Homeಮುಖಪುಟಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿದ ಸುಮಾರು ಹತ್ತು ಮುಸ್ಲಿಂ ಹುಡುಗಿಯರಿಗೆ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ ಎಂದು ವರದಿಯಾಗಿದೆ.

ಸರ್ವೋದಯ ಇಂಟರ್-ಕಾಲೇಜಿನಲ್ಲಿ ಹುಡುಗಿಯರು ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಯಿತು, ನಿರಾಶೆಯಿಂದ ತಮ್ಮ ಕುಟುಂಬಗಳೊಂದಿಗೆ ಮನೆಗೆ ಮರಳಿದರು.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಒರ್ವ ವಿದ್ಯಾರ್ಥಿನಿ, “ನಮ್ಮ ರೋಲ್ ಸಂಖ್ಯೆಗಳನ್ನು ಪರಿಶೀಲಿಸಲು ಕ್ಯಾಂಪಸ್‌ಗೆ ಪ್ರವೇಶಿಸಿದಾಗ, ಎಲ್ಲ ಹುಡುಗಿಯರು ತಲೆ ಮುಚ್ಚಿಕೊಳ್ಳದೆ ಅಥವಾ ಹಿಜಾಬ್ ಧರಿಸದೆ ಇರುವುದರಿಂದ ಯಾವುದೇ ಮುಸ್ಲಿಂ ವಿದ್ಯಾರ್ಥಿ ಪರೀಕ್ಷೆಗೆ ಬಂದಿಲ್ಲ ಎಂದು ಭಾವಿಸಿದ್ದೇವೆ” ಎಂದು ಹೇಳಿದರು.

“ನಾವು ಒಳಗೆ ಹೋದಾಗ, ಒಬ್ಬ ಮಹಿಳೆ ಹಿಜಾಬ್ ತೆಗೆಯುವಂತೆ ಅಸಭ್ಯವಾಗಿ ಹೇಳಿದಳು. ನಾವು ನಮ್ಮ ಹಿಜಾಬ್ ತೆಗೆಯುವುದಿಲ್ಲ ಎಂದು ಆಕೆಗೆ ಹೇಳಿದೆವು. ನಂತರ, ನಾವು ನಮ್ಮ ಹಿಜಾಬ್ ತೆಗೆಯದಿದ್ದರೆ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಮಹಿಳೆ ಪಯನರುಚ್ಛರಿಸಿದರು. ನಾವು ಹೊರಗೆ ಬಂದು ನಮ್ಮ ಪೋಷಕರಿಗೆ ಹೇಳಿದೆವು” ಎಂದು ವಿದ್ಯಾರ್ಥಿನಿ ಅವಲತ್ತುಕೊಂಡಿದ್ದಾರೆ.

ನೊಂದ ಪೋಷಕರು ಈ ವಿಷಯದ ಬಗ್ಗೆ ಪ್ರಾಂಶುಪಾಲರೊಂದಿಗೆ ಮಾತನಾಡಿದರು. ಆದರೆ, ಅವರು ದೃಢವಾಗಿಯೇ ಇದ್ದರು; ಒಬ್ಬ ಹುಡುಗಿಯ ದುಪಟ್ಟಾ ತೆಗೆಯುವಂತೆ ಒತ್ತಾಯಿಸಲಾಯಿತು.

ಬಾಲಕಿ ತಮ್ಮ ಗುರುತನ್ನು ಪರಿಶೀಲಿಸಲು ಸಿದ್ಧರಿದ್ದೇವೆ ಎಂದು ಹೇಳಿದಳು, ಆದರೆ, ಮೇಲ್ವಿಚಾರಕರಿಂದ ಸಂಪೂರ್ಣವಾಗಿ ಪರಿಶೀಲಿಸಲ್ಪಡುತ್ತೇವೆ ಎಂದು ಹೇಳಿದಳು. ಅಧಿಕಾರಿಗಳು ಹಿಜಾಬ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಒತ್ತಾಯಿಸಿದರು.

