Homeಕರ್ನಾಟಕಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

ಉತ್ತರ ಕನ್ನಡ: ಪರೇಶ್ ಮೇಸ್ತ “ಪ್ರಕರಣ”ದ ಪುಂಡರಿಗೆ ಬಿಡುಗಡೆ ಭಾಗ್ಯ!!

- Advertisement -
- Advertisement -

2017ರ ಡಿಸೆಂಬರ್‍ನ ಅಂತ್ಯಾರ್ಧದ ಅತ್ಯಂತ ಆತಂಕದ ದಿನಗಳವು! ಇಡೀ ಉತ್ತರ ಕನ್ನಡ ಕೋಮು ಕಿಚ್ಚಿನಲ್ಲಿ ಬೆಂದು ಬಸವಳಿದ ಸಂದರ್ಭವದು!! ಹೊನ್ನಾವರದ ಮೀನುಗಾರ ಕುಲದ ಪರೇಶ್ ಮೇಸ್ತಾ ನಿಗೂಢವಾಗಿ ಸತ್ತದ್ದನ್ನು ಸಂಘಪರಿವಾರದ ಧರ್ಮಾಕಾರಣ ಪಂಡಿತರು ಎದುರಾಗಿದ್ದ ಅಸೆಂಬ್ಲಿ ಇಲೆಕ್ಷನ್‍ಗೆ ಅಸ್ತ್ರವಾಗಿ ಮಾಡಿಕೊಂಡಿದ್ದರು. ಪರೇಶ್‍ನನ್ನು ಸಾಬರ ಸೈತಾನರು ಕೊಂದು ಕೆರೆಗೆಸೆದಿದ್ದಾರೆಂದು ಹುಸಿ ಹುಯಿಲೆಬ್ಬಿಸಿದ ಬಿಜೆಪಿ ಕೊಳ್ಳಿ ದೆವ್ವಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಶಿರಸಿ, ಯಲ್ಲಾಪುರದಂಥ ಆಯಕಟ್ಟಿನ ತಾಲ್ಲೂಕುಗಳಲ್ಲಿ ಕೋಮುಗಲಭೆ ಎಬ್ಬಿಸಿ ಕೇಕೆ ಹಾಕಿದವು. ಸಾಬರ ಅಟ್ಟಾಡಿಸಿ ಕಾಡಿತು; ಐಜಿಪಿ ಕಾರಿಗೆ, ಚಾಲಕನಿಗೇ ಬೆಂಕಿ ಹಾಕಲಾಯಿತು….

ಪರೇಶ್‍ನ ಪ್ರಕರಣ ಸಿಬಿಐ ವಹಿಸಬೇಕೆಂದು ಕೂಗು ಮಾರಿ ಶೋಭಕ್ಕ, ಅಸಡ್ಡಾಳ ಹಲಬುಗಾರ ಅನಂತ್ಮಾಣಿ ಆಗಿಯಾಗಿ ಯಡ್ಡಿ ಸಕಲ ಚೆಡ್ಡಿಗಳೆಲ್ಲ ಏಕಕಂಠದಲ್ಲಿ ಬೊಬ್ಬೆಹೊಡೆದರು. ಅಂದಿನ ಸಿದ್ದು ಸರ್ಕಾರ ಪ್ರತಿಷ್ಟೆಗೆ ಬೀಳದೆ ಪ್ರಕರಣ ಸಿಬಿಐಗೆ ವಹಿಸಿತು. ಮೋದಿ-ಶಾ ಮೂಗಿನಡಿಯೇ ಇರುವ ಸಿಬಿಐ ಮಾತ್ರ ಇವತ್ತಿಗೂ ಪರೇಶನ ಮುಸ್ಲಿಮರು ಹತ್ಯೆ ಮಾಡಿದ್ದಾರೋ ಅಥವಾ ಆತನೇ ಕಾಲು ಜಾರಿ ಕೆರೆಗೆ ಬಿದ್ದು ಸತ್ತನೋ ಎಂಬ ತನಿಖೆ ಮಾಡುತ್ತಲೇ ಇಲ್ಲ. ಆದರೆ ಬಿಜೆಪಿ ಪರೇಶ್ ಮೇಸ್ತಾನ ಮರಣ ಮಹಿಮೆಯನ್ನೇ ಪ್ರಣಾಳಿಕೆ ಮಾಡಿಕೊಂಡು ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಬಂಪರ್ ಎಮ್ಮೆಲ್ಲೆ ಕೊಯ್ಲು ಮಾಡಿತು. ಶಾಸಕರಾಗುವ ಕನಿಷ್ಠ ಯೋಗ್ಯತೆಯೂ ಇಲ್ಲದ ಕಾರವಾರದ ರೂಪಾಲಿ ನಾಯ್ಲ್, ಕುಮಟೆಯ ದಿನಕರ ಶೆಟ್ಟಿ, ಭಟ್ಕಳದ ಸುನೀಲ್ ನಾಯ್ಕ್ ಮತ್ತು ಶಿರಸಿಯ ಕಾಗೇರಿ ಮಾಣಿಗಳೆಲ್ಲ ಖುದ್ದು ದಿಗಿಲು ಬೀಳುವಂತೆ ವಿಧಾನಸೌಧಕ್ಕೆ ಎಂಟ್ರಿ ಹೊಡೆದಿದ್ದರು. ಸಾಯುವತನಕ ಪರೇಶನ ಫೋಟೋಕ್ಕೆ ಪೂಜೆ ಸಲ್ಲಿಸುವ ಋಣಕ್ಕೆ ಬಿದ್ದಿದ್ದರು.

ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶನ ಪಾರ್ಥಿವ ಶರೀರ ಕಂಡ ಕ್ಷಣವೇ ಶೂದ್ರ ಹುಡುಗರ ಮತಾಂಧ ಮಸಲತ್ತಿಗಿಳಿದ ಬಿಜೆಪಿಯ ಜನಿವಾರ ಲೀಡರ್‍ಗಳು ಚುನಾವಣೆಯ ಗೆಲುವಿನ ಗಣಿತ ಹಾಕತೊಡಗಿದ್ದರು. ಕಾರವಾರ, ಕುಮಟಾ, ಹೊನ್ನಾವರ ಮತ್ತು ಶಿರಸಿಯ ಸುಮಾರು 2,000 ಶೂದ್ರ ಹುಡುಗರು ಕಮ್ಯುನಲ್ ಕ್ರಿಮಿನಲ್ ಕೇಸ್‍ಗೆ ಬಿದ್ದರು. ಕೋರ್ಟ್-ಕಚೇರಿ ಅಲೆಯುತ್ತ ಉದ್ಯೋಗ, ವ್ಯವಹಾರ ಹಾಳು ಮಾಡಿಕೊಂಡರು. ಸರ್ಕಾರಿ ನೌಕರಿ ಸಿಗದಂತಾಯಿತು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ತಮ್ಮಿಂದ ಶಾಸಕರಾದವರ ಕೊರಳಪಟ್ಟಿ ಹಿಡಿದು ಕೇಸ್ ಖತಮ್ ಮಾಡಿಸುವಂತೆ ಒತ್ತಾಯಿಸತೊಡಗಿದರು. ಯಡ್ಡಿ ಜತೆಗಿನ “ಸಲಿಗೆ” ಬಳಸಿ ಸಿಎಂ ಒಪ್ಪಿಗೆಯೂ ಸೂಚಿಸಿದರು. ರೂಪಾಲಿಗೆ ಜಿಲ್ಲೆಯ ಬಿಜೆಪಿ ಪುರುಷ ಶಾಸಕರಿಗಿಂತ “ಗ್ರೇಟ್”ಎಂಬ ಪ್ರಶಂಸೆ ಬಂತು.

