Homeಕರ್ನಾಟಕಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

ಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

- Advertisement -
- Advertisement -

2017ರ ಡಿಸೆಂಬರ್‍ನ ಅಂತ್ಯಾರ್ಧದ ಅತ್ಯಂತ ಆತಂಕದ ದಿನಗಳವು! ಇಡೀ ಉತ್ತರ ಕನ್ನಡ ಕೋಮು ಕಿಚ್ಚಿನಲ್ಲಿ ಬೆಂದು ಬಸವಳಿದ ಸಂದರ್ಭವದು!! ಹೊನ್ನಾವರದ ಮೀನುಗಾರ ಕುಲದ ಪರೇಶ್ ಮೇಸ್ತಾ ನಿಗೂಢವಾಗಿ ಸತ್ತದ್ದನ್ನು ಸಂಘಪರಿವಾರದ ಧರ್ಮಾಕಾರಣ ಪಂಡಿತರು ಎದುರಾಗಿದ್ದ ಅಸೆಂಬ್ಲಿ ಇಲೆಕ್ಷನ್‍ಗೆ ಅಸ್ತ್ರವಾಗಿ ಮಾಡಿಕೊಂಡಿದ್ದರು. ಪರೇಶ್‍ನನ್ನು ಸಾಬರ ಸೈತಾನರು ಕೊಂದು ಕೆರೆಗೆಸೆದಿದ್ದಾರೆಂದು ಹುಸಿ ಹುಯಿಲೆಬ್ಬಿಸಿದ ಬಿಜೆಪಿ ಕೊಳ್ಳಿ ದೆವ್ವಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಶಿರಸಿ, ಯಲ್ಲಾಪುರದಂಥ ಆಯಕಟ್ಟಿನ ತಾಲ್ಲೂಕುಗಳಲ್ಲಿ ಕೋಮುಗಲಭೆ ಎಬ್ಬಿಸಿ ಕೇಕೆ ಹಾಕಿದವು. ಸಾಬರ ಅಟ್ಟಾಡಿಸಿ ಕಾಡಿತು; ಐಜಿಪಿ ಕಾರಿಗೆ, ಚಾಲಕನಿಗೇ ಬೆಂಕಿ ಹಾಕಲಾಯಿತು….

ಪರೇಶ್‍ನ ಪ್ರಕರಣ ಸಿಬಿಐ ವಹಿಸಬೇಕೆಂದು ಕೂಗು ಮಾರಿ ಶೋಭಕ್ಕ, ಅಸಡ್ಡಾಳ ಹಲಬುಗಾರ ಅನಂತ್ಮಾಣಿ ಆಗಿಯಾಗಿ ಯಡ್ಡಿ ಸಕಲ ಚೆಡ್ಡಿಗಳೆಲ್ಲ ಏಕಕಂಠದಲ್ಲಿ ಬೊಬ್ಬೆಹೊಡೆದರು. ಅಂದಿನ ಸಿದ್ದು ಸರ್ಕಾರ ಪ್ರತಿಷ್ಟೆಗೆ ಬೀಳದೆ ಪ್ರಕರಣ ಸಿಬಿಐಗೆ ವಹಿಸಿತು. ಮೋದಿ-ಶಾ ಮೂಗಿನಡಿಯೇ ಇರುವ ಸಿಬಿಐ ಮಾತ್ರ ಇವತ್ತಿಗೂ ಪರೇಶನ ಮುಸ್ಲಿಮರು ಹತ್ಯೆ ಮಾಡಿದ್ದಾರೋ ಅಥವಾ ಆತನೇ ಕಾಲು ಜಾರಿ ಕೆರೆಗೆ ಬಿದ್ದು ಸತ್ತನೋ ಎಂಬ ತನಿಖೆ ಮಾಡುತ್ತಲೇ ಇಲ್ಲ. ಆದರೆ ಬಿಜೆಪಿ ಪರೇಶ್ ಮೇಸ್ತಾನ ಮರಣ ಮಹಿಮೆಯನ್ನೇ ಪ್ರಣಾಳಿಕೆ ಮಾಡಿಕೊಂಡು ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಬಂಪರ್ ಎಮ್ಮೆಲ್ಲೆ ಕೊಯ್ಲು ಮಾಡಿತು. ಶಾಸಕರಾಗುವ ಕನಿಷ್ಠ ಯೋಗ್ಯತೆಯೂ ಇಲ್ಲದ ಕಾರವಾರದ ರೂಪಾಲಿ ನಾಯ್ಲ್, ಕುಮಟೆಯ ದಿನಕರ ಶೆಟ್ಟಿ, ಭಟ್ಕಳದ ಸುನೀಲ್ ನಾಯ್ಕ್ ಮತ್ತು ಶಿರಸಿಯ ಕಾಗೇರಿ ಮಾಣಿಗಳೆಲ್ಲ ಖುದ್ದು ದಿಗಿಲು ಬೀಳುವಂತೆ ವಿಧಾನಸೌಧಕ್ಕೆ ಎಂಟ್ರಿ ಹೊಡೆದಿದ್ದರು. ಸಾಯುವತನಕ ಪರೇಶನ ಫೋಟೋಕ್ಕೆ ಪೂಜೆ ಸಲ್ಲಿಸುವ ಋಣಕ್ಕೆ ಬಿದ್ದಿದ್ದರು.

ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶನ ಪಾರ್ಥಿವ ಶರೀರ ಕಂಡ ಕ್ಷಣವೇ ಶೂದ್ರ ಹುಡುಗರ ಮತಾಂಧ ಮಸಲತ್ತಿಗಿಳಿದ ಬಿಜೆಪಿಯ ಜನಿವಾರ ಲೀಡರ್‍ಗಳು ಚುನಾವಣೆಯ ಗೆಲುವಿನ ಗಣಿತ ಹಾಕತೊಡಗಿದ್ದರು. ಕಾರವಾರ, ಕುಮಟಾ, ಹೊನ್ನಾವರ ಮತ್ತು ಶಿರಸಿಯ ಸುಮಾರು 2,000 ಶೂದ್ರ ಹುಡುಗರು ಕಮ್ಯುನಲ್ ಕ್ರಿಮಿನಲ್ ಕೇಸ್‍ಗೆ ಬಿದ್ದರು. ಕೋರ್ಟ್-ಕಚೇರಿ ಅಲೆಯುತ್ತ ಉದ್ಯೋಗ, ವ್ಯವಹಾರ ಹಾಳು ಮಾಡಿಕೊಂಡರು. ಸರ್ಕಾರಿ ನೌಕರಿ ಸಿಗದಂತಾಯಿತು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ತಮ್ಮಿಂದ ಶಾಸಕರಾದವರ ಕೊರಳಪಟ್ಟಿ ಹಿಡಿದು ಕೇಸ್ ಖತಮ್ ಮಾಡಿಸುವಂತೆ ಒತ್ತಾಯಿಸತೊಡಗಿದರು. ಯಡ್ಡಿ ಜತೆಗಿನ “ಸಲಿಗೆ” ಬಳಸಿ ಸಿಎಂ ಒಪ್ಪಿಗೆಯೂ ಸೂಚಿಸಿದರು. ರೂಪಾಲಿಗೆ ಜಿಲ್ಲೆಯ ಬಿಜೆಪಿ ಪುರುಷ ಶಾಸಕರಿಗಿಂತ “ಗ್ರೇಟ್”ಎಂಬ ಪ್ರಶಂಸೆ ಬಂತು.

