Homeಮುಖಪುಟಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿದ ಸುಮಾರು ಹತ್ತು ಮುಸ್ಲಿಂ ಹುಡುಗಿಯರಿಗೆ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ ಎಂದು ವರದಿಯಾಗಿದೆ.

ಸರ್ವೋದಯ ಇಂಟರ್-ಕಾಲೇಜಿನಲ್ಲಿ ಹುಡುಗಿಯರು ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಯಿತು, ನಿರಾಶೆಯಿಂದ ತಮ್ಮ ಕುಟುಂಬಗಳೊಂದಿಗೆ ಮನೆಗೆ ಮರಳಿದರು.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಒರ್ವ ವಿದ್ಯಾರ್ಥಿನಿ, “ನಮ್ಮ ರೋಲ್ ಸಂಖ್ಯೆಗಳನ್ನು ಪರಿಶೀಲಿಸಲು ಕ್ಯಾಂಪಸ್‌ಗೆ ಪ್ರವೇಶಿಸಿದಾಗ, ಎಲ್ಲ ಹುಡುಗಿಯರು ತಲೆ ಮುಚ್ಚಿಕೊಳ್ಳದೆ ಅಥವಾ ಹಿಜಾಬ್ ಧರಿಸದೆ ಇರುವುದರಿಂದ ಯಾವುದೇ ಮುಸ್ಲಿಂ ವಿದ್ಯಾರ್ಥಿ ಪರೀಕ್ಷೆಗೆ ಬಂದಿಲ್ಲ ಎಂದು ಭಾವಿಸಿದ್ದೇವೆ” ಎಂದು ಹೇಳಿದರು.

“ನಾವು ಒಳಗೆ ಹೋದಾಗ, ಒಬ್ಬ ಮಹಿಳೆ ಹಿಜಾಬ್ ತೆಗೆಯುವಂತೆ ಅಸಭ್ಯವಾಗಿ ಹೇಳಿದಳು. ನಾವು ನಮ್ಮ ಹಿಜಾಬ್ ತೆಗೆಯುವುದಿಲ್ಲ ಎಂದು ಆಕೆಗೆ ಹೇಳಿದೆವು. ನಂತರ, ನಾವು ನಮ್ಮ ಹಿಜಾಬ್ ತೆಗೆಯದಿದ್ದರೆ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಮಹಿಳೆ ಪಯನರುಚ್ಛರಿಸಿದರು. ನಾವು ಹೊರಗೆ ಬಂದು ನಮ್ಮ ಪೋಷಕರಿಗೆ ಹೇಳಿದೆವು” ಎಂದು ವಿದ್ಯಾರ್ಥಿನಿ ಅವಲತ್ತುಕೊಂಡಿದ್ದಾರೆ.

ನೊಂದ ಪೋಷಕರು ಈ ವಿಷಯದ ಬಗ್ಗೆ ಪ್ರಾಂಶುಪಾಲರೊಂದಿಗೆ ಮಾತನಾಡಿದರು. ಆದರೆ, ಅವರು ದೃಢವಾಗಿಯೇ ಇದ್ದರು; ಒಬ್ಬ ಹುಡುಗಿಯ ದುಪಟ್ಟಾ ತೆಗೆಯುವಂತೆ ಒತ್ತಾಯಿಸಲಾಯಿತು.

ಬಾಲಕಿ ತಮ್ಮ ಗುರುತನ್ನು ಪರಿಶೀಲಿಸಲು ಸಿದ್ಧರಿದ್ದೇವೆ ಎಂದು ಹೇಳಿದಳು, ಆದರೆ, ಮೇಲ್ವಿಚಾರಕರಿಂದ ಸಂಪೂರ್ಣವಾಗಿ ಪರಿಶೀಲಿಸಲ್ಪಡುತ್ತೇವೆ ಎಂದು ಹೇಳಿದಳು. ಅಧಿಕಾರಿಗಳು ಹಿಜಾಬ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಒತ್ತಾಯಿಸಿದರು.

