Homeಕರ್ನಾಟಕಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

ಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

- Advertisement -
- Advertisement -

2017ರ ಡಿಸೆಂಬರ್‍ನ ಅಂತ್ಯಾರ್ಧದ ಅತ್ಯಂತ ಆತಂಕದ ದಿನಗಳವು! ಇಡೀ ಉತ್ತರ ಕನ್ನಡ ಕೋಮು ಕಿಚ್ಚಿನಲ್ಲಿ ಬೆಂದು ಬಸವಳಿದ ಸಂದರ್ಭವದು!! ಹೊನ್ನಾವರದ ಮೀನುಗಾರ ಕುಲದ ಪರೇಶ್ ಮೇಸ್ತಾ ನಿಗೂಢವಾಗಿ ಸತ್ತದ್ದನ್ನು ಸಂಘಪರಿವಾರದ ಧರ್ಮಾಕಾರಣ ಪಂಡಿತರು ಎದುರಾಗಿದ್ದ ಅಸೆಂಬ್ಲಿ ಇಲೆಕ್ಷನ್‍ಗೆ ಅಸ್ತ್ರವಾಗಿ ಮಾಡಿಕೊಂಡಿದ್ದರು. ಪರೇಶ್‍ನನ್ನು ಸಾಬರ ಸೈತಾನರು ಕೊಂದು ಕೆರೆಗೆಸೆದಿದ್ದಾರೆಂದು ಹುಸಿ ಹುಯಿಲೆಬ್ಬಿಸಿದ ಬಿಜೆಪಿ ಕೊಳ್ಳಿ ದೆವ್ವಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಶಿರಸಿ, ಯಲ್ಲಾಪುರದಂಥ ಆಯಕಟ್ಟಿನ ತಾಲ್ಲೂಕುಗಳಲ್ಲಿ ಕೋಮುಗಲಭೆ ಎಬ್ಬಿಸಿ ಕೇಕೆ ಹಾಕಿದವು. ಸಾಬರ ಅಟ್ಟಾಡಿಸಿ ಕಾಡಿತು; ಐಜಿಪಿ ಕಾರಿಗೆ, ಚಾಲಕನಿಗೇ ಬೆಂಕಿ ಹಾಕಲಾಯಿತು….

ಪರೇಶ್‍ನ ಪ್ರಕರಣ ಸಿಬಿಐ ವಹಿಸಬೇಕೆಂದು ಕೂಗು ಮಾರಿ ಶೋಭಕ್ಕ, ಅಸಡ್ಡಾಳ ಹಲಬುಗಾರ ಅನಂತ್ಮಾಣಿ ಆಗಿಯಾಗಿ ಯಡ್ಡಿ ಸಕಲ ಚೆಡ್ಡಿಗಳೆಲ್ಲ ಏಕಕಂಠದಲ್ಲಿ ಬೊಬ್ಬೆಹೊಡೆದರು. ಅಂದಿನ ಸಿದ್ದು ಸರ್ಕಾರ ಪ್ರತಿಷ್ಟೆಗೆ ಬೀಳದೆ ಪ್ರಕರಣ ಸಿಬಿಐಗೆ ವಹಿಸಿತು. ಮೋದಿ-ಶಾ ಮೂಗಿನಡಿಯೇ ಇರುವ ಸಿಬಿಐ ಮಾತ್ರ ಇವತ್ತಿಗೂ ಪರೇಶನ ಮುಸ್ಲಿಮರು ಹತ್ಯೆ ಮಾಡಿದ್ದಾರೋ ಅಥವಾ ಆತನೇ ಕಾಲು ಜಾರಿ ಕೆರೆಗೆ ಬಿದ್ದು ಸತ್ತನೋ ಎಂಬ ತನಿಖೆ ಮಾಡುತ್ತಲೇ ಇಲ್ಲ. ಆದರೆ ಬಿಜೆಪಿ ಪರೇಶ್ ಮೇಸ್ತಾನ ಮರಣ ಮಹಿಮೆಯನ್ನೇ ಪ್ರಣಾಳಿಕೆ ಮಾಡಿಕೊಂಡು ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಬಂಪರ್ ಎಮ್ಮೆಲ್ಲೆ ಕೊಯ್ಲು ಮಾಡಿತು. ಶಾಸಕರಾಗುವ ಕನಿಷ್ಠ ಯೋಗ್ಯತೆಯೂ ಇಲ್ಲದ ಕಾರವಾರದ ರೂಪಾಲಿ ನಾಯ್ಲ್, ಕುಮಟೆಯ ದಿನಕರ ಶೆಟ್ಟಿ, ಭಟ್ಕಳದ ಸುನೀಲ್ ನಾಯ್ಕ್ ಮತ್ತು ಶಿರಸಿಯ ಕಾಗೇರಿ ಮಾಣಿಗಳೆಲ್ಲ ಖುದ್ದು ದಿಗಿಲು ಬೀಳುವಂತೆ ವಿಧಾನಸೌಧಕ್ಕೆ ಎಂಟ್ರಿ ಹೊಡೆದಿದ್ದರು. ಸಾಯುವತನಕ ಪರೇಶನ ಫೋಟೋಕ್ಕೆ ಪೂಜೆ ಸಲ್ಲಿಸುವ ಋಣಕ್ಕೆ ಬಿದ್ದಿದ್ದರು.

ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶನ ಪಾರ್ಥಿವ ಶರೀರ ಕಂಡ ಕ್ಷಣವೇ ಶೂದ್ರ ಹುಡುಗರ ಮತಾಂಧ ಮಸಲತ್ತಿಗಿಳಿದ ಬಿಜೆಪಿಯ ಜನಿವಾರ ಲೀಡರ್‍ಗಳು ಚುನಾವಣೆಯ ಗೆಲುವಿನ ಗಣಿತ ಹಾಕತೊಡಗಿದ್ದರು. ಕಾರವಾರ, ಕುಮಟಾ, ಹೊನ್ನಾವರ ಮತ್ತು ಶಿರಸಿಯ ಸುಮಾರು 2,000 ಶೂದ್ರ ಹುಡುಗರು ಕಮ್ಯುನಲ್ ಕ್ರಿಮಿನಲ್ ಕೇಸ್‍ಗೆ ಬಿದ್ದರು. ಕೋರ್ಟ್-ಕಚೇರಿ ಅಲೆಯುತ್ತ ಉದ್ಯೋಗ, ವ್ಯವಹಾರ ಹಾಳು ಮಾಡಿಕೊಂಡರು. ಸರ್ಕಾರಿ ನೌಕರಿ ಸಿಗದಂತಾಯಿತು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ತಮ್ಮಿಂದ ಶಾಸಕರಾದವರ ಕೊರಳಪಟ್ಟಿ ಹಿಡಿದು ಕೇಸ್ ಖತಮ್ ಮಾಡಿಸುವಂತೆ ಒತ್ತಾಯಿಸತೊಡಗಿದರು. ಯಡ್ಡಿ ಜತೆಗಿನ “ಸಲಿಗೆ” ಬಳಸಿ ಸಿಎಂ ಒಪ್ಪಿಗೆಯೂ ಸೂಚಿಸಿದರು. ರೂಪಾಲಿಗೆ ಜಿಲ್ಲೆಯ ಬಿಜೆಪಿ ಪುರುಷ ಶಾಸಕರಿಗಿಂತ “ಗ್ರೇಟ್”ಎಂಬ ಪ್ರಶಂಸೆ ಬಂತು.