ಒಂದು ಹಂತದಲ್ಲಿ ಬಿಜೆಪಿಯ “ಗಂಡು ಎಮ್ಮಲ್ಲೆ”ಗಳೆಲ್ಲ ರೂಪಾಲಿ ಮೇಲೆ ಮುರುಕೊಂಡು ಬಿದ್ದರು. ಆಕೆ ಮಹಿಳಾ ಕೋಟಾದಲ್ಲಿ ಮಂತ್ರಿಗಿರಿಗೆ, ನಿಗಮದ ಪೀಠಕ್ಕೆ ಪ್ರಯತ್ನ ಪಟ್ಟಂತೆಲ್ಲಾ ಕಲ್ಲು ಹಾಕಿದರು. ಬಿಜೆಪಿಯಲ್ಲಿ ಶಾಸಕರ ಸಮರ ಜೋರಾಯಿತು. ತಂತಮ್ಮ ಕ್ಷೇತ್ರದಲ್ಲಿ ಹೇತ್ಲಾಂಡಿ ಎನಿಸಿಕೊಳ್ಳುವ ಭಯಕ್ಕೆ ಬಿದ್ದು ಗಂಡು ಶಾಸಕರು ಒಂದಾಗಿ ತಮ್ಮ ಶಿಷ್ಯರ ಮೇಲಿನ ಕಮ್ಯುನಲ್ ಕೇಸು ವಾಪಸ್ ಪಡೆಯುವಂತೆ ಯಡ್ಡಿಬಳಿ ಎಡತಾಕತೊಡಗಿದರು. ಇವರಿಗೂ ಯಡ್ಡಿ ‘ತಥಾಸ್ತು’ ಎಂದರು.

ಕಂತ್ರಿ ಕಸರತ್ತಿನಲ್ಲಿ ನಿಸ್ಸೀಮನಾದ ದಿನಕರ ಶೆಟ್ಟಿ ಎದುರಾಳಿ ರೂಪಾಲಿಗೆ ಮುಖಭಂಗ ಮಾಡಲು ಒಳಗೊಳಗೇ ಪ್ರಯತ್ನ ನಡೆಸಿದ್ದರು. ಹೀಗಾಗಿ ಮೊನ್ನೆ ಕುಮಟಾದ ನಾಲ್ಕು ಪ್ರಕರಣದ 18 ಜನರ ಮೇಲಿನ ಕೇಸು ಸರ್ಕಾರ ವಾಪಸ್ ಪಡೆದಿದೆ. ಅಷ್ಟೇ ಅಲ್ಲ ಕಾರವಾರದ ಕೇಸ್ ನಿಖಾಲಿ ನೆನೆಗುದಿಗೆ ಬಿದ್ದಿದೆ ಎಂಬ ಗುಲ್ಲು ಎಬ್ಬಿಸಲಾಗಿದೆ. ಅಲ್ಲಿಗೆ ರೂಪಾಲಿ ನಾಯ್ಕ್ ಪೇಚಿಗೆ ಬಿದ್ದಂತಾಗಿದೆ. ಆಕೆ ಹೇಳಿಕೆ ಮೇಲೆ ಹೇಳಿಕೆ ಕೊಡುತ್ತ ತನ್ನ ಕ್ಷೇತ್ರದ ಪುಂಡರ ಮೇಲಿನ ಪ್ರಕರಣಗಳೂ ಸದ್ಯವೇ ಸರ್ಕಾರ ಹಿಂಪಡೆಯುತ್ತದೆಂದು ಸಮಜಾಯಿಸಿ ಕೊಡತೊಡಗಿದ್ದಾರೆ. ಸ್ಪೀಕರ್ ಕಾಗೇರಿಯೂ ಯೆಡ್ಡಿ ಬೇಕಂತಲೇ ತನ್ನ ಕ್ಷೇತ್ರದ ಗಲಭೆಗ್ರಸ್ತರ ಪ್ರಕರಣ ನಿಖಾಲಿ ಮಾಡಿಲ್ಲವೆಂಬ ಗುಮಾನಿಗೆ ಬಿದ್ದಿದ್ದಾರೆ. ಕಾಗೇರಿ ಎಂದಿದ್ದರೂ ಯಡ್ಡಿ ವಿರೋಧಿ ಪಾಳಯದ ಕಲಿ. ಭಟ್ಕಳದ ಸುನೀಲ್ ನಾಯ್ಕ್ ಇದೆಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಕಳ್ಳ ಕಾಸು ಮಾಡುವ ಸ್ಕೆಚ್‍ನಲ್ಲಿ ತಲ್ಲೀನನಾಗಿದ್ದಾನೆ. ಆದರೆ, ಒಂದಂತೂ ಖರೆ, ಪರೇಶ್ ಪ್ರಕರಣ ಕ್ರಿಮಿನಲ್ ಕೇಸ್ ಖತಮ್ ಬಿಜೆಪಿಯ ಶಾಸಕರ ನಡುವಿನ ಗ್ಯಾಂಗ್ ವಾರ್‍ಗೆ ಹೊಸ ಆಯಾಮವಂತೂ ಕೊಟ್ಟಿದೆ!!