ಒಂದು ಹಂತದಲ್ಲಿ ಬಿಜೆಪಿಯ “ಗಂಡು ಎಮ್ಮಲ್ಲೆ”ಗಳೆಲ್ಲ ರೂಪಾಲಿ ಮೇಲೆ ಮುರುಕೊಂಡು ಬಿದ್ದರು. ಆಕೆ ಮಹಿಳಾ ಕೋಟಾದಲ್ಲಿ ಮಂತ್ರಿಗಿರಿಗೆ, ನಿಗಮದ ಪೀಠಕ್ಕೆ ಪ್ರಯತ್ನ ಪಟ್ಟಂತೆಲ್ಲಾ ಕಲ್ಲು ಹಾಕಿದರು. ಬಿಜೆಪಿಯಲ್ಲಿ ಶಾಸಕರ ಸಮರ ಜೋರಾಯಿತು. ತಂತಮ್ಮ ಕ್ಷೇತ್ರದಲ್ಲಿ ಹೇತ್ಲಾಂಡಿ ಎನಿಸಿಕೊಳ್ಳುವ ಭಯಕ್ಕೆ ಬಿದ್ದು ಗಂಡು ಶಾಸಕರು ಒಂದಾಗಿ ತಮ್ಮ ಶಿಷ್ಯರ ಮೇಲಿನ ಕಮ್ಯುನಲ್ ಕೇಸು ವಾಪಸ್ ಪಡೆಯುವಂತೆ ಯಡ್ಡಿಬಳಿ ಎಡತಾಕತೊಡಗಿದರು. ಇವರಿಗೂ ಯಡ್ಡಿ ‘ತಥಾಸ್ತು’ ಎಂದರು.

ಕಂತ್ರಿ ಕಸರತ್ತಿನಲ್ಲಿ ನಿಸ್ಸೀಮನಾದ ದಿನಕರ ಶೆಟ್ಟಿ ಎದುರಾಳಿ ರೂಪಾಲಿಗೆ ಮುಖಭಂಗ ಮಾಡಲು ಒಳಗೊಳಗೇ ಪ್ರಯತ್ನ ನಡೆಸಿದ್ದರು. ಹೀಗಾಗಿ ಮೊನ್ನೆ ಕುಮಟಾದ ನಾಲ್ಕು ಪ್ರಕರಣದ 18 ಜನರ ಮೇಲಿನ ಕೇಸು ಸರ್ಕಾರ ವಾಪಸ್ ಪಡೆದಿದೆ. ಅಷ್ಟೇ ಅಲ್ಲ ಕಾರವಾರದ ಕೇಸ್ ನಿಖಾಲಿ ನೆನೆಗುದಿಗೆ ಬಿದ್ದಿದೆ ಎಂಬ ಗುಲ್ಲು ಎಬ್ಬಿಸಲಾಗಿದೆ. ಅಲ್ಲಿಗೆ ರೂಪಾಲಿ ನಾಯ್ಕ್ ಪೇಚಿಗೆ ಬಿದ್ದಂತಾಗಿದೆ. ಆಕೆ ಹೇಳಿಕೆ ಮೇಲೆ ಹೇಳಿಕೆ ಕೊಡುತ್ತ ತನ್ನ ಕ್ಷೇತ್ರದ ಪುಂಡರ ಮೇಲಿನ ಪ್ರಕರಣಗಳೂ ಸದ್ಯವೇ ಸರ್ಕಾರ ಹಿಂಪಡೆಯುತ್ತದೆಂದು ಸಮಜಾಯಿಸಿ ಕೊಡತೊಡಗಿದ್ದಾರೆ. ಸ್ಪೀಕರ್ ಕಾಗೇರಿಯೂ ಯೆಡ್ಡಿ ಬೇಕಂತಲೇ ತನ್ನ ಕ್ಷೇತ್ರದ ಗಲಭೆಗ್ರಸ್ತರ ಪ್ರಕರಣ ನಿಖಾಲಿ ಮಾಡಿಲ್ಲವೆಂಬ ಗುಮಾನಿಗೆ ಬಿದ್ದಿದ್ದಾರೆ. ಕಾಗೇರಿ ಎಂದಿದ್ದರೂ ಯಡ್ಡಿ ವಿರೋಧಿ ಪಾಳಯದ ಕಲಿ. ಭಟ್ಕಳದ ಸುನೀಲ್ ನಾಯ್ಕ್ ಇದೆಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಕಳ್ಳ ಕಾಸು ಮಾಡುವ ಸ್ಕೆಚ್‍ನಲ್ಲಿ ತಲ್ಲೀನನಾಗಿದ್ದಾನೆ. ಆದರೆ, ಒಂದಂತೂ ಖರೆ, ಪರೇಶ್ ಪ್ರಕರಣ ಕ್ರಿಮಿನಲ್ ಕೇಸ್ ಖತಮ್ ಬಿಜೆಪಿಯ ಶಾಸಕರ ನಡುವಿನ ಗ್ಯಾಂಗ್ ವಾರ್‍ಗೆ ಹೊಸ ಆಯಾಮವಂತೂ ಕೊಟ್ಟಿದೆ!!

