ಬರಿ 22 ವರ್ಷದ ಸಂಸದಗಿರಿಯಲ್ಲಿ ಅನಂತ್ಮಾಣಿ ಯೋಜನಾಬದ್ಧವಾಗಿ ಜಿಲ್ಲೆಗೆ ದ್ರೋಹ ಬಗೆದಿದ್ದಾನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಎಂದು ತಲೆ ಕೆಡಿಸಿಕೊಳ್ಳದ ಮಾಣಿ ಹೇಳೋದೊಂದು ಮಾಡೋದೊಂದು ಎಂಬುದು ಅರ್ಥವಾಗಿರುವ ಜನರಿಗೆ ಆತನ ಸಹವಾಸ ಸಾಕಾಗಿದೆ. ಇದರ ಅರ್ಥ ಇಷ್ಟೇ, ಮೈತ್ರಿಕೂಟದ ಕಿಂಗ್‍ಪಿನ್ ಆರ್.ವಿ.ದೇಶಪಾಂಡೆ ಮನಸಿಟ್ಟು ಕೆಲಸ ಮಾಡಿದರೆ ಜಿಲ್ಲೆಯ ರಾಜಕಾರಣದ ದಿಕ್ಕು ಬದಲಿಸುವುದು ಕಷ್ಟವಿಲ್ಲ.

ತನಗೆ ರಾಜಕೀಯ ದೀಕ್ಷೆ ಕೊಟ್ಟಿದ್ದ ಗುರು ಚಿತ್ತರಂಜನ್‍ರ ನಿಗೂಢ ಹತ್ಯೆಯ ಸೂತಕದ ಅಡಿಯಲ್ಲಿ ಮೊದಲ ಬಾರಿ ಸಂಸದನಾದ ಅನಂತ್ಮಾಣಿಯ ಆನಂತರದ 3 ಗೆಲುವುಗಳು ದೇಶಪಾಂಡೆ ಕೊಟ್ಟ ಉಡುಗೊರೆಗಳಂತಿದ್ದವು. ಆರನೇ ಬಾರಿ ಅನಂತ ಮಾಣಿ ಸ್ಪರ್ಧಿಸಿದಾಗ ದೇಶಪಾಂಡೆ ಕಾಂಗ್ರೆಸನ್ನು ತನಗರಿವಿಲ್ಲದಂತೆ ನಿರ್ನಾಮ ಮಾಡಿ ಆಗಿತ್ತು. ಹಾಗಾಗಿ ತನ್ನ ಮಗ ಪ್ರಶಾಂತ್ ಕಾಂಗ್ರೆಸ್ ಕ್ಯಾಂಡಿಡೇಟ್ ಆದರೂ ದೇಶಪಾಂಡೆಗೆ ಗೆಲ್ಲಿಸಿಕೊಳ್ಳಲಾಗಲಿಲ್ಲ. ದಿಲ್ಲಿ ಡಿಟೇಲ್ ರಾಜಕಾರಣಿ ಮಾರ್ಗರೇಟ್ ಆಳ್ವಾ ಜಿಲ್ಲಾ ಕಾಂಗ್ರೆಸ್‍ನ ಅಧಿನಾಯಕಿಯಾಗಿದ್ದ ಕಾಲದಲ್ಲಿ ಆಕೆಯ ಸೀರೆಯ ಚುಂಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ ಪಾಂಡೇಜಿ ಆಮೇಲೆ ಆಕೆಯ ವಿರುದ್ಧವೇ ತಿರುಗಿನಿಂತು ಕಾಂಗ್ರೆಸ್‍ನ ನಿರ್ನಾಮ ಮಾಡಿದ್ದು ಈಗ ಇತಿಹಾಸ.

ಒನ್ಸ್ ಎಗೇನ್, ಈಗ ಮೈತ್ರಿಕೂಟದ ಸೋಲು ಗೆಲುವು ದೇಶಪಾಂಡೆ ಕೈಲಿರುವುದಂತೂ ಖರೆ!!.
ಮೈತ್ರಿಕೂಟದ ಕ್ಯಾಂಡಿಡೇಟ್ ಆನಂದ ಅಸ್ನೋಟಿಕರ್ ಕಂಡರೆ ದೇಶಪಾಂಡೆಗೆ ಲಾಗಾಯ್ತಿನಿಂದಲೂ ಅಷ್ಟಕಷ್ಟೇ. ಆಸ್ನೋಟಿಕರ್ ತಂದೆ ವಸಂತ ಅಸ್ನೋಟಿಕರ್ ಎಂಬ ದಿವಂಗತ ರಾಬಿನ್‍ಹುಡ್, ಮ್ಯಾಗಿ ಕ್ಯಾಂಪಿನಲ್ಲಿದ್ದ ಕಾರವಾರದ ಅಂದಿನ ಶಾಸಕ. ಈತ ಭೂಗತ ಲೋಕದ ಜಿದ್ದಿಗೆ ಬಲಿಯಾದ. ಆತನ ಹೆಂಡತಿಯನ್ನು ಎಮ್ಮೆಲ್ಸಿ ಮಾಡಲು ಮ್ಯಾಗಿ ಪ್ರಯತ್ನಿಸಿದಾಗ ಇದೇ ದೇಶಪಾಂಡೆ ಅಡ್ಡಗಾಲು ಹಾಕಿದ್ದ. ಆದರೂ ಮ್ಯಾಗಿ ಶುಭಲತಾ ಅಸ್ನೋಟಿಕರ್‍ರನ್ನು ವಿಧಾನ ಪರಿಷತ್‍ಗೆ ಕಳಿಸಿದ್ದರು.

