Homeಮುಖಪುಟಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿದ ಸುಮಾರು ಹತ್ತು ಮುಸ್ಲಿಂ ಹುಡುಗಿಯರಿಗೆ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ ಎಂದು ವರದಿಯಾಗಿದೆ.

ಸರ್ವೋದಯ ಇಂಟರ್-ಕಾಲೇಜಿನಲ್ಲಿ ಹುಡುಗಿಯರು ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಯಿತು, ನಿರಾಶೆಯಿಂದ ತಮ್ಮ ಕುಟುಂಬಗಳೊಂದಿಗೆ ಮನೆಗೆ ಮರಳಿದರು.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಒರ್ವ ವಿದ್ಯಾರ್ಥಿನಿ, “ನಮ್ಮ ರೋಲ್ ಸಂಖ್ಯೆಗಳನ್ನು ಪರಿಶೀಲಿಸಲು ಕ್ಯಾಂಪಸ್‌ಗೆ ಪ್ರವೇಶಿಸಿದಾಗ, ಎಲ್ಲ ಹುಡುಗಿಯರು ತಲೆ ಮುಚ್ಚಿಕೊಳ್ಳದೆ ಅಥವಾ ಹಿಜಾಬ್ ಧರಿಸದೆ ಇರುವುದರಿಂದ ಯಾವುದೇ ಮುಸ್ಲಿಂ ವಿದ್ಯಾರ್ಥಿ ಪರೀಕ್ಷೆಗೆ ಬಂದಿಲ್ಲ ಎಂದು ಭಾವಿಸಿದ್ದೇವೆ” ಎಂದು ಹೇಳಿದರು.

“ನಾವು ಒಳಗೆ ಹೋದಾಗ, ಒಬ್ಬ ಮಹಿಳೆ ಹಿಜಾಬ್ ತೆಗೆಯುವಂತೆ ಅಸಭ್ಯವಾಗಿ ಹೇಳಿದಳು. ನಾವು ನಮ್ಮ ಹಿಜಾಬ್ ತೆಗೆಯುವುದಿಲ್ಲ ಎಂದು ಆಕೆಗೆ ಹೇಳಿದೆವು. ನಂತರ, ನಾವು ನಮ್ಮ ಹಿಜಾಬ್ ತೆಗೆಯದಿದ್ದರೆ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಮಹಿಳೆ ಪಯನರುಚ್ಛರಿಸಿದರು. ನಾವು ಹೊರಗೆ ಬಂದು ನಮ್ಮ ಪೋಷಕರಿಗೆ ಹೇಳಿದೆವು” ಎಂದು ವಿದ್ಯಾರ್ಥಿನಿ ಅವಲತ್ತುಕೊಂಡಿದ್ದಾರೆ.

ನೊಂದ ಪೋಷಕರು ಈ ವಿಷಯದ ಬಗ್ಗೆ ಪ್ರಾಂಶುಪಾಲರೊಂದಿಗೆ ಮಾತನಾಡಿದರು. ಆದರೆ, ಅವರು ದೃಢವಾಗಿಯೇ ಇದ್ದರು; ಒಬ್ಬ ಹುಡುಗಿಯ ದುಪಟ್ಟಾ ತೆಗೆಯುವಂತೆ ಒತ್ತಾಯಿಸಲಾಯಿತು.

ಬಾಲಕಿ ತಮ್ಮ ಗುರುತನ್ನು ಪರಿಶೀಲಿಸಲು ಸಿದ್ಧರಿದ್ದೇವೆ ಎಂದು ಹೇಳಿದಳು, ಆದರೆ, ಮೇಲ್ವಿಚಾರಕರಿಂದ ಸಂಪೂರ್ಣವಾಗಿ ಪರಿಶೀಲಿಸಲ್ಪಡುತ್ತೇವೆ ಎಂದು ಹೇಳಿದಳು. ಅಧಿಕಾರಿಗಳು ಹಿಜಾಬ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಒತ್ತಾಯಿಸಿದರು.

