Homeಮುಖಪುಟಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿದ ಸುಮಾರು ಹತ್ತು ಮುಸ್ಲಿಂ ಹುಡುಗಿಯರಿಗೆ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ ಎಂದು ವರದಿಯಾಗಿದೆ.

ಸರ್ವೋದಯ ಇಂಟರ್-ಕಾಲೇಜಿನಲ್ಲಿ ಹುಡುಗಿಯರು ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಯಿತು, ನಿರಾಶೆಯಿಂದ ತಮ್ಮ ಕುಟುಂಬಗಳೊಂದಿಗೆ ಮನೆಗೆ ಮರಳಿದರು.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಒರ್ವ ವಿದ್ಯಾರ್ಥಿನಿ, “ನಮ್ಮ ರೋಲ್ ಸಂಖ್ಯೆಗಳನ್ನು ಪರಿಶೀಲಿಸಲು ಕ್ಯಾಂಪಸ್‌ಗೆ ಪ್ರವೇಶಿಸಿದಾಗ, ಎಲ್ಲ ಹುಡುಗಿಯರು ತಲೆ ಮುಚ್ಚಿಕೊಳ್ಳದೆ ಅಥವಾ ಹಿಜಾಬ್ ಧರಿಸದೆ ಇರುವುದರಿಂದ ಯಾವುದೇ ಮುಸ್ಲಿಂ ವಿದ್ಯಾರ್ಥಿ ಪರೀಕ್ಷೆಗೆ ಬಂದಿಲ್ಲ ಎಂದು ಭಾವಿಸಿದ್ದೇವೆ” ಎಂದು ಹೇಳಿದರು.

“ನಾವು ಒಳಗೆ ಹೋದಾಗ, ಒಬ್ಬ ಮಹಿಳೆ ಹಿಜಾಬ್ ತೆಗೆಯುವಂತೆ ಅಸಭ್ಯವಾಗಿ ಹೇಳಿದಳು. ನಾವು ನಮ್ಮ ಹಿಜಾಬ್ ತೆಗೆಯುವುದಿಲ್ಲ ಎಂದು ಆಕೆಗೆ ಹೇಳಿದೆವು. ನಂತರ, ನಾವು ನಮ್ಮ ಹಿಜಾಬ್ ತೆಗೆಯದಿದ್ದರೆ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಮಹಿಳೆ ಪಯನರುಚ್ಛರಿಸಿದರು. ನಾವು ಹೊರಗೆ ಬಂದು ನಮ್ಮ ಪೋಷಕರಿಗೆ ಹೇಳಿದೆವು” ಎಂದು ವಿದ್ಯಾರ್ಥಿನಿ ಅವಲತ್ತುಕೊಂಡಿದ್ದಾರೆ.

ನೊಂದ ಪೋಷಕರು ಈ ವಿಷಯದ ಬಗ್ಗೆ ಪ್ರಾಂಶುಪಾಲರೊಂದಿಗೆ ಮಾತನಾಡಿದರು. ಆದರೆ, ಅವರು ದೃಢವಾಗಿಯೇ ಇದ್ದರು; ಒಬ್ಬ ಹುಡುಗಿಯ ದುಪಟ್ಟಾ ತೆಗೆಯುವಂತೆ ಒತ್ತಾಯಿಸಲಾಯಿತು.

ಬಾಲಕಿ ತಮ್ಮ ಗುರುತನ್ನು ಪರಿಶೀಲಿಸಲು ಸಿದ್ಧರಿದ್ದೇವೆ ಎಂದು ಹೇಳಿದಳು, ಆದರೆ, ಮೇಲ್ವಿಚಾರಕರಿಂದ ಸಂಪೂರ್ಣವಾಗಿ ಪರಿಶೀಲಿಸಲ್ಪಡುತ್ತೇವೆ ಎಂದು ಹೇಳಿದಳು. ಅಧಿಕಾರಿಗಳು ಹಿಜಾಬ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಒತ್ತಾಯಿಸಿದರು.

