HomeUncategorizedಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

- Advertisement -
- Advertisement -

ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಫತೇಹ್‌ಪುರ್ ಬಂಗೈ ಗ್ರಾಮದಲ್ಲಿರುವ 65 ವರ್ಷಗಳ ಹಳೆಯ ಇಸ್ಲಾಮಿಯಾ ಅರೇಬಿಯಾ ಅನ್ವರುಲ್ ಉಲೂಮ್ ಮದರಸಾವನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ. ಈ ಕುರಿತು ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ (ಜೂನ್ 19) ಸ್ಥಳೀಯ ತಹಸೀಲ್ದಾರ್ ಜಮುನ್ಹಾ ಅವರ ಆದೇಶದ ಮೇರೆಗೆ ಈ ಮದರಸಾದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದೆ. ‘ಮದರಸಾವನ್ನು ಗ್ರಾಮಸಭಾ ಭೂಮಿಯಲ್ಲಿ  ಅನುಮತಿಯಿಲ್ಲದೆ ಕಟ್ಟಲಾಗಿತ್ತು. ಈ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ. ಇದಕ್ಕೂ ಮೊದಲು ಮದರಸಾ ಸಂಸ್ಥೆಗೆ ಅನೇಕ ನೋಟಿಸ್‌ಗಳನ್ನು ನೀಡಲಾಗಿದೆ’ ಎಂದು ತಹಸೀಲ್ದಾರ್ ಹೇಳಿದರು.

ಸ್ಥಳೀಯ ಗ್ರಾಮಸ್ಥರು ಮತ್ತು ಮುಸ್ಲಿಂ ಮುಖಂಡರು ತಹಶೀಲ್ದಾರ್ ಅವರ ಈ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.  “ಈ ಮದರಸಾ ಆರು ದಶಕಗಳಿಂದ ನಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ” ಎಂದು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಹೇಳುತ್ತಾರೆ.

ಶ್ರಾವಸ್ತಿಯಲ್ಲಿರುವ 297 ಮದರಸಾಗಳಲ್ಲಿ ಕೇವಲ 105 ಮಾತ್ರ ಉತ್ತರಪ್ರದೇಶ ಮದರಸಾ ಮಂಡಳಿಯಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿವೆ. ಉಳಿದವುಗಳನ್ನು ಅಕ್ರಮ ಎಂದು ಸರಕಾರವು ಹಣೆಪಟ್ಟಿ ಹಚ್ಚಿ ಅವುಗಳನ್ನು ನೆಲಸಮಗೊಳಿಸುತ್ತಿದೆ.

ಈ 65 ವರ್ಷಗಳ ಹಳೆಯ ಮದರಸಾದ ಕೆಡವಿದ ದಿನವೇ, ಹರ್ದತ್ತ್ ನಗರ ಗಿರಂಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಂಪುರ್ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಇನ್ನೂ ಎರಡು ಮದರಸಾಗಳನ್ನು ನೆಲಸಮಗೊಳಿಸಲಾಗಿದೆ.

ಅದು ಯಾರೇ ಭಾಗಿಯಾಗಿರಲಿ, ಸರ್ಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ಸಹಿಸಲಾಗುವುದಿಲ್ಲ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ಹೇಳಿದ್ದಾರೆ.

 ಸರ್ಕಾರದ ಈ ಬುಲ್ಡೋಜರ್ ನೀತಿಯು ಮುಸ್ಲಿಂ ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಮದರಸಾಗಳು ಕಲಿಕೆ ಮತ್ತು ಶಾಂತಿಯ ಕೇಂದ್ರಗಳಾಗಿವೆ ಎಂದು ಶ್ರಾವಸ್ತಿಯ ಧಾರ್ಮಿಕ ವಿದ್ವಾಂಸ ಮೌಲಾನಾ ಇಮ್ರಾನ್ ಖುರೇಶಿ ಹೇಳಿದರು.

ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಸೀದಿಗಳು, ಮದರಸಾಗಳು, ಈದ್ಗಾಗಳು ಮತ್ತು ಸ್ಮಶಾನಗಳನ್ನು ವ್ಯಾಪಕವಾಗಿ ಗುರಿಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಜಕೀಯ ಒತ್ತಡದಲ್ಲಿ ಶತಮಾನಗಳಷ್ಟು ಹಳೆಯ ಮದರಸಾಗಳನ್ನು ಬುಲ್ಡೋಜರ್‌ನಿಂದ ಕೆಡವುದು ನಮ್ಮ ಗುರುತಿನ ಮೇಲೆ ನಡೆಸಿದ ದಾಳಿಯಾಗಿದೆ ಎಂದು ಸಮುದಾಯದ ನಾಯಕ ರಹೀಮ್ ಖಾನ್ ಅವರು ಕಳವಳ ವ್ಯಕ್ತಪಡಿಸಿದರು.

ನಾನು ಕಾನೂನು ಮತ್ತು ಸುವ್ಯವಸ್ಥೆಯನ್ನು ವಿರೋಧಿಸುವುದಿಲ್ಲ. ಆದರೆ ಏಕೆ ಕೇವಲ ಮುಸ್ಲಿಂ ಸಂಸ್ಥೆಗಳನ್ನು ಮಾತ್ರ ಗುರಿಪಡಿಸಲಾಗುತ್ತಿದೆ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಾನ್ ಅಹ್ಮದ್ ಪ್ರಶ್ನಿಸಿದರು.

ಜಿಲ್ಲೆಯಾದ್ಯಂತ ಹೆಚ್ಚಿನ ಮದರಸಾಗಳ ಕುರಿತ ತನಿಖೆಗಳು ಮುಂದುವರಿಯುತ್ತಿವೆ. ಸಮುದಾಯವು ಇಂತಹ ನೆಲಸಮ ಕಾರ್ಯಾಚರಣೆಯ ಬದಲು ನ್ಯಾಯಕ್ಕಾಗಿ ಆಶಿಸುತ್ತಿದೆ. ನಮಗೆ ಶಾಂತಿ, ಗೌರವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವ ಹಕ್ಕು ಬೇಕು ಎಂದು ಅಬ್ದುಲ್ ರಶೀದ್ ಹೇಳಿದರು.

ಇನ್ನು ಮುಂದೆ ನೆಲಸಮಗೊಳಿಸಬೇಕೆಂದು ಗುರುತಿಸಲ್ಪಟ್ಟ ಮದರಸಾಗಳನ್ನು ರಕ್ಷಿಸಲು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಲು ಯೋಜಿಸಿವೆ.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...