ಆನಂದ್ ಪ್ರಾಯಕ್ಕೆ ಬಂದ ನಂತರ ಮ್ಯಾಗಿ ಅಜ್ಜಿಯ ವಿರುದ್ಧವೇ ತಿರುಗಿಬಿದ್ದ. 2004ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಮ್ಯಾಗಿ ತನ್ನ ಚೇಲಾ ಅಶೋಕ್ ನಾಯ್ಕನನ್ನು ಕಾಂಗ್ರೆಸ್‍ನಿಂದ ಕಣಕ್ಕೆ ಇಳಿಸಿದ್ದು ಇದಕ್ಕೆ ಕಾರಣ. ಯಾಕೆಂದರೆ ಈ ಅಶೋಕ ಕಾರವಾರ ರಾಜಕಾರಣದಲ್ಲಿ ಆನಂದ್‍ಗೆ ವಿರೋಧಿಯಾಗಿದ್ದ. ಹೀಗಾಗಿ ಆನಂದ ಹಠಕ್ಕೆ ಬಿದ್ದು ಅಂದು ಬಿಜೆಪಿಯ ಅನಾಮಧೇಯ ಗಂಗಾಧರ ಭಟ್ಟ ಎಂಬುವನ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದಲ್ಲದೆ ಪರೋಕ್ಷವಾಗಿ ತಾನೇ ಶಾಸಕಗಿರಿ ನಡೆಸಿದ್ದ.

ಯಾವಾಗ ಆನಂದ್, ಮ್ಯಾಗಿ ವಿರುದ್ಧ ತಿರುಗಿಬಿದ್ದರೋ ಆಗ ಆತನಿಗೆ ಗಾಡ್‍ಫಾದರ್ ಆಗಿ ನಿಂತದ್ದು ದೇಶಪಾಂಡೆ! ಮ್ಯಾಗಿಯ ಪ್ರಬಲ ವಿರೋಧದ ನಡುವೆಯೂ ಆತನನ್ನು 2005ರ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಕಾರವಾರದ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ದರು. ಗೆದ್ದ ಆನಂದ ಮೂರೇ ತಿಂಗಳಿಗೆ ಆಪರೇಷನ್ ಕಮಲಕ್ಕೆ ಬಲಿಯಾಗಿ ರಾಜಕೀಯ ಬದುಕನ್ನೇ ಹಾಳು ಮಾಡಿಕೊಂಡಿದ್ದ. ಆ ಕಾರಣಕ್ಕೆ ದೇಶಪಾಂಡೆಗೆ ಈಗಲೂ ಆನಂದನ ಮೇಲಿನ ಸಿಟ್ಟು ಕಡಿಮೆಯಾಗಿಲ್ಲ. ಆನಂದ್ ಮೈತ್ರಿಕೂಟದ ಕ್ಯಾಂಡಿಡೇಟ್ ಎಂದು ಘೋಷಣೆ ಆದಾಗ ಎದುರಾಳಿ ಅನಂತ್ಮಾಣಿಗಿಂತಲೂ ಹೆಚ್ಚು ಡಿಸ್ಟರ್ಬ್ ಆದದ್ದು ಇದೇ ದೇಶಪಾಂಡೆ!