ಪರೇಶ್ ಸಾವಿನ ನಂತರದ 140 ಪ್ರಕರಣ ಮತ್ತು ಟಿಪ್ಪು ಜಯಂತಿ ವಿರುದ್ಧ ಹಿಂದೂತ್ವದ ಕಹಳೆ ಮೊಳಗಿಸಿ ಸಿಕ್ಕಿಬಿದ್ದವರ ಕೇಸ್ ಖತಮ್ ಮಾಡಿಸಿ ಓಟ್ ಬ್ಯಾಂಕ್ ಭದ್ರತೆಗೆ ತಿಪ್ಪರಲಾಗ ಹಾಕುತ್ತಿರುವ ಜಿಲ್ಲೆಯ ಬಿಜೆಪಿ ಶಾಸಕ-ಸಂಸದ-ಮಂತ್ರಿಗೆ ಪರೇಶ್ ಸಾವಿನ ರಹಸ್ಯ ಭೇದಿಸಿ ಆತನ ಹೆತ್ತವರಿಗೆ ನ್ಯಾಯ ಕೊಡಿಸಬೇಕೆಂಬ ತುಡಿತವೇನೂ ಇಲ್ಲ. ಸಂಘಪರಿವಾರದ ರಿಂಗ್ ಮಾಸ್ಟರ್‍ಗಳಿಗೇ ಬೇಡದ ಈ ತನಿಖೆ ಉಸಾಬರಿ ಬಿಜೆಪಿಯ ಬೊಬ್ಬೆಕೋರರ ಅಸಲಿ ಅವತಾರ ಅನಾವರಣವಾಗುತ್ತದೆಂಬುದು ಸಂಘಸರದಾರಿಗೆ ಗೊತ್ತಿದೆ. ಹಾಗಾಗಿ ಸಿಬಿಐ ತನಿಖೆಗೆ ಬಿಜೆಪಿ ಭೂಪರೇ ಅಡ್ಡಗಾಲು ಹಾಕಿ ಕುಂತಿದ್ದಾರೆ. ಇವತ್ತಿಗೂ ಪರೇಶ್‍ನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿಯೇ ಬಂದಿಲ್ಲ! ಇವತ್ತಿನ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅಂದು ಬಿಜೆಪಿ ರಷ್ಟ್ರಾಧ್ಯಕ್ಷನಾಗಿ ಪರೇಶ್‍ನ ಮನೆಗೆ ಬಂದು ಆತನ ಹೆತ್ತವರಿಗೆ ನ್ಯಾಯ ಕೊಡಿಸುವುದಾಗಿ ಹೇಳಿದ್ದರು; ಅಂದಿನ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್, ಯಡ್ಡಿ ಸೇರಿದಂತೆ ವಗೈರೆ ಹಿರಿ-ಮರಿ ಪುಢಾರಿಗಳು ಸರತಿಯಂತೆ ಪರೇಶನ ಮನೆಗೆ ಬಂದು ಮೊಸಳೆ ಕಣ್ಣಿರು ಕೋಡಿ ಹರಿಸಿದ್ದರು.