ಹುಡುಗಿಯರು ತಮ್ಮ ಗುರುತನ್ನು ಪರಿಶೀಲಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಶಾಲಾ ಅಧಿಕಾರಿಗಳ ಆರೋಪದ ಬಗ್ಗೆ ಕೇಳಿದಾಗ, “ಅವರು ಸುಳ್ಳು ಹೇಳುತ್ತಿದ್ದಾರೆ; ನಾವು ವಂಚನೆ ಮಾಡುವ ಮೂಲಕ ಪರೀಕ್ಷೆಗೆ ಹಾಜರಾಗುತ್ತಿರಲಿಲ್ಲ. ನಮ್ಮ ಗುರುತನ್ನು ಪರಿಶೀಲಿಸುವ ಕಾರ್ಯವಿಧಾನವನ್ನು ನಾವು ಏಕೆ ಆಕ್ಷೇಪಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಶಾಲೆಯು ಪರೀಕ್ಷೆಗೆ ನಿಗದಿಪಡಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ಹೇಳಿಕೊಂಡಿದೆ.

“ಬೋರ್ಡ್ ಪರೀಕ್ಷೆಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನಾಲ್ಕು ವಿದ್ಯಾರ್ಥಿಗಳು ಅವುಗಳನ್ನು ಅನುಸರಿಸಲು ನಿರಾಕರಿಸಿದರು, ಪರೀಕ್ಷೆಯನ್ನು ತೆಗೆದುಕೊಳ್ಳದೆ ತಮ್ಮ ಕುಟುಂಬಗಳೊಂದಿಗೆ ಮನೆಗೆ ತೆರಳಿದರು” ಎಂದು ಕೇಂದ್ರದ ಆಡಳಿತಾಧಿಕಾರಿ ಮತ್ತು ಕಾಲೇಜು ಪ್ರಾಂಶುಪಾಲ ದಿನೇಶ್ ಚಂದ್ರ ಗುಪ್ತಾ ಹೇಳಿದರು.

“ಕೇಂದ್ರದಲ್ಲಿ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 153 ಮುಸ್ಲಿಂ ಹುಡುಗಿಯರು. ಈ ನಾಲ್ವರು ಹುಡುಗಿಯರನ್ನು ಹೊರತುಪಡಿಸಿ ಉಳಿದ ಎಲ್ಲಾ ಮುಸ್ಲಿಂ ಹುಡುಗಿಯರು ನಿಯಮಗಳನ್ನು ಅನುಸರಿಸಿ ಪರೀಕ್ಷೆಯನ್ನು ತೆಗೆದುಕೊಂಡರು” ಎಂದು ಅವರು ಹೇಳಿದರು.

“ಅಭ್ಯರ್ಥಿಗಳ ಮುಖ ಮತ್ತು ಅವರ ಪ್ರವೇಶ ಪತ್ರಗಳಲ್ಲಿರುವ ಚಿತ್ರಗಳ ನಡುವಿನ ಹೊಂದಾಣಿಕೆಯನ್ನು ಕಡ್ಡಾಯವಾಗಿ ಪರಿಶೀಲಿಸಲು ನಾಲ್ವರು ಹುಡುಗಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಇಬ್ಬರು ಮಹಿಳಾ ಶಿಕ್ಷಕಿಯರಾದ ರೇಖಾ ಯಾದವ್ ಮತ್ತು ಫಿರ್ದೌಸ್ ಫಾತಿಮಾ ಅವರನ್ನು ವಿದ್ಯಾರ್ಥಿನಿಯರನ್ನು ಪರೀಕ್ಷಿಸಲು ಪ್ರವೇಶದ್ವಾರದಲ್ಲಿ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು” ಎಂದು ಕಾಲೇಜು ವ್ಯವಸ್ಥಾಪಕ ಅನಿಲ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಜಾನ್ಪುರದ ಶಾಲೆಗಳ ಉಪ ನಿರೀಕ್ಷಕ ರಾಕೇಶ್ ಕುಮಾರ್, “ಇಲ್ಲಿಯವರೆಗೆ ಅಂತಹ ಯಾವುದೇ ವಿಷಯದ ಬಗ್ಗೆ ನನ್ನ ಕಚೇರಿಯಲ್ಲಿ ಯಾವುದೇ ಲಿಖಿತ ದೂರು ಬಂದಿಲ್ಲ” ಎಂದು ಹೇಳಿದರು.

ಕ್ರಿಕೆಟ್ ಪಂದ್ಯದ ವೇಳೆ ಪಾಕ್ ಪರ ಘೋಷಣೆ ಆರೋಪ: ಜಿಲ್ಲಾಡಳಿತದಿಂದ ಬುಲ್ಡೋಜರ್ ಬಳಸಿ ಅಂಗಡಿಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...