ಪಕ್ಕದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್‍ರನ್ನು ಜೆಡಿಎಸ್‍ಗೆ ಕಾಂಗ್ರೆಸ್ ಎರವಲು ಕೊಟ್ಟಂತೆ ಉತ್ತರಕನ್ನಡದಲ್ಲೂ ಡಿಸಿಸಿ ಅಧ್ಯಕ್ಷನೂ ತನ್ನ ಆಜ್ಞಾನುಧಾರಿಯೂ ಆದ ಭೀಮಣ್ಣ ನಾಯಕನಿಗೆ ಜೆಡಿಎಸ್ ಬಣ್ಣ ಬಳಿಯುವುದು ದೇಶಪಾಂಡೆ ಇರಾದೆಯಾಗಿತ್ತು. ಆದರೆ ಗೌಡರು, ಆಸ್ನೋಟಿಕರ್ ಬೇಡವೆಂದಾದರೆ ರಾಮಕೃಷ್ಣ ಹೆಗಡೆಯ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆಯನ್ನು ಒಪ್ಪಿಕೊಳ್ಳುವಿರಾ ಎಂದು ಕೇಳಿದಾಗ ದೇಶಪಾಂಡೆ ದಂಗಾಗಿಹೋದರು. ಗುರು ಹೆಗಡೆ ಫ್ಯಾಮಿಲಿಗೂ ದೇಶಪಾಂಡೆಗೂ ಪುರಾತನ ಹಗೆ ಹೊಗೆಯಾಡುತ್ತಲೇ ಇದೆ. ಹಾಗಾಗಿ ದೇಶಪಾಂಡೆ ಆಸ್ನೋಟಿಕರ್ ಕ್ಯಾಂಡಿಡೇಚರ್ ಒಪ್ಪಿಕೊಳ್ಳಬೇಕಾಯ್ತು.


ಮೈತ್ರಿಕೂಟದ ಹುರಿಯಾಳಿನ ಹೆಸರು ಬಹಿರಂಗವಾಗಿ ವಾರವೇ ಕಳೆದರೂ ದೇಶಪಾಂಡೆ ಮೊಗಮ್ಮಾಗೆ ಹೆಜ್ಜೆ ಹಾಕುತ್ತಿದ್ದಾರೆ. ಆನಂದ ಆಸ್ನೋಟಿಕರ್, ದೇಶಪಾಂಡೆ ಮನೆಗೆ ಹೋಗಿ ಅಡ್ಡಬಿದ್ದು ಬಂದರೂ ದೇಶಪಾಂಡೆ ಮಾತ್ರ ಜಿಲ್ಲೆಯತ್ತ ತಲೆಹಾಕಿಲ್ಲ. ಎಲ್ಲಿಯೂ ಆನಂದ್‍ಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಜಿಲ್ಲಾ ಲೀಡರ್‍ಗಳ ಜಂಟಿ ಪತ್ರಿಕಾಗೋಷ್ಠಿ ಹೊತ್ತಲ್ಲೂ ದೇಶಪಾಂಡೆಯ ಶಿಷ್ಯ ಭೀಮಣ್ಣ ನಾಯ್ಕ, ಆನಂದ ಅಂತರ ಕಾಯ್ದುಕೊಂಡಿದ್ದರು. ಈ ಭೀಮಣ್ಣ ಬಿಜೆಪಿಯ ಅನಂತ್ಮಾಣಿಯ ಅಂತರಂಗದ ಗೆಣೆಕಾರ. ಅನಂತ್ಮಾಣಿ ಶಿರಸಿಯ ವೈದ್ಯರಿಗೆ ಒಡೆದು ರಕ್ತ ಹರಿಸಿದಾಗ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸಾಂಕೇತಿಕವಾಗಿ ಕುಳಿತೆದ್ದು “ನಂಗೆ ಥಂಡಿ, ಕೆಮ್ಮು” ಎಂದು ಹೇಳಿ ಮಾತನಾಡದೆ ಮನೆಗೆ ಹೋಗಿದ್ದು ಅವರಿಬ್ಬರ ಗೆಳೆತನಕ್ಕೆ ಸಾಕ್ಷಿ.

ಸದ್ಯಕ್ಕೆ ಆಂಟಿಇನ್‍ಕಂಬೆನ್ಸಿಯಲ್ಲಿ ತೊಳಲಾಡುತ್ತಿರುವ ಬಿಜೆಪಿಯ ಅನಂತ್ಮಾಣಿ ವಿರುದ್ಧ ಮೈತ್ರಿಕೂಟ ಒಟ್ಟಾಗಿ ಅಖಾಡಕ್ಕಿಳಿದರೆ ಜಿಲ್ಲೆಯಲ್ಲಿ ಮತ್ತೆ ಸೆಕ್ಯುಲರ್ ರಾಜಕಾರಣ ಪ್ರತಿಷ್ಠಾಪಿಸುವುದು ಕಷ್ಟವೇನಲ್ಲ. ಇದು ಭವಿಷ್ಯದಲ್ಲಿ ದೇಶಪಾಂಡೆ ಮಗನ ರಾಜಕಾರಣಕ್ಕೂ ನೆರವಾಗುತ್ತದೆ. ಆದರೆ ದೇಶಪಾಂಡೆ ಇಷ್ಟು ವಿಶಾಲವಾಗಿ ಯೋಚಿಸಬಲ್ಲರೇ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...