Homeಮುಖಪುಟಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

ಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಬೀದಿಯಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ, 24 ಗಂಟೆಯೊಳಗೆ ಆರೋಪಿಗಳಿಗೆ ಜಾಮೀನು ನೀಡಲಾಗಿದೆ.

ಗುರುವಾರ ಕಾನ್ಪುರ ಪಟ್ಟಣದಲ್ಲಿ ಇ- ರಿಕ್ಷಾ ಚಾಲಕನಾಗಿರುವ 45 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಗುಂಪೊಂದು “ಜೈ ಶ್ರೀ ರಾಮ್” ಘೋಷಣೆಗಳನ್ನು ಕೂಗಿಕೊಂಡು ಬೀದಿಯಲ್ಲಿ ಮೆರವಣಿಗೆ ಮಾಡಿದ್ದ ಘಟನೆ ನಡೆದಿತ್ತು.

ಕಾನ್ಪೂರ ಪೊಲೀಸ್ ಠಾಣೆಯಿಂದ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ಆರೋಪಿಗಳ ವಿರುದ್ಧ ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆ ಆಗುವಂತಹ ಪ್ರಕರಣಗಳು, ಸೆಕ್ಷನ್‌ಗಳನ್ನು ಹಾಕಲಾಗಿದೆ. ಆದರೆ, ಪೊಲೀಸರು ಮಾತ್ರ ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ. ಇತರ ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

“ನಾವು ಮೂವರನ್ನು ಬಂಧಿಸಿದ್ದೇವೆ, ಅವರು ಪ್ರಕರಣದ ಪ್ರಮುಖ ಆರೋಪಿಗಳು. ಈ ಪ್ರಕರಣದಲ್ಲಿ ಉಳಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ. ಈ ಪ್ರದೇಶದಲ್ಲಿ ಸಾಕಷ್ಟು ತಂಡಗಳನ್ನು ನಿಯೋಜಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಕಾನ್ಪುರ ಪೊಲೀಸ್ ಆಯುಕ್ತ ಅರುಣ್ ಈ ಹಿಂದೆ ಹೇಳಿದ್ದರು.

ಆರೋಪಿಗಳ ಬಂಧನದ ನಂತರ, ಬಜರಂಗದಳದ ಕಾರ್ಯಕರ್ತರ ಗುಂಪು ಕಾನ್ಪುರದ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದರು. ನ್ಯಾಯಯುತ ತನಿಖೆಯ ಬಗ್ಗೆ ಪೊಲೀಸರಿಂದ ‘ಭರವಸೆ’ ಸಿಕ್ಕಿದ ನಂತರವೇ ಅವರು ಅಲ್ಲಿಂದ ಹೊರಟುಹೋಗಿದ್ದರು. ಜೊತೆಗೆ ಬಂಧಿತರನ್ನು ಶೀಘ್ರ ಬಿಡುಗಡೆ ಮಾಡದಿದ್ದರೆ ಮತ್ತೆ ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದ್ದರು.

ಬಲಪಂಥೀಯ ಗುಂಪು ಬಜರಂಗದಳವು ಸಭೆ ನಡೆಸಿದ ಸ್ಥಳದಿಂದ 500 ಮೀಟರ್ ದೂರದಲ್ಲಿ ಗುರುವಾರ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆದಿತ್ತು. ಆ ಪ್ರದೇಶದಲ್ಲಿ ಮುಸ್ಲಿಮರು ಹಿಂದೂ ಯುವತಿಯರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಜರಂಗದಳದ ಸಭೆಯ ನಂತರ ಹಲ್ಲೆ ನಡೆದಿದೆ ಎಂದು ವರದಿಯಾಗಿತ್ತು.

ಕಾನ್ಪುರ ಪೊಲೀಸರು ಹಲ್ಲೆಗೊಳಗಾದ ವ್ಯಕ್ತಿಯ ದೂರಿನ ಆಧಾರದ ಮೇಲೆ ಸ್ಥಳೀಯವಾಗಿ ಮದುವೆ ಬ್ಯಾಂಡ್ ನಡೆಸುತ್ತಿರುವ ಸ್ಥಳೀಯ, ಆತನ ಮಗ ಮತ್ತು ಸುಮಾರು 10 ಅಪರಿಚಿತ ವ್ಯಕ್ತಿಗಳ ವಿರುದ್ಧ ಗಲಭೆ ಪ್ರಕರಣ ದಾಖಲಿಸಿದ್ದರು. ಆದರೆ, ಬಜರಂಗದಳದ ವ್ಯಕ್ತಿಗಳು ವಿರುದ್ಧ ಪ್ರಕರಣ ದಾಖಲಾಗಿದೆಯೇ ಎಂಬ ಬಗ್ಗೆ ಮಾಹಿತಿ ನೀಡಿರಲಿಲ್ಲ.


ಇದನ್ನೂ ಓದಿ: ಉತ್ತರ ಪ್ರದೇಶ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ತಂದೆಯನ್ನು ಹೊಡೆಯದಂತೆ ಬೇಡಿಕೊಂಡ ಮಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...