Homeಮುಖಪುಟಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

ಉತ್ತರ ಪ್ರದೇಶ| ಹಿಜಾಬ್ ಧರಿಸಿದ 10 ವಿದ್ಯಾರ್ಥಿನಿಯರಿಗೆ ಬೋರ್ಡ್ ಪರೀಕ್ಷೆ ಬರೆಯಲು ನಿಷೇಧ

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿದ ಸುಮಾರು ಹತ್ತು ಮುಸ್ಲಿಂ ಹುಡುಗಿಯರಿಗೆ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ ಎಂದು ವರದಿಯಾಗಿದೆ.

ಸರ್ವೋದಯ ಇಂಟರ್-ಕಾಲೇಜಿನಲ್ಲಿ ಹುಡುಗಿಯರು ಪರೀಕ್ಷೆ ಬರೆಯುವುದನ್ನು ನಿಷೇಧಿಸಲಾಯಿತು, ನಿರಾಶೆಯಿಂದ ತಮ್ಮ ಕುಟುಂಬಗಳೊಂದಿಗೆ ಮನೆಗೆ ಮರಳಿದರು.

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ಒರ್ವ ವಿದ್ಯಾರ್ಥಿನಿ, “ನಮ್ಮ ರೋಲ್ ಸಂಖ್ಯೆಗಳನ್ನು ಪರಿಶೀಲಿಸಲು ಕ್ಯಾಂಪಸ್‌ಗೆ ಪ್ರವೇಶಿಸಿದಾಗ, ಎಲ್ಲ ಹುಡುಗಿಯರು ತಲೆ ಮುಚ್ಚಿಕೊಳ್ಳದೆ ಅಥವಾ ಹಿಜಾಬ್ ಧರಿಸದೆ ಇರುವುದರಿಂದ ಯಾವುದೇ ಮುಸ್ಲಿಂ ವಿದ್ಯಾರ್ಥಿ ಪರೀಕ್ಷೆಗೆ ಬಂದಿಲ್ಲ ಎಂದು ಭಾವಿಸಿದ್ದೇವೆ” ಎಂದು ಹೇಳಿದರು.

“ನಾವು ಒಳಗೆ ಹೋದಾಗ, ಒಬ್ಬ ಮಹಿಳೆ ಹಿಜಾಬ್ ತೆಗೆಯುವಂತೆ ಅಸಭ್ಯವಾಗಿ ಹೇಳಿದಳು. ನಾವು ನಮ್ಮ ಹಿಜಾಬ್ ತೆಗೆಯುವುದಿಲ್ಲ ಎಂದು ಆಕೆಗೆ ಹೇಳಿದೆವು. ನಂತರ, ನಾವು ನಮ್ಮ ಹಿಜಾಬ್ ತೆಗೆಯದಿದ್ದರೆ ನಮಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಮಹಿಳೆ ಪಯನರುಚ್ಛರಿಸಿದರು. ನಾವು ಹೊರಗೆ ಬಂದು ನಮ್ಮ ಪೋಷಕರಿಗೆ ಹೇಳಿದೆವು” ಎಂದು ವಿದ್ಯಾರ್ಥಿನಿ ಅವಲತ್ತುಕೊಂಡಿದ್ದಾರೆ.

ನೊಂದ ಪೋಷಕರು ಈ ವಿಷಯದ ಬಗ್ಗೆ ಪ್ರಾಂಶುಪಾಲರೊಂದಿಗೆ ಮಾತನಾಡಿದರು. ಆದರೆ, ಅವರು ದೃಢವಾಗಿಯೇ ಇದ್ದರು; ಒಬ್ಬ ಹುಡುಗಿಯ ದುಪಟ್ಟಾ ತೆಗೆಯುವಂತೆ ಒತ್ತಾಯಿಸಲಾಯಿತು.

ಬಾಲಕಿ ತಮ್ಮ ಗುರುತನ್ನು ಪರಿಶೀಲಿಸಲು ಸಿದ್ಧರಿದ್ದೇವೆ ಎಂದು ಹೇಳಿದಳು, ಆದರೆ, ಮೇಲ್ವಿಚಾರಕರಿಂದ ಸಂಪೂರ್ಣವಾಗಿ ಪರಿಶೀಲಿಸಲ್ಪಡುತ್ತೇವೆ ಎಂದು ಹೇಳಿದಳು. ಅಧಿಕಾರಿಗಳು ಹಿಜಾಬ್ ಅನ್ನು ಸಂಪೂರ್ಣವಾಗಿ ತೆಗೆದುಹಾಕಲು ಒತ್ತಾಯಿಸಿದರು.