ಪರೇಶ್ ಸಾವಿನ ನಂತರದ 140 ಪ್ರಕರಣ ಮತ್ತು ಟಿಪ್ಪು ಜಯಂತಿ ವಿರುದ್ಧ ಹಿಂದೂತ್ವದ ಕಹಳೆ ಮೊಳಗಿಸಿ ಸಿಕ್ಕಿಬಿದ್ದವರ ಕೇಸ್ ಖತಮ್ ಮಾಡಿಸಿ ಓಟ್ ಬ್ಯಾಂಕ್ ಭದ್ರತೆಗೆ ತಿಪ್ಪರಲಾಗ ಹಾಕುತ್ತಿರುವ ಜಿಲ್ಲೆಯ ಬಿಜೆಪಿ ಶಾಸಕ-ಸಂಸದ-ಮಂತ್ರಿಗೆ ಪರೇಶ್ ಸಾವಿನ ರಹಸ್ಯ ಭೇದಿಸಿ ಆತನ ಹೆತ್ತವರಿಗೆ ನ್ಯಾಯ ಕೊಡಿಸಬೇಕೆಂಬ ತುಡಿತವೇನೂ ಇಲ್ಲ. ಸಂಘಪರಿವಾರದ ರಿಂಗ್ ಮಾಸ್ಟರ್‍ಗಳಿಗೇ ಬೇಡದ ಈ ತನಿಖೆ ಉಸಾಬರಿ ಬಿಜೆಪಿಯ ಬೊಬ್ಬೆಕೋರರ ಅಸಲಿ ಅವತಾರ ಅನಾವರಣವಾಗುತ್ತದೆಂಬುದು ಸಂಘಸರದಾರಿಗೆ ಗೊತ್ತಿದೆ. ಹಾಗಾಗಿ ಸಿಬಿಐ ತನಿಖೆಗೆ ಬಿಜೆಪಿ ಭೂಪರೇ ಅಡ್ಡಗಾಲು ಹಾಕಿ ಕುಂತಿದ್ದಾರೆ. ಇವತ್ತಿಗೂ ಪರೇಶ್‍ನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯೇ ಬಂದಿಲ್ಲ! ಇವತ್ತಿನ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅಂದು ಬಿಜೆಪಿ ರಷ್ಟ್ರಾಧ್ಯಕ್ಷನಾಗಿ ಪರೇಶ್‍ನ ಮನೆಗೆ ಬಂದು ಆತನ ಹೆತ್ತವರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದ್ದರು; ಅಂದಿನ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್, ಯಡ್ಡಿ ಸೇರಿದಂತೆ ವಗೈರೆ ಹಿರಿ-ಮರಿ ಪುಢಾರಿಗಳು ಸರತಿಯಂತೆ ಪರೇಶನ ಮನೆಗೆ ಬಂದು ಮೊಸಳೆ ಕಣ್ಣಿರು ಕೋಡಿ ಹರಿಸಿದ್ದರು.