ಒಂದು ಹಂತದಲ್ಲಿ ಬಿಜೆಪಿಯ “ಗಂಡು ಎಮ್ಮಲ್ಲೆ”ಗಳೆಲ್ಲ ರೂಪಾಲಿ ಮೇಲೆ ಮುರುಕೊಂಡು ಬಿದ್ದರು. ಆಕೆ ಮಹಿಳಾ ಕೋಟಾದಲ್ಲಿ ಮಂತ್ರಿಗಿರಿಗೆ, ನಿಗಮದ ಪೀಠಕ್ಕೆ ಪ್ರಯತ್ನ ಪಟ್ಟಂತೆಲ್ಲಾ ಕಲ್ಲು ಹಾಕಿದರು. ಬಿಜೆಪಿಯಲ್ಲಿ ಶಾಸಕರ ಸಮರ ಜೋರಾಯಿತು. ತಂತಮ್ಮ ಕ್ಷೇತ್ರದಲ್ಲಿ ಹೇತ್ಲಾಂಡಿ ಎನಿಸಿಕೊಳ್ಳುವ ಭಯಕ್ಕೆ ಬಿದ್ದು ಗಂಡು ಶಾಸಕರು ಒಂದಾಗಿ ತಮ್ಮ ಶಿಷ್ಯರ ಮೇಲಿನ ಕಮ್ಯುನಲ್ ಕೇಸು ವಾಪಸ್ ಪಡೆಯುವಂತೆ ಯಡ್ಡಿಬಳಿ ಎಡತಾಕತೊಡಗಿದರು. ಇವರಿಗೂ ಯಡ್ಡಿ ‘ತಥಾಸ್ತು’ ಎಂದರು.

ಕಂತ್ರಿ ಕಸರತ್ತಿನಲ್ಲಿ ನಿಸ್ಸೀಮನಾದ ದಿನಕರ ಶೆಟ್ಟಿ ಎದುರಾಳಿ ರೂಪಾಲಿಗೆ ಮುಖಭಂಗ ಮಾಡಲು ಒಳಗೊಳಗೇ ಪ್ರಯತ್ನ ನಡೆಸಿದ್ದರು. ಹೀಗಾಗಿ ಮೊನ್ನೆ ಕುಮಟಾದ ನಾಲ್ಕು ಪ್ರಕರಣದ 18 ಜನರ ಮೇಲಿನ ಕೇಸು ಸರ್ಕಾರ ವಾಪಸ್ ಪಡೆದಿದೆ. ಅಷ್ಟೇ ಅಲ್ಲ ಕಾರವಾರದ ಕೇಸ್ ನಿಖಾಲಿ ನೆನೆಗುದಿಗೆ ಬಿದ್ದಿದೆ ಎಂಬ ಗುಲ್ಲು ಎಬ್ಬಿಸಲಾಗಿದೆ. ಅಲ್ಲಿಗೆ ರೂಪಾಲಿ ನಾಯ್ಕ್ ಪೇಚಿಗೆ ಬಿದ್ದಂತಾಗಿದೆ. ಆಕೆ ಹೇಳಿಕೆ ಮೇಲೆ ಹೇಳಿಕೆ ಕೊಡುತ್ತ ತನ್ನ ಕ್ಷೇತ್ರದ ಪುಂಡರ ಮೇಲಿನ ಪ್ರಕರಣಗಳೂ ಸದ್ಯವೇ ಸರ್ಕಾರ ಹಿಂಪಡೆಯುತ್ತದೆಂದು ಸಮಜಾಯಿಸಿ ಕೊಡತೊಡಗಿದ್ದಾರೆ. ಸ್ಪೀಕರ್ ಕಾಗೇರಿಯೂ ಯೆಡ್ಡಿ ಬೇಕಂತಲೇ ತನ್ನ ಕ್ಷೇತ್ರದ ಗಲಭೆಗ್ರಸ್ತರ ಪ್ರಕರಣ ನಿಖಾಲಿ ಮಾಡಿಲ್ಲವೆಂಬ ಗುಮಾನಿಗೆ ಬಿದ್ದಿದ್ದಾರೆ. ಕಾಗೇರಿ ಎಂದಿದ್ದರೂ ಯಡ್ಡಿ ವಿರೋಧಿ ಪಾಳಯದ ಕಲಿ. ಭಟ್ಕಳದ ಸುನೀಲ್ ನಾಯ್ಕ್ ಇದೆಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಕಳ್ಳ ಕಾಸು ಮಾಡುವ ಸ್ಕೆಚ್‍ನಲ್ಲಿ ತಲ್ಲೀನನಾಗಿದ್ದಾನೆ. ಆದರೆ, ಒಂದಂತೂ ಖರೆ, ಪರೇಶ್ ಪ್ರಕರಣ ಕ್ರಿಮಿನಲ್ ಕೇಸ್ ಖತಮ್ ಬಿಜೆಪಿಯ ಶಾಸಕರ ನಡುವಿನ ಗ್ಯಾಂಗ್ ವಾರ್‍ಗೆ ಹೊಸ ಆಯಾಮವಂತೂ ಕೊಟ್ಟಿದೆ!!