ಹುಡುಗಿಯರು ತಮ್ಮ ಗುರುತನ್ನು ಪರಿಶೀಲಿಸಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಶಾಲಾ ಅಧಿಕಾರಿಗಳ ಆರೋಪದ ಬಗ್ಗೆ ಕೇಳಿದಾಗ, “ಅವರು ಸುಳ್ಳು ಹೇಳುತ್ತಿದ್ದಾರೆ; ನಾವು ವಂಚನೆ ಮಾಡುವ ಮೂಲಕ ಪರೀಕ್ಷೆಗೆ ಹಾಜರಾಗುತ್ತಿರಲಿಲ್ಲ. ನಮ್ಮ ಗುರುತನ್ನು ಪರಿಶೀಲಿಸುವ ಕಾರ್ಯವಿಧಾನವನ್ನು ನಾವು ಏಕೆ ಆಕ್ಷೇಪಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಶಾಲೆಯು ಪರೀಕ್ಷೆಗೆ ನಿಗದಿಪಡಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದೆ ಎಂದು ಹೇಳಿಕೊಂಡಿದೆ.

“ಬೋರ್ಡ್ ಪರೀಕ್ಷೆಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನಾಲ್ಕು ವಿದ್ಯಾರ್ಥಿಗಳು ಅವುಗಳನ್ನು ಅನುಸರಿಸಲು ನಿರಾಕರಿಸಿದರು, ಪರೀಕ್ಷೆಯನ್ನು ತೆಗೆದುಕೊಳ್ಳದೆ ತಮ್ಮ ಕುಟುಂಬಗಳೊಂದಿಗೆ ಮನೆಗೆ ತೆರಳಿದರು” ಎಂದು ಕೇಂದ್ರದ ಆಡಳಿತಾಧಿಕಾರಿ ಮತ್ತು ಕಾಲೇಜು ಪ್ರಾಂಶುಪಾಲ ದಿನೇಶ್ ಚಂದ್ರ ಗುಪ್ತಾ ಹೇಳಿದರು.

“ಕೇಂದ್ರದಲ್ಲಿ ಒಟ್ಟು 413 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 153 ಮುಸ್ಲಿಂ ಹುಡುಗಿಯರು. ಈ ನಾಲ್ವರು ಹುಡುಗಿಯರನ್ನು ಹೊರತುಪಡಿಸಿ ಉಳಿದ ಎಲ್ಲಾ ಮುಸ್ಲಿಂ ಹುಡುಗಿಯರು ನಿಯಮಗಳನ್ನು ಅನುಸರಿಸಿ ಪರೀಕ್ಷೆಯನ್ನು ತೆಗೆದುಕೊಂಡರು” ಎಂದು ಅವರು ಹೇಳಿದರು.

“ಅಭ್ಯರ್ಥಿಗಳ ಮುಖ ಮತ್ತು ಅವರ ಪ್ರವೇಶ ಪತ್ರಗಳಲ್ಲಿರುವ ಚಿತ್ರಗಳ ನಡುವಿನ ಹೊಂದಾಣಿಕೆಯನ್ನು ಕಡ್ಡಾಯವಾಗಿ ಪರಿಶೀಲಿಸಲು ನಾಲ್ವರು ಹುಡುಗಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಇಬ್ಬರು ಮಹಿಳಾ ಶಿಕ್ಷಕಿಯರಾದ ರೇಖಾ ಯಾದವ್ ಮತ್ತು ಫಿರ್ದೌಸ್ ಫಾತಿಮಾ ಅವರನ್ನು ವಿದ್ಯಾರ್ಥಿನಿಯರನ್ನು ಪರೀಕ್ಷಿಸಲು ಪ್ರವೇಶದ್ವಾರದಲ್ಲಿ ಮೇಲ್ವಿಚಾರಕರಾಗಿ ನಿಯೋಜಿಸಲಾಗಿತ್ತು” ಎಂದು ಕಾಲೇಜು ವ್ಯವಸ್ಥಾಪಕ ಅನಿಲ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.

ಜಾನ್ಪುರದ ಶಾಲೆಗಳ ಉಪ ನಿರೀಕ್ಷಕ ರಾಕೇಶ್ ಕುಮಾರ್, “ಇಲ್ಲಿಯವರೆಗೆ ಅಂತಹ ಯಾವುದೇ ವಿಷಯದ ಬಗ್ಗೆ ನನ್ನ ಕಚೇರಿಯಲ್ಲಿ ಯಾವುದೇ ಲಿಖಿತ ದೂರು ಬಂದಿಲ್ಲ” ಎಂದು ಹೇಳಿದರು.

ಕ್ರಿಕೆಟ್ ಪಂದ್ಯದ ವೇಳೆ ಪಾಕ್ ಪರ ಘೋಷಣೆ ಆರೋಪ: ಜಿಲ್ಲಾಡಳಿತದಿಂದ ಬುಲ್ಡೋಜರ್ ಬಳಸಿ ಅಂಗಡಿಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...