ಹುಡುಗಿಯರು ತಮ್ಮ ಗುರುತನ್ನು ಪರಿಶೀಲಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಶಾಲಾ ಅಧಿಕಾರಿಗಳ ಆರೋಪದ ಬಗ್ಗೆ ಕೇಳಿದಾಗ, “ಅವರು ಸುಳ್ಳು ಹೇಳುತ್ತಿದ್ದಾರೆ; ನಾವು ವಂಚನೆ ಮಾಡುವ ಮೂಲಕ ಪರೀಕ್ಷೆಗೆ ಹಾಜರಾಗುತ್ತಿರಲಿಲ್ಲ. ನಮ್ಮ ಗುರುತನ್ನು ಪರಿಶೀಲಿಸುವ ಕಾರ್ಯವಿಧಾನವನ್ನು ನಾವು ಏಕೆ ಆಕ್ಷೇಪಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಶಾಲೆಯು ಪರೀಕ್ಷೆಗೆ ನಿಗದಿಪಡಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ಹೇಳಿಕೊಂಡಿದೆ.

“ಬೋರ್ಡ್ ಪರೀಕ್ಷೆಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನಾಲ್ಕು ವಿದ್ಯಾರ್ಥಿಗಳು ಅವುಗಳನ್ನು ಅನುಸರಿಸಲು ನಿರಾಕರಿಸಿದರು, ಪರೀಕ್ಷೆಯನ್ನು ತೆಗೆದುಕೊಳ್ಳದೆ ತಮ್ಮ ಕುಟುಂಬಗಳೊಂದಿಗೆ ಮನೆಗೆ ತೆರಳಿದರು” ಎಂದು ಕೇಂದ್ರದ ಆಡಳಿತಾಧಿಕಾರಿ ಮತ್ತು ಕಾಲೇಜು ಪ್ರಾಂಶುಪಾಲ ದಿನೇಶ್ ಚಂದ್ರ ಗುಪ್ತಾ ಹೇಳಿದರು.

“ಕೇಂದ್ರದಲ್ಲಿ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 153 ಮುಸ್ಲಿಂ ಹುಡುಗಿಯರು. ಈ ನಾಲ್ವರು ಹುಡುಗಿಯರನ್ನು ಹೊರತುಪಡಿಸಿ ಉಳಿದ ಎಲ್ಲಾ ಮುಸ್ಲಿಂ ಹುಡುಗಿಯರು ನಿಯಮಗಳನ್ನು ಅನುಸರಿಸಿ ಪರೀಕ್ಷೆಯನ್ನು ತೆಗೆದುಕೊಂಡರು” ಎಂದು ಅವರು ಹೇಳಿದರು.

“ಅಭ್ಯರ್ಥಿಗಳ ಮುಖ ಮತ್ತು ಅವರ ಪ್ರವೇಶ ಪತ್ರಗಳಲ್ಲಿರುವ ಚಿತ್ರಗಳ ನಡುವಿನ ಹೊಂದಾಣಿಕೆಯನ್ನು ಕಡ್ಡಾಯವಾಗಿ ಪರಿಶೀಲಿಸಲು ನಾಲ್ವರು ಹುಡುಗಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಇಬ್ಬರು ಮಹಿಳಾ ಶಿಕ್ಷಕಿಯರಾದ ರೇಖಾ ಯಾದವ್ ಮತ್ತು ಫಿರ್ದೌಸ್ ಫಾತಿಮಾ ಅವರನ್ನು ವಿದ್ಯಾರ್ಥಿನಿಯರನ್ನು ಪರೀಕ್ಷಿಸಲು ಪ್ರವೇಶದ್ವಾರದಲ್ಲಿ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು” ಎಂದು ಕಾಲೇಜು ವ್ಯವಸ್ಥಾಪಕ ಅನಿಲ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಜಾನ್ಪುರದ ಶಾಲೆಗಳ ಉಪ ನಿರೀಕ್ಷಕ ರಾಕೇಶ್ ಕುಮಾರ್, “ಇಲ್ಲಿಯವರೆಗೆ ಅಂತಹ ಯಾವುದೇ ವಿಷಯದ ಬಗ್ಗೆ ನನ್ನ ಕಚೇರಿಯಲ್ಲಿ ಯಾವುದೇ ಲಿಖಿತ ದೂರು ಬಂದಿಲ್ಲ” ಎಂದು ಹೇಳಿದರು.

ಕ್ರಿಕೆಟ್ ಪಂದ್ಯದ ವೇಳೆ ಪಾಕ್ ಪರ ಘೋಷಣೆ ಆರೋಪ: ಜಿಲ್ಲಾಡಳಿತದಿಂದ ಬುಲ್ಡೋಜರ್ ಬಳಸಿ ಅಂಗಡಿಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...