ಪರೇಶ್ ಸಾವಿನ ನಂತರದ 140 ಪ್ರಕರಣ ಮತ್ತು ಟಿಪ್ಪು ಜಯಂತಿ ವಿರುದ್ಧ ಹಿಂದೂತ್ವದ ಕಹಳೆ ಮೊಳಗಿಸಿ ಸಿಕ್ಕಿಬಿದ್ದವರ ಕೇಸ್ ಖತಮ್ ಮಾಡಿಸಿ ಓಟ್ ಬ್ಯಾಂಕ್ ಭದ್ರತೆಗೆ ತಿಪ್ಪರಲಾಗ ಹಾಕುತ್ತಿರುವ ಜಿಲ್ಲೆಯ ಬಿಜೆಪಿ ಶಾಸಕ-ಸಂಸದ-ಮಂತ್ರಿಗೆ ಪರೇಶ್ ಸಾವಿನ ರಹಸ್ಯ ಭೇದಿಸಿ ಆತನ ಹೆತ್ತವರಿಗೆ ನ್ಯಾಯ ಕೊಡಿಸಬೇಕೆಂಬ ತುಡಿತವೇನೂ ಇಲ್ಲ. ಸಂಘಪರಿವಾರದ ರಿಂಗ್ ಮಾಸ್ಟರ್‍ಗಳಿಗೇ ಬೇಡದ ಈ ತನಿಖೆ ಉಸಾಬರಿ ಬಿಜೆಪಿಯ ಬೊಬ್ಬೆಕೋರರ ಅಸಲಿ ಅವತಾರ ಅನಾವರಣವಾಗುತ್ತದೆಂಬುದು ಸಂಘಸರದಾರಿಗೆ ಗೊತ್ತಿದೆ. ಹಾಗಾಗಿ ಸಿಬಿಐ ತನಿಖೆಗೆ ಬಿಜೆಪಿ ಭೂಪರೇ ಅಡ್ಡಗಾಲು ಹಾಕಿ ಕುಂತಿದ್ದಾರೆ. ಇವತ್ತಿಗೂ ಪರೇಶ್‍ನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯೇ ಬಂದಿಲ್ಲ! ಇವತ್ತಿನ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅಂದು ಬಿಜೆಪಿ ರಷ್ಟ್ರಾಧ್ಯಕ್ಷನಾಗಿ ಪರೇಶ್‍ನ ಮನೆಗೆ ಬಂದು ಆತನ ಹೆತ್ತವರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದ್ದರು; ಅಂದಿನ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್, ಯಡ್ಡಿ ಸೇರಿದಂತೆ ವಗೈರೆ ಹಿರಿ-ಮರಿ ಪುಢಾರಿಗಳು ಸರತಿಯಂತೆ ಪರೇಶನ ಮನೆಗೆ ಬಂದು ಮೊಸಳೆ ಕಣ್ಣಿರು ಕೋಡಿ ಹರಿಸಿದ್ದರು.