ಹುಡುಗಿಯರು ತಮ್ಮ ಗುರುತನ್ನು ಪರಿಶೀಲಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಶಾಲಾ ಅಧಿಕಾರಿಗಳ ಆರೋಪದ ಬಗ್ಗೆ ಕೇಳಿದಾಗ, “ಅವರು ಸುಳ್ಳು ಹೇಳುತ್ತಿದ್ದಾರೆ; ನಾವು ವಂಚನೆ ಮಾಡುವ ಮೂಲಕ ಪರೀಕ್ಷೆಗೆ ಹಾಜರಾಗುತ್ತಿರಲಿಲ್ಲ. ನಮ್ಮ ಗುರುತನ್ನು ಪರಿಶೀಲಿಸುವ ಕಾರ್ಯವಿಧಾನವನ್ನು ನಾವು ಏಕೆ ಆಕ್ಷೇಪಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಶಾಲೆಯು ಪರೀಕ್ಷೆಗೆ ನಿಗದಿಪಡಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ಹೇಳಿಕೊಂಡಿದೆ.

“ಬೋರ್ಡ್ ಪರೀಕ್ಷೆಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನಾಲ್ಕು ವಿದ್ಯಾರ್ಥಿಗಳು ಅವುಗಳನ್ನು ಅನುಸರಿಸಲು ನಿರಾಕರಿಸಿದರು, ಪರೀಕ್ಷೆಯನ್ನು ತೆಗೆದುಕೊಳ್ಳದೆ ತಮ್ಮ ಕುಟುಂಬಗಳೊಂದಿಗೆ ಮನೆಗೆ ತೆರಳಿದರು” ಎಂದು ಕೇಂದ್ರದ ಆಡಳಿತಾಧಿಕಾರಿ ಮತ್ತು ಕಾಲೇಜು ಪ್ರಾಂಶುಪಾಲ ದಿನೇಶ್ ಚಂದ್ರ ಗುಪ್ತಾ ಹೇಳಿದರು.

“ಕೇಂದ್ರದಲ್ಲಿ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 153 ಮುಸ್ಲಿಂ ಹುಡುಗಿಯರು. ಈ ನಾಲ್ವರು ಹುಡುಗಿಯರನ್ನು ಹೊರತುಪಡಿಸಿ ಉಳಿದ ಎಲ್ಲಾ ಮುಸ್ಲಿಂ ಹುಡುಗಿಯರು ನಿಯಮಗಳನ್ನು ಅನುಸರಿಸಿ ಪರೀಕ್ಷೆಯನ್ನು ತೆಗೆದುಕೊಂಡರು” ಎಂದು ಅವರು ಹೇಳಿದರು.

“ಅಭ್ಯರ್ಥಿಗಳ ಮುಖ ಮತ್ತು ಅವರ ಪ್ರವೇಶ ಪತ್ರಗಳಲ್ಲಿರುವ ಚಿತ್ರಗಳ ನಡುವಿನ ಹೊಂದಾಣಿಕೆಯನ್ನು ಕಡ್ಡಾಯವಾಗಿ ಪರಿಶೀಲಿಸಲು ನಾಲ್ವರು ಹುಡುಗಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಇಬ್ಬರು ಮಹಿಳಾ ಶಿಕ್ಷಕಿಯರಾದ ರೇಖಾ ಯಾದವ್ ಮತ್ತು ಫಿರ್ದೌಸ್ ಫಾತಿಮಾ ಅವರನ್ನು ವಿದ್ಯಾರ್ಥಿನಿಯರನ್ನು ಪರೀಕ್ಷಿಸಲು ಪ್ರವೇಶದ್ವಾರದಲ್ಲಿ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು” ಎಂದು ಕಾಲೇಜು ವ್ಯವಸ್ಥಾಪಕ ಅನಿಲ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಜಾನ್ಪುರದ ಶಾಲೆಗಳ ಉಪ ನಿರೀಕ್ಷಕ ರಾಕೇಶ್ ಕುಮಾರ್, “ಇಲ್ಲಿಯವರೆಗೆ ಅಂತಹ ಯಾವುದೇ ವಿಷಯದ ಬಗ್ಗೆ ನನ್ನ ಕಚೇರಿಯಲ್ಲಿ ಯಾವುದೇ ಲಿಖಿತ ದೂರು ಬಂದಿಲ್ಲ” ಎಂದು ಹೇಳಿದರು.

ಕ್ರಿಕೆಟ್ ಪಂದ್ಯದ ವೇಳೆ ಪಾಕ್ ಪರ ಘೋಷಣೆ ಆರೋಪ: ಜಿಲ್ಲಾಡಳಿತದಿಂದ ಬುಲ್ಡೋಜರ್ ಬಳಸಿ ಅಂಗಡಿಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...