ಹುಡುಗಿಯರು ತಮ್ಮ ಗುರುತನ್ನು ಪರಿಶೀಲಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಶಾಲಾ ಅಧಿಕಾರಿಗಳ ಆರೋಪದ ಬಗ್ಗೆ ಕೇಳಿದಾಗ, “ಅವರು ಸುಳ್ಳು ಹೇಳುತ್ತಿದ್ದಾರೆ; ನಾವು ವಂಚನೆ ಮಾಡುವ ಮೂಲಕ ಪರೀಕ್ಷೆಗೆ ಹಾಜರಾಗುತ್ತಿರಲಿಲ್ಲ. ನಮ್ಮ ಗುರುತನ್ನು ಪರಿಶೀಲಿಸುವ ಕಾರ್ಯವಿಧಾನವನ್ನು ನಾವು ಏಕೆ ಆಕ್ಷೇಪಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಶಾಲೆಯು ಪರೀಕ್ಷೆಗೆ ನಿಗದಿಪಡಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ಹೇಳಿಕೊಂಡಿದೆ.

“ಬೋರ್ಡ್ ಪರೀಕ್ಷೆಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನಾಲ್ಕು ವಿದ್ಯಾರ್ಥಿಗಳು ಅವುಗಳನ್ನು ಅನುಸರಿಸಲು ನಿರಾಕರಿಸಿದರು, ಪರೀಕ್ಷೆಯನ್ನು ತೆಗೆದುಕೊಳ್ಳದೆ ತಮ್ಮ ಕುಟುಂಬಗಳೊಂದಿಗೆ ಮನೆಗೆ ತೆರಳಿದರು” ಎಂದು ಕೇಂದ್ರದ ಆಡಳಿತಾಧಿಕಾರಿ ಮತ್ತು ಕಾಲೇಜು ಪ್ರಾಂಶುಪಾಲ ದಿನೇಶ್ ಚಂದ್ರ ಗುಪ್ತಾ ಹೇಳಿದರು.

“ಕೇಂದ್ರದಲ್ಲಿ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 153 ಮುಸ್ಲಿಂ ಹುಡುಗಿಯರು. ಈ ನಾಲ್ವರು ಹುಡುಗಿಯರನ್ನು ಹೊರತುಪಡಿಸಿ ಉಳಿದ ಎಲ್ಲಾ ಮುಸ್ಲಿಂ ಹುಡುಗಿಯರು ನಿಯಮಗಳನ್ನು ಅನುಸರಿಸಿ ಪರೀಕ್ಷೆಯನ್ನು ತೆಗೆದುಕೊಂಡರು” ಎಂದು ಅವರು ಹೇಳಿದರು.

“ಅಭ್ಯರ್ಥಿಗಳ ಮುಖ ಮತ್ತು ಅವರ ಪ್ರವೇಶ ಪತ್ರಗಳಲ್ಲಿರುವ ಚಿತ್ರಗಳ ನಡುವಿನ ಹೊಂದಾಣಿಕೆಯನ್ನು ಕಡ್ಡಾಯವಾಗಿ ಪರಿಶೀಲಿಸಲು ನಾಲ್ವರು ಹುಡುಗಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಇಬ್ಬರು ಮಹಿಳಾ ಶಿಕ್ಷಕಿಯರಾದ ರೇಖಾ ಯಾದವ್ ಮತ್ತು ಫಿರ್ದೌಸ್ ಫಾತಿಮಾ ಅವರನ್ನು ವಿದ್ಯಾರ್ಥಿನಿಯರನ್ನು ಪರೀಕ್ಷಿಸಲು ಪ್ರವೇಶದ್ವಾರದಲ್ಲಿ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು” ಎಂದು ಕಾಲೇಜು ವ್ಯವಸ್ಥಾಪಕ ಅನಿಲ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಜಾನ್ಪುರದ ಶಾಲೆಗಳ ಉಪ ನಿರೀಕ್ಷಕ ರಾಕೇಶ್ ಕುಮಾರ್, “ಇಲ್ಲಿಯವರೆಗೆ ಅಂತಹ ಯಾವುದೇ ವಿಷಯದ ಬಗ್ಗೆ ನನ್ನ ಕಚೇರಿಯಲ್ಲಿ ಯಾವುದೇ ಲಿಖಿತ ದೂರು ಬಂದಿಲ್ಲ” ಎಂದು ಹೇಳಿದರು.

ಕ್ರಿಕೆಟ್ ಪಂದ್ಯದ ವೇಳೆ ಪಾಕ್ ಪರ ಘೋಷಣೆ ಆರೋಪ: ಜಿಲ್ಲಾಡಳಿತದಿಂದ ಬುಲ್ಡೋಜರ್ ಬಳಸಿ ಅಂಗಡಿಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...