ಇವರೆಲ್ಲಾ ಈಗ ಗಪ್‍ಚುಪ್ ಆಗಿರುವುದೇ ಪರೇಶ್ ಮೇಸ್ತಾನ ಸಾಬರು ಕೊಂದಿಲ್ಲ ಎಂಬುದು ಖಾತ್ರಿಪಡಿಸುವಂತಿದೆ. ಅನಂತ್ಮಾಣಿಗೆ ರಾಜಕಾರಣದ ದೀಕ್ಷೆ ಕೊಟ್ಟು ಸಂಸದನಾಗಿ ಮಾಡಿದ್ದ ಆತನ ಗುರು-ಅಂದಿನ ಉತ್ತರ ಕನ್ನಡದ ಹಿಂದೂತ್ವದ ಬೆಂಕಿ ನಾಯಕ ಡಾ| ಚಿತ್ತರಂಜನ್ ಎಮ್ಮೆಲ್ಲೆಯಾಗಿದ್ದಾಗಲೇ ಹತನಾಗಿದ್ದರು. ಬಿಜೆಪಿ ವಾಜಪೇಯಿ ಸರ್ಕಾರವಿದ್ದಾಗಲೇ ಈ ಕೇಸ್ ಪತ್ತೆಯಾಗದ ಪ್ರಕರಣವೆಂದು ಸಿಬಿಐ “ಸಿ-ರಿಪೋರ್ಟ್” ಜಡಿದಿದೆ. ಭಟ್ಕಳದ ಮತ್ತೊಬ್ಬ ಹಿಂದೂ ಮುಂದಾಳು ತಿಮ್ಮಪ್ಪ ನಾಯ್ಕನ ಕೊಲೆ ತನಿಖೆಯೂ ಸರಿಯಾಗಿ ಆಗಲಿಲ್ಲ. ಈ ಹಳ್ಳ ಹಿಡಿದ ಕೇಸ್‍ಗಳ ಬಗ್ಗೆಯೇ ತಲೆಕೆಡಿಸಿಕೊಳ್ಳದ ಅನಂತ್ಮಾಣಿ, ಯಡ್ಡಿ, ಶೋಭಕ್ಕ, ಅಮಿತ್ ಶಾ, ಮೋದಿ. ಮುಂತಾದ ಹಿಂದೂ ಕುಲೋದ್ಧಾರಕರಿಗೆ ಪಾಪದ ಬೆಸ್ತರ ಹುಡುಗ ಪರೇಶ್‍ನ ಸಾವೆಲ್ಲಾ ಯಾವ ಲೆಕ್ಕ?

ಓಟ್ ಬ್ಯಾಂಕ್‍ಗಾಗಿ ಹೆಣದ ರಾಜಕಾರಣ ಮಾಡುವ ಬಿಜೆಪಿಗರ ಬಣ್ಣವೀಗ ಬಯಲಾಗುತ್ತಿದೆ. ಹಿಂದೂತ್ವದ ಅಮಲೇರಿಸಿಕೊಂಡು ಪರೇಶ್ ಸಾವಿನ ನಂತರ ದೊಂಬಿ-ಹಿಂಸಾಚಾರಕ್ಕಿಳಿದಿದ್ದ ಶೂದ್ರ ಹುಡುಗರಿಗೀಗ ಸತ್ಯ ಗೊತ್ತಾಗಿದೆ. 13-12-2017ರಂದು ಹೊನ್ನಾವರದ ಶನಿದೇವರ ಅಂಗಳ ಮತ್ತು ಸಾಬರ ಗುಡ್‍ಲಕ್ ಹೋಟೆಲಿನ ಮುಂಭಾಗದಲ್ಲಾದ ಪೊಲೀಸರ ಲಾಠಿ ಚಾರ್ಜ್‍ಗೆ ಬೆದರಿದ ಪರೇಶ್ ಮೇಸ್ತಾ ಬಚಾವಾಗಲು ಪಕ್ಕದ ಶೆಟ್ಟಿಕೆರೆ ಆವರಣ ಗೋಡೆ ಹಾರಿ ಅವಿತಿಟ್ಟುಕೊಳ್ಳುವ ಪ್ರಯತ್ನದಲ್ಲಿ ಕಾಲುಜಾರಿ ಕೆರೆಗೆ ಬಿದ್ದು ಸತ್ತಿದ್ದಾನೆ; ಆತನನ್ನು ಸಾಬರು ಸಾಯಿಸಿಲ್ಲ ಎಂದು ಈಗ ವ್ಯಾಖ್ಯಾನ ಮಾಡಲಾಗುತ್ತಿದೆ. ಪೊಲೀಸರಿಗೆ, ಸಿಬಿಐಗೆ ಮತ್ತು ಪ್ರಜ್ಞಾವಂತರಿಗೂ ಇದೇ ಜಿಜ್ಞಾಸೆಯಿದೆ. ಸಂಘ ಸರದಾರರಿಗೆ ಇದು ಮೊದಲೇ ಗೊತ್ತಿದೆ? ಆದರೆ ಹಿಂದೂತ್ವದ ಅಭಿಯಾನಕ್ಕಾಗಿ ಪರೇಶ್‍ನ ಸಂಘಿಗಳು ಬಿಡಲು ಸಿದ್ಧರಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...