HomeUncategorizedಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

- Advertisement -
- Advertisement -

ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಫತೇಹ್‌ಪುರ್ ಬಂಗೈ ಗ್ರಾಮದಲ್ಲಿರುವ 65 ವರ್ಷಗಳ ಹಳೆಯ ಇಸ್ಲಾಮಿಯಾ ಅರೇಬಿಯಾ ಅನ್ವರುಲ್ ಉಲೂಮ್ ಮದರಸಾವನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ. ಈ ಕುರಿತು ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ (ಜೂನ್ 19) ಸ್ಥಳೀಯ ತಹಸೀಲ್ದಾರ್ ಜಮುನ್ಹಾ ಅವರ ಆದೇಶದ ಮೇರೆಗೆ ಈ ಮದರಸಾದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದೆ. ‘ಮದರಸಾವನ್ನು ಗ್ರಾಮಸಭಾ ಭೂಮಿಯಲ್ಲಿ  ಅನುಮತಿಯಿಲ್ಲದೆ ಕಟ್ಟಲಾಗಿತ್ತು. ಈ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ. ಇದಕ್ಕೂ ಮೊದಲು ಮದರಸಾ ಸಂಸ್ಥೆಗೆ ಅನೇಕ ನೋಟಿಸ್‌ಗಳನ್ನು ನೀಡಲಾಗಿದೆ’ ಎಂದು ತಹಸೀಲ್ದಾರ್ ಹೇಳಿದರು.

ಸ್ಥಳೀಯ ಗ್ರಾಮಸ್ಥರು ಮತ್ತು ಮುಸ್ಲಿಂ ಮುಖಂಡರು ತಹಶೀಲ್ದಾರ್ ಅವರ ಈ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.  “ಈ ಮದರಸಾ ಆರು ದಶಕಗಳಿಂದ ನಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ” ಎಂದು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಹೇಳುತ್ತಾರೆ.

ಶ್ರಾವಸ್ತಿಯಲ್ಲಿರುವ 297 ಮದರಸಾಗಳಲ್ಲಿ ಕೇವಲ 105 ಮಾತ್ರ ಉತ್ತರಪ್ರದೇಶ ಮದರಸಾ ಮಂಡಳಿಯಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿವೆ. ಉಳಿದವುಗಳನ್ನು ಅಕ್ರಮ ಎಂದು ಸರಕಾರವು ಹಣೆಪಟ್ಟಿ ಹಚ್ಚಿ ಅವುಗಳನ್ನು ನೆಲಸಮಗೊಳಿಸುತ್ತಿದೆ.

ಈ 65 ವರ್ಷಗಳ ಹಳೆಯ ಮದರಸಾದ ಕೆಡವಿದ ದಿನವೇ, ಹರ್ದತ್ತ್ ನಗರ ಗಿರಂಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಂಪುರ್ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಇನ್ನೂ ಎರಡು ಮದರಸಾಗಳನ್ನು ನೆಲಸಮಗೊಳಿಸಲಾಗಿದೆ.

ಅದು ಯಾರೇ ಭಾಗಿಯಾಗಿರಲಿ, ಸರ್ಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ಸಹಿಸಲಾಗುವುದಿಲ್ಲ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ಹೇಳಿದ್ದಾರೆ.

 ಸರ್ಕಾರದ ಈ ಬುಲ್ಡೋಜರ್ ನೀತಿಯು ಮುಸ್ಲಿಂ ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಮದರಸಾಗಳು ಕಲಿಕೆ ಮತ್ತು ಶಾಂತಿಯ ಕೇಂದ್ರಗಳಾಗಿವೆ ಎಂದು ಶ್ರಾವಸ್ತಿಯ ಧಾರ್ಮಿಕ ವಿದ್ವಾಂಸ ಮೌಲಾನಾ ಇಮ್ರಾನ್ ಖುರೇಶಿ ಹೇಳಿದರು.

ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಸೀದಿಗಳು, ಮದರಸಾಗಳು, ಈದ್ಗಾಗಳು ಮತ್ತು ಸ್ಮಶಾನಗಳನ್ನು ವ್ಯಾಪಕವಾಗಿ ಗುರಿಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಜಕೀಯ ಒತ್ತಡದಲ್ಲಿ ಶತಮಾನಗಳಷ್ಟು ಹಳೆಯ ಮದರಸಾಗಳನ್ನು ಬುಲ್ಡೋಜರ್‌ನಿಂದ ಕೆಡವುದು ನಮ್ಮ ಗುರುತಿನ ಮೇಲೆ ನಡೆಸಿದ ದಾಳಿಯಾಗಿದೆ ಎಂದು ಸಮುದಾಯದ ನಾಯಕ ರಹೀಮ್ ಖಾನ್ ಅವರು ಕಳವಳ ವ್ಯಕ್ತಪಡಿಸಿದರು.

ನಾನು ಕಾನೂನು ಮತ್ತು ಸುವ್ಯವಸ್ಥೆಯನ್ನು ವಿರೋಧಿಸುವುದಿಲ್ಲ. ಆದರೆ ಏಕೆ ಕೇವಲ ಮುಸ್ಲಿಂ ಸಂಸ್ಥೆಗಳನ್ನು ಮಾತ್ರ ಗುರಿಪಡಿಸಲಾಗುತ್ತಿದೆ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಾನ್ ಅಹ್ಮದ್ ಪ್ರಶ್ನಿಸಿದರು.

ಜಿಲ್ಲೆಯಾದ್ಯಂತ ಹೆಚ್ಚಿನ ಮದರಸಾಗಳ ಕುರಿತ ತನಿಖೆಗಳು ಮುಂದುವರಿಯುತ್ತಿವೆ. ಸಮುದಾಯವು ಇಂತಹ ನೆಲಸಮ ಕಾರ್ಯಾಚರಣೆಯ ಬದಲು ನ್ಯಾಯಕ್ಕಾಗಿ ಆಶಿಸುತ್ತಿದೆ. ನಮಗೆ ಶಾಂತಿ, ಗೌರವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವ ಹಕ್ಕು ಬೇಕು ಎಂದು ಅಬ್ದುಲ್ ರಶೀದ್ ಹೇಳಿದರು.

ಇನ್ನು ಮುಂದೆ ನೆಲಸಮಗೊಳಿಸಬೇಕೆಂದು ಗುರುತಿಸಲ್ಪಟ್ಟ ಮದರಸಾಗಳನ್ನು ರಕ್ಷಿಸಲು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಲು ಯೋಜಿಸಿವೆ.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...