Homeಮುಖಪುಟಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಹಳ್ಳಿಯೊಂದರ ಬಳಿ ಶನಿವಾರ ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವಿಶಾಕ್ ಜಿ.ಅಯ್ಯರ್ ತಿಳಿಸಿದ್ದಾರೆ.

ಸಾವಿಗೀಡಾದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಸಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭದೇನಾ ಗ್ರಾಮದ ಬಳಿ ಸಂಜೆ ಈ ಘಟನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫೋನ್ ಮೂಲಕ ಪಿಟಿಐ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಅಯ್ಯರ್, ಸಾವಿನ ಸಂಖ್ಯೆ 26ಕ್ಕೆ ಏರಿದೆ ಎಂದಿದ್ದಾರೆ.

ಟ್ರಾಕ್ಟರ್-ಟ್ರಾಲಿಯಲ್ಲಿ ಸುಮಾರು 50 ಜನರಿದ್ದರು. ಇವರು ಫತೇಪುರ್‌ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿದ ನಂತರ ಘಟಂಪುರಕ್ಕೆ ತೆರಳುತ್ತಿದ್ದರು. ಆಗ ಅವಘಡ ನಡೆದಿದ್ದು ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದ್ದಾರೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

“ಕಾನ್ಪುರದಲ್ಲಿ ನಡೆದ ಟ್ರಾಕ್ಟರ್-ಟ್ರಾಲಿ ಅಪಘಾತದಿಂದ ದುಃಖಿತನಾಗಿರುವೆ. ಗಾಯಗೊಂಡವರ ಉಳಿವಿಗಾಗಿ ಪ್ರಾರ್ಥಿಸುವೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ” ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿಯು (ಪಿಎಂಒ) ತಿಳಿಸಿದೆ. ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಆದಿತ್ಯನಾಥ್ ಅವರು ಸಚಿವರಾದ ರಾಕೇಶ್ ಸಚನ್ ಮತ್ತು ಅಜಿತ್ ಪಾಲ್ ಅವರನ್ನು ಅಪಘಾತ ಸ್ಥಳಕ್ಕೆ ಕಳುಹಿಸಿದ್ದಾರೆ.

ಟ್ರಾಕ್ಟರ್-ಟ್ರಾಲಿಗಳನ್ನು ಕೃಷಿ ಹಾಗೂ ಸರಕುಗಳನ್ನು ಸಾಗಿಸುವ ಉದ್ದೇಶಗಳಿಗಾಗಿ ಮಾತ್ರ ಬಳಸಬೇಕೇ ಹೊರತು ಜನರನ್ನು ಸಾಗಿಸಲು ಅಲ್ಲ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ಸ್ಪಷ್ಟಪಡಿಸಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ನೀರಿಗೆ ಹಾರಿ ಸಂತ್ರಸ್ತರನ್ನು ಹೊರಗೆ ತರುವ ಪ್ರಯತ್ನ ಮಾಡಿದರು. ಅಷ್ಟು ವೇಳೆಗಾಗಲೇ ಕೆಲವರು ಸಾವನ್ನಪ್ಪಿದ್ದರು. ಗಾಯಾಳುಗಳನ್ನು ಭೀಟರ್‌ಗಾಂವ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಕರೆದೊಯ್ಯಲಾಯಿತು. ಅಲ್ಲಿ ಕೆಲವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ಹೇಳಿದರು.

ಗಾಯಾಳುಗಳನ್ನು ಲಾಲಾ ಲಜಪತ್ ರಾಯ್ (ಎಲ್‌ಎಲ್‌ಆರ್) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಎಸ್‌ವಿಎಂ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಸಂಜಯ್ ಕಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮುಖ್ಯಮಂತ್ರಿಯವರು ರಕ್ಷಣಾ ಕಾರ್ಯಾಚರಣೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ” ಎಂದು ಲಕ್ನೋದಲ್ಲಿ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

“ಅಪಘಾತದ ಹಿಂದಿನ ಕಾರಣಗಳನ್ನು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಜಿಲ್ಲಾಡಳಿತಕ್ಕೆ ತಿಳಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆದಿತ್ಯನಾಥ್, “ಕಾನ್ಪುರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ನಡೆಸಬೇಕು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ” ಎಂದಿದ್ದಾರೆ.

“ಅಪಘಾತದಲ್ಲಾದ ಜೀವಹಾನಿ ಬಹಳ ದುಃಖ ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಮೃತರ ಕುಟುಂಬಗಳಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಧೈರ್ಯವನ್ನು ನೀಡಲೆಂದು ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಅವರು ಘಟನೆಗೆ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಯಾದವ್, “ಉತ್ತರ ಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರಾಲಿಗಳಲ್ಲಿ ಸಾಗಾಟ ನಿರಂತರವಾಗಿ ನಡೆಯುತ್ತಿದೆ. ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರಕಾರ ಎಚ್ಚೆತ್ತುಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಬೇಕು. ಮೃತರಿಗೆ ಸಂತಾಪ. ಮೃತರ ಸಂಬಂಧಿಕರಿಗೆ 50 ಲಕ್ಷ ರೂ., ಗಾಯಾಳುಗಳಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ನೀಡಬೇಕು. ಅವರ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಮಾಯಾವತಿಯವರು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...