ಇವರೆಲ್ಲಾ ಈಗ ಗಪ್‍ಚುಪ್ ಆಗಿರುವುದೇ ಪರೇಶ್ ಮೇಸ್ತಾನ ಸಾಬರು ಕೊಂದಿಲ್ಲ ಎಂಬುದು ಖಾತ್ರಿಪಡಿಸುವಂತಿದೆ. ಅನಂತ್ಮಾಣಿಗೆ ರಾಜಕಾರಣದ ದೀಕ್ಷೆ ಕೊಟ್ಟು ಸಂಸದನಾಗಿ ಮಾಡಿದ್ದ ಆತನ ಗುರು-ಅಂದಿನ ಉತ್ತರ ಕನ್ನಡದ ಹಿಂದೂತ್ವದ ಬೆಂಕಿ ನಾಯಕ ಡಾ| ಚಿತ್ತರಂಜನ್ ಎಮ್ಮೆಲ್ಲೆಯಾಗಿದ್ದಾಗಲೇ ಹತನಾಗಿದ್ದರು. ಬಿಜೆಪಿ ವಾಜಪೇಯಿ ಸರ್ಕಾರವಿದ್ದಾಗಲೇ ಈ ಕೇಸ್ ಪತ್ತೆಯಾಗದ ಪ್ರಕರಣವೆಂದು ಸಿಬಿಐ “ಸಿ-ರಿಪೋರ್ಟ್” ಜಡಿದಿದೆ. ಭಟ್ಕಳದ ಮತ್ತೊಬ್ಬ ಹಿಂದೂ ಮುಂದಾಳು ತಿಮ್ಮಪ್ಪ ನಾಯ್ಕನ ಕೊಲೆ ತನಿಖೆಯೂ ಸರಿಯಾಗಿ ಆಗಲಿಲ್ಲ. ಈ ಹಳ್ಳ ಹಿಡಿದ ಕೇಸ್‍ಗಳ ಬಗ್ಗೆಯೇ ತಲೆಕೆಡಿಸಿಕೊಳ್ಳದ ಅನಂತ್ಮಾಣಿ, ಯಡ್ಡಿ, ಶೋಭಕ್ಕ, ಅಮಿತ್ ಶಾ, ಮೋದಿ. ಮುಂತಾದ ಹಿಂದೂ ಕುಲೋದ್ಧಾರಕರಿಗೆ ಪಾಪದ ಬೆಸ್ತರ ಹುಡುಗ ಪರೇಶ್‍ನ ಸಾವೆಲ್ಲಾ ಯಾವ ಲೆಕ್ಕ?

ಓಟ್ ಬ್ಯಾಂಕ್‍ಗಾಗಿ ಹೆಣದ ರಾಜಕಾರಣ ಮಾಡುವ ಬಿಜೆಪಿಗರ ಬಣ್ಣವೀಗ ಬಯಲಾಗುತ್ತಿದೆ. ಹಿಂದೂತ್ವದ ಅಮಲೇರಿಸಿಕೊಂಡು ಪರೇಶ್ ಸಾವಿನ ನಂತರ ದೊಂಬಿ-ಹಿಂಸಾಚಾರಕ್ಕಿಳಿದಿದ್ದ ಶೂದ್ರ ಹುಡುಗರಿಗೀಗ ಸತ್ಯ ಗೊತ್ತಾಗಿದೆ. 13-12-2017ರಂದು ಹೊನ್ನಾವರದ ಶನಿದೇವರ ಅಂಗಳ ಮತ್ತು ಸಾಬರ ಗುಡ್‍ಲಕ್ ಹೋಟೆಲಿನ ಮುಂಭಾಗದಲ್ಲಾದ ಪೊಲೀಸರ ಲಾಠಿ ಚಾರ್ಜ್‍ಗೆ ಬೆದರಿದ ಪರೇಶ್ ಮೇಸ್ತಾ ಬಚಾವಾಗಲು ಪಕ್ಕದ ಶೆಟ್ಟಿಕೆರೆ ಆವರಣ ಗೋಡೆ ಹಾರಿ ಅವಿತಿಟ್ಟುಕೊಳ್ಳುವ ಪ್ರಯತ್ನದಲ್ಲಿ ಕಾಲುಜಾರಿ ಕೆರೆಗೆ ಬಿದ್ದು ಸತ್ತಿದ್ದಾನೆ; ಆತನನ್ನು ಸಾಬರು ಸಾಯಿಸಿಲ್ಲ ಎಂದು ಈಗ ವ್ಯಾಖ್ಯಾನ ಮಾಡಲಾಗುತ್ತಿದೆ. ಪೊಲೀಸರಿಗೆ, ಸಿಬಿಐಗೆ ಮತ್ತು ಪ್ರಜ್ಞಾವಂತರಿಗೂ ಇದೇ ಜಿಜ್ಞಾಸೆಯಿದೆ. ಸಂಘ ಸರದಾರರಿಗೆ ಇದು ಮೊದಲೇ ಗೊತ್ತಿದೆ? ಆದರೆ ಹಿಂದೂತ್ವದ ಅಭಿಯಾನಕ್ಕಾಗಿ ಪರೇಶ್‍ನ ಸಂಘಿಗಳು ಬಿಡಲು ಸಿದ್ಧರಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...