Homeಮುಖಪುಟಉತ್ತರ ಪ್ರದೇಶ| ವಾಕ್-ಶ್ರವಣದೋಷವುಳ್ಳ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಚಿತ್ರಹಿಂಸೆ

ಉತ್ತರ ಪ್ರದೇಶ| ವಾಕ್-ಶ್ರವಣದೋಷವುಳ್ಳ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಚಿತ್ರಹಿಂಸೆ

- Advertisement -
- Advertisement -

ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ 11 ವರ್ಷದ ವಾಕ್ ಮತ್ತು ಶ್ರವಣದೋಷವುಳ್ಳ ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ಮಾಡಲಾಗಿದೆ. ಆಕೆ ಪ್ರಜ್ಞಾಹೀನಳಾಗಿ ಗಂಭೀರ ಗಾಯಗಳಿಂದ ಪತ್ತೆಯಾಗಿದ್ದಾಳೆ. ಬಂಧನದ ಸಮಯದಲ್ಲಿ ಕಾಲಿಗೆ ಗುಂಡು ಹಾರಿಸುವ ಮೂಲಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳವಾರ ಸಂಜೆಯಿಂದ ಬಾಲಕಿ ಕಾಣೆಯಾಗಿದ್ದಳು, ಕುಟುಂಬ ಸದಸ್ಯರು ಆಕೆಗಾಗಿ ಹುಡುಕುತ್ತಿದ್ದರು. ನಿನ್ನೆ ಬೆಳಿಗ್ಗೆ, ಆಕೆ ಹೊಲದಲ್ಲಿ ಬೆತ್ತಲೆಯಾಗಿ ಗಾಯಗೊಂಡಿದ್ದು ಪತ್ತೆಯಾಗಿತ್ತು. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಮೀರತ್‌ಗೆ ಕರೆದೊಯ್ಯಲಾಯಿತು. ಅಪ್ರಾಪ್ತ ವಯಸ್ಕಳ ಮೇಲಿನ ಅತ್ಯಾಚಾರ ಆರೋಪದಡಿಯಲ್ಲಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದೌರ್ಜನ್ಯ ನಡೆದ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಅದೇ ಗ್ರಾಮದ ನಿವಾಸಿ ಡಾನ್ ಸಿಂಗ್ (24) ಎಂಬಾತನನ್ನು ಶಂಕಿತ ಎಂದು ಗುರುತಿಸಿದ್ದಾರೆ. ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದಾಗ, ಆತ ಪೊಲೀಶರ ಮೇಲೆಯೇ ಗುಂಡು ಹಾರಿಸಿದ್ದಾನೆ, ಪ್ರತಿದಾಳಿಯಲ್ಲಿ ಗಾಯಗೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

“ಇದು ಒಬ್ಬರು ಅಥವಾ ಹೆಚ್ಚಿನ ವ್ಯಕ್ತಿಗಳಿಂದ ನಡೆದ ಅತ್ಯಾಚಾರದ ಸ್ಪಷ್ಟ ಪ್ರಕರಣವಾಗಿದೆ. ಏಕೆಂದರೆ, ಆಕೆಯ ಖಾಸಗಿ ಭಾಗಗಳಲ್ಲಿ ಅನೇಕ ಗಾಯಗಳಾಗಿದ್ದವು. ಆಕೆಯ ಮುಖಕ್ಕೆ ಮೊಂಡಾದ ವಸ್ತುವಿನಿಂದ ಹೊಡೆದಿದ್ದು, ಅದು ಊದಿಕೊಂಡಿತ್ತು. ಆಕೆ ಭಯಭೀತಳಾಗಿದ್ದಳು ಮತ್ತು ಏನನ್ನೂ ವಿವರಿಸಲು ಸಾಧ್ಯವಾಗುತ್ತಿರಲಿಲ್ಲ. ಇದು ನಾನು ನೋಡಿದ ಅತ್ಯಂತ ಭಯಾನಕ ಲೈಂಗಿಕ ಅಪರಾಧಗಳಲ್ಲಿ ಒಂದಾಗಿದೆ” ಎಂದು ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದ ಡಾ. ಅಂಜು ಸಿಂಗ್ ಹೇಳಿದ್ದಾರೆ.

ಮಾತನಾಡಲು ಅಥವಾ ಕೇಳಲು ಸಾಧ್ಯವಾಗದ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ರಾಂಪುರ ಪೊಲೀಸ್ ಮುಖ್ಯಸ್ಥೆ ವಿದ್ಯಾ ಸಾಗರ್ ಮಿಶ್ರಾ ಹೇಳಿದ್ದಾರೆ.

“ನಾವು ಪ್ರಕರಣ ದಾಖಲಿಸಿ, ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದೇವೆ. ಆರೋಪಿಯನ್ನು ಪತ್ತೆಹಚ್ಚಲು ಮೂರು ತಂಡಗಳನ್ನು ರಚಿಸಲಾಗಿತ್ತು. ನಾವು ಆತನನ್ನು ಬಂಧಿಸಲು ಪ್ರಯತ್ನಿಸಿದಾಗ, ಆತ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ. ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದರಿಂದ ಆತನಿಗೆ ಗುಂಡು ತಗುಲಿತು. ಆರೋಪಿಯ ವಿರುದ್ಧ ನಮ್ಮಲ್ಲಿ ಎಲೆಕ್ಟ್ರಾನಿಕ್ ಪುರಾವೆಗಳಿವೆ. ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಅವರು ಹೇಳಿದರು.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಯು ಬಾಲಕಿಯ ಮನೆಯ ಹೊರಗೆ ಮಾತನಾಡುತ್ತಿರುವುದು ಕಂಡುಬಂದಿದೆ ಎಂದು ಹಿರಿಯ ಅಧಿಕಾರಿ ಹೇಳಿದರು.

ಛತ್ತೀಸ್‌ಗಢದಲ್ಲಿ 22 ಜನ ನಕ್ಸಲರ ಬಂಧನ, ಸ್ಫೋಟಕಗಳು ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...