ಇವರೆಲ್ಲಾ ಈಗ ಗಪ್‍ಚುಪ್ ಆಗಿರುವುದೇ ಪರೇಶ್ ಮೇಸ್ತಾನ ಸಾಬರು ಕೊಂದಿಲ್ಲ ಎಂಬುದು ಖಾತ್ರಿಪಡಿಸುವಂತಿದೆ. ಅನಂತ್ಮಾಣಿಗೆ ರಾಜಕಾರಣದ ದೀಕ್ಷೆ ಕೊಟ್ಟು ಸಂಸದನಾಗಿ ಮಾಡಿದ್ದ ಆತನ ಗುರು-ಅಂದಿನ ಉತ್ತರ ಕನ್ನಡದ ಹಿಂದೂತ್ವದ ಬೆಂಕಿ ನಾಯಕ ಡಾ| ಚಿತ್ತರಂಜನ್ ಎಮ್ಮೆಲ್ಲೆಯಾಗಿದ್ದಾಗಲೇ ಹತನಾಗಿದ್ದರು. ಬಿಜೆಪಿ ವಾಜಪೇಯಿ ಸರ್ಕಾರವಿದ್ದಾಗಲೇ ಈ ಕೇಸ್ ಪತ್ತೆಯಾಗದ ಪ್ರಕರಣವೆಂದು ಸಿಬಿಐ “ಸಿ-ರಿಪೋರ್ಟ್” ಜಡಿದಿದೆ. ಭಟ್ಕಳದ ಮತ್ತೊಬ್ಬ ಹಿಂದೂ ಮುಂದಾಳು ತಿಮ್ಮಪ್ಪ ನಾಯ್ಕನ ಕೊಲೆ ತನಿಖೆಯೂ ಸರಿಯಾಗಿ ಆಗಲಿಲ್ಲ. ಈ ಹಳ್ಳ ಹಿಡಿದ ಕೇಸ್‍ಗಳ ಬಗ್ಗೆಯೇ ತಲೆಕೆಡಿಸಿಕೊಳ್ಳದ ಅನಂತ್ಮಾಣಿ, ಯಡ್ಡಿ, ಶೋಭಕ್ಕ, ಅಮಿತ್ ಶಾ, ಮೋದಿ. ಮುಂತಾದ ಹಿಂದೂ ಕುಲೋದ್ಧಾರಕರಿಗೆ ಪಾಪದ ಬೆಸ್ತರ ಹುಡುಗ ಪರೇಶ್‍ನ ಸಾವೆಲ್ಲಾ ಯಾವ ಲೆಕ್ಕ?

ಓಟ್ ಬ್ಯಾಂಕ್‍ಗಾಗಿ ಹೆಣದ ರಾಜಕಾರಣ ಮಾಡುವ ಬಿಜೆಪಿಗರ ಬಣ್ಣವೀಗ ಬಯಲಾಗುತ್ತಿದೆ. ಹಿಂದೂತ್ವದ ಅಮಲೇರಿಸಿಕೊಂಡು ಪರೇಶ್ ಸಾವಿನ ನಂತರ ದೊಂಬಿ-ಹಿಂಸಾಚಾರಕ್ಕಿಳಿದಿದ್ದ ಶೂದ್ರ ಹುಡುಗರಿಗೀಗ ಸತ್ಯ ಗೊತ್ತಾಗಿದೆ. 13-12-2017ರಂದು ಹೊನ್ನಾವರದ ಶನಿದೇವರ ಅಂಗಳ ಮತ್ತು ಸಾಬರ ಗುಡ್‍ಲಕ್ ಹೋಟೆಲಿನ ಮುಂಭಾಗದಲ್ಲಾದ ಪೊಲೀಸರ ಲಾಠಿ ಚಾರ್ಜ್‍ಗೆ ಬೆದರಿದ ಪರೇಶ್ ಮೇಸ್ತಾ ಬಚಾವಾಗಲು ಪಕ್ಕದ ಶೆಟ್ಟಿಕೆರೆ ಆವರಣ ಗೋಡೆ ಹಾರಿ ಅವಿತಿಟ್ಟುಕೊಳ್ಳುವ ಪ್ರಯತ್ನದಲ್ಲಿ ಕಾಲುಜಾರಿ ಕೆರೆಗೆ ಬಿದ್ದು ಸತ್ತಿದ್ದಾನೆ; ಆತನನ್ನು ಸಾಬರು ಸಾಯಿಸಿಲ್ಲ ಎಂದು ಈಗ ವ್ಯಾಖ್ಯಾನ ಮಾಡಲಾಗುತ್ತಿದೆ. ಪೊಲೀಸರಿಗೆ, ಸಿಬಿಐಗೆ ಮತ್ತು ಪ್ರಜ್ಞಾವಂತರಿಗೂ ಇದೇ ಜಿಜ್ಞಾಸೆಯಿದೆ. ಸಂಘ ಸರದಾರರಿಗೆ ಇದು ಮೊದಲೇ ಗೊತ್ತಿದೆ? ಆದರೆ ಹಿಂದೂತ್ವದ ಅಭಿಯಾನಕ್ಕಾಗಿ ಪರೇಶ್‍ನ ಸಂಘಿಗಳು ಬಿಡಲು ಸಿದ